Homeಕರ್ನಾಟಕಕೊರೊನಾ ಪರೀಕ್ಷೆ: ವರದಿ ಬರುವುದು ತಡವಾದಷ್ಟು ಹೆಚ್ಚು ಜನರಿಗೆ ಸೋಂಕು- ವೈದ್ಯರ ಎಚ್ಚರಿಕೆಯ ವಿಡಿಯೋ ವೈರಲ್

ಕೊರೊನಾ ಪರೀಕ್ಷೆ: ವರದಿ ಬರುವುದು ತಡವಾದಷ್ಟು ಹೆಚ್ಚು ಜನರಿಗೆ ಸೋಂಕು- ವೈದ್ಯರ ಎಚ್ಚರಿಕೆಯ ವಿಡಿಯೋ ವೈರಲ್

ಶಿಕ್ಷಣ ಮತ್ತು ಆರೋಗ್ಯವನ್ನು ಉಚಿತವಾಗಿ ಕೊಡಬೇಕಾದ ನೀವು ಏಕೆ ಅವುಗಳ ಹೆಸರಿನಲ್ಲಿ ಲೂಟಿ ಮಾಡುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕೊರೊನಾ ಪರೀಕ್ಷೆಗೆ ಕೊಟ್ಟ ನಂತರ ವರದಿ ಬರುವುದು ತಡವಾದರೆ ಪರೀಕ್ಷೆಗೊಳಗಾದ ವ್ಯಕ್ತಿಗಳು ಪಾಸಿಟಿವ್ ವರದಿ ಬರುವುದರೊಳಗೆ ಹಲವು ಕಡೆ ಓಡಾಡುವುದರಿಂದ ಸೋಂಕು ತೀವ್ರ ರೀತಿಯಲ್ಲಿ ಬೇರೆಯವರಿಗೆ ಹರಡುತ್ತದೆ. ಹಾಗಾಗಿ ಸರ್ಕಾರ ಒಂದೇ ದಿನದಲ್ಲಿ ವರದಿ ಕೊಡುವ ರೀತಿ ಲ್ಯಾಬ್‌ಗಳನ್ನು ಮತ್ತು ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸಬೇಕೆಂದು ವೈದ್ಯರೊಬ್ಬರು ಒತ್ತಾಯಿಸಿರುವ ವಿಡಿಯೋ ವೈರಲ್ ಆಗಿದೆ.

ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕದ ಮಾಜಿ ಅಧ್ಯಕ್ಷ, ಸರ್ಕಾರಿ ವೈದ್ಯಾಧೀಕಾರಿಗಳ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಮಂಡ್ಯದ ಡಾ.ರವೀಂದ್ರ ಎಂಬುವವರು ಕೊರೊನಾ ಪರೀಕ್ಷೆಗೆ ಕೊಟ್ಟು ನಾಲ್ಕು ದಿನಗಳಾದರೂ ವರದಿ ಬಂದಿಲ್ಲ. ನನಗೆ ಈ ಪರಿಸ್ಥಿತಿಯಾದರೆ ಜನಸಾಮಾನ್ಯರ ಗತಿಯೇನು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಾನು ನಾಲ್ಕು ದಿನಗಳಿಂದ ಕ್ವಾರಂಟೈನ್‌ನಲ್ಲಿದ್ದೇನೆ. ಏಕೆಂದರೆ ಒಂದು ವೇಳೆ ವರದಿಯಲ್ಲಿ ಪಾಸಿಟಿವ್ ಬಂದಲ್ಲಿ ನಾನು ಓಡಾಡಿದ ಕಡೆಯಲ್ಲೆಲ್ಲಾ ಸೋಂಕು ಹಬ್ಬಿಸಬಹುದಾದ ಸಾಧ್ಯತೆಯಿರುವುದರಿಂದ, ನನ್ನಿಂದ ಬೇರೆಯವರಿಗೆ ತೊಂದರೆಯಾಗಬಾರದು ಎಂಬುದು ನನ್ನ ಉದ್ದೇಶವಾಗಿದೆ. ಆದರೆ ಜನಸಾಮಾನ್ಯರಿಗೆ ಈ ತಿಳುವಳಿಕೆ ಕೊಡುವವರು ಯಾರು? ಅವರು ಕೆಲಸಕ್ಕೆ ಹೋಗದೇ ಮನೆಯಲ್ಲಿಯೇ ಕ್ವಾರಂಟೈನ್ ಆಗಲು ಸಾಧ್ಯವೇ? ಸರ್ಕಾರ ಏಕೆ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದೆ?” ಎಂದು ಅವರು ಕಿಡಿಕಾರಿದ್ದಾರೆ.

