Homeಕರ್ನಾಟಕಕೊರೊನಾ ಪರೀಕ್ಷೆ: ವರದಿ ಬರುವುದು ತಡವಾದಷ್ಟು ಹೆಚ್ಚು ಜನರಿಗೆ ಸೋಂಕು- ವೈದ್ಯರ ಎಚ್ಚರಿಕೆಯ ವಿಡಿಯೋ ವೈರಲ್

ಕೊರೊನಾ ಪರೀಕ್ಷೆ: ವರದಿ ಬರುವುದು ತಡವಾದಷ್ಟು ಹೆಚ್ಚು ಜನರಿಗೆ ಸೋಂಕು- ವೈದ್ಯರ ಎಚ್ಚರಿಕೆಯ ವಿಡಿಯೋ ವೈರಲ್

ಶಿಕ್ಷಣ ಮತ್ತು ಆರೋಗ್ಯವನ್ನು ಉಚಿತವಾಗಿ ಕೊಡಬೇಕಾದ ನೀವು ಏಕೆ ಅವುಗಳ ಹೆಸರಿನಲ್ಲಿ ಲೂಟಿ ಮಾಡುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕೊರೊನಾ ಪರೀಕ್ಷೆಗೆ ಕೊಟ್ಟ ನಂತರ ವರದಿ ಬರುವುದು ತಡವಾದರೆ ಪರೀಕ್ಷೆಗೊಳಗಾದ ವ್ಯಕ್ತಿಗಳು ಪಾಸಿಟಿವ್ ವರದಿ ಬರುವುದರೊಳಗೆ ಹಲವು ಕಡೆ ಓಡಾಡುವುದರಿಂದ ಸೋಂಕು ತೀವ್ರ ರೀತಿಯಲ್ಲಿ ಬೇರೆಯವರಿಗೆ ಹರಡುತ್ತದೆ. ಹಾಗಾಗಿ ಸರ್ಕಾರ ಒಂದೇ ದಿನದಲ್ಲಿ ವರದಿ ಕೊಡುವ ರೀತಿ ಲ್ಯಾಬ್‌ಗಳನ್ನು ಮತ್ತು ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸಬೇಕೆಂದು ವೈದ್ಯರೊಬ್ಬರು ಒತ್ತಾಯಿಸಿರುವ ವಿಡಿಯೋ ವೈರಲ್ ಆಗಿದೆ.

ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕದ ಮಾಜಿ ಅಧ್ಯಕ್ಷ, ಸರ್ಕಾರಿ ವೈದ್ಯಾಧೀಕಾರಿಗಳ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಮಂಡ್ಯದ ಡಾ.ರವೀಂದ್ರ ಎಂಬುವವರು ಕೊರೊನಾ ಪರೀಕ್ಷೆಗೆ ಕೊಟ್ಟು ನಾಲ್ಕು ದಿನಗಳಾದರೂ ವರದಿ ಬಂದಿಲ್ಲ. ನನಗೆ ಈ ಪರಿಸ್ಥಿತಿಯಾದರೆ ಜನಸಾಮಾನ್ಯರ ಗತಿಯೇನು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಾನು ನಾಲ್ಕು ದಿನಗಳಿಂದ ಕ್ವಾರಂಟೈನ್‌ನಲ್ಲಿದ್ದೇನೆ. ಏಕೆಂದರೆ ಒಂದು ವೇಳೆ ವರದಿಯಲ್ಲಿ ಪಾಸಿಟಿವ್ ಬಂದಲ್ಲಿ ನಾನು ಓಡಾಡಿದ ಕಡೆಯಲ್ಲೆಲ್ಲಾ ಸೋಂಕು ಹಬ್ಬಿಸಬಹುದಾದ ಸಾಧ್ಯತೆಯಿರುವುದರಿಂದ, ನನ್ನಿಂದ ಬೇರೆಯವರಿಗೆ ತೊಂದರೆಯಾಗಬಾರದು ಎಂಬುದು ನನ್ನ ಉದ್ದೇಶವಾಗಿದೆ. ಆದರೆ ಜನಸಾಮಾನ್ಯರಿಗೆ ಈ ತಿಳುವಳಿಕೆ ಕೊಡುವವರು ಯಾರು? ಅವರು ಕೆಲಸಕ್ಕೆ ಹೋಗದೇ ಮನೆಯಲ್ಲಿಯೇ ಕ್ವಾರಂಟೈನ್ ಆಗಲು ಸಾಧ್ಯವೇ? ಸರ್ಕಾರ ಏಕೆ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದೆ?” ಎಂದು ಅವರು ಕಿಡಿಕಾರಿದ್ದಾರೆ.

