Homeಕರ್ನಾಟಕಕೊರೊನಾ ಪರೀಕ್ಷೆ: ವರದಿ ಬರುವುದು ತಡವಾದಷ್ಟು ಹೆಚ್ಚು ಜನರಿಗೆ ಸೋಂಕು- ವೈದ್ಯರ ಎಚ್ಚರಿಕೆಯ ವಿಡಿಯೋ ವೈರಲ್

ಕೊರೊನಾ ಪರೀಕ್ಷೆ: ವರದಿ ಬರುವುದು ತಡವಾದಷ್ಟು ಹೆಚ್ಚು ಜನರಿಗೆ ಸೋಂಕು- ವೈದ್ಯರ ಎಚ್ಚರಿಕೆಯ ವಿಡಿಯೋ ವೈರಲ್

ಶಿಕ್ಷಣ ಮತ್ತು ಆರೋಗ್ಯವನ್ನು ಉಚಿತವಾಗಿ ಕೊಡಬೇಕಾದ ನೀವು ಏಕೆ ಅವುಗಳ ಹೆಸರಿನಲ್ಲಿ ಲೂಟಿ ಮಾಡುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕೊರೊನಾ ಪರೀಕ್ಷೆಗೆ ಕೊಟ್ಟ ನಂತರ ವರದಿ ಬರುವುದು ತಡವಾದರೆ ಪರೀಕ್ಷೆಗೊಳಗಾದ ವ್ಯಕ್ತಿಗಳು ಪಾಸಿಟಿವ್ ವರದಿ ಬರುವುದರೊಳಗೆ ಹಲವು ಕಡೆ ಓಡಾಡುವುದರಿಂದ ಸೋಂಕು ತೀವ್ರ ರೀತಿಯಲ್ಲಿ ಬೇರೆಯವರಿಗೆ ಹರಡುತ್ತದೆ. ಹಾಗಾಗಿ ಸರ್ಕಾರ ಒಂದೇ ದಿನದಲ್ಲಿ ವರದಿ ಕೊಡುವ ರೀತಿ ಲ್ಯಾಬ್‌ಗಳನ್ನು ಮತ್ತು ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸಬೇಕೆಂದು ವೈದ್ಯರೊಬ್ಬರು ಒತ್ತಾಯಿಸಿರುವ ವಿಡಿಯೋ ವೈರಲ್ ಆಗಿದೆ.

ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕದ ಮಾಜಿ ಅಧ್ಯಕ್ಷ, ಸರ್ಕಾರಿ ವೈದ್ಯಾಧೀಕಾರಿಗಳ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಮಂಡ್ಯದ ಡಾ.ರವೀಂದ್ರ ಎಂಬುವವರು ಕೊರೊನಾ ಪರೀಕ್ಷೆಗೆ ಕೊಟ್ಟು ನಾಲ್ಕು ದಿನಗಳಾದರೂ ವರದಿ ಬಂದಿಲ್ಲ. ನನಗೆ ಈ ಪರಿಸ್ಥಿತಿಯಾದರೆ ಜನಸಾಮಾನ್ಯರ ಗತಿಯೇನು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಾನು ನಾಲ್ಕು ದಿನಗಳಿಂದ ಕ್ವಾರಂಟೈನ್‌ನಲ್ಲಿದ್ದೇನೆ. ಏಕೆಂದರೆ ಒಂದು ವೇಳೆ ವರದಿಯಲ್ಲಿ ಪಾಸಿಟಿವ್ ಬಂದಲ್ಲಿ ನಾನು ಓಡಾಡಿದ ಕಡೆಯಲ್ಲೆಲ್ಲಾ ಸೋಂಕು ಹಬ್ಬಿಸಬಹುದಾದ ಸಾಧ್ಯತೆಯಿರುವುದರಿಂದ, ನನ್ನಿಂದ ಬೇರೆಯವರಿಗೆ ತೊಂದರೆಯಾಗಬಾರದು ಎಂಬುದು ನನ್ನ ಉದ್ದೇಶವಾಗಿದೆ. ಆದರೆ ಜನಸಾಮಾನ್ಯರಿಗೆ ಈ ತಿಳುವಳಿಕೆ ಕೊಡುವವರು ಯಾರು? ಅವರು ಕೆಲಸಕ್ಕೆ ಹೋಗದೇ ಮನೆಯಲ್ಲಿಯೇ ಕ್ವಾರಂಟೈನ್ ಆಗಲು ಸಾಧ್ಯವೇ? ಸರ್ಕಾರ ಏಕೆ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದೆ?” ಎಂದು ಅವರು ಕಿಡಿಕಾರಿದ್ದಾರೆ.