ಸರ್ಕಾರದ ಏಕೆ ಈ ಸೂಕ್ಷ್ಮತೆ ಅರ್ಥವಾಗುತ್ತಿಲ್ಲ? ಆರೋಗ್ಯ ಇಲಾಖೆ ಏನು ಮಾಡುತ್ತಿದೆ? ಸರ್ಕಾರ ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಕೂಡಲೇ ಆದಷ್ಟು ಬೇಗ ಪರೀಕ್ಷೆಯ ವರದಿ ಬರುವಂತೆ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ವಿಡಿಯೋ ನೋಡಿ;

ಕೊರೊನಾ ಪರೀಕ್ಷಾ ವರದಿ ತಡ ಮಾಡುವ ಮೂಲಕ ಸರ್ಕಾರವೇ ಹೆಚ್ಚಾಗಿ ಕೊರೊನಾ ಹರಡುತ್ತಿದೆ… ಮಂಡ್ಯದ ವೈದ್ಯರಾದ ಡಾ.ರವೀಂದ್ರರವರ ಆಕ್ರೋಶದ ನುಡಿಗಳು…

Posted by Naanu Gauri on Saturday, July 11, 2020

ರಾಜ್ಯದಲ್ಲಿ ಕೊರೊನಾ ವಾರಿಯರ್ಸ್‌ ಆಗಿ ದುಡಿಯುತ್ತಿರುವ 3 ಜನ ಸರ್ಕಾರಿ ವೈದ್ಯರು ಕೊರೊನಾ ಬಂದು ಸಾವನಪ್ಪಿದ್ದಾರೆ. ಅದರಲ್ಲಿ ಒಬ್ಬರು ಕರ್ತವ್ಯ ನಿರತರಾಗಿದ್ದಾಗಲೇ ಪ್ರಾಣಬಿಟ್ಟಿದ್ದಾರೆ. ಕರ್ತವ್ಯನಿರತರಾಗಿದ್ದಾಗ ಸಾವನಪ್ಪಿದ್ದಾರೆ ಅವರಿಗೆ ಪರಿಹಾರ ಕೊಡಲು ಸಾಧ್ಯವಿಲ್ಲ ಎಂದು ಆರೋಗ್ಯ ಇಲಾಖೆ ಕಮಿಷನರ್ ಪಂಕಜ್‌ ಕುಮಾರ್ ಪಾಂಡೆ ಹೇಳಿರುವುದು ನಾಚಿಕೆಗೇಡು. ಸರ್ಕಾರಿ ವೈದ್ಯರಿಗೆ ಪರಿಹಾರ ಕೊಡದಿದ್ದ ಮೇಲೆ ಸರ್ಕಾರ ಇದ್ದು ಏನು ಪ್ರಯೋಜನ? ನಿಮ್ಮ ಚಪ್ಪಾಳೆ, ಹೂವು ಅವರಿಗೆ ಬೇಕಿಲ್ಲ ಎಂದು ಟೀಕಿಸಿದ್ದಾರೆ.

ಕೊರೊನಾ ಟೆಸ್ಟ್‌ಗೆ ಖಾಸಗಿಯವರಿಗೆ ಸರ್ಕಾರ ದರ ನಿಗಧಿ ಮಾಡುತ್ತಿದೆ. ಜನರಿಗೆ ಉಚಿತ ಕೊರೊನಾ ಟೆಸ್ಟ್ ಮಾಡಿಸುವ ಯೋಗ್ಯತೆ ಸರ್ಕಾರಕ್ಕಿಲ್ಲವೇ? ಕೋವಿಡ್‌ ಸಮಯದಲ್ಲಿಯೂ ನೀವು ಲಂಚ ಹೊಡೆಯಬೇಕೆ? ನಿಮಗೆ ಮಾನವೀಯತೆ ಇಲ್ಲವೇ? ಮಾಸ್ಕ್ ತೆಗೆದುಕೊಳ್ಳುವಲ್ಲಿಯೂ ಭ್ರಷ್ಟಾಚಾರ ಮಾಡುತ್ತಿರಲ್ಲ ನಾಚಿಕೆಯಿಲ್ಲವೇ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೇಂದ್ರ ಸರ್ಕಾರ ಸ್ಯಾನಿಟೈಸ್‌ ಮೇಲೆ 18% ಜಿಎಸ್‌ಟಿ ಹಾಕಿದೆ ಏಕೆ? ಆಹಾರ, ಔಷಧಿಗಳ ಮೇಲೆ 18% ಜಿಎಸ್‌ಟಿ ಹೆಚ್ಚಿಸಿದ್ದರಲ್ಲ ನಿಮಗೆ ಮಾನವೀಯತೆಯಿಲ್ಲವೇ? ಜನರು ಸಾಯುತ್ತಿರುವಾಗಲೂ ನೀವು ಹಣ ಮಾಡಬೇಕೆ? ಶಿಕ್ಷಣ ಮತ್ತು ಆರೋಗ್ಯವನ್ನು ಉಚಿತವಾಗಿ ಕೊಡಬೇಕಾದ ನೀವು ಏಕೆ ಅವುಗಳ ಹೆಸರಿನಲ್ಲಿ ಲೂಟಿ ಮಾಡುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ವರ್ಷಗಳ ಕಾಲ ವೇತನ ರಹಿತ ರಜೆ: ಸಂಕಷ್ಟದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...