Homeಚಳವಳಿವರವರ ರಾವ್‌ ಕೃತಿ ಪ್ರಕಟಣೆ ವಿಳಂಬ: ಸರ್ಕಾರಕ್ಕೆ ಹೆದರಿತೇ ಪೆಂಗ್ವಿನ್‌ ಪ್ರಕಾಶನ ಸಂಸ್ಥೆ?

ವರವರ ರಾವ್‌ ಕೃತಿ ಪ್ರಕಟಣೆ ವಿಳಂಬ: ಸರ್ಕಾರಕ್ಕೆ ಹೆದರಿತೇ ಪೆಂಗ್ವಿನ್‌ ಪ್ರಕಾಶನ ಸಂಸ್ಥೆ?

ವರವರ ರಾವ್ ಅವರ ಕೆಲವು ಕವಿತೆಗಳನ್ನು ಪೆಂಗ್ವಿನ್ ಸಂಸ್ಥೆ ಸೆನ್ಸಾರ್‌ ಮಾಡಲು ಮುಂದಾಗಿದೆ ಎಂದು ದಿ ಕ್ವಿಂಟ್ ಜಾಲತಾಣ ವರದಿ ಮಾಡಿದೆ.

- Advertisement -
- Advertisement -

ತೆಲುಗು ಕವಿ ವರವರ ರಾವ್ ಅವರು ಕವಿತೆಗಳನ್ನು ಬರೆಯಲು ಪ್ರಾರಂಭಿಸಿದಾಗ ಅವರಿಗೆ 20 ವರ್ಷ. ಆರು ದಶಕಗಳ ನಂತರ, 81 ವರ್ಷ ವಯಸ್ಸಿನ ವರವರ ರಾವ್‌ ಅವರ ಕವನಗಳನ್ನು ಪ್ರಕಟಿಸಲು ಮುಂದಾಗಿದ್ದ ಪೆಂಗ್ವಿನ್ ರಾಂಡಮ್‌ ಹೌಸ್‌ ತನ್ನ ಯೋಜನೆಯನ್ನು ಸ್ಥಗಿತಗೊಳಿಸಿದೆ. ವರವರರಾವ್ ಅವರ ವಿರುದ್ಧ ಹೊರಿಸಲಾದ “ಆರೋಪಗಳ ಸ್ವರೂಪ”ದ ಕುರಿತು ಕಳವಳವನ್ನು ಪೆಂಗ್ವಿನ್‌ ವ್ಯಕ್ತಪಡಿಸಿರುವುದಾಗಿ ‘ದಿ ಕ್ವಿಂಟ್’ ವರದಿ ಮಾಡಿದೆ.

ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ರಾವ್ ಅವರನ್ನು ನವೆಂಬರ್ 2018ರಲ್ಲಿ ಬಂಧಿಸಲಾಯಿತು. ಈಗ ವೈದ್ಯಕೀಯ ಜಾಮೀನಿನ ಮೇಲೆ ಮುಂಬೈನಲ್ಲಿ ವಾಸವಿದ್ದಾರೆ.

65 ಕವಿತೆಗಳನ್ನು ಹೊಂದಿರುವ ‘ವರವರ ರಾವ್: ದಿ ರೆವಲ್ಯೂಷನರಿ ಪೊಯೆಟ್’ ಹೆಸರಲ್ಲಿ ಕೃತಿಯನ್ನು ಜೂನ್ ಮತ್ತು ಜುಲೈ 2021ರ ನಡುವೆ ಪ್ರಕಟಿಸಲು ನಿರ್ಧರಿಸಲಾಗಿತ್ತು. ಆದರೆ ಜುಲೈ 2021ರ ವೇಳೆಗೆ, ಪೆಂಗ್ವಿನ್ ತನ್ನ ಕಾನೂನು ತಂಡದ ಶಿಫಾರಸಿನ ಮೇರೆಗೆ, ‘ನ್ಯಾಯಾಲಯವು ಪ್ರಕರಣವನ್ನು ಪರಿಶೀಲಿಸಿದ ನಂತರವೇ ಪುಸ್ತಕ ಪ್ರಕಟಿಸಲು ನಿರ್ಧರಿಸಿದೆ’ ಎಂದು ತಿಳಿದುಬಂದಿದೆ.

ಪ್ರಕಾಶಕರು ಈ ವಿಷಯದ ಬಗ್ಗೆ ನಂತರದಲ್ಲಿ ಕಾನೂನು ಅಭಿಪ್ರಾಯವನ್ನು ತೆಗೆದುಕೊಳ್ಳಬೇಕಾಗಿದ್ದರೂ ಅದು ಕಾರ್ಯರೂಪಕ್ಕೆ ಬಂದಿಲ್ಲ ಎಂದು ಪೆಂಗ್ವಿನ್‌ನ ವಿಶ್ವಾಸಾರ್ಹ ಮೂಲಗಳು ತಿಳಿಸಿರುವುದಾಗಿ ‘ದಿ ಕ್ವಿಂಟ್‌’ ಜಾಲತಾಣ ವರದಿ ಮಾಡಿದೆ.

