Homeಕರ್ನಾಟಕಒಳಮೀಸಲಾತಿ ಜಾರಿಗೆ ವಿಳಂಬ; ರಾಜಿನಾಮೆಗೆ ಆಗ್ರಹಿಸಿ ಸಮಾಜ ಕಲ್ಯಾಣ ಸಚಿವ ಮಹದೇವಪ್ಪ ಮನೆಗೆ ಮುತ್ತಿಗೆ

ಒಳಮೀಸಲಾತಿ ಜಾರಿಗೆ ವಿಳಂಬ; ರಾಜಿನಾಮೆಗೆ ಆಗ್ರಹಿಸಿ ಸಮಾಜ ಕಲ್ಯಾಣ ಸಚಿವ ಮಹದೇವಪ್ಪ ಮನೆಗೆ ಮುತ್ತಿಗೆ

- Advertisement -
- Advertisement -

ಪರಿಶಿಷ್ಟ ಜಾತಿಯೊಳಗೆ (ಎಸ್‌ಸಿ) ಒಳಮೀಸಲಾತಿ ಜಾರಿ ಮಾಡುವುದಕ್ಕೆ ವಿಳಂಬ ಮಾಡಲಾಗುತ್ತಿದೆ ಎಂದು ಅಸಮಾಧಾನಗೊಂಡಿರುವ ಹೋರಾಟಗಾರರು, ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌.ಸಿ.ಮಹದೇವಪ್ಪ ಅವರ ರಾಜಿನಾಮೆಗೆ ಆಗ್ರಹಿಸಿ ಮನೆಗೆ ಮುತ್ತಿಗೆ ಹಾಕುವುದಾಗಿ ಘೋಷಣೆ ಮಾಡಿದ್ದಾರೆ.

‘ಇದೇ ತಿಂಗಳ 10 ರಂದು ಸಚಿವ ಎಚ್‌.ಸಿ. ಮಹದೇವಪ್ಪ ಅವರ ಅಧಿಕೃತ ಸರ್ಕಾರಿ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಒಳಮೀಸಲಾತಿ ಹೋರಾಟಗಾರರು ಇಂದು ಮಾಹಿತಿ ನೀಡಿದರು.

“ಪರಿಶಿಷ್ಠ ಜಾತಿಗಳ ಒಳಮೀಸಲಾತಿ ಜಾರಿಗೊಳಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ ಎಂದು 2024ರ ಆಗಸ್ಟ್ 01 ರಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಭಾರತ ಸಂವಿಧಾನ ಸಾಮಾಜಿಕ ನ್ಯಾಯದ ತಾತ್ವಿಕ ಸ್ವರೂಪವನ್ನು ಎತ್ತಿ ಹಿಡಿಯುವ ತೀರ್ಪನ್ನು ನೀಡಿತು. ಕರ್ನಾಟಕ ರಾಜ್ಯದ ಹಿಂದುಳಿದವರ ನಾಯಕ, ದೇವರಾಜ ಅರಸು ಅವರ ಸಾಮಾಜಿಕ ನ್ಯಾಯದ ವಾರಸುದಾರರೆಂದು ಬಿಂಬಿಸಿಕೊಳ್ಳುತ್ತಿರುವ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರು ಮಾನ್ಯ ಸುಪ್ರೀಂ ಕೋರ್ಟ್ ತೀರ್ಪನ್ನು ಒಪ್ಪಿಕೊಳ್ಳಲು ಒಲ್ಲದ ಮನಸ್ಸಿನಿಂದ ಮೂರು ತಿಂಗಳು ತಡವಾಗಿ 13 ನವೆಂಬರ್ 2024 ರಂದು ಸಚಿವ ಸಂಪುಟದಲ್ಲಿ ಒಪ್ಪಿಕೊಂಡಿದ್ದಾರೆ. ನಿವೃತ್ತ ನ್ಯಾಯಾಧೀಶರಾದ ಹೆಚ್.ಎನ್.ನಾಗಮೋಹನ್ ದಾಸ್ ಏಕಸದಸ್ಯ ಆಯೋಗ ರಚನೆಗೊಂಡು ಅತ್ಯಂತ ಪಾರದರ್ಶಕತೆಯಿಂದ ಕೂಡಿದ, ಯಾವ ಸಮುದಾಯಗಳಿಗೂ ಅನ್ಯಾಯವಾಗದಂತೆ, ಪರಿಶಿಷ್ಠ ಜಾತಿಗಳನ್ನು 5 ಪ್ರವರ್ಗಗಳನ್ನಾಗಿ ಮಾಡಿ 04 ಜುಲೈ 2025ರಂದು ತನ್ನ ಏಳು ಶಿಫಾರಸ್ಸುಗಳನ್ನು ಸರ್ಕಾರಕ್ಕೆ ಸಲ್ಲಿಸಿತು. ಪರಿಶಿಷ್ಠ ಜಾತಿಗಳ ಮೀಸಲಾತಿಯ ಸಿಂಹಪಾಲನ್ನು ಪಡೆದಿರುವ ರಾಜಕೀಯವಾಗಿ, ಆರ್ಥಿಕವಾಗಿ, ಆಡಳಿತಾತ್ಮಕವಾಗಿ ಬಲಾಢ್ಯ ಸಮುದಾಯಗಳ ವಿರೋಧಕ್ಕೆ ಹೆದರಿ, ಸರ್ಕಾರ ಮತ್ತೆ ಮೌನವಹಿಸಿತು” ಎಂದು ಹೋರಾಟಗಾರರು ಬೇಸರ ಹೊರಹಾಕಿದ್ದಾರೆ.

“ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಸರ್ಕಾರದ ವಿಳಂಬ ದೋರಣೆಯನ್ನು ಖಂಡಿಸಿ, ಹೆಚ್.ಎನ್.ನಾಗಮೋಹನ್ ದಾಸ ಆಯೋಗದ ಶಿಫಾರಸ್ಸುಗಳನ್ನು ಜಾರಿಗೊಳಿಸಲು 11 ಆಗಸ್ಟ್ 2025 ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಒಳಮೀಸಲಾತಿ ಹೋರಾಟ ಆರಂಭಿಸಲಾಗಿತ್ತು. ಅದರ ಪರಿಣಾಮ, 19 ಆಗಸ್ಟ್ 2025 ರಂದು ನಾಗಮೋಹನ್ ದಾಸ್ ಆಯೋಗದ ಶಿಫಾರಸ್ಸುಗಳ 6 ಪ್ರವರ್ಗಗಳ ಬದಲಾಗಿ 3 ಪ್ರವರ್ಗಗಳನ್ನಾಗಿ ಮಾರ್ಪಡಿಸಿ, ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಯಿತು. 20 ಆಗಸ್ಟ್ 2025ರಂದು ಮಳೆಗಾಲದ ಅಧಿವೇಶನದಲ್ಲಿ ಆದೇಶವನ್ನು ಪ್ರಕಟಿಸಿತು” ಎಂದು ಮಾಹಿತಿ ನೀಡಿದರು.

“ಅಲೆಮಾರಿ ಸಮುದಾಯಗಳನ್ನು ರಾಜಕೀಯವಾಗಿ ಬಲಾಢ್ಯರಾದ ಪ್ರವರ್ಗ-ಸಿಗೆ ಸೇರಿಸಿ ಕಳೆದ 79ವರ್ಷಗಳಿಂದ ಅವರಿಗಾದ ಅನ್ಯಾಯವನ್ನು ಮತ್ತೆ ಮುಂದುವರೆಯಲು ಬೀದಿಪಾಲು ಮಾಡಲಾಯಿತು. ಕೊನೆಗೆ ಪರಿಶಿಷ್ಠ ಜಾತಿಗಳನ್ನು 3 ಪ್ರವರ್ಗಗಳನ್ನಾಗಿ ಮಾಡಿ ಪ್ರವರ್ಗ-ಎ ಗೆ ಶೇ.6, ಪ್ರವರ್ಗ- ಬಿಗೆ ಶೇ6, ಪ್ರವರ್ಗ-ಸಿಗೆ 5 ಎಂದು ಶೇ. 17 ಮೀಸಲಾತಿಯನ್ನು ಹಂಚಿಕೆ ಮಾಡಲಾಯಿತು. ದುಡಿದವನು ಕಳಕೊಂಡ, ದುಡಿಯಲಾರದವ ಎಲ್ಲ ಪಡಕೊಂಡ ಎನ್ನುಂತೆ ಪ್ರವರ್ಗ-ಬಿ ಶೇ. 5 ಬದಲಾಗಿ ಶೇ. 6, ಪ್ರವರ್ಗ-ಸಿ ಶೇ. 4ರ ಬದಲಾಗಿ ಶೇ.5 ಹೆಚ್ಚಿನ ಒಳಮೀಸಲಾತಿ ಪಡೆದವು. ಅತ್ಯಂತ ಹಿಂದುಳಿದ ಸಮುದಾಯವೆಂದು ಪ್ರವರ್ಗ-ಎ ಸಮುದಾಯಗಳನ್ನು ಸರ್ಕಾರವೇ ಗುರುತಿಸಿದ್ದರೂ, ಸಾಮಾಜಿಕ ನ್ಯಾಯದ ತತ್ವದಂತೆ ಶೇ.7 ಮೀಸಲಾತಿಯಿಂದ ವಂಚಿತಗೊಂಡಿತು. ಒಳಮೀಸಲಾತಿ ಎಂದರೆ ಕೇವಲ ತಲೆ ಎಣಿಕೆಯಲ್ಲ. ಚಾರಿತ್ರಿಕವಾಗಿ ಅಸಮಾನತೆಗೆ ಗುರಿಯಾದ ಸೌಲಭ್ಯ ವಂಚಿತರಿಗೆ ಅಲ್ಪಪ್ರಮಾಣದ ಹೆಚ್ಚುವರಿ ಪರಿಹಾರವನ್ನು ಹರಿಯಾಣ ರಾಜ್ಯದ ಮಾದರಿಯಲ್ಲಿ ಹಂಚಿಕೆ ಮಾಡಲು ಸರ್ಕಾರ ವಿಫಲವಾಯಿತು” ಎಂದು ಅವರು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಪ್ಯಾರಾ-2 ಕ್ಕೆ ತಿದ್ದುಪಡಿ ಮಾಡಬೇಕು

