Homeಕರ್ನಾಟಕಕೊರೊನಾ ಪರೀಕ್ಷೆ: ವರದಿ ಬರುವುದು ತಡವಾದಷ್ಟು ಹೆಚ್ಚು ಜನರಿಗೆ ಸೋಂಕು- ವೈದ್ಯರ ಎಚ್ಚರಿಕೆಯ ವಿಡಿಯೋ ವೈರಲ್

ಕೊರೊನಾ ಪರೀಕ್ಷೆ: ವರದಿ ಬರುವುದು ತಡವಾದಷ್ಟು ಹೆಚ್ಚು ಜನರಿಗೆ ಸೋಂಕು- ವೈದ್ಯರ ಎಚ್ಚರಿಕೆಯ ವಿಡಿಯೋ ವೈರಲ್

ಶಿಕ್ಷಣ ಮತ್ತು ಆರೋಗ್ಯವನ್ನು ಉಚಿತವಾಗಿ ಕೊಡಬೇಕಾದ ನೀವು ಏಕೆ ಅವುಗಳ ಹೆಸರಿನಲ್ಲಿ ಲೂಟಿ ಮಾಡುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕೊರೊನಾ ಪರೀಕ್ಷೆಗೆ ಕೊಟ್ಟ ನಂತರ ವರದಿ ಬರುವುದು ತಡವಾದರೆ ಪರೀಕ್ಷೆಗೊಳಗಾದ ವ್ಯಕ್ತಿಗಳು ಪಾಸಿಟಿವ್ ವರದಿ ಬರುವುದರೊಳಗೆ ಹಲವು ಕಡೆ ಓಡಾಡುವುದರಿಂದ ಸೋಂಕು ತೀವ್ರ ರೀತಿಯಲ್ಲಿ ಬೇರೆಯವರಿಗೆ ಹರಡುತ್ತದೆ. ಹಾಗಾಗಿ ಸರ್ಕಾರ ಒಂದೇ ದಿನದಲ್ಲಿ ವರದಿ ಕೊಡುವ ರೀತಿ ಲ್ಯಾಬ್‌ಗಳನ್ನು ಮತ್ತು ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸಬೇಕೆಂದು ವೈದ್ಯರೊಬ್ಬರು ಒತ್ತಾಯಿಸಿರುವ ವಿಡಿಯೋ ವೈರಲ್ ಆಗಿದೆ.

ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕದ ಮಾಜಿ ಅಧ್ಯಕ್ಷ, ಸರ್ಕಾರಿ ವೈದ್ಯಾಧೀಕಾರಿಗಳ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಮಂಡ್ಯದ ಡಾ.ರವೀಂದ್ರ ಎಂಬುವವರು ಕೊರೊನಾ ಪರೀಕ್ಷೆಗೆ ಕೊಟ್ಟು ನಾಲ್ಕು ದಿನಗಳಾದರೂ ವರದಿ ಬಂದಿಲ್ಲ. ನನಗೆ ಈ ಪರಿಸ್ಥಿತಿಯಾದರೆ ಜನಸಾಮಾನ್ಯರ ಗತಿಯೇನು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಾನು ನಾಲ್ಕು ದಿನಗಳಿಂದ ಕ್ವಾರಂಟೈನ್‌ನಲ್ಲಿದ್ದೇನೆ. ಏಕೆಂದರೆ ಒಂದು ವೇಳೆ ವರದಿಯಲ್ಲಿ ಪಾಸಿಟಿವ್ ಬಂದಲ್ಲಿ ನಾನು ಓಡಾಡಿದ ಕಡೆಯಲ್ಲೆಲ್ಲಾ ಸೋಂಕು ಹಬ್ಬಿಸಬಹುದಾದ ಸಾಧ್ಯತೆಯಿರುವುದರಿಂದ, ನನ್ನಿಂದ ಬೇರೆಯವರಿಗೆ ತೊಂದರೆಯಾಗಬಾರದು ಎಂಬುದು ನನ್ನ ಉದ್ದೇಶವಾಗಿದೆ. ಆದರೆ ಜನಸಾಮಾನ್ಯರಿಗೆ ಈ ತಿಳುವಳಿಕೆ ಕೊಡುವವರು ಯಾರು? ಅವರು ಕೆಲಸಕ್ಕೆ ಹೋಗದೇ ಮನೆಯಲ್ಲಿಯೇ ಕ್ವಾರಂಟೈನ್ ಆಗಲು ಸಾಧ್ಯವೇ? ಸರ್ಕಾರ ಏಕೆ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದೆ?” ಎಂದು ಅವರು ಕಿಡಿಕಾರಿದ್ದಾರೆ.

