Homeಕರ್ನಾಟಕಕೊರೊನಾ ಪರೀಕ್ಷೆ: ವರದಿ ಬರುವುದು ತಡವಾದಷ್ಟು ಹೆಚ್ಚು ಜನರಿಗೆ ಸೋಂಕು- ವೈದ್ಯರ ಎಚ್ಚರಿಕೆಯ ವಿಡಿಯೋ ವೈರಲ್

ಕೊರೊನಾ ಪರೀಕ್ಷೆ: ವರದಿ ಬರುವುದು ತಡವಾದಷ್ಟು ಹೆಚ್ಚು ಜನರಿಗೆ ಸೋಂಕು- ವೈದ್ಯರ ಎಚ್ಚರಿಕೆಯ ವಿಡಿಯೋ ವೈರಲ್

ಶಿಕ್ಷಣ ಮತ್ತು ಆರೋಗ್ಯವನ್ನು ಉಚಿತವಾಗಿ ಕೊಡಬೇಕಾದ ನೀವು ಏಕೆ ಅವುಗಳ ಹೆಸರಿನಲ್ಲಿ ಲೂಟಿ ಮಾಡುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕೊರೊನಾ ಪರೀಕ್ಷೆಗೆ ಕೊಟ್ಟ ನಂತರ ವರದಿ ಬರುವುದು ತಡವಾದರೆ ಪರೀಕ್ಷೆಗೊಳಗಾದ ವ್ಯಕ್ತಿಗಳು ಪಾಸಿಟಿವ್ ವರದಿ ಬರುವುದರೊಳಗೆ ಹಲವು ಕಡೆ ಓಡಾಡುವುದರಿಂದ ಸೋಂಕು ತೀವ್ರ ರೀತಿಯಲ್ಲಿ ಬೇರೆಯವರಿಗೆ ಹರಡುತ್ತದೆ. ಹಾಗಾಗಿ ಸರ್ಕಾರ ಒಂದೇ ದಿನದಲ್ಲಿ ವರದಿ ಕೊಡುವ ರೀತಿ ಲ್ಯಾಬ್‌ಗಳನ್ನು ಮತ್ತು ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸಬೇಕೆಂದು ವೈದ್ಯರೊಬ್ಬರು ಒತ್ತಾಯಿಸಿರುವ ವಿಡಿಯೋ ವೈರಲ್ ಆಗಿದೆ.

ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕದ ಮಾಜಿ ಅಧ್ಯಕ್ಷ, ಸರ್ಕಾರಿ ವೈದ್ಯಾಧೀಕಾರಿಗಳ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಮಂಡ್ಯದ ಡಾ.ರವೀಂದ್ರ ಎಂಬುವವರು ಕೊರೊನಾ ಪರೀಕ್ಷೆಗೆ ಕೊಟ್ಟು ನಾಲ್ಕು ದಿನಗಳಾದರೂ ವರದಿ ಬಂದಿಲ್ಲ. ನನಗೆ ಈ ಪರಿಸ್ಥಿತಿಯಾದರೆ ಜನಸಾಮಾನ್ಯರ ಗತಿಯೇನು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಾನು ನಾಲ್ಕು ದಿನಗಳಿಂದ ಕ್ವಾರಂಟೈನ್‌ನಲ್ಲಿದ್ದೇನೆ. ಏಕೆಂದರೆ ಒಂದು ವೇಳೆ ವರದಿಯಲ್ಲಿ ಪಾಸಿಟಿವ್ ಬಂದಲ್ಲಿ ನಾನು ಓಡಾಡಿದ ಕಡೆಯಲ್ಲೆಲ್ಲಾ ಸೋಂಕು ಹಬ್ಬಿಸಬಹುದಾದ ಸಾಧ್ಯತೆಯಿರುವುದರಿಂದ, ನನ್ನಿಂದ ಬೇರೆಯವರಿಗೆ ತೊಂದರೆಯಾಗಬಾರದು ಎಂಬುದು ನನ್ನ ಉದ್ದೇಶವಾಗಿದೆ. ಆದರೆ ಜನಸಾಮಾನ್ಯರಿಗೆ ಈ ತಿಳುವಳಿಕೆ ಕೊಡುವವರು ಯಾರು? ಅವರು ಕೆಲಸಕ್ಕೆ ಹೋಗದೇ ಮನೆಯಲ್ಲಿಯೇ ಕ್ವಾರಂಟೈನ್ ಆಗಲು ಸಾಧ್ಯವೇ? ಸರ್ಕಾರ ಏಕೆ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದೆ?” ಎಂದು ಅವರು ಕಿಡಿಕಾರಿದ್ದಾರೆ.

