Homeಮುಖಪುಟಪಕ್ಷಾಂತರಿ ಶಾಸಕರ ಅನರ್ಹತೆ ನಿರ್ಧರಿಸುವಲ್ಲಿ ವಿಳಂಬ : ತೆಲಂಗಾಣ ಸ್ಪೀಕರ್‌ಗೆ ಸುಪ್ರೀಂ ಕೋರ್ಟ್ ತರಾಟೆ, ನ್ಯಾಯಾಂಗ...

ಪಕ್ಷಾಂತರಿ ಶಾಸಕರ ಅನರ್ಹತೆ ನಿರ್ಧರಿಸುವಲ್ಲಿ ವಿಳಂಬ : ತೆಲಂಗಾಣ ಸ್ಪೀಕರ್‌ಗೆ ಸುಪ್ರೀಂ ಕೋರ್ಟ್ ತರಾಟೆ, ನ್ಯಾಯಾಂಗ ನಿಂದನೆ ಕ್ರಮದ ಎಚ್ಚರಿಕೆ

- Advertisement -
- Advertisement -

ಕಾಂಗ್ರೆಸ್‌ಗೆ ಪಕ್ಷಾಂತರಗೊಂಡ 10 ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಬಿಆರ್‌ಎಸ್ ಶಾಸಕ ಕೌಶಿಕ್ ರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ಜುಲೈ 31 ರಿಂದ ಅಕ್ಟೋಬರ್ 30ರವರೆಗೆ ನಿಗದಿತ ಮೂರು ತಿಂಗಳೊಳಗೆ ನಿರ್ಧರಿಸಲು ವಿಫಲವಾದ ಕಾರಣ ತೆಲಂಗಾಣ ಸ್ಪೀಕರ್‌ ವಿರುದ್ದ ಸುಪ್ರೀಂ ಕೋರ್ಟ್ ಸೋಮವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ.

ಎರಡು ವಾರಗಳಲ್ಲಿ ಕ್ರಮ ಕೈಗೊಳ್ಳದಿದ್ದರೆ ಸ್ಪೀಕರ್ ನ್ಯಾಯಾಂಗ ನಿಂದನೆಗೆ ಗುರಿಯಾಗಬೇಕಾಗುತ್ತದೆ ಎಂದು ನ್ಯಾಯಾಲಯ ಎಚ್ಚರಿಸಿದೆ. “ಈ ವಿಷಯವನ್ನು ನಿರ್ಧರಿಸಬೇಕೆ ಅಥವಾ ನ್ಯಾಯಾಂಗ ನಿಂದನೆ ಎದುರಿಸಬೇಕೆ ಎಂಬುದು ಅವರ (ತೆಲಂಗಾಣ ಸ್ಪೀಕರ್) ವೈಯಕ್ತಿಕ ವಿಷಯ. ಇದು ನ್ಯಾಯಾಂಗ ನಿಂದನೆಯಾಗಿದೆ” ಎಂದು ಸಿಜೆಐ ಬಿ.ಆರ್. ಗವಾಯಿ ನೇತೃತ್ವದ ಪೀಠ ಹೇಳಿದೆ.

ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಸೇರಿದ 10 ಶಾಸಕರನ್ನು ಅನರ್ಹಗೊಳಿಸುವ ಬಗ್ಗೆ ಮೂರು ತಿಂಗಳೊಳಗೆನಿರ್ಧರಿಸುವಂತೆ ನ್ಯಾಯಾಲಯ ಜುಲೈ 31 ರಂದು ಸ್ಪೀಕರ್‌ಗೆ ನಿರ್ದೇಶನ ನೀಡಿತ್ತು.

ಸೋಮವಾರದ ವಿಚಾರಣೆಯ ಸಂದರ್ಭದಲ್ಲಿ, ಸಿಜೆಐ ಎಲ್ಲಾ ವಿಷಯಗಳಲ್ಲಿ ನೋಟಿಸ್‌ಗಳನ್ನು ಜಾರಿಗೊಳಿಸಿದ್ದು, ಎರಡು ವಾರಗಳಲ್ಲಿ ತೀರ್ಮಾನ ತೆಗೆದುಕೊಳ್ಳುವಂತೆ ಅಥವಾ ನ್ಯಾಯಾಂಗ ನಿಂದನೆಯನ್ನು ಎದುರಿಸುವಂತೆ ಸ್ಪೀಕರ್‌ಗೆ ಹೇಳಿದೆ. ಇಂತಹ ವಿಷಯಗಳನ್ನು ನಿರ್ಧರಿಸುವಲ್ಲಿ ಸ್ಪೀಕರ್‌ಗೆ ಸಾಂವಿಧಾನಿಕ ವಿನಾಯಿತಿ ಇಲ್ಲ ಎಂದು ನ್ಯಾಯಾಲಯ ಪುನರುಚ್ಚರಿಸಿದೆ.

