Homeಮುಖಪುಟಪಕ್ಷಾಂತರಿ ಶಾಸಕರ ಅನರ್ಹತೆ ನಿರ್ಧರಿಸುವಲ್ಲಿ ವಿಳಂಬ : ತೆಲಂಗಾಣ ಸ್ಪೀಕರ್‌ಗೆ ಸುಪ್ರೀಂ ಕೋರ್ಟ್ ತರಾಟೆ, ನ್ಯಾಯಾಂಗ...

ಪಕ್ಷಾಂತರಿ ಶಾಸಕರ ಅನರ್ಹತೆ ನಿರ್ಧರಿಸುವಲ್ಲಿ ವಿಳಂಬ : ತೆಲಂಗಾಣ ಸ್ಪೀಕರ್‌ಗೆ ಸುಪ್ರೀಂ ಕೋರ್ಟ್ ತರಾಟೆ, ನ್ಯಾಯಾಂಗ ನಿಂದನೆ ಕ್ರಮದ ಎಚ್ಚರಿಕೆ

- Advertisement -
- Advertisement -

ಕಾಂಗ್ರೆಸ್‌ಗೆ ಪಕ್ಷಾಂತರಗೊಂಡ 10 ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಬಿಆರ್‌ಎಸ್ ಶಾಸಕ ಕೌಶಿಕ್ ರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ಜುಲೈ 31 ರಿಂದ ಅಕ್ಟೋಬರ್ 30ರವರೆಗೆ ನಿಗದಿತ ಮೂರು ತಿಂಗಳೊಳಗೆ ನಿರ್ಧರಿಸಲು ವಿಫಲವಾದ ಕಾರಣ ತೆಲಂಗಾಣ ಸ್ಪೀಕರ್‌ ವಿರುದ್ದ ಸುಪ್ರೀಂ ಕೋರ್ಟ್ ಸೋಮವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ.

ಎರಡು ವಾರಗಳಲ್ಲಿ ಕ್ರಮ ಕೈಗೊಳ್ಳದಿದ್ದರೆ ಸ್ಪೀಕರ್ ನ್ಯಾಯಾಂಗ ನಿಂದನೆಗೆ ಗುರಿಯಾಗಬೇಕಾಗುತ್ತದೆ ಎಂದು ನ್ಯಾಯಾಲಯ ಎಚ್ಚರಿಸಿದೆ. “ಈ ವಿಷಯವನ್ನು ನಿರ್ಧರಿಸಬೇಕೆ ಅಥವಾ ನ್ಯಾಯಾಂಗ ನಿಂದನೆ ಎದುರಿಸಬೇಕೆ ಎಂಬುದು ಅವರ (ತೆಲಂಗಾಣ ಸ್ಪೀಕರ್) ವೈಯಕ್ತಿಕ ವಿಷಯ. ಇದು ನ್ಯಾಯಾಂಗ ನಿಂದನೆಯಾಗಿದೆ” ಎಂದು ಸಿಜೆಐ ಬಿ.ಆರ್. ಗವಾಯಿ ನೇತೃತ್ವದ ಪೀಠ ಹೇಳಿದೆ.

ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಸೇರಿದ 10 ಶಾಸಕರನ್ನು ಅನರ್ಹಗೊಳಿಸುವ ಬಗ್ಗೆ ಮೂರು ತಿಂಗಳೊಳಗೆನಿರ್ಧರಿಸುವಂತೆ ನ್ಯಾಯಾಲಯ ಜುಲೈ 31 ರಂದು ಸ್ಪೀಕರ್‌ಗೆ ನಿರ್ದೇಶನ ನೀಡಿತ್ತು.

ಸೋಮವಾರದ ವಿಚಾರಣೆಯ ಸಂದರ್ಭದಲ್ಲಿ, ಸಿಜೆಐ ಎಲ್ಲಾ ವಿಷಯಗಳಲ್ಲಿ ನೋಟಿಸ್‌ಗಳನ್ನು ಜಾರಿಗೊಳಿಸಿದ್ದು, ಎರಡು ವಾರಗಳಲ್ಲಿ ತೀರ್ಮಾನ ತೆಗೆದುಕೊಳ್ಳುವಂತೆ ಅಥವಾ ನ್ಯಾಯಾಂಗ ನಿಂದನೆಯನ್ನು ಎದುರಿಸುವಂತೆ ಸ್ಪೀಕರ್‌ಗೆ ಹೇಳಿದೆ. ಇಂತಹ ವಿಷಯಗಳನ್ನು ನಿರ್ಧರಿಸುವಲ್ಲಿ ಸ್ಪೀಕರ್‌ಗೆ ಸಾಂವಿಧಾನಿಕ ವಿನಾಯಿತಿ ಇಲ್ಲ ಎಂದು ನ್ಯಾಯಾಲಯ ಪುನರುಚ್ಚರಿಸಿದೆ.