“ಒಳಮೀಸಲಾತಿ ಸಂಬಂಧ ದಿನಾಂಕ: 25 ಆಗಸ್ಟ್ 2025 ರ ಸರ್ಕಾರದ ಆದೇಶ ಹೆಬ್ಬಂಡೆಯಂತೆ ಪ್ರವರ್ಗ-ಎ ಸಮುದಾಯಗಳ ಮೇಲೆ ಬಿದ್ದಂತಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬರಲಾರದಂತೆ ಕುಯುಕ್ತಿ, ಸಂಚಿನಿಂದ ಕೂಡಿದ ಪ್ಯಾರಾ-2 ತೆಗೆಯಬೇಕು” ಎಂದು ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ’ದ ಮುಖಂಡರು ಆಗ್ರಹಿಸಿದರು.

“ಏಕೆಂದರೆ, ಆಯೋಗದ ವರದಿಯಲ್ಲಿನ ಪ್ರವರ್ಗ-ಇ ರಲ್ಲಿನ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಈ ಮೂರು ಸಮುದಾಯಗಳು ತಮ್ಮ ಮೂಲ ಜಾತಿಯನ್ನು ತಿಳಿಸದೇ ಇರುವುದರಿಂದ ಸದರಿ ಮೂರು ಜಾತಿಗಳು ಅನುಬಂಧಗಳಲ್ಲಿರುವ ಪ್ರವರ್ಗ-ಎ ಅಥವಾ ಬಿ ಗಳಲ್ಲಿ ಮೀಸಲಾತಿ ಸೌಲಭ್ಯವನ್ನು ಪಡೆಯಬಹುದು ಎದು ಹೇಳಲಾಗಿದೆ. ಪ್ಯಾರಾ-2ನೇ ಶಿಫಾರಸ್ಸಿನಂತೆ ಒಳಮೀಸಲಾತಿ ಜಾರಿಯಾದರೆ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ನೆಪದಲ್ಲಿ ಪ್ರವರ್ಗ-ಬಿ ಮೆರಿಟ್ ಅಭ್ಯರ್ಥಿಗಳು ಪ್ರವರ್ಗ-ಎ ನಲ್ಲಿ ಅರ್ಜಿಗಳನ್ನು ಸಲ್ಲಿಸಿ ಕಡಿಮೆ ಮೆರಿಟ್ ಇರುವ ಮಾದಿಗ ಸಮುದಾಯಗಳೊಂದಿಗೆ ಸ್ಪರ್ಧಿಸಿ ಮೇಲುಗೈ ಪಡೆಯುವುದರಿಂದ ನಿಜವಾದ ಮಾದಿಗ ಸಮುದಾಯಗಳ ಅಭ್ಯರ್ಥಿಗಳಿಗೆ ಮತ್ತೊಮ್ಮೆ ನೇಮಕಾತಿಗಳಲ್ಲಿ ಹಿನ್ನಡೆಯಾಗುವ ಸಂಭವ ಹೆಚ್ಚಿದೆ” ಎಂದು ಆತಂಕ ವ್ಯಕ್ತಪಡಿಸಿದರು.

