Homeಚಳವಳಿಜೈಲು ಅಧಿಕಾರಿಗಳಿಂದ ಚಿಕಿತ್ಸೆ ವಿಳಂಬ: ಸೋಂಕಿನಿಂದ ಹದಗೆಟ್ಟ ಪ್ರಾಧ್ಯಾಪಕ ಡಾ. ಹನಿ ಬಾಬು ಅವರ ಕಣ್ಣು

ಜೈಲು ಅಧಿಕಾರಿಗಳಿಂದ ಚಿಕಿತ್ಸೆ ವಿಳಂಬ: ಸೋಂಕಿನಿಂದ ಹದಗೆಟ್ಟ ಪ್ರಾಧ್ಯಾಪಕ ಡಾ. ಹನಿ ಬಾಬು ಅವರ ಕಣ್ಣು

- Advertisement -
- Advertisement -

ಭೀಮಾ ಕೊರೆಗಾಂವ್‌‌ ಪ್ರಕರಣದಲ್ಲಿ ಸಿಲುಕಿ ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಹನಿ ಬಾಬು ಮುಂಬೈಯ ತಾಲೋಜಾ ಜೈಲಿನಲ್ಲಿದ್ದಾರೆ. ಅವರಿಗೆ ಜೈಲಿನ ಅಧಿಕಾರಿಗಳು ಚಿಕಿತ್ಸೆ ವಿಳಂಬ ಮಾಡಿರುವುದರಿಂದ ಅವರ ಕಣ್ಣುಗಳು ತೀವ್ರ ಸೋಂಕಿನಿಂದ ಹದಗೆಟ್ಟಿದೆ ಎಂದು ಅವರ ಪತ್ನಿ ಹೇಳಿದ್ದಾರೆ.

ಮೇ ತಿಂಗಳಿನಿಂದಲೆ ಹನಿ ಬಾಬು ಅವರಿಗೆ ಚಿಕಿತ್ಸೆ ನೀಡುವ ಬಗ್ಗೆ ಮತ್ತು ಅವರನ್ನು ಆಸ್ಪತ್ರೆಗೆ ದಾಖಲಿಸುವ ಬಗ್ಗೆ ಜೈಲು ಅಧಿಕಾರಿಗಳಿಗೆ ಪದೇ ಪದೇ ಪತ್ರ ಬರೆದಿದ್ದೇನೆ ಎಂದು ಅವರ ಪತ್ನಿ ಪ್ರೊ. ಜೆನ್ನಿ ರೋವೆನಾ ಹೇಳಿದ್ದಾರೆ.

ವೆಬ್‌ ಪತ್ರಿಕೆ ದಿ ಕ್ವಿಂಟ್‌ನೊಂದಿಗೆ ಮಾತನಾಡಿದ ಜೆನ್ನಿ ರೋವೆನಾ, “ಜೈಲಿನ ಅಧಿಕಾರಿಗಳು ಚಿಕಿತ್ಸೆಯನ್ನು ವಿಳಂಬಗೊಳಿಸುವ ಮೂಲಕ ಹನಿ ಬಾಬು ಅವರ ಆರೋಗ್ಯ ಸ್ಥಿತಿ ಹದಗೆಡಲು ಮತ್ತು ಸೋಂಕು ಹರಡಲು ಅವಕಾಶ ಮಾಡಿಕೊಟ್ಟರು. ನಾವು ಸಂಪೂರ್ಣವಾಗಿ ಅಸಹಾಯಕರಾಗಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: `ಸೆರೆಮನೆಯಲ್ಲಿ ನಿರಪರಾಧಿ’ – ಪ್ರೊ. ಹನಿ ಬಾಬು ಅವರ ಕುಟುಂಬ ನಮ್ಮೆಲ್ಲರನ್ನು ಉದ್ದೇಶಿಸಿ ಬರೆದಿರುವ ಪತ್ರ

ಮೇ 15 ರಂದು ಅವರ ಸ್ಥಿತಿ ಗಂಭೀರವಾದ ಕಾರಣ ಹನಿ ಬಾಬು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯ ಹದಗೆಟ್ಟಿದ್ದು, ಅವರಿಗೆ ಜಾಮೀನು ನೀಡುವಂತೆ ಕೋರಿ ಕುಟುಂಬವು ನ್ಯಾಯಾಲಯಕ್ಕೆ ಮನವಿ ಸಲ್ಲಿಸುತ್ತಲೆ ಇದೆ. ಹನಿ ಬಾಬು ಅವರ ವಿರುದ್ದ ಕರಾಳ ಯುಎಪಿಎ ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

ಹನಿ ಬಾಬು ಯಾರು ಮತ್ತು ಅವರು ಜೈಲಿನಲ್ಲಿ ಏಕೆ?

ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾಗಿರುವ ಹನಿ ಬಾಬು ಅವರನ್ನು 2020 ರ ಜುಲೈನಲ್ಲಿ ಭೀಮಾ ಕೊರೆಗಾಂವ್‌‌-ಎಲ್ಗರ್‌ ಪೆರಿಷರ್‌ ಪ್ರಕರಣದಲ್ಲಿ ಬಂಧಿಸಲಾಯಿತು. ಎಲ್ಗರ್ ಪರಿಷತ್ ಸಭೆ ಸಂಘಟಿಸುವಲ್ಲಿ ಅಥವಾ ನಂತರ ನಡೆದ ಭೀಮಾ ಕೊರೆಗಾಂವ್ ಹಿಂಸಾಚಾರದಲ್ಲಿ ತನಗೆ ಯಾವುದೇ ಪಾತ್ರವಿಲ್ಲ ಎಂದು ಡಾ.ಬಾಬು ಪ್ರತಿಪಾದಿಸಿದ್ದಾರೆ. ಆದರೂ ರಾಷ್ಟ್ರೀಯ ತನಿಖಾ ಸಂಸ್ಥೆಯು ಅವರನ್ನು “ನಕ್ಸಲ್ ಚಟುವಟಿಕೆ ಹಾಗೂ ಮಾವೋವಾದಿ ಸಿದ್ಧಾಂತವನ್ನು ಪ್ರಚಾರ ಮಾಡಿದ್ದಾರೆ ಮತ್ತು ಎಲ್ಗಾರ್ ಪರಿಷತ್ ಪ್ರಕರಣದ ಪಿತೂರಿದಾರ” ಎಂದು ಆರೋಪಸಿದೆ.

ಭೀಮಾ ಕೋರೆಗಾಂವ್ ಹಿಂಸಾಚಾರ ತನಿಖೆಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ 16 ಮಾನವ ಹಕ್ಕುಗಳ ಹೋರಾಟಗಾರರು ಮತ್ತು ಶಿಕ್ಷಣ ತಜ್ಞರು ಕೂಡಾ ಇದ್ದ ಜಾತಿ ವಿರೋಧಿ ಹೋರಾಟಗಳಲ್ಲಿ ಹನಿ ಬಾಬು ಸಕ್ರಿಯವಾಗಿದ್ದರು.

ಹನಿ ಬಾಬು ಅವರೊಂದಿಗೆ ಸುಧಾ ಭಾರದ್ವಾಜ್, ಶೋಮಾ ಸೇನ್, ಸುರೇಂದ್ರ ಗ್ಯಾಡ್ಲಿಂಗ್, ಮಹೇಶ್ ರೌತ್, ಅರುಣ್ ಫೆರೀರಾ, ಸುಧೀರ್ ಧವಾಲೆ, ರೋನಾ ವಿಲ್ಸನ್, ವೆರ್ನಾನ್ ಗೊನ್ಸಾಲ್ವೆಸ್, ವರವರ ರಾವ್, ಆನಂದ್ ತೇಲ್ತುಂಬ್ಡೆ ಮತ್ತು ಗೌತಮ್ ನವಲಖಾ ಅವರನ್ನು ಇದೇ ಪ್ರಕರಣದಲ್ಲಿ ಈ ಮೊದಲೇ ಬಂಧಿಸಲಾಗಿತ್ತು. ಈ ಎಲ್ಲರೂ ಈಗ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿಗಳ ನೆಚ್ಚಿನ, ಜನಪ್ರಿಯ ಪ್ರಾಧ್ಯಾಪಕ ಡಾ. ಹನಿ ಬಾಬು ಬಂಧನದಲ್ಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...