ಸರ್ಕಾರದ ಏಕೆ ಈ ಸೂಕ್ಷ್ಮತೆ ಅರ್ಥವಾಗುತ್ತಿಲ್ಲ? ಆರೋಗ್ಯ ಇಲಾಖೆ ಏನು ಮಾಡುತ್ತಿದೆ? ಸರ್ಕಾರ ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಕೂಡಲೇ ಆದಷ್ಟು ಬೇಗ ಪರೀಕ್ಷೆಯ ವರದಿ ಬರುವಂತೆ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ವಿಡಿಯೋ ನೋಡಿ;

ಕೊರೊನಾ ಪರೀಕ್ಷಾ ವರದಿ ತಡ ಮಾಡುವ ಮೂಲಕ ಸರ್ಕಾರವೇ ಹೆಚ್ಚಾಗಿ ಕೊರೊನಾ ಹರಡುತ್ತಿದೆ… ಮಂಡ್ಯದ ವೈದ್ಯರಾದ ಡಾ.ರವೀಂದ್ರರವರ ಆಕ್ರೋಶದ ನುಡಿಗಳು…

Posted by Naanu Gauri on Saturday, July 11, 2020

ರಾಜ್ಯದಲ್ಲಿ ಕೊರೊನಾ ವಾರಿಯರ್ಸ್‌ ಆಗಿ ದುಡಿಯುತ್ತಿರುವ 3 ಜನ ಸರ್ಕಾರಿ ವೈದ್ಯರು ಕೊರೊನಾ ಬಂದು ಸಾವನಪ್ಪಿದ್ದಾರೆ. ಅದರಲ್ಲಿ ಒಬ್ಬರು ಕರ್ತವ್ಯ ನಿರತರಾಗಿದ್ದಾಗಲೇ ಪ್ರಾಣಬಿಟ್ಟಿದ್ದಾರೆ. ಕರ್ತವ್ಯನಿರತರಾಗಿದ್ದಾಗ ಸಾವನಪ್ಪಿದ್ದಾರೆ ಅವರಿಗೆ ಪರಿಹಾರ ಕೊಡಲು ಸಾಧ್ಯವಿಲ್ಲ ಎಂದು ಆರೋಗ್ಯ ಇಲಾಖೆ ಕಮಿಷನರ್ ಪಂಕಜ್‌ ಕುಮಾರ್ ಪಾಂಡೆ ಹೇಳಿರುವುದು ನಾಚಿಕೆಗೇಡು. ಸರ್ಕಾರಿ ವೈದ್ಯರಿಗೆ ಪರಿಹಾರ ಕೊಡದಿದ್ದ ಮೇಲೆ ಸರ್ಕಾರ ಇದ್ದು ಏನು ಪ್ರಯೋಜನ? ನಿಮ್ಮ ಚಪ್ಪಾಳೆ, ಹೂವು ಅವರಿಗೆ ಬೇಕಿಲ್ಲ ಎಂದು ಟೀಕಿಸಿದ್ದಾರೆ.

ಕೊರೊನಾ ಟೆಸ್ಟ್‌ಗೆ ಖಾಸಗಿಯವರಿಗೆ ಸರ್ಕಾರ ದರ ನಿಗಧಿ ಮಾಡುತ್ತಿದೆ. ಜನರಿಗೆ ಉಚಿತ ಕೊರೊನಾ ಟೆಸ್ಟ್ ಮಾಡಿಸುವ ಯೋಗ್ಯತೆ ಸರ್ಕಾರಕ್ಕಿಲ್ಲವೇ? ಕೋವಿಡ್‌ ಸಮಯದಲ್ಲಿಯೂ ನೀವು ಲಂಚ ಹೊಡೆಯಬೇಕೆ? ನಿಮಗೆ ಮಾನವೀಯತೆ ಇಲ್ಲವೇ? ಮಾಸ್ಕ್ ತೆಗೆದುಕೊಳ್ಳುವಲ್ಲಿಯೂ ಭ್ರಷ್ಟಾಚಾರ ಮಾಡುತ್ತಿರಲ್ಲ ನಾಚಿಕೆಯಿಲ್ಲವೇ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೇಂದ್ರ ಸರ್ಕಾರ ಸ್ಯಾನಿಟೈಸ್‌ ಮೇಲೆ 18% ಜಿಎಸ್‌ಟಿ ಹಾಕಿದೆ ಏಕೆ? ಆಹಾರ, ಔಷಧಿಗಳ ಮೇಲೆ 18% ಜಿಎಸ್‌ಟಿ ಹೆಚ್ಚಿಸಿದ್ದರಲ್ಲ ನಿಮಗೆ ಮಾನವೀಯತೆಯಿಲ್ಲವೇ? ಜನರು ಸಾಯುತ್ತಿರುವಾಗಲೂ ನೀವು ಹಣ ಮಾಡಬೇಕೆ? ಶಿಕ್ಷಣ ಮತ್ತು ಆರೋಗ್ಯವನ್ನು ಉಚಿತವಾಗಿ ಕೊಡಬೇಕಾದ ನೀವು ಏಕೆ ಅವುಗಳ ಹೆಸರಿನಲ್ಲಿ ಲೂಟಿ ಮಾಡುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ವರ್ಷಗಳ ಕಾಲ ವೇತನ ರಹಿತ ರಜೆ: ಸಂಕಷ್ಟದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...