“ಪ್ರವರ್ಗ-ಎ ಅಭ್ಯರ್ಥಿಗಳಾದ ಮಾದಿಗ ಸಮುದಾಯದ ಅಭ್ಯರ್ಥಿಗಳು, ಸಹಜವಾಗಿ ಕಡಿಮೆ ಮೆರಿಟ್‌ನವರಾಗಿದ್ದು, ಪ್ರವರ್ಗ-ಬಿ ಸಮುದಾಯಗಳು ಅಧಿಕ ಮೆರಿಟ್ ಹೊಂದಿರುವುದರಿಂದ ಪ್ರತ್ಯೇಕವಾಗಿ ಐತಿಹಾಸಿಕವಾಗಿ ಒಳಮೀಸಲಾತಿ ಹೋರಾಟ ನಡೆಯುತ್ತಿದೆ ಎನ್ನುವುದನ್ನು ಮರೆಯದಿರೋಣ. ಆದ್ದರಿಂದ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಜಾತಿ ಪ್ರಮಾಣ ಪತ್ರಗಳಿರುವ ಹೊಲೆಯರು, ಮಾದಿಗರು, ಇನ್ನಿತರರು ತಮ್ಮ ಮೂಲ ಜಾತಿ ಪ್ರಮಾಣ ಪತ್ರ ಅಧಾರದಲ್ಲಿ ಪ್ರವರ್ಗ-ಎ, ಪ್ರವರ್ಗ-ಬಿ ಯಲ್ಲಿ ಒಳಮೀಸಲಾತಿ ಪಡೆಯಲು ಸರ್ಕಾರ ಆದೇಶಿಸಬೇಕು” ಎಂದು ಒತ್ತಾಯಿಸಿದರು.

ಸಚಿವರು ಮತ್ತು ಅಧಿಕಾರಿಗಳಿಂದ ಒಳಮೀಸಲಾತಿ ಜಾರಿಗೆ ಅಡ್ಡಿ

“25-08-2025 ರಂದು ಸರ್ಕಾರ ಹೊರಡಿಸಿದ ಆದೇಶದ ಒಳಸಂಚನ್ನು ವಿಫಲಗೊಳಿಸಲು ಒಳಮೀಸಲಾತಿ ಹೋರಾಟಗಾರರು ಪ್ರಯತ್ನಗಳು ನಡೆಸುತ್ತಿರುವಾಗಲೇ, ಸಮಾಜ ಕಲ್ಯಾಣ ಇಲಾಖೆ ಸಚಿವರು, ಇಲಾಖೆಯ ಮುಖ್ಯ ಕಾರ್ಯದರ್ಶಿಗಳಾದ ಮಣಿವಣ್ಣನ್, ಆಯುಕ್ತರಾದ ರಾಕೇಶ್ ಕುಮಾರ್, ಸಲಹೆಗಾರರಾದ ವೆಂಕಟಯ್ಯ ಅವರು ಸರ್ಕಾರದಿಂದ ಬಂದ ಕಡತಕ್ಕೆ ಒಪ್ಪಿಗೆ ಸೂಚಿಸಲು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ. ಒಳಮೀಸಲಾತಿ ಆದೇಶವು ಕೇವಲ ನೇರ ನೇಮಕಾತಿಗೆ ಮಾತ್ರ ಅನ್ವಯಿಸುತ್ತದೆ, ಬಡ್ತಿ ಮತ್ತು ಬ್ಯಾಕ್‌ಲಾಗ್ ಹುದ್ದೆಗಳ ನೇಮಕಾತಿಗೆ ಅನ್ವಯಿಸುವುದಿಲ್ಲವೆಂದು ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದಾರೆ. ನೇರ ನೇಮಕಾತಿ, ಬಡ್ತಿ ನೇಮಕಾತಿ ರೋಸ್ಟರ್ ಬಿಂದುಗಳಿಗೆ ಸಂಬಂಧಿಸಿದ ಕರ್ನಾಟಕ ರಾಜ್ಯದ ಆದೇಶಗಳನ್ನು ಉಲ್ಲಂಘಿಸಿ ಸರ್ಕಾರವನ್ನು ದಾರಿತಪ್ಪಿಸುತ್ತಿದ್ದಾರೆ. ಸರ್ಕಾರ ಆದೇಶದ ಪ್ಯಾರಾ-2ನ್ನು ತಯಾರಿಸಿದವರೂ ಇವರೇ ಆಗಿದ್ದಾರೆ” ಎಂದು ಆಕ್ರೋಶ ಹೊರಹಾಕಿದರು.