“ಸ್ಪೀಕರ್ ತಮ್ಮ ಹೊಸ ವರ್ಷದ ಸಂಭ್ರಮವನ್ನು ಎಲ್ಲಿ ಆಚರಿಸಬೇಕು” ಎಂದು ಅವರೇ ನಿರ್ಧರಿಸಲಿ” ಎಂದು ಹೇಳಿದ ಸಿಜೆಐ, ಸಂಭವನೀಯ ಪರಿಣಾಮಗಳ ಬಗ್ಗೆಯೂ ಸುಳಿವು ನೀಡಿದ್ದಾರೆ.

ಬಿಆರ್‌ಎಸ್ ನಾಯಕರಾದ ಕೆ.ಟಿ. ರಾಮರಾವ್, ಪಾಡಿ ಕೌಶಿಕ್ ರೆಡ್ಡಿ ಮತ್ತು ಕೆ.ಒ. ವಿವೇಕಾನಂದ್ ಸಲ್ಲಿಸಿದ್ದ ಅರ್ಜಿಗಳನ್ನು ಈ ಹಿಂದೆ ಅಂಗೀಕರಿಸಿದ್ದ ಪೀಠ, ರಾಜಕೀಯ ಪಕ್ಷಾಂತರಗಳು ರಾಷ್ಟ್ರೀಯ ಕಾಳಜಿಯ ವಿಷಯವಾಗಿದ್ದು, ಅದನ್ನು ತಡೆಯದಿದ್ದರೆ ಪ್ರಜಾಪ್ರಭುತ್ವವನ್ನು ಅಸ್ಥಿರಗೊಳಿಸಬಹುದು ಎಂದು ಹೇಳಿತ್ತು.

“ಪ್ರಸ್ತುತ ಮೇಲ್ಮನವಿಯನ್ನು ನಾವು ಅಂಗೀಕರಿಸಲು ಒಲವು ತೋರುತ್ತೇವೆ. ಹೈಕೋರ್ಟ್ ವಿಭಾಗೀಯ ಪೀಠವು 2024ರ ನವೆಂಬರ್ 22ರಂದು ಹೊರಡಿಸಿದ ಆದೇಶವನ್ನು ರದ್ದುಗೊಳಿಸಲಾಗಿದೆ. 10 ಶಾಸಕರ ವಿರುದ್ಧದ ಅನರ್ಹತಾ ಪ್ರಕ್ರಿಯೆಯನ್ನು ಸಾಧ್ಯವಾದಷ್ಟು ಬೇಗ ಮತ್ತು 3 ತಿಂಗಳೊಳಗೆ ನಿರ್ಧರಿಸಬೇಕು. ಯಾವುದೇ ಶಾಸಕರಿಗೆ ವಿಚಾರಣೆಯನ್ನು ಮುಂದೂಡಲು ಅವಕಾಶ ನೀಡಬಾರದು. ಹಾಗೆ ಮಾಡಿದರೆ, ಸ್ಪೀಕರ್ ಪ್ರತಿಕೂಲ ತೀರ್ಮಾನಗಳನ್ನು ಎದುರಿಸಬೇಕಾಗುತ್ತದೆ” ಎಂದು ನ್ಯಾಯಾಲಯ ಈ ಹಿಂದೆ ಹೇಳಿತ್ತು.

ವಿಚಾರಣೆಗಳನ್ನು ನಿಗದಿಪಡಿಸುವ ಏಕಸದಸ್ಯ ನ್ಯಾಯಾಧೀಶರ ನಿರ್ದೇಶನವನ್ನು ರದ್ದುಗೊಳಿಸಿದ ತೆಲಂಗಾಣ ಹೈಕೋರ್ಟ್ ವಿಭಾಗೀಯ ಪೀಠದ ತೀರ್ಪನ್ನು ಬದಿಗಿಟ್ಟಿದ್ದ ಸುಪ್ರೀಂ ಕೋರ್ಟ್, ಯಾವುದೇ ಶಾಸಕರಿಗೆ ಅನರ್ಹತೆ ಪ್ರಕ್ರಿಯೆಯನ್ನು ವಿಳಂಬ ಮಾಡಲು ಅವಕಾಶ ನೀಡಬಾರದು ಎಂದು ಒತ್ತಿ ಹೇಳಿತ್ತು.

