Homeಕರ್ನಾಟಕಕೊರೊನಾ ಪರೀಕ್ಷೆ: ವರದಿ ಬರುವುದು ತಡವಾದಷ್ಟು ಹೆಚ್ಚು ಜನರಿಗೆ ಸೋಂಕು- ವೈದ್ಯರ ಎಚ್ಚರಿಕೆಯ ವಿಡಿಯೋ ವೈರಲ್

ಕೊರೊನಾ ಪರೀಕ್ಷೆ: ವರದಿ ಬರುವುದು ತಡವಾದಷ್ಟು ಹೆಚ್ಚು ಜನರಿಗೆ ಸೋಂಕು- ವೈದ್ಯರ ಎಚ್ಚರಿಕೆಯ ವಿಡಿಯೋ ವೈರಲ್

ಶಿಕ್ಷಣ ಮತ್ತು ಆರೋಗ್ಯವನ್ನು ಉಚಿತವಾಗಿ ಕೊಡಬೇಕಾದ ನೀವು ಏಕೆ ಅವುಗಳ ಹೆಸರಿನಲ್ಲಿ ಲೂಟಿ ಮಾಡುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕೊರೊನಾ ಪರೀಕ್ಷೆಗೆ ಕೊಟ್ಟ ನಂತರ ವರದಿ ಬರುವುದು ತಡವಾದರೆ ಪರೀಕ್ಷೆಗೊಳಗಾದ ವ್ಯಕ್ತಿಗಳು ಪಾಸಿಟಿವ್ ವರದಿ ಬರುವುದರೊಳಗೆ ಹಲವು ಕಡೆ ಓಡಾಡುವುದರಿಂದ ಸೋಂಕು ತೀವ್ರ ರೀತಿಯಲ್ಲಿ ಬೇರೆಯವರಿಗೆ ಹರಡುತ್ತದೆ. ಹಾಗಾಗಿ ಸರ್ಕಾರ ಒಂದೇ ದಿನದಲ್ಲಿ ವರದಿ ಕೊಡುವ ರೀತಿ ಲ್ಯಾಬ್‌ಗಳನ್ನು ಮತ್ತು ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸಬೇಕೆಂದು ವೈದ್ಯರೊಬ್ಬರು ಒತ್ತಾಯಿಸಿರುವ ವಿಡಿಯೋ ವೈರಲ್ ಆಗಿದೆ.

ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕದ ಮಾಜಿ ಅಧ್ಯಕ್ಷ, ಸರ್ಕಾರಿ ವೈದ್ಯಾಧೀಕಾರಿಗಳ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಮಂಡ್ಯದ ಡಾ.ರವೀಂದ್ರ ಎಂಬುವವರು ಕೊರೊನಾ ಪರೀಕ್ಷೆಗೆ ಕೊಟ್ಟು ನಾಲ್ಕು ದಿನಗಳಾದರೂ ವರದಿ ಬಂದಿಲ್ಲ. ನನಗೆ ಈ ಪರಿಸ್ಥಿತಿಯಾದರೆ ಜನಸಾಮಾನ್ಯರ ಗತಿಯೇನು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಾನು ನಾಲ್ಕು ದಿನಗಳಿಂದ ಕ್ವಾರಂಟೈನ್‌ನಲ್ಲಿದ್ದೇನೆ. ಏಕೆಂದರೆ ಒಂದು ವೇಳೆ ವರದಿಯಲ್ಲಿ ಪಾಸಿಟಿವ್ ಬಂದಲ್ಲಿ ನಾನು ಓಡಾಡಿದ ಕಡೆಯಲ್ಲೆಲ್ಲಾ ಸೋಂಕು ಹಬ್ಬಿಸಬಹುದಾದ ಸಾಧ್ಯತೆಯಿರುವುದರಿಂದ, ನನ್ನಿಂದ ಬೇರೆಯವರಿಗೆ ತೊಂದರೆಯಾಗಬಾರದು ಎಂಬುದು ನನ್ನ ಉದ್ದೇಶವಾಗಿದೆ. ಆದರೆ ಜನಸಾಮಾನ್ಯರಿಗೆ ಈ ತಿಳುವಳಿಕೆ ಕೊಡುವವರು ಯಾರು? ಅವರು ಕೆಲಸಕ್ಕೆ ಹೋಗದೇ ಮನೆಯಲ್ಲಿಯೇ ಕ್ವಾರಂಟೈನ್ ಆಗಲು ಸಾಧ್ಯವೇ? ಸರ್ಕಾರ ಏಕೆ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದೆ?” ಎಂದು ಅವರು ಕಿಡಿಕಾರಿದ್ದಾರೆ.