“ಸ್ಪೀಕರ್ ತಮ್ಮ ಹೊಸ ವರ್ಷದ ಸಂಭ್ರಮವನ್ನು ಎಲ್ಲಿ ಆಚರಿಸಬೇಕು” ಎಂದು ಅವರೇ ನಿರ್ಧರಿಸಲಿ” ಎಂದು ಹೇಳಿದ ಸಿಜೆಐ, ಸಂಭವನೀಯ ಪರಿಣಾಮಗಳ ಬಗ್ಗೆಯೂ ಸುಳಿವು ನೀಡಿದ್ದಾರೆ.

ಬಿಆರ್‌ಎಸ್ ನಾಯಕರಾದ ಕೆ.ಟಿ. ರಾಮರಾವ್, ಪಾಡಿ ಕೌಶಿಕ್ ರೆಡ್ಡಿ ಮತ್ತು ಕೆ.ಒ. ವಿವೇಕಾನಂದ್ ಸಲ್ಲಿಸಿದ್ದ ಅರ್ಜಿಗಳನ್ನು ಈ ಹಿಂದೆ ಅಂಗೀಕರಿಸಿದ್ದ ಪೀಠ, ರಾಜಕೀಯ ಪಕ್ಷಾಂತರಗಳು ರಾಷ್ಟ್ರೀಯ ಕಾಳಜಿಯ ವಿಷಯವಾಗಿದ್ದು, ಅದನ್ನು ತಡೆಯದಿದ್ದರೆ ಪ್ರಜಾಪ್ರಭುತ್ವವನ್ನು ಅಸ್ಥಿರಗೊಳಿಸಬಹುದು ಎಂದು ಹೇಳಿತ್ತು.

“ಪ್ರಸ್ತುತ ಮೇಲ್ಮನವಿಯನ್ನು ನಾವು ಅಂಗೀಕರಿಸಲು ಒಲವು ತೋರುತ್ತೇವೆ. ಹೈಕೋರ್ಟ್ ವಿಭಾಗೀಯ ಪೀಠವು 2024ರ ನವೆಂಬರ್ 22ರಂದು ಹೊರಡಿಸಿದ ಆದೇಶವನ್ನು ರದ್ದುಗೊಳಿಸಲಾಗಿದೆ. 10 ಶಾಸಕರ ವಿರುದ್ಧದ ಅನರ್ಹತಾ ಪ್ರಕ್ರಿಯೆಯನ್ನು ಸಾಧ್ಯವಾದಷ್ಟು ಬೇಗ ಮತ್ತು 3 ತಿಂಗಳೊಳಗೆ ನಿರ್ಧರಿಸಬೇಕು. ಯಾವುದೇ ಶಾಸಕರಿಗೆ ವಿಚಾರಣೆಯನ್ನು ಮುಂದೂಡಲು ಅವಕಾಶ ನೀಡಬಾರದು. ಹಾಗೆ ಮಾಡಿದರೆ, ಸ್ಪೀಕರ್ ಪ್ರತಿಕೂಲ ತೀರ್ಮಾನಗಳನ್ನು ಎದುರಿಸಬೇಕಾಗುತ್ತದೆ” ಎಂದು ನ್ಯಾಯಾಲಯ ಈ ಹಿಂದೆ ಹೇಳಿತ್ತು.

ವಿಚಾರಣೆಗಳನ್ನು ನಿಗದಿಪಡಿಸುವ ಏಕಸದಸ್ಯ ನ್ಯಾಯಾಧೀಶರ ನಿರ್ದೇಶನವನ್ನು ರದ್ದುಗೊಳಿಸಿದ ತೆಲಂಗಾಣ ಹೈಕೋರ್ಟ್ ವಿಭಾಗೀಯ ಪೀಠದ ತೀರ್ಪನ್ನು ಬದಿಗಿಟ್ಟಿದ್ದ ಸುಪ್ರೀಂ ಕೋರ್ಟ್, ಯಾವುದೇ ಶಾಸಕರಿಗೆ ಅನರ್ಹತೆ ಪ್ರಕ್ರಿಯೆಯನ್ನು ವಿಳಂಬ ಮಾಡಲು ಅವಕಾಶ ನೀಡಬಾರದು ಎಂದು ಒತ್ತಿ ಹೇಳಿತ್ತು.

