Homeಚಳವಳಿಜೈಲು ಅಧಿಕಾರಿಗಳಿಂದ ಚಿಕಿತ್ಸೆ ವಿಳಂಬ: ಸೋಂಕಿನಿಂದ ಹದಗೆಟ್ಟ ಪ್ರಾಧ್ಯಾಪಕ ಡಾ. ಹನಿ ಬಾಬು ಅವರ ಕಣ್ಣು

ಜೈಲು ಅಧಿಕಾರಿಗಳಿಂದ ಚಿಕಿತ್ಸೆ ವಿಳಂಬ: ಸೋಂಕಿನಿಂದ ಹದಗೆಟ್ಟ ಪ್ರಾಧ್ಯಾಪಕ ಡಾ. ಹನಿ ಬಾಬು ಅವರ ಕಣ್ಣು

- Advertisement -
- Advertisement -

ಭೀಮಾ ಕೊರೆಗಾಂವ್‌‌ ಪ್ರಕರಣದಲ್ಲಿ ಸಿಲುಕಿ ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಹನಿ ಬಾಬು ಮುಂಬೈಯ ತಾಲೋಜಾ ಜೈಲಿನಲ್ಲಿದ್ದಾರೆ. ಅವರಿಗೆ ಜೈಲಿನ ಅಧಿಕಾರಿಗಳು ಚಿಕಿತ್ಸೆ ವಿಳಂಬ ಮಾಡಿರುವುದರಿಂದ ಅವರ ಕಣ್ಣುಗಳು ತೀವ್ರ ಸೋಂಕಿನಿಂದ ಹದಗೆಟ್ಟಿದೆ ಎಂದು ಅವರ ಪತ್ನಿ ಹೇಳಿದ್ದಾರೆ.

ಮೇ ತಿಂಗಳಿನಿಂದಲೆ ಹನಿ ಬಾಬು ಅವರಿಗೆ ಚಿಕಿತ್ಸೆ ನೀಡುವ ಬಗ್ಗೆ ಮತ್ತು ಅವರನ್ನು ಆಸ್ಪತ್ರೆಗೆ ದಾಖಲಿಸುವ ಬಗ್ಗೆ ಜೈಲು ಅಧಿಕಾರಿಗಳಿಗೆ ಪದೇ ಪದೇ ಪತ್ರ ಬರೆದಿದ್ದೇನೆ ಎಂದು ಅವರ ಪತ್ನಿ ಪ್ರೊ. ಜೆನ್ನಿ ರೋವೆನಾ ಹೇಳಿದ್ದಾರೆ.

ವೆಬ್‌ ಪತ್ರಿಕೆ ದಿ ಕ್ವಿಂಟ್‌ನೊಂದಿಗೆ ಮಾತನಾಡಿದ ಜೆನ್ನಿ ರೋವೆನಾ, “ಜೈಲಿನ ಅಧಿಕಾರಿಗಳು ಚಿಕಿತ್ಸೆಯನ್ನು ವಿಳಂಬಗೊಳಿಸುವ ಮೂಲಕ ಹನಿ ಬಾಬು ಅವರ ಆರೋಗ್ಯ ಸ್ಥಿತಿ ಹದಗೆಡಲು ಮತ್ತು ಸೋಂಕು ಹರಡಲು ಅವಕಾಶ ಮಾಡಿಕೊಟ್ಟರು. ನಾವು ಸಂಪೂರ್ಣವಾಗಿ ಅಸಹಾಯಕರಾಗಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: `ಸೆರೆಮನೆಯಲ್ಲಿ ನಿರಪರಾಧಿ’ – ಪ್ರೊ. ಹನಿ ಬಾಬು ಅವರ ಕುಟುಂಬ ನಮ್ಮೆಲ್ಲರನ್ನು ಉದ್ದೇಶಿಸಿ ಬರೆದಿರುವ ಪತ್ರ

ಮೇ 15 ರಂದು ಅವರ ಸ್ಥಿತಿ ಗಂಭೀರವಾದ ಕಾರಣ ಹನಿ ಬಾಬು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯ ಹದಗೆಟ್ಟಿದ್ದು, ಅವರಿಗೆ ಜಾಮೀನು ನೀಡುವಂತೆ ಕೋರಿ ಕುಟುಂಬವು ನ್ಯಾಯಾಲಯಕ್ಕೆ ಮನವಿ ಸಲ್ಲಿಸುತ್ತಲೆ ಇದೆ. ಹನಿ ಬಾಬು ಅವರ ವಿರುದ್ದ ಕರಾಳ ಯುಎಪಿಎ ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

ಹನಿ ಬಾಬು ಯಾರು ಮತ್ತು ಅವರು ಜೈಲಿನಲ್ಲಿ ಏಕೆ?

ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾಗಿರುವ ಹನಿ ಬಾಬು ಅವರನ್ನು 2020 ರ ಜುಲೈನಲ್ಲಿ ಭೀಮಾ ಕೊರೆಗಾಂವ್‌‌-ಎಲ್ಗರ್‌ ಪೆರಿಷರ್‌ ಪ್ರಕರಣದಲ್ಲಿ ಬಂಧಿಸಲಾಯಿತು. ಎಲ್ಗರ್ ಪರಿಷತ್ ಸಭೆ ಸಂಘಟಿಸುವಲ್ಲಿ ಅಥವಾ ನಂತರ ನಡೆದ ಭೀಮಾ ಕೊರೆಗಾಂವ್ ಹಿಂಸಾಚಾರದಲ್ಲಿ ತನಗೆ ಯಾವುದೇ ಪಾತ್ರವಿಲ್ಲ ಎಂದು ಡಾ.ಬಾಬು ಪ್ರತಿಪಾದಿಸಿದ್ದಾರೆ. ಆದರೂ ರಾಷ್ಟ್ರೀಯ ತನಿಖಾ ಸಂಸ್ಥೆಯು ಅವರನ್ನು “ನಕ್ಸಲ್ ಚಟುವಟಿಕೆ ಹಾಗೂ ಮಾವೋವಾದಿ ಸಿದ್ಧಾಂತವನ್ನು ಪ್ರಚಾರ ಮಾಡಿದ್ದಾರೆ ಮತ್ತು ಎಲ್ಗಾರ್ ಪರಿಷತ್ ಪ್ರಕರಣದ ಪಿತೂರಿದಾರ” ಎಂದು ಆರೋಪಸಿದೆ.

ಭೀಮಾ ಕೋರೆಗಾಂವ್ ಹಿಂಸಾಚಾರ ತನಿಖೆಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ 16 ಮಾನವ ಹಕ್ಕುಗಳ ಹೋರಾಟಗಾರರು ಮತ್ತು ಶಿಕ್ಷಣ ತಜ್ಞರು ಕೂಡಾ ಇದ್ದ ಜಾತಿ ವಿರೋಧಿ ಹೋರಾಟಗಳಲ್ಲಿ ಹನಿ ಬಾಬು ಸಕ್ರಿಯವಾಗಿದ್ದರು.

ಹನಿ ಬಾಬು ಅವರೊಂದಿಗೆ ಸುಧಾ ಭಾರದ್ವಾಜ್, ಶೋಮಾ ಸೇನ್, ಸುರೇಂದ್ರ ಗ್ಯಾಡ್ಲಿಂಗ್, ಮಹೇಶ್ ರೌತ್, ಅರುಣ್ ಫೆರೀರಾ, ಸುಧೀರ್ ಧವಾಲೆ, ರೋನಾ ವಿಲ್ಸನ್, ವೆರ್ನಾನ್ ಗೊನ್ಸಾಲ್ವೆಸ್, ವರವರ ರಾವ್, ಆನಂದ್ ತೇಲ್ತುಂಬ್ಡೆ ಮತ್ತು ಗೌತಮ್ ನವಲಖಾ ಅವರನ್ನು ಇದೇ ಪ್ರಕರಣದಲ್ಲಿ ಈ ಮೊದಲೇ ಬಂಧಿಸಲಾಗಿತ್ತು. ಈ ಎಲ್ಲರೂ ಈಗ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿಗಳ ನೆಚ್ಚಿನ, ಜನಪ್ರಿಯ ಪ್ರಾಧ್ಯಾಪಕ ಡಾ. ಹನಿ ಬಾಬು ಬಂಧನದಲ್ಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...