Homeಚಳವಳಿವರವರ ರಾವ್‌ ಕೃತಿ ಪ್ರಕಟಣೆ ವಿಳಂಬ: ಸರ್ಕಾರಕ್ಕೆ ಹೆದರಿತೇ ಪೆಂಗ್ವಿನ್‌ ಪ್ರಕಾಶನ ಸಂಸ್ಥೆ?

ವರವರ ರಾವ್‌ ಕೃತಿ ಪ್ರಕಟಣೆ ವಿಳಂಬ: ಸರ್ಕಾರಕ್ಕೆ ಹೆದರಿತೇ ಪೆಂಗ್ವಿನ್‌ ಪ್ರಕಾಶನ ಸಂಸ್ಥೆ?

ವರವರ ರಾವ್ ಅವರ ಕೆಲವು ಕವಿತೆಗಳನ್ನು ಪೆಂಗ್ವಿನ್ ಸಂಸ್ಥೆ ಸೆನ್ಸಾರ್‌ ಮಾಡಲು ಮುಂದಾಗಿದೆ ಎಂದು ದಿ ಕ್ವಿಂಟ್ ಜಾಲತಾಣ ವರದಿ ಮಾಡಿದೆ.

- Advertisement -
- Advertisement -

ತೆಲುಗು ಕವಿ ವರವರ ರಾವ್ ಅವರು ಕವಿತೆಗಳನ್ನು ಬರೆಯಲು ಪ್ರಾರಂಭಿಸಿದಾಗ ಅವರಿಗೆ 20 ವರ್ಷ. ಆರು ದಶಕಗಳ ನಂತರ, 81 ವರ್ಷ ವಯಸ್ಸಿನ ವರವರ ರಾವ್‌ ಅವರ ಕವನಗಳನ್ನು ಪ್ರಕಟಿಸಲು ಮುಂದಾಗಿದ್ದ ಪೆಂಗ್ವಿನ್ ರಾಂಡಮ್‌ ಹೌಸ್‌ ತನ್ನ ಯೋಜನೆಯನ್ನು ಸ್ಥಗಿತಗೊಳಿಸಿದೆ. ವರವರರಾವ್ ಅವರ ವಿರುದ್ಧ ಹೊರಿಸಲಾದ “ಆರೋಪಗಳ ಸ್ವರೂಪ”ದ ಕುರಿತು ಕಳವಳವನ್ನು ಪೆಂಗ್ವಿನ್‌ ವ್ಯಕ್ತಪಡಿಸಿರುವುದಾಗಿ ‘ದಿ ಕ್ವಿಂಟ್’ ವರದಿ ಮಾಡಿದೆ.

ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ರಾವ್ ಅವರನ್ನು ನವೆಂಬರ್ 2018ರಲ್ಲಿ ಬಂಧಿಸಲಾಯಿತು. ಈಗ ವೈದ್ಯಕೀಯ ಜಾಮೀನಿನ ಮೇಲೆ ಮುಂಬೈನಲ್ಲಿ ವಾಸವಿದ್ದಾರೆ.

65 ಕವಿತೆಗಳನ್ನು ಹೊಂದಿರುವ ‘ವರವರ ರಾವ್: ದಿ ರೆವಲ್ಯೂಷನರಿ ಪೊಯೆಟ್’ ಹೆಸರಲ್ಲಿ ಕೃತಿಯನ್ನು ಜೂನ್ ಮತ್ತು ಜುಲೈ 2021ರ ನಡುವೆ ಪ್ರಕಟಿಸಲು ನಿರ್ಧರಿಸಲಾಗಿತ್ತು. ಆದರೆ ಜುಲೈ 2021ರ ವೇಳೆಗೆ, ಪೆಂಗ್ವಿನ್ ತನ್ನ ಕಾನೂನು ತಂಡದ ಶಿಫಾರಸಿನ ಮೇರೆಗೆ, ‘ನ್ಯಾಯಾಲಯವು ಪ್ರಕರಣವನ್ನು ಪರಿಶೀಲಿಸಿದ ನಂತರವೇ ಪುಸ್ತಕ ಪ್ರಕಟಿಸಲು ನಿರ್ಧರಿಸಿದೆ’ ಎಂದು ತಿಳಿದುಬಂದಿದೆ.

ಪ್ರಕಾಶಕರು ಈ ವಿಷಯದ ಬಗ್ಗೆ ನಂತರದಲ್ಲಿ ಕಾನೂನು ಅಭಿಪ್ರಾಯವನ್ನು ತೆಗೆದುಕೊಳ್ಳಬೇಕಾಗಿದ್ದರೂ ಅದು ಕಾರ್ಯರೂಪಕ್ಕೆ ಬಂದಿಲ್ಲ ಎಂದು ಪೆಂಗ್ವಿನ್‌ನ ವಿಶ್ವಾಸಾರ್ಹ ಮೂಲಗಳು ತಿಳಿಸಿರುವುದಾಗಿ ‘ದಿ ಕ್ವಿಂಟ್‌’ ಜಾಲತಾಣ ವರದಿ ಮಾಡಿದೆ.

