Homeಮುಖಪುಟರಕ್ಷಣಾ ಖರೀದಿಯಲ್ಲಿ ವಿಳಂಬ | ಅಸಮಾಧಾನ ವ್ಯಕ್ತಪಡಿಸಿದ ವಾಯುಪಡೆ ಮುಖ್ಯಸ್ಥರು

ರಕ್ಷಣಾ ಖರೀದಿಯಲ್ಲಿ ವಿಳಂಬ | ಅಸಮಾಧಾನ ವ್ಯಕ್ತಪಡಿಸಿದ ವಾಯುಪಡೆ ಮುಖ್ಯಸ್ಥರು

- Advertisement -
- Advertisement -

ಹಲವಾರು ರಕ್ಷಣಾ ಸಾಮಗ್ರಿಗಳ ಖರೀದಿ ಯೋಜನೆಗಳಲ್ಲಿ ವಿಳಂಬ ಮತ್ತು ಸೈನಿಕ ವೇದಿಕೆಗಳ ಪೂರೈಕೆ ವೇಳಾಪಟ್ಟಿಯನ್ನು ಪಾಲಿಸದಿರುವ ಬಗ್ಗೆ ಭಾರತೀಯ ವಾಯುಸೇನೆಯ ಮುಖ್ಯಸ್ಥ ಅಮರ್ ಪ್ರೀತ್ ಸಿಂಗ್ ಗುರುವಾರ ಆತಂಕ ವ್ಯಕ್ತಪಡಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ರಕ್ಷಣಾ ಖರೀದಿಯಲ್ಲಿ ವಿಳಂಬ

ಭಾರತೀಯ ಕೈಗಾರಿಕಾ ಒಕ್ಕೂಟದ ಕಾರ್ಯಕ್ರಮದಲ್ಲಿ ಮಾತನಾಡಿದ ಅಮರ್ ಪ್ರೀತ್ ಸಿಂಗ್, ಸಮಯಸೂಚಿಗಳನ್ನು ಪಾಲಿಸುವುದು ದೊಡ್ಡ ಸಮಸ್ಯೆಯಾಗಿದೆ ಎಂದು ಹೇಳಿದ್ದಾರೆ. ಅದಾಗ್ಯೂ, ಅವರು ಯಾವ ಯೋಜನೆಗಳನ್ನು ಉಲ್ಲೇಖಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ.

“ನನಗೆ ಗೊತ್ತಿರುವ ಹಾಗೆ, ಯಾವುದೇ ಯೋಜನೆಯೂ ಸಮಯಕ್ಕೆ ಮುಗಿದಿಲ್ಲ” ಎಂದು ಅವರು ಹೇಳಿದ್ದು, ಆದರೆ ಸೈನ್ಯವು “ತಪ್ಪು ಮಾಡಿದವರನ್ನು ತಪ್ಪು ಮಾಡಿದವರು ಎಂದು ಬಹಿರಂಗವಾಗಿ ಹೇಳದಿರಲು ಆದ್ಯತೆ ನೀಡಿದೆ” ಎಂದು ಅವರು ತಿಳಿಸಿದ್ದಾರೆ.

ಇದು ಪರಿಶೀಲಿಸಬೇಕಾದ ವಿಷಯ ಎಂದು ಹೇಳಿದ ಅವರು, “ಸಾಧಿಸಲಾಗದದ್ದನ್ನು ನಾವು ಏಕೆ ಭರವಸೆ ನೀಡಬೇಕು?” ಎಂದು ಹೇಳಿದ್ದಾರೆ.

“ಒಪ್ಪಂದಕ್ಕೆ ಸಹಿ ಹಾಕುವಾಗ, ಕೆಲವೊಮ್ಮೆ, ಅದು ಆಗುವುದಿಲ್ಲ ಎಂದು ನಮಗೆ ಖಚಿತ ಗೊತ್ತಿರುತ್ತದೆ. ಆದರೆ ನಾವು ಒಪ್ಪಂದಕ್ಕೆ ಸಹಿ ಹಾಕುತ್ತೇವೆ ಮತ್ತು ಅದರ ನಂತರ ಏನು ಮಾಡಬಹುದು ಎಂದು ನೋಡುತ್ತೇವೆ… ನಿಸ್ಸಂಶಯವಾಗಿ ನಂತರ ಪ್ರಕ್ರಿಯೆಯು ದುರ್ಬಲಗೊಳ್ಳುತ್ತದೆ.” ಎಂದು ಅವರು ಹೇಳಿದ್ದಾರೆ.