ಸರ್ಕಾರದ ಏಕೆ ಈ ಸೂಕ್ಷ್ಮತೆ ಅರ್ಥವಾಗುತ್ತಿಲ್ಲ? ಆರೋಗ್ಯ ಇಲಾಖೆ ಏನು ಮಾಡುತ್ತಿದೆ? ಸರ್ಕಾರ ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಕೂಡಲೇ ಆದಷ್ಟು ಬೇಗ ಪರೀಕ್ಷೆಯ ವರದಿ ಬರುವಂತೆ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ವಿಡಿಯೋ ನೋಡಿ;

ಕೊರೊನಾ ಪರೀಕ್ಷಾ ವರದಿ ತಡ ಮಾಡುವ ಮೂಲಕ ಸರ್ಕಾರವೇ ಹೆಚ್ಚಾಗಿ ಕೊರೊನಾ ಹರಡುತ್ತಿದೆ… ಮಂಡ್ಯದ ವೈದ್ಯರಾದ ಡಾ.ರವೀಂದ್ರರವರ ಆಕ್ರೋಶದ ನುಡಿಗಳು…

Posted by Naanu Gauri on Saturday, July 11, 2020

ರಾಜ್ಯದಲ್ಲಿ ಕೊರೊನಾ ವಾರಿಯರ್ಸ್‌ ಆಗಿ ದುಡಿಯುತ್ತಿರುವ 3 ಜನ ಸರ್ಕಾರಿ ವೈದ್ಯರು ಕೊರೊನಾ ಬಂದು ಸಾವನಪ್ಪಿದ್ದಾರೆ. ಅದರಲ್ಲಿ ಒಬ್ಬರು ಕರ್ತವ್ಯ ನಿರತರಾಗಿದ್ದಾಗಲೇ ಪ್ರಾಣಬಿಟ್ಟಿದ್ದಾರೆ. ಕರ್ತವ್ಯನಿರತರಾಗಿದ್ದಾಗ ಸಾವನಪ್ಪಿದ್ದಾರೆ ಅವರಿಗೆ ಪರಿಹಾರ ಕೊಡಲು ಸಾಧ್ಯವಿಲ್ಲ ಎಂದು ಆರೋಗ್ಯ ಇಲಾಖೆ ಕಮಿಷನರ್ ಪಂಕಜ್‌ ಕುಮಾರ್ ಪಾಂಡೆ ಹೇಳಿರುವುದು ನಾಚಿಕೆಗೇಡು. ಸರ್ಕಾರಿ ವೈದ್ಯರಿಗೆ ಪರಿಹಾರ ಕೊಡದಿದ್ದ ಮೇಲೆ ಸರ್ಕಾರ ಇದ್ದು ಏನು ಪ್ರಯೋಜನ? ನಿಮ್ಮ ಚಪ್ಪಾಳೆ, ಹೂವು ಅವರಿಗೆ ಬೇಕಿಲ್ಲ ಎಂದು ಟೀಕಿಸಿದ್ದಾರೆ.

ಕೊರೊನಾ ಟೆಸ್ಟ್‌ಗೆ ಖಾಸಗಿಯವರಿಗೆ ಸರ್ಕಾರ ದರ ನಿಗಧಿ ಮಾಡುತ್ತಿದೆ. ಜನರಿಗೆ ಉಚಿತ ಕೊರೊನಾ ಟೆಸ್ಟ್ ಮಾಡಿಸುವ ಯೋಗ್ಯತೆ ಸರ್ಕಾರಕ್ಕಿಲ್ಲವೇ? ಕೋವಿಡ್‌ ಸಮಯದಲ್ಲಿಯೂ ನೀವು ಲಂಚ ಹೊಡೆಯಬೇಕೆ? ನಿಮಗೆ ಮಾನವೀಯತೆ ಇಲ್ಲವೇ? ಮಾಸ್ಕ್ ತೆಗೆದುಕೊಳ್ಳುವಲ್ಲಿಯೂ ಭ್ರಷ್ಟಾಚಾರ ಮಾಡುತ್ತಿರಲ್ಲ ನಾಚಿಕೆಯಿಲ್ಲವೇ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೇಂದ್ರ ಸರ್ಕಾರ ಸ್ಯಾನಿಟೈಸ್‌ ಮೇಲೆ 18% ಜಿಎಸ್‌ಟಿ ಹಾಕಿದೆ ಏಕೆ? ಆಹಾರ, ಔಷಧಿಗಳ ಮೇಲೆ 18% ಜಿಎಸ್‌ಟಿ ಹೆಚ್ಚಿಸಿದ್ದರಲ್ಲ ನಿಮಗೆ ಮಾನವೀಯತೆಯಿಲ್ಲವೇ? ಜನರು ಸಾಯುತ್ತಿರುವಾಗಲೂ ನೀವು ಹಣ ಮಾಡಬೇಕೆ? ಶಿಕ್ಷಣ ಮತ್ತು ಆರೋಗ್ಯವನ್ನು ಉಚಿತವಾಗಿ ಕೊಡಬೇಕಾದ ನೀವು ಏಕೆ ಅವುಗಳ ಹೆಸರಿನಲ್ಲಿ ಲೂಟಿ ಮಾಡುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ವರ್ಷಗಳ ಕಾಲ ವೇತನ ರಹಿತ ರಜೆ: ಸಂಕಷ್ಟದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...