Homeಕರ್ನಾಟಕಕೊರೊನಾ ಪರೀಕ್ಷೆ: ವರದಿ ಬರುವುದು ತಡವಾದಷ್ಟು ಹೆಚ್ಚು ಜನರಿಗೆ ಸೋಂಕು- ವೈದ್ಯರ ಎಚ್ಚರಿಕೆಯ ವಿಡಿಯೋ ವೈರಲ್

ಕೊರೊನಾ ಪರೀಕ್ಷೆ: ವರದಿ ಬರುವುದು ತಡವಾದಷ್ಟು ಹೆಚ್ಚು ಜನರಿಗೆ ಸೋಂಕು- ವೈದ್ಯರ ಎಚ್ಚರಿಕೆಯ ವಿಡಿಯೋ ವೈರಲ್

ಶಿಕ್ಷಣ ಮತ್ತು ಆರೋಗ್ಯವನ್ನು ಉಚಿತವಾಗಿ ಕೊಡಬೇಕಾದ ನೀವು ಏಕೆ ಅವುಗಳ ಹೆಸರಿನಲ್ಲಿ ಲೂಟಿ ಮಾಡುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕೊರೊನಾ ಪರೀಕ್ಷೆಗೆ ಕೊಟ್ಟ ನಂತರ ವರದಿ ಬರುವುದು ತಡವಾದರೆ ಪರೀಕ್ಷೆಗೊಳಗಾದ ವ್ಯಕ್ತಿಗಳು ಪಾಸಿಟಿವ್ ವರದಿ ಬರುವುದರೊಳಗೆ ಹಲವು ಕಡೆ ಓಡಾಡುವುದರಿಂದ ಸೋಂಕು ತೀವ್ರ ರೀತಿಯಲ್ಲಿ ಬೇರೆಯವರಿಗೆ ಹರಡುತ್ತದೆ. ಹಾಗಾಗಿ ಸರ್ಕಾರ ಒಂದೇ ದಿನದಲ್ಲಿ ವರದಿ ಕೊಡುವ ರೀತಿ ಲ್ಯಾಬ್‌ಗಳನ್ನು ಮತ್ತು ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸಬೇಕೆಂದು ವೈದ್ಯರೊಬ್ಬರು ಒತ್ತಾಯಿಸಿರುವ ವಿಡಿಯೋ ವೈರಲ್ ಆಗಿದೆ.

ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕದ ಮಾಜಿ ಅಧ್ಯಕ್ಷ, ಸರ್ಕಾರಿ ವೈದ್ಯಾಧೀಕಾರಿಗಳ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಮಂಡ್ಯದ ಡಾ.ರವೀಂದ್ರ ಎಂಬುವವರು ಕೊರೊನಾ ಪರೀಕ್ಷೆಗೆ ಕೊಟ್ಟು ನಾಲ್ಕು ದಿನಗಳಾದರೂ ವರದಿ ಬಂದಿಲ್ಲ. ನನಗೆ ಈ ಪರಿಸ್ಥಿತಿಯಾದರೆ ಜನಸಾಮಾನ್ಯರ ಗತಿಯೇನು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಾನು ನಾಲ್ಕು ದಿನಗಳಿಂದ ಕ್ವಾರಂಟೈನ್‌ನಲ್ಲಿದ್ದೇನೆ. ಏಕೆಂದರೆ ಒಂದು ವೇಳೆ ವರದಿಯಲ್ಲಿ ಪಾಸಿಟಿವ್ ಬಂದಲ್ಲಿ ನಾನು ಓಡಾಡಿದ ಕಡೆಯಲ್ಲೆಲ್ಲಾ ಸೋಂಕು ಹಬ್ಬಿಸಬಹುದಾದ ಸಾಧ್ಯತೆಯಿರುವುದರಿಂದ, ನನ್ನಿಂದ ಬೇರೆಯವರಿಗೆ ತೊಂದರೆಯಾಗಬಾರದು ಎಂಬುದು ನನ್ನ ಉದ್ದೇಶವಾಗಿದೆ. ಆದರೆ ಜನಸಾಮಾನ್ಯರಿಗೆ ಈ ತಿಳುವಳಿಕೆ ಕೊಡುವವರು ಯಾರು? ಅವರು ಕೆಲಸಕ್ಕೆ ಹೋಗದೇ ಮನೆಯಲ್ಲಿಯೇ ಕ್ವಾರಂಟೈನ್ ಆಗಲು ಸಾಧ್ಯವೇ? ಸರ್ಕಾರ ಏಕೆ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದೆ?” ಎಂದು ಅವರು ಕಿಡಿಕಾರಿದ್ದಾರೆ.