ಸರ್ಕಾರದ ಏಕೆ ಈ ಸೂಕ್ಷ್ಮತೆ ಅರ್ಥವಾಗುತ್ತಿಲ್ಲ? ಆರೋಗ್ಯ ಇಲಾಖೆ ಏನು ಮಾಡುತ್ತಿದೆ? ಸರ್ಕಾರ ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಕೂಡಲೇ ಆದಷ್ಟು ಬೇಗ ಪರೀಕ್ಷೆಯ ವರದಿ ಬರುವಂತೆ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ವಿಡಿಯೋ ನೋಡಿ;

ಕೊರೊನಾ ಪರೀಕ್ಷಾ ವರದಿ ತಡ ಮಾಡುವ ಮೂಲಕ ಸರ್ಕಾರವೇ ಹೆಚ್ಚಾಗಿ ಕೊರೊನಾ ಹರಡುತ್ತಿದೆ… ಮಂಡ್ಯದ ವೈದ್ಯರಾದ ಡಾ.ರವೀಂದ್ರರವರ ಆಕ್ರೋಶದ ನುಡಿಗಳು…

Posted by Naanu Gauri on Saturday, July 11, 2020

ರಾಜ್ಯದಲ್ಲಿ ಕೊರೊನಾ ವಾರಿಯರ್ಸ್‌ ಆಗಿ ದುಡಿಯುತ್ತಿರುವ 3 ಜನ ಸರ್ಕಾರಿ ವೈದ್ಯರು ಕೊರೊನಾ ಬಂದು ಸಾವನಪ್ಪಿದ್ದಾರೆ. ಅದರಲ್ಲಿ ಒಬ್ಬರು ಕರ್ತವ್ಯ ನಿರತರಾಗಿದ್ದಾಗಲೇ ಪ್ರಾಣಬಿಟ್ಟಿದ್ದಾರೆ. ಕರ್ತವ್ಯನಿರತರಾಗಿದ್ದಾಗ ಸಾವನಪ್ಪಿದ್ದಾರೆ ಅವರಿಗೆ ಪರಿಹಾರ ಕೊಡಲು ಸಾಧ್ಯವಿಲ್ಲ ಎಂದು ಆರೋಗ್ಯ ಇಲಾಖೆ ಕಮಿಷನರ್ ಪಂಕಜ್‌ ಕುಮಾರ್ ಪಾಂಡೆ ಹೇಳಿರುವುದು ನಾಚಿಕೆಗೇಡು. ಸರ್ಕಾರಿ ವೈದ್ಯರಿಗೆ ಪರಿಹಾರ ಕೊಡದಿದ್ದ ಮೇಲೆ ಸರ್ಕಾರ ಇದ್ದು ಏನು ಪ್ರಯೋಜನ? ನಿಮ್ಮ ಚಪ್ಪಾಳೆ, ಹೂವು ಅವರಿಗೆ ಬೇಕಿಲ್ಲ ಎಂದು ಟೀಕಿಸಿದ್ದಾರೆ.

ಕೊರೊನಾ ಟೆಸ್ಟ್‌ಗೆ ಖಾಸಗಿಯವರಿಗೆ ಸರ್ಕಾರ ದರ ನಿಗಧಿ ಮಾಡುತ್ತಿದೆ. ಜನರಿಗೆ ಉಚಿತ ಕೊರೊನಾ ಟೆಸ್ಟ್ ಮಾಡಿಸುವ ಯೋಗ್ಯತೆ ಸರ್ಕಾರಕ್ಕಿಲ್ಲವೇ? ಕೋವಿಡ್‌ ಸಮಯದಲ್ಲಿಯೂ ನೀವು ಲಂಚ ಹೊಡೆಯಬೇಕೆ? ನಿಮಗೆ ಮಾನವೀಯತೆ ಇಲ್ಲವೇ? ಮಾಸ್ಕ್ ತೆಗೆದುಕೊಳ್ಳುವಲ್ಲಿಯೂ ಭ್ರಷ್ಟಾಚಾರ ಮಾಡುತ್ತಿರಲ್ಲ ನಾಚಿಕೆಯಿಲ್ಲವೇ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೇಂದ್ರ ಸರ್ಕಾರ ಸ್ಯಾನಿಟೈಸ್‌ ಮೇಲೆ 18% ಜಿಎಸ್‌ಟಿ ಹಾಕಿದೆ ಏಕೆ? ಆಹಾರ, ಔಷಧಿಗಳ ಮೇಲೆ 18% ಜಿಎಸ್‌ಟಿ ಹೆಚ್ಚಿಸಿದ್ದರಲ್ಲ ನಿಮಗೆ ಮಾನವೀಯತೆಯಿಲ್ಲವೇ? ಜನರು ಸಾಯುತ್ತಿರುವಾಗಲೂ ನೀವು ಹಣ ಮಾಡಬೇಕೆ? ಶಿಕ್ಷಣ ಮತ್ತು ಆರೋಗ್ಯವನ್ನು ಉಚಿತವಾಗಿ ಕೊಡಬೇಕಾದ ನೀವು ಏಕೆ ಅವುಗಳ ಹೆಸರಿನಲ್ಲಿ ಲೂಟಿ ಮಾಡುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ವರ್ಷಗಳ ಕಾಲ ವೇತನ ರಹಿತ ರಜೆ: ಸಂಕಷ್ಟದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...