ಸರ್ಕಾರದ ಏಕೆ ಈ ಸೂಕ್ಷ್ಮತೆ ಅರ್ಥವಾಗುತ್ತಿಲ್ಲ? ಆರೋಗ್ಯ ಇಲಾಖೆ ಏನು ಮಾಡುತ್ತಿದೆ? ಸರ್ಕಾರ ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಕೂಡಲೇ ಆದಷ್ಟು ಬೇಗ ಪರೀಕ್ಷೆಯ ವರದಿ ಬರುವಂತೆ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ವಿಡಿಯೋ ನೋಡಿ;

ಕೊರೊನಾ ಪರೀಕ್ಷಾ ವರದಿ ತಡ ಮಾಡುವ ಮೂಲಕ ಸರ್ಕಾರವೇ ಹೆಚ್ಚಾಗಿ ಕೊರೊನಾ ಹರಡುತ್ತಿದೆ… ಮಂಡ್ಯದ ವೈದ್ಯರಾದ ಡಾ.ರವೀಂದ್ರರವರ ಆಕ್ರೋಶದ ನುಡಿಗಳು…

Posted by Naanu Gauri on Saturday, July 11, 2020

ರಾಜ್ಯದಲ್ಲಿ ಕೊರೊನಾ ವಾರಿಯರ್ಸ್‌ ಆಗಿ ದುಡಿಯುತ್ತಿರುವ 3 ಜನ ಸರ್ಕಾರಿ ವೈದ್ಯರು ಕೊರೊನಾ ಬಂದು ಸಾವನಪ್ಪಿದ್ದಾರೆ. ಅದರಲ್ಲಿ ಒಬ್ಬರು ಕರ್ತವ್ಯ ನಿರತರಾಗಿದ್ದಾಗಲೇ ಪ್ರಾಣಬಿಟ್ಟಿದ್ದಾರೆ. ಕರ್ತವ್ಯನಿರತರಾಗಿದ್ದಾಗ ಸಾವನಪ್ಪಿದ್ದಾರೆ ಅವರಿಗೆ ಪರಿಹಾರ ಕೊಡಲು ಸಾಧ್ಯವಿಲ್ಲ ಎಂದು ಆರೋಗ್ಯ ಇಲಾಖೆ ಕಮಿಷನರ್ ಪಂಕಜ್‌ ಕುಮಾರ್ ಪಾಂಡೆ ಹೇಳಿರುವುದು ನಾಚಿಕೆಗೇಡು. ಸರ್ಕಾರಿ ವೈದ್ಯರಿಗೆ ಪರಿಹಾರ ಕೊಡದಿದ್ದ ಮೇಲೆ ಸರ್ಕಾರ ಇದ್ದು ಏನು ಪ್ರಯೋಜನ? ನಿಮ್ಮ ಚಪ್ಪಾಳೆ, ಹೂವು ಅವರಿಗೆ ಬೇಕಿಲ್ಲ ಎಂದು ಟೀಕಿಸಿದ್ದಾರೆ.