ಸರ್ಕಾರದ ಏಕೆ ಈ ಸೂಕ್ಷ್ಮತೆ ಅರ್ಥವಾಗುತ್ತಿಲ್ಲ? ಆರೋಗ್ಯ ಇಲಾಖೆ ಏನು ಮಾಡುತ್ತಿದೆ? ಸರ್ಕಾರ ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಕೂಡಲೇ ಆದಷ್ಟು ಬೇಗ ಪರೀಕ್ಷೆಯ ವರದಿ ಬರುವಂತೆ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ವಿಡಿಯೋ ನೋಡಿ;

ಕೊರೊನಾ ಪರೀಕ್ಷಾ ವರದಿ ತಡ ಮಾಡುವ ಮೂಲಕ ಸರ್ಕಾರವೇ ಹೆಚ್ಚಾಗಿ ಕೊರೊನಾ ಹರಡುತ್ತಿದೆ… ಮಂಡ್ಯದ ವೈದ್ಯರಾದ ಡಾ.ರವೀಂದ್ರರವರ ಆಕ್ರೋಶದ ನುಡಿಗಳು…

Posted by Naanu Gauri on Saturday, July 11, 2020

ರಾಜ್ಯದಲ್ಲಿ ಕೊರೊನಾ ವಾರಿಯರ್ಸ್‌ ಆಗಿ ದುಡಿಯುತ್ತಿರುವ 3 ಜನ ಸರ್ಕಾರಿ ವೈದ್ಯರು ಕೊರೊನಾ ಬಂದು ಸಾವನಪ್ಪಿದ್ದಾರೆ. ಅದರಲ್ಲಿ ಒಬ್ಬರು ಕರ್ತವ್ಯ ನಿರತರಾಗಿದ್ದಾಗಲೇ ಪ್ರಾಣಬಿಟ್ಟಿದ್ದಾರೆ. ಕರ್ತವ್ಯನಿರತರಾಗಿದ್ದಾಗ ಸಾವನಪ್ಪಿದ್ದಾರೆ ಅವರಿಗೆ ಪರಿಹಾರ ಕೊಡಲು ಸಾಧ್ಯವಿಲ್ಲ ಎಂದು ಆರೋಗ್ಯ ಇಲಾಖೆ ಕಮಿಷನರ್ ಪಂಕಜ್‌ ಕುಮಾರ್ ಪಾಂಡೆ ಹೇಳಿರುವುದು ನಾಚಿಕೆಗೇಡು. ಸರ್ಕಾರಿ ವೈದ್ಯರಿಗೆ ಪರಿಹಾರ ಕೊಡದಿದ್ದ ಮೇಲೆ ಸರ್ಕಾರ ಇದ್ದು ಏನು ಪ್ರಯೋಜನ? ನಿಮ್ಮ ಚಪ್ಪಾಳೆ, ಹೂವು ಅವರಿಗೆ ಬೇಕಿಲ್ಲ ಎಂದು ಟೀಕಿಸಿದ್ದಾರೆ.

ಕೊರೊನಾ ಟೆಸ್ಟ್‌ಗೆ ಖಾಸಗಿಯವರಿಗೆ ಸರ್ಕಾರ ದರ ನಿಗಧಿ ಮಾಡುತ್ತಿದೆ. ಜನರಿಗೆ ಉಚಿತ ಕೊರೊನಾ ಟೆಸ್ಟ್ ಮಾಡಿಸುವ ಯೋಗ್ಯತೆ ಸರ್ಕಾರಕ್ಕಿಲ್ಲವೇ? ಕೋವಿಡ್‌ ಸಮಯದಲ್ಲಿಯೂ ನೀವು ಲಂಚ ಹೊಡೆಯಬೇಕೆ? ನಿಮಗೆ ಮಾನವೀಯತೆ ಇಲ್ಲವೇ? ಮಾಸ್ಕ್ ತೆಗೆದುಕೊಳ್ಳುವಲ್ಲಿಯೂ ಭ್ರಷ್ಟಾಚಾರ ಮಾಡುತ್ತಿರಲ್ಲ ನಾಚಿಕೆಯಿಲ್ಲವೇ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೇಂದ್ರ ಸರ್ಕಾರ ಸ್ಯಾನಿಟೈಸ್‌ ಮೇಲೆ 18% ಜಿಎಸ್‌ಟಿ ಹಾಕಿದೆ ಏಕೆ? ಆಹಾರ, ಔಷಧಿಗಳ ಮೇಲೆ 18% ಜಿಎಸ್‌ಟಿ ಹೆಚ್ಚಿಸಿದ್ದರಲ್ಲ ನಿಮಗೆ ಮಾನವೀಯತೆಯಿಲ್ಲವೇ? ಜನರು ಸಾಯುತ್ತಿರುವಾಗಲೂ ನೀವು ಹಣ ಮಾಡಬೇಕೆ? ಶಿಕ್ಷಣ ಮತ್ತು ಆರೋಗ್ಯವನ್ನು ಉಚಿತವಾಗಿ ಕೊಡಬೇಕಾದ ನೀವು ಏಕೆ ಅವುಗಳ ಹೆಸರಿನಲ್ಲಿ ಲೂಟಿ ಮಾಡುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ವರ್ಷಗಳ ಕಾಲ ವೇತನ ರಹಿತ ರಜೆ: ಸಂಕಷ್ಟದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...