ಸರ್ಕಾರದ ಏಕೆ ಈ ಸೂಕ್ಷ್ಮತೆ ಅರ್ಥವಾಗುತ್ತಿಲ್ಲ? ಆರೋಗ್ಯ ಇಲಾಖೆ ಏನು ಮಾಡುತ್ತಿದೆ? ಸರ್ಕಾರ ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಕೂಡಲೇ ಆದಷ್ಟು ಬೇಗ ಪರೀಕ್ಷೆಯ ವರದಿ ಬರುವಂತೆ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ವಿಡಿಯೋ ನೋಡಿ;

ಕೊರೊನಾ ಪರೀಕ್ಷಾ ವರದಿ ತಡ ಮಾಡುವ ಮೂಲಕ ಸರ್ಕಾರವೇ ಹೆಚ್ಚಾಗಿ ಕೊರೊನಾ ಹರಡುತ್ತಿದೆ… ಮಂಡ್ಯದ ವೈದ್ಯರಾದ ಡಾ.ರವೀಂದ್ರರವರ ಆಕ್ರೋಶದ ನುಡಿಗಳು…

Posted by Naanu Gauri on Saturday, July 11, 2020

ರಾಜ್ಯದಲ್ಲಿ ಕೊರೊನಾ ವಾರಿಯರ್ಸ್‌ ಆಗಿ ದುಡಿಯುತ್ತಿರುವ 3 ಜನ ಸರ್ಕಾರಿ ವೈದ್ಯರು ಕೊರೊನಾ ಬಂದು ಸಾವನಪ್ಪಿದ್ದಾರೆ. ಅದರಲ್ಲಿ ಒಬ್ಬರು ಕರ್ತವ್ಯ ನಿರತರಾಗಿದ್ದಾಗಲೇ ಪ್ರಾಣಬಿಟ್ಟಿದ್ದಾರೆ. ಕರ್ತವ್ಯನಿರತರಾಗಿದ್ದಾಗ ಸಾವನಪ್ಪಿದ್ದಾರೆ ಅವರಿಗೆ ಪರಿಹಾರ ಕೊಡಲು ಸಾಧ್ಯವಿಲ್ಲ ಎಂದು ಆರೋಗ್ಯ ಇಲಾಖೆ ಕಮಿಷನರ್ ಪಂಕಜ್‌ ಕುಮಾರ್ ಪಾಂಡೆ ಹೇಳಿರುವುದು ನಾಚಿಕೆಗೇಡು. ಸರ್ಕಾರಿ ವೈದ್ಯರಿಗೆ ಪರಿಹಾರ ಕೊಡದಿದ್ದ ಮೇಲೆ ಸರ್ಕಾರ ಇದ್ದು ಏನು ಪ್ರಯೋಜನ? ನಿಮ್ಮ ಚಪ್ಪಾಳೆ, ಹೂವು ಅವರಿಗೆ ಬೇಕಿಲ್ಲ ಎಂದು ಟೀಕಿಸಿದ್ದಾರೆ.

ಕೊರೊನಾ ಟೆಸ್ಟ್‌ಗೆ ಖಾಸಗಿಯವರಿಗೆ ಸರ್ಕಾರ ದರ ನಿಗಧಿ ಮಾಡುತ್ತಿದೆ. ಜನರಿಗೆ ಉಚಿತ ಕೊರೊನಾ ಟೆಸ್ಟ್ ಮಾಡಿಸುವ ಯೋಗ್ಯತೆ ಸರ್ಕಾರಕ್ಕಿಲ್ಲವೇ? ಕೋವಿಡ್‌ ಸಮಯದಲ್ಲಿಯೂ ನೀವು ಲಂಚ ಹೊಡೆಯಬೇಕೆ? ನಿಮಗೆ ಮಾನವೀಯತೆ ಇಲ್ಲವೇ? ಮಾಸ್ಕ್ ತೆಗೆದುಕೊಳ್ಳುವಲ್ಲಿಯೂ ಭ್ರಷ್ಟಾಚಾರ ಮಾಡುತ್ತಿರಲ್ಲ ನಾಚಿಕೆಯಿಲ್ಲವೇ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೇಂದ್ರ ಸರ್ಕಾರ ಸ್ಯಾನಿಟೈಸ್‌ ಮೇಲೆ 18% ಜಿಎಸ್‌ಟಿ ಹಾಕಿದೆ ಏಕೆ? ಆಹಾರ, ಔಷಧಿಗಳ ಮೇಲೆ 18% ಜಿಎಸ್‌ಟಿ ಹೆಚ್ಚಿಸಿದ್ದರಲ್ಲ ನಿಮಗೆ ಮಾನವೀಯತೆಯಿಲ್ಲವೇ? ಜನರು ಸಾಯುತ್ತಿರುವಾಗಲೂ ನೀವು ಹಣ ಮಾಡಬೇಕೆ? ಶಿಕ್ಷಣ ಮತ್ತು ಆರೋಗ್ಯವನ್ನು ಉಚಿತವಾಗಿ ಕೊಡಬೇಕಾದ ನೀವು ಏಕೆ ಅವುಗಳ ಹೆಸರಿನಲ್ಲಿ ಲೂಟಿ ಮಾಡುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ವರ್ಷಗಳ ಕಾಲ ವೇತನ ರಹಿತ ರಜೆ: ಸಂಕಷ್ಟದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...