“ಒಳಮೀಸಲಾತಿ ವಿರೋಧಿ ಮನಸ್ಥಿತಿಯ ಅವರ ಮಾತು, ನಡುವಳಿಕೆಗಳು ಒಳಮೀಸಲಾತಿ ಹೋರಾಟಗಾರರ ಎದುರು ಗುಡುಗುತ್ತಿದ್ದಾರೆ ಎಂದು ಅರ್ಥೈಯಿಸಿಕೊಳ್ಳಬೇಕು. ಇವರ‍್ಯಾರು ಸಾರ್ವಜನಿಕ ಸೇವಕರಾಗಲು ಯೋಗ್ಯರಲ್ಲ. ಇಲಾಖೆಯಲ್ಲಿ ಇವರು ಇರುವ ತನಕ ಒಳಮೀಸಲಾತಿ ಕುತ್ತಿಗೆ ಕೊಯ್ಯುವುದಷ್ಟೆ ಅಲ್ಲ, ಮಾದಿಗ ಸಂಬಂಧಿತ ಸಮುದಾಯಗಳ ಅಭಿವೃದ್ಧಿಗೂ ಕಂಟಕ ಪ್ರಾಯವಾಗಿದ್ದಾರೆ. ಪರಿಶಿಷ್ಠ ಜಾತಿ ಉಪಯೋಜನೆಯ ಸಾವಿರಾರು ಕೋಟಿ ಹಣವನ್ನು ದುರಪಯೋಗ ಪಡಿಸಿಕೊಂಡು, ರೂ. 11,000/- ಕೋಟಿ ಹಣವನ್ನು ಕಾನೂನು ಬಾಹಿರವಾಗಿ ಗ್ಯಾರಂಟಿ ಯೋಜನೆಗೆ ನೀಡುವುದರ ಮೂಲಕ ಮುಖ್ಯಮಂತ್ರಿಗಳನ್ನು ತಮ್ಮ ಬುಟ್ಟಿಗೆ ಹಾಕಿಕೊಂಡು ಪರಿಶಿಷ್ಠ ಜಾತಿಯ 101 ಜಾತಿಗಳಿಗೂ ದ್ರೋಹ ಬಗೆದಿದ್ದಾರೆ” ಎಂದು ಗಂಭಿರ ಆರೋಪ ಮಾಡಿದರು.

“ಆದ್ದರಿಂದ, ಪರಿಶಿಷ್ಠ ಜಾತಿಗಳ ಒಳಮೀಸಲಾತಿ ವಿರೋಧಿಗಳಾದ ಸಮಾಜ ಕಲ್ಯಾಣ ಸಚಿವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಇಲಾಖೆಯ ಮುಖ್ಯಸ್ಥರನ್ನು ಕೂಡಲೇ ವರ್ಗಾವಣೆ ಮಾಡಿ ನೇರ ನೇಮಕ, ಬಡ್ತಿ, ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಿ ಒಳಮೀಸಲಾತಿ ಜಾರಿಗೊಳಿಸಲು ಒತ್ತಾಯಿಸಿ 10 ಅಕ್ಟೋಬರ್ 2025ರಂದು ಸಮಾಜ ಕಲ್ಯಾಣ ಸಚಿವರ ಮನೆಗೆ ಮುತ್ತಿಗೆ ಹಾಕುವ ಹೋರಾಟಕ್ಕೆ ಎಲ್ಲ ಜಿಲ್ಲೆಗಳಿಂದ ಒಳಮೀಸಲಾತಿ ಹೋರಾಟಗಾರರು ಭಾಗವಹಿಸಿ ಯಶಸ್ವಿಗೊಳಿಸಬೇಕು” ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಒಳಮೀಸಲಾತಿ ಹೋರಾಟಗಾರರಾದ ಎಸ್‌.ಮಾರೆಪ್ಪ, ಬಸವರಾಜ್‌ ಕೌತಾಳ್‌, ಅಂಬಣ್ಣ ಅರೋಲಿಕರ್‌, ಚಂದ್ರು ತರಹುಣಿಸೆ, ವೇಣುಗೋಪಾಲ್‌ ಮೌರ್ಯ, ಮಂಜುನಾಥ್‌ ಮರಾಟ ಉಪಸ್ಥಿತರಿದ್ದರು.

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಅವಧಿ ವಿಸ್ತರಣೆ: ಶಾಲಾ ಸಮಯ ಬದಲಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...