ಇದನ್ನೂ ಓದಿರಿ: ಮತ್ತೆ ರೈತ ಮಹಾಪಂಚಾಯತ್‌ಗಳ ಆರಂಭ: ಮುಂಬೈ, ಲಕ್ನೋಗಳಲ್ಲಿ ಅಬ್ಬರಿಸಲಿರುವ ರೈತರು

ಕೋರೆಗಾಂವ್ ಕದನದ ದ್ವಿಶತಮಾನೋತ್ಸವ ಸ್ಮರಣಾರ್ಥ ಕಾರ್ಯಕ್ರಮದಂದು ನಡೆದ ಹಿಂಸಾಚಾರಕ್ಕೆ ಎಡಪಂಥೀಯ ಸಂಘಟನೆಗಳು ಮತ್ತು ಕಾರ್ಯಕರ್ತರು ಕಾರಣರು ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಕರಣದ ತನಿಖೆ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವು 2018 ಮತ್ತು 2019ರ ಅವಧಿಯಲ್ಲಿ ನಡೆದಿದ್ದರೂ, ವಿಚಾರಣೆ ಯಾವಾಗ ಪ್ರಾರಂಭವಾಗುತ್ತದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಪೆಂಗ್ವಿನ್ ತನ್ನ ಕಾನೂನು ತಂಡದ ಶಿಫಾರಸಿಗೆ ಅಂಟಿಕೊಂಡರೆ ರಾವ್ ಅವರ ಪುಸ್ತಕದ ಪ್ರಕಟಣೆಯು ಅನಿರ್ದಿಷ್ಟವಾಗಿ ಸ್ಥಗಿತಗೊಳ್ಳಬಹುದು ಎಂಬುದು ಸ್ಪಷ್ಟ. ಇದರ ನಡುವೆ ಪ್ರಕಟಣೆಯನ್ನು ವಿಳಂಬಗೊಳಿಸುವ ಮೊದಲು, “ಕಡಿಮೆ ವಿವಾದಾತ್ಮಕ” ಕವಿತೆಗಳನ್ನು ಆಯ್ಕೆ ಮಾಡುವ ಪ್ರಯತ್ನಗಳು ನಡೆಯುತ್ತಿವೆ ಕ್ವಿಂಟ್‌ ತಿಳಿಸಿದೆ.

ರಾವ್ ಅವರ ಬರವಣಿಗೆಯು ತೀವ್ರ ಎಡಪಂಥವನ್ನು ಪ್ರತಿಪಾದಿಸಿದ್ದು, ಮಾನವ ಹಕ್ಕುಗಳ ಉಲ್ಲಂಘನೆಯ ವಿರುದ್ಧ ಧ್ವನಿ ಎತ್ತಿದೆ. ಪೆಂಗ್ವಿನ್‌ನ ಕಮಿಷನಿಂಗ್ ಎಡಿಟರ್ ಎಲಿಜಬೆತ್ ಕುರುವಿಲ್ಲಾ ಅವರು ಪ್ರಕಟಣೆಯ ವಿಳಂಬದ ಬಗ್ಗೆ ದಿ ಕ್ವಿಂಟ್‌ಗೆ ಪ್ರತಿಕ್ರಿಯಿಸಿದ್ದು, “ಕೋವಿಡ್ ಸಾಂಕ್ರಾಮಿಕದಿಂದಾಗಿ ರಾವ್ ಸೇರಿದಂತೆ ಹಲವರ ಕೃತಿಗಳನ್ನು ಪ್ರಕಟಿಸುವುದು ವಿಳಂಬವಾಗುತ್ತಿದೆ” ಎಂದಿದ್ದಾರೆ.

ರಾವ್ ಅವರ 100ಕ್ಕಿಂತ ಹೆಚ್ಚು ಕವಿತೆಗಳು ಜನಪ್ರಿಯವಾಗಿವೆ, ಪೆಂಗ್ವಿನ್ ಪ್ರಕಾಶಕರು 65 ಕವನಗಳನ್ನು ಪ್ರಕಟಣೆಗಾಗಿ ಪರಿಗಣಿಸಿದ್ದಾರೆ. ಈ ಪೈಕಿ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನವಾದ ನಂತರ ಮೂರು ಕವಿತೆಗಳನ್ನು ಬರೆಯಲಾಗಿದೆ. ಯೆರವಾಡ ಜೈಲಿನಲ್ಲಿದ್ದಾಗ ಬರೆದ ಕವಿತೆಗಳನ್ನು ಪ್ರಕಾಶಕರು ಕೈಬಿಟ್ಟಿದ್ದಾರೆ.

ಉಳಿದ 62 ಕವಿತೆಗಳಲ್ಲಿ, ಪ್ರಕಾಶಕರು ಕಾನೂನು ತೊಡಕುಗಳನ್ನು ತಡೆಗಟ್ಟಲು ಸುಮಾರು ಹನ್ನೆರಡು ಕವನಗಳನ್ನು ಬಿಡಲು ಬಯಸಿದ್ದರು. ರಾವ್ ಅವರ ಕವಿತೆಗಳು ಎನ್ಐಎ ಪರಿಶೀಲನೆಗೆ ಒಳಗಾಗಬಹುದು. ಪುಸ್ತಕವು ಹೊರಬಂದರೆ ಪೆಂಗ್ವಿನ್ ಸಂಸ್ಥೆಯನ್ನು ಪರಿಶೀಲನೆಗೆ ಒಳಪಡಿಸಬಹುದು ಎಂಬುದು ಪ್ರಕಾಶಕರ ಭಯ ಎಂದು ಮೂಲಗಳು ಹೇಳಿವೆ.


ಇದನ್ನೂ ಓದಿರಿ: ಒರಿಸ್ಸಾ: ದಲಿತರ ಗುಡಿಸಲುಗಳಿಗೆ ಬೆಂಕಿ; ಹತ್ತು ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...