ಇದನ್ನೂ ಓದಿರಿ: ಮತ್ತೆ ರೈತ ಮಹಾಪಂಚಾಯತ್‌ಗಳ ಆರಂಭ: ಮುಂಬೈ, ಲಕ್ನೋಗಳಲ್ಲಿ ಅಬ್ಬರಿಸಲಿರುವ ರೈತರು

ಕೋರೆಗಾಂವ್ ಕದನದ ದ್ವಿಶತಮಾನೋತ್ಸವ ಸ್ಮರಣಾರ್ಥ ಕಾರ್ಯಕ್ರಮದಂದು ನಡೆದ ಹಿಂಸಾಚಾರಕ್ಕೆ ಎಡಪಂಥೀಯ ಸಂಘಟನೆಗಳು ಮತ್ತು ಕಾರ್ಯಕರ್ತರು ಕಾರಣರು ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಕರಣದ ತನಿಖೆ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವು 2018 ಮತ್ತು 2019ರ ಅವಧಿಯಲ್ಲಿ ನಡೆದಿದ್ದರೂ, ವಿಚಾರಣೆ ಯಾವಾಗ ಪ್ರಾರಂಭವಾಗುತ್ತದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಪೆಂಗ್ವಿನ್ ತನ್ನ ಕಾನೂನು ತಂಡದ ಶಿಫಾರಸಿಗೆ ಅಂಟಿಕೊಂಡರೆ ರಾವ್ ಅವರ ಪುಸ್ತಕದ ಪ್ರಕಟಣೆಯು ಅನಿರ್ದಿಷ್ಟವಾಗಿ ಸ್ಥಗಿತಗೊಳ್ಳಬಹುದು ಎಂಬುದು ಸ್ಪಷ್ಟ. ಇದರ ನಡುವೆ ಪ್ರಕಟಣೆಯನ್ನು ವಿಳಂಬಗೊಳಿಸುವ ಮೊದಲು, “ಕಡಿಮೆ ವಿವಾದಾತ್ಮಕ” ಕವಿತೆಗಳನ್ನು ಆಯ್ಕೆ ಮಾಡುವ ಪ್ರಯತ್ನಗಳು ನಡೆಯುತ್ತಿವೆ ಕ್ವಿಂಟ್‌ ತಿಳಿಸಿದೆ.

ರಾವ್ ಅವರ ಬರವಣಿಗೆಯು ತೀವ್ರ ಎಡಪಂಥವನ್ನು ಪ್ರತಿಪಾದಿಸಿದ್ದು, ಮಾನವ ಹಕ್ಕುಗಳ ಉಲ್ಲಂಘನೆಯ ವಿರುದ್ಧ ಧ್ವನಿ ಎತ್ತಿದೆ. ಪೆಂಗ್ವಿನ್‌ನ ಕಮಿಷನಿಂಗ್ ಎಡಿಟರ್ ಎಲಿಜಬೆತ್ ಕುರುವಿಲ್ಲಾ ಅವರು ಪ್ರಕಟಣೆಯ ವಿಳಂಬದ ಬಗ್ಗೆ ದಿ ಕ್ವಿಂಟ್‌ಗೆ ಪ್ರತಿಕ್ರಿಯಿಸಿದ್ದು, “ಕೋವಿಡ್ ಸಾಂಕ್ರಾಮಿಕದಿಂದಾಗಿ ರಾವ್ ಸೇರಿದಂತೆ ಹಲವರ ಕೃತಿಗಳನ್ನು ಪ್ರಕಟಿಸುವುದು ವಿಳಂಬವಾಗುತ್ತಿದೆ” ಎಂದಿದ್ದಾರೆ.

ರಾವ್ ಅವರ 100ಕ್ಕಿಂತ ಹೆಚ್ಚು ಕವಿತೆಗಳು ಜನಪ್ರಿಯವಾಗಿವೆ, ಪೆಂಗ್ವಿನ್ ಪ್ರಕಾಶಕರು 65 ಕವನಗಳನ್ನು ಪ್ರಕಟಣೆಗಾಗಿ ಪರಿಗಣಿಸಿದ್ದಾರೆ. ಈ ಪೈಕಿ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನವಾದ ನಂತರ ಮೂರು ಕವಿತೆಗಳನ್ನು ಬರೆಯಲಾಗಿದೆ. ಯೆರವಾಡ ಜೈಲಿನಲ್ಲಿದ್ದಾಗ ಬರೆದ ಕವಿತೆಗಳನ್ನು ಪ್ರಕಾಶಕರು ಕೈಬಿಟ್ಟಿದ್ದಾರೆ.

ಉಳಿದ 62 ಕವಿತೆಗಳಲ್ಲಿ, ಪ್ರಕಾಶಕರು ಕಾನೂನು ತೊಡಕುಗಳನ್ನು ತಡೆಗಟ್ಟಲು ಸುಮಾರು ಹನ್ನೆರಡು ಕವನಗಳನ್ನು ಬಿಡಲು ಬಯಸಿದ್ದರು. ರಾವ್ ಅವರ ಕವಿತೆಗಳು ಎನ್ಐಎ ಪರಿಶೀಲನೆಗೆ ಒಳಗಾಗಬಹುದು. ಪುಸ್ತಕವು ಹೊರಬಂದರೆ ಪೆಂಗ್ವಿನ್ ಸಂಸ್ಥೆಯನ್ನು ಪರಿಶೀಲನೆಗೆ ಒಳಪಡಿಸಬಹುದು ಎಂಬುದು ಪ್ರಕಾಶಕರ ಭಯ ಎಂದು ಮೂಲಗಳು ಹೇಳಿವೆ.


ಇದನ್ನೂ ಓದಿರಿ: ಒರಿಸ್ಸಾ: ದಲಿತರ ಗುಡಿಸಲುಗಳಿಗೆ ಬೆಂಕಿ; ಹತ್ತು ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...