ವಾಯು ಶಕ್ತಿ ಇಲ್ಲದೆ ಯಾವುದೇ ಮಿಲಿಟರಿ ಕಾರ್ಯಾಚರಣೆಗಳನ್ನು ನಡೆಸಲಾಗುವುದಿಲ್ಲ ಎಂದು ಅಮರ್ ಪ್ರೀತ್ ಸಿಂಗ್ ಹೇಳಿದ್ದು, ಆಪರೇಷನ್ ಸಿಂಧೂರ ಅದಕ್ಕೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದ್ದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ವಾಯು ಸೇನೆಯ ವಿಷಯದಲ್ಲಿ ನಮ್ಮ ಗಮನವು, ನಮಗೆ ಸಾಮರ್ಥ್ಯವಿದೆ ಎಂದು ನಾವು ಖಚಿತಪಡಿಸಿಕೊಳ್ಳಬೇಕು. ನಾವು ಭಾರತದಲ್ಲಿ ಉತ್ಪಾದನೆಯ ಬಗ್ಗೆ ಮಾತ್ರ ಮಾತನಾಡಲು ಸಾಧ್ಯವಿಲ್ಲ, ನಾವು ಭಾರತದಲ್ಲಿ ವಿನ್ಯಾಸ ಮತ್ತು ಅಭಿವೃದ್ಧಿಯನ್ನು ಪ್ರಾರಂಭಿಸಬೇಕಾಗಿದೆ.” ಎಂದು ಅವರು ಹೇಳಿದ್ದಾರೆ.

“ಪ್ರಸ್ತುತ ಭೌಗೋಳಿಕ ರಾಜಕೀಯ ಪರಿಸ್ಥಿತಿಯು ಆತ್ಮನಿರ್ಭರ್ತ [ಸ್ವಾವಲಂಬನೆ] ಒಂದೇ ಪರಿಹಾರ ಎಂದು ನಮಗೆ ಅರಿತುಕೊಂಡಿದ್ದೇವೆ. ಆಪರೇಷನ್ ಸಿಂಧೂರ ಕಾರ್ಯಾಚರಣೆಯು ಸಶಸ್ತ್ರ ಪಡೆಗಳಿಗೆ ನಾವು ಎಲ್ಲಿಗೆ ಹೋಗುತ್ತಿದ್ದೇವೆ ಮತ್ತು ಭವಿಷ್ಯದಲ್ಲಿ ನಮಗೆ ಏನು ಬೇಕು ಎಂಬುದರ ಸ್ಪಷ್ಟ ಕಲ್ಪನೆಯನ್ನು ನೀಡಿದೆ” ಎಂದು ಅವರು ಹೇಳಿದ್ದಾರೆ.

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನಿಂದ 83 ತೇಜಸ್ ಎಂಕೆ 1ಎ ಫೈಟರ್ ಜೆಟ್‌ಗಳ ವಿತರಣೆಯಲ್ಲಿ ವಿಳಂಬವಾದ ಹಿನ್ನೆಲೆಯಲ್ಲಿ ಅಮರ್ ಪ್ರೀತ್ ಸಿಂಗ್ ಅವರ ಹೇಳಿಕೆಗಳು ಬಂದಿವೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಲಘು ಯುದ್ಧ ವಿಮಾನದ ಒಪ್ಪಂದಕ್ಕೆ 2021 ರಲ್ಲಿ ಸರ್ಕಾರಿ ಸ್ವಾಮ್ಯದ ಏರೋಸ್ಪೇಸ್ ಮತ್ತು ರಕ್ಷಣಾ ಕಂಪನಿಯೊಂದಿಗೆ ಸಹಿ ಹಾಕಲಾಗಿತ್ತು.

ವಾಯುಪಡೆಯು 70 HTT-40 ಮೂಲ ತರಬೇತಿ ವಿಮಾನಗಳ ವಿತರಣೆಗಾಗಿ HAL ಜೊತೆ ಒಪ್ಪಂದಕ್ಕೆ ಸಹಿ ಹಾಕಿತ್ತು. ವಿಮಾನದ ಸೇರ್ಪಡೆ ಸೆಪ್ಟೆಂಬರ್‌ನಲ್ಲಿ ಪ್ರಾರಂಭವಾಗಬೇಕಿತ್ತು. ಆದರೆ ಅದು ವಿಳಂಬವಾಗಿತ್ತು. ರಕ್ಷಣಾ ಖರೀದಿಯಲ್ಲಿ ವಿಳಂಬ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕೇರಳದ 104 ಶಾಲೆಗಳನ್ನು ‘ಮಾದಕ ವಸ್ತು ತಾಣ’ಗಳೆಂದು ಗುರುತಿಸಿದ ಅಬಕಾರಿ ಇಲಾಖೆ; ವರದಿ

ಕೇರಳದ 104 ಶಾಲೆಗಳನ್ನು ‘ಮಾದಕ ವಸ್ತು ತಾಣ’ಗಳೆಂದು ಗುರುತಿಸಿದ ಅಬಕಾರಿ ಇಲಾಖೆ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...