ಶಾಸಕರ ಅನರ್ಹತೆಗೆ ಪ್ರಸ್ತುತ ಇರುವ ಕಾರ್ಯವಿಧಾನವನ್ನು ಸಂಸತ್ತು ಪರಿಶೀಲಿಸಬೇಕು. ಸ್ಪೀಕರ್‌ಗಳು ಆಗಾಗ್ಗೆ ಇಂತಹ ಪ್ರಕರಣಗಳನ್ನು ವಿಳಂಬ ಮಾಡುತ್ತಾರೆ, ಪಕ್ಷಾಂತರಿಗಳ ವಿರುದ್ಧದ ಕ್ರಮವನ್ನು ದುರ್ಬಲಗೊಳಿಸುತ್ತಾರೆ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯವನ್ನುಂಟುಮಾಡುತ್ತಾರೆ ಎಂದಿತ್ತು.

ಬಾಕಿ ಇರುವ ಅನರ್ಹತೆ ಪ್ರಕರಣಗಳ ಕುರಿತು ಸ್ಪೀಕರ್ ಸಕಾಲಿಕ ಕ್ರಮ ಕೈಗೊಳ್ಳಬೇಕೆಂದು ಬಿಆರ್‌ಎಸ್ ನಾಯಕರು ಸಲ್ಲಿಸಿದ್ದ ಅರ್ಜಿಗಳು ಕೋರಿವೆ. ಅರ್ಜಿಗಳು ಸಲ್ಲಿಕೆಯಾದ ಏಳು ತಿಂಗಳ ನಂತರ, ನ್ಯಾಯಾಲಯ ಮಧ್ಯಪ್ರವೇಶಿಸಿದ ನಂತರವೇ ಸ್ಪೀಕರ್ ನೋಟಿಸ್ ನೀಡಿದ್ದು ‘ದುರದೃಷ್ಟಕರ’ ಎಂದು ಸುಪ್ರೀಂ ಕೋರ್ಟ್ ಈ ಹಿಂದೆ ಹೇಳಿತ್ತು.

ಹತ್ತನೇ ಶೆಡ್ಯೂಲ್ ಅಡಿಯಲ್ಲಿ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುವಾಗ ಸ್ಪೀಕರ್ ಹೈಕೋರ್ಟ್‌ಗಳು ಮತ್ತು ಸುಪ್ರೀಂ ಕೋರ್ಟ್‌ನ ಅಧಿಕಾರ ವ್ಯಾಪ್ತಿಗೆ ಒಳಪಟ್ಟ ನ್ಯಾಯಮಂಡಳಿಯಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ನ್ಯಾಯಾಲಯ ಪುನರುಚ್ಚರಿಸಿದ್ದು, ಹತ್ತನೇ ಶೆಡ್ಯೂಲ್ ಅಡಿಯಲ್ಲಿ ನ್ಯಾಯಮಂಡಳಿಯಾಗಿ ಕಾರ್ಯನಿರ್ವಹಿಸುವಾಗ ಸ್ಪೀಕರ್ ಯಾವುದೇ ಸಾಂವಿಧಾನಿಕ ವಿನಾಯಿತಿಯನ್ನು ಅನುಭವಿಸುವುದಿಲ್ಲ” ಎಂದು ತಿಳಿಸಿದೆ.

ಅನರ್ಹತೆ ಎದುರಿಸುತ್ತಿರುವ ಶಾಸಕರು ಕಲಾಪವನ್ನು ದೀರ್ಘಗೊಳಿಸಲು ಅವಕಾಶ ನೀಡಬಾರದು ಎಂದು ಸ್ಪೀಕರ್‌ಗೆ ನ್ಯಾಯಾಲಯ ನಿರ್ದೇಶನ ನೀಡಿದೆ. ವಿಳಂಬ ಮಾಡುವ ಯಾವುದೇ ಪ್ರಯತ್ನವು ಪ್ರತಿಕೂಲ ತೀರ್ಮಾನಗಳಿಗೆ ಕಾರಣವಾಗಬಹುದು ಎಂದು ಹೇಳಿದೆ.

ಜೈಸಲ್ಮೇರ್‌ನ ಭಾರತ-ಪಾಕ್ ಗಡಿಯಲ್ಲಿ ಪಾಕಿಸ್ತಾನಕ್ಕೆ ನುಸುಳಲು ಯತ್ನಿಸುತ್ತಿದ್ದ ಯುವಕನನ್ನು ಸೆರೆ ಹಿಡಿದ ಬಿಎಸ್ಎಫ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...