ಶಾಸಕರ ಅನರ್ಹತೆಗೆ ಪ್ರಸ್ತುತ ಇರುವ ಕಾರ್ಯವಿಧಾನವನ್ನು ಸಂಸತ್ತು ಪರಿಶೀಲಿಸಬೇಕು. ಸ್ಪೀಕರ್‌ಗಳು ಆಗಾಗ್ಗೆ ಇಂತಹ ಪ್ರಕರಣಗಳನ್ನು ವಿಳಂಬ ಮಾಡುತ್ತಾರೆ, ಪಕ್ಷಾಂತರಿಗಳ ವಿರುದ್ಧದ ಕ್ರಮವನ್ನು ದುರ್ಬಲಗೊಳಿಸುತ್ತಾರೆ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯವನ್ನುಂಟುಮಾಡುತ್ತಾರೆ ಎಂದಿತ್ತು.

ಬಾಕಿ ಇರುವ ಅನರ್ಹತೆ ಪ್ರಕರಣಗಳ ಕುರಿತು ಸ್ಪೀಕರ್ ಸಕಾಲಿಕ ಕ್ರಮ ಕೈಗೊಳ್ಳಬೇಕೆಂದು ಬಿಆರ್‌ಎಸ್ ನಾಯಕರು ಸಲ್ಲಿಸಿದ್ದ ಅರ್ಜಿಗಳು ಕೋರಿವೆ. ಅರ್ಜಿಗಳು ಸಲ್ಲಿಕೆಯಾದ ಏಳು ತಿಂಗಳ ನಂತರ, ನ್ಯಾಯಾಲಯ ಮಧ್ಯಪ್ರವೇಶಿಸಿದ ನಂತರವೇ ಸ್ಪೀಕರ್ ನೋಟಿಸ್ ನೀಡಿದ್ದು ‘ದುರದೃಷ್ಟಕರ’ ಎಂದು ಸುಪ್ರೀಂ ಕೋರ್ಟ್ ಈ ಹಿಂದೆ ಹೇಳಿತ್ತು.

ಹತ್ತನೇ ಶೆಡ್ಯೂಲ್ ಅಡಿಯಲ್ಲಿ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುವಾಗ ಸ್ಪೀಕರ್ ಹೈಕೋರ್ಟ್‌ಗಳು ಮತ್ತು ಸುಪ್ರೀಂ ಕೋರ್ಟ್‌ನ ಅಧಿಕಾರ ವ್ಯಾಪ್ತಿಗೆ ಒಳಪಟ್ಟ ನ್ಯಾಯಮಂಡಳಿಯಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ನ್ಯಾಯಾಲಯ ಪುನರುಚ್ಚರಿಸಿದ್ದು, ಹತ್ತನೇ ಶೆಡ್ಯೂಲ್ ಅಡಿಯಲ್ಲಿ ನ್ಯಾಯಮಂಡಳಿಯಾಗಿ ಕಾರ್ಯನಿರ್ವಹಿಸುವಾಗ ಸ್ಪೀಕರ್ ಯಾವುದೇ ಸಾಂವಿಧಾನಿಕ ವಿನಾಯಿತಿಯನ್ನು ಅನುಭವಿಸುವುದಿಲ್ಲ” ಎಂದು ತಿಳಿಸಿದೆ.

ಅನರ್ಹತೆ ಎದುರಿಸುತ್ತಿರುವ ಶಾಸಕರು ಕಲಾಪವನ್ನು ದೀರ್ಘಗೊಳಿಸಲು ಅವಕಾಶ ನೀಡಬಾರದು ಎಂದು ಸ್ಪೀಕರ್‌ಗೆ ನ್ಯಾಯಾಲಯ ನಿರ್ದೇಶನ ನೀಡಿದೆ. ವಿಳಂಬ ಮಾಡುವ ಯಾವುದೇ ಪ್ರಯತ್ನವು ಪ್ರತಿಕೂಲ ತೀರ್ಮಾನಗಳಿಗೆ ಕಾರಣವಾಗಬಹುದು ಎಂದು ಹೇಳಿದೆ.

ಜೈಸಲ್ಮೇರ್‌ನ ಭಾರತ-ಪಾಕ್ ಗಡಿಯಲ್ಲಿ ಪಾಕಿಸ್ತಾನಕ್ಕೆ ನುಸುಳಲು ಯತ್ನಿಸುತ್ತಿದ್ದ ಯುವಕನನ್ನು ಸೆರೆ ಹಿಡಿದ ಬಿಎಸ್ಎಫ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...