ಕೊರೊನಾ ಟೆಸ್ಟ್‌ಗೆ ಖಾಸಗಿಯವರಿಗೆ ಸರ್ಕಾರ ದರ ನಿಗಧಿ ಮಾಡುತ್ತಿದೆ. ಜನರಿಗೆ ಉಚಿತ ಕೊರೊನಾ ಟೆಸ್ಟ್ ಮಾಡಿಸುವ ಯೋಗ್ಯತೆ ಸರ್ಕಾರಕ್ಕಿಲ್ಲವೇ? ಕೋವಿಡ್‌ ಸಮಯದಲ್ಲಿಯೂ ನೀವು ಲಂಚ ಹೊಡೆಯಬೇಕೆ? ನಿಮಗೆ ಮಾನವೀಯತೆ ಇಲ್ಲವೇ? ಮಾಸ್ಕ್ ತೆಗೆದುಕೊಳ್ಳುವಲ್ಲಿಯೂ ಭ್ರಷ್ಟಾಚಾರ ಮಾಡುತ್ತಿರಲ್ಲ ನಾಚಿಕೆಯಿಲ್ಲವೇ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೇಂದ್ರ ಸರ್ಕಾರ ಸ್ಯಾನಿಟೈಸ್‌ ಮೇಲೆ 18% ಜಿಎಸ್‌ಟಿ ಹಾಕಿದೆ ಏಕೆ? ಆಹಾರ, ಔಷಧಿಗಳ ಮೇಲೆ 18% ಜಿಎಸ್‌ಟಿ ಹೆಚ್ಚಿಸಿದ್ದರಲ್ಲ ನಿಮಗೆ ಮಾನವೀಯತೆಯಿಲ್ಲವೇ? ಜನರು ಸಾಯುತ್ತಿರುವಾಗಲೂ ನೀವು ಹಣ ಮಾಡಬೇಕೆ? ಶಿಕ್ಷಣ ಮತ್ತು ಆರೋಗ್ಯವನ್ನು ಉಚಿತವಾಗಿ ಕೊಡಬೇಕಾದ ನೀವು ಏಕೆ ಅವುಗಳ ಹೆಸರಿನಲ್ಲಿ ಲೂಟಿ ಮಾಡುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ವರ್ಷಗಳ ಕಾಲ ವೇತನ ರಹಿತ ರಜೆ: ಸಂಕಷ್ಟದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...

ನಾನು ‘ದಿಮಾಗಿ ನಕ್ಸಲ್’ ಆಗಿದ್ದರೆ ಅದಕ್ಕೆ ಹೆಮ್ಮೆ ಇದೆ: ಮೋದಿ-ರಿಜಿಜು ವಿರುದ್ಧ ಚಿದಂಬರಂ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ ‘ದಿಮಾಗಿ ನಕ್ಸಲರು’ (ವೈಚಾರಿಕ ನಕ್ಸಲರು) ಎಂಬ ಪದ ಬಳಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಧಾನಿಯವರ ಈ...

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...

ಹಿಂಗೋಲಿ ಶಾಲೆಯಲ್ಲಿ ಪ್ರಾಂಶುಪಾಲರ ಮದ್ಯಪಾನ, ಶಿಕ್ಷಕರ ಅಭಾವ: ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಅಭಿಜೀತ್ ದೀಪ್ಕೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಕುಸಿದಿದ್ದು, ಶಾಲಾ ಪ್ರಾಂಶುಪಾಲರ ಹೊಣೆಗೇಡಿತನ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುಗಿಲುಮುಟ್ಟಿದೆ. ಶಾಲೆಯ ಪ್ರಾಂಶುಪಾಲರು...

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ...

EFLU ವಿದ್ಯಾರ್ಥಿ ಸಂಘದ ಮುಖಂಡರು, NSUI ಸದಸ್ಯರ ಮೇಲೆ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ; ABVP ಸದಸ್ಯರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ನ ಪ್ರತಿಷ್ಠಿತ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯ (ಇಎಫ್‌ಎಲ್‌ಯು - EFLU) ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು, ವಿದ್ಯಾರ್ಥಿ ಸಂಘದ ಮುಖಂಡರು ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರ ಮೇಲೆ...

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ. ಹೈದರಾಬಾದ್‌ನ ನಲ್ಸಾರ್...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...