Homeಚಳವಳಿವರವರ ರಾವ್‌ ಕೃತಿ ಪ್ರಕಟಣೆ ವಿಳಂಬ: ಸರ್ಕಾರಕ್ಕೆ ಹೆದರಿತೇ ಪೆಂಗ್ವಿನ್‌ ಪ್ರಕಾಶನ ಸಂಸ್ಥೆ?

ವರವರ ರಾವ್‌ ಕೃತಿ ಪ್ರಕಟಣೆ ವಿಳಂಬ: ಸರ್ಕಾರಕ್ಕೆ ಹೆದರಿತೇ ಪೆಂಗ್ವಿನ್‌ ಪ್ರಕಾಶನ ಸಂಸ್ಥೆ?

ವರವರ ರಾವ್ ಅವರ ಕೆಲವು ಕವಿತೆಗಳನ್ನು ಪೆಂಗ್ವಿನ್ ಸಂಸ್ಥೆ ಸೆನ್ಸಾರ್‌ ಮಾಡಲು ಮುಂದಾಗಿದೆ ಎಂದು ದಿ ಕ್ವಿಂಟ್ ಜಾಲತಾಣ ವರದಿ ಮಾಡಿದೆ.

- Advertisement -
- Advertisement -

ತೆಲುಗು ಕವಿ ವರವರ ರಾವ್ ಅವರು ಕವಿತೆಗಳನ್ನು ಬರೆಯಲು ಪ್ರಾರಂಭಿಸಿದಾಗ ಅವರಿಗೆ 20 ವರ್ಷ. ಆರು ದಶಕಗಳ ನಂತರ, 81 ವರ್ಷ ವಯಸ್ಸಿನ ವರವರ ರಾವ್‌ ಅವರ ಕವನಗಳನ್ನು ಪ್ರಕಟಿಸಲು ಮುಂದಾಗಿದ್ದ ಪೆಂಗ್ವಿನ್ ರಾಂಡಮ್‌ ಹೌಸ್‌ ತನ್ನ ಯೋಜನೆಯನ್ನು ಸ್ಥಗಿತಗೊಳಿಸಿದೆ. ವರವರರಾವ್ ಅವರ ವಿರುದ್ಧ ಹೊರಿಸಲಾದ “ಆರೋಪಗಳ ಸ್ವರೂಪ”ದ ಕುರಿತು ಕಳವಳವನ್ನು ಪೆಂಗ್ವಿನ್‌ ವ್ಯಕ್ತಪಡಿಸಿರುವುದಾಗಿ ‘ದಿ ಕ್ವಿಂಟ್’ ವರದಿ ಮಾಡಿದೆ.

ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ರಾವ್ ಅವರನ್ನು ನವೆಂಬರ್ 2018ರಲ್ಲಿ ಬಂಧಿಸಲಾಯಿತು. ಈಗ ವೈದ್ಯಕೀಯ ಜಾಮೀನಿನ ಮೇಲೆ ಮುಂಬೈನಲ್ಲಿ ವಾಸವಿದ್ದಾರೆ.

65 ಕವಿತೆಗಳನ್ನು ಹೊಂದಿರುವ ‘ವರವರ ರಾವ್: ದಿ ರೆವಲ್ಯೂಷನರಿ ಪೊಯೆಟ್’ ಹೆಸರಲ್ಲಿ ಕೃತಿಯನ್ನು ಜೂನ್ ಮತ್ತು ಜುಲೈ 2021ರ ನಡುವೆ ಪ್ರಕಟಿಸಲು ನಿರ್ಧರಿಸಲಾಗಿತ್ತು. ಆದರೆ ಜುಲೈ 2021ರ ವೇಳೆಗೆ, ಪೆಂಗ್ವಿನ್ ತನ್ನ ಕಾನೂನು ತಂಡದ ಶಿಫಾರಸಿನ ಮೇರೆಗೆ, ‘ನ್ಯಾಯಾಲಯವು ಪ್ರಕರಣವನ್ನು ಪರಿಶೀಲಿಸಿದ ನಂತರವೇ ಪುಸ್ತಕ ಪ್ರಕಟಿಸಲು ನಿರ್ಧರಿಸಿದೆ’ ಎಂದು ತಿಳಿದುಬಂದಿದೆ.

ಪ್ರಕಾಶಕರು ಈ ವಿಷಯದ ಬಗ್ಗೆ ನಂತರದಲ್ಲಿ ಕಾನೂನು ಅಭಿಪ್ರಾಯವನ್ನು ತೆಗೆದುಕೊಳ್ಳಬೇಕಾಗಿದ್ದರೂ ಅದು ಕಾರ್ಯರೂಪಕ್ಕೆ ಬಂದಿಲ್ಲ ಎಂದು ಪೆಂಗ್ವಿನ್‌ನ ವಿಶ್ವಾಸಾರ್ಹ ಮೂಲಗಳು ತಿಳಿಸಿರುವುದಾಗಿ ‘ದಿ ಕ್ವಿಂಟ್‌’ ಜಾಲತಾಣ ವರದಿ ಮಾಡಿದೆ.

ಇದನ್ನೂ ಓದಿರಿ: ಮತ್ತೆ ರೈತ ಮಹಾಪಂಚಾಯತ್‌ಗಳ ಆರಂಭ: ಮುಂಬೈ, ಲಕ್ನೋಗಳಲ್ಲಿ ಅಬ್ಬರಿಸಲಿರುವ ರೈತರು

ಕೋರೆಗಾಂವ್ ಕದನದ ದ್ವಿಶತಮಾನೋತ್ಸವ ಸ್ಮರಣಾರ್ಥ ಕಾರ್ಯಕ್ರಮದಂದು ನಡೆದ ಹಿಂಸಾಚಾರಕ್ಕೆ ಎಡಪಂಥೀಯ ಸಂಘಟನೆಗಳು ಮತ್ತು ಕಾರ್ಯಕರ್ತರು ಕಾರಣರು ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಕರಣದ ತನಿಖೆ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವು 2018 ಮತ್ತು 2019ರ ಅವಧಿಯಲ್ಲಿ ನಡೆದಿದ್ದರೂ, ವಿಚಾರಣೆ ಯಾವಾಗ ಪ್ರಾರಂಭವಾಗುತ್ತದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಪೆಂಗ್ವಿನ್ ತನ್ನ ಕಾನೂನು ತಂಡದ ಶಿಫಾರಸಿಗೆ ಅಂಟಿಕೊಂಡರೆ ರಾವ್ ಅವರ ಪುಸ್ತಕದ ಪ್ರಕಟಣೆಯು ಅನಿರ್ದಿಷ್ಟವಾಗಿ ಸ್ಥಗಿತಗೊಳ್ಳಬಹುದು ಎಂಬುದು ಸ್ಪಷ್ಟ. ಇದರ ನಡುವೆ ಪ್ರಕಟಣೆಯನ್ನು ವಿಳಂಬಗೊಳಿಸುವ ಮೊದಲು, “ಕಡಿಮೆ ವಿವಾದಾತ್ಮಕ” ಕವಿತೆಗಳನ್ನು ಆಯ್ಕೆ ಮಾಡುವ ಪ್ರಯತ್ನಗಳು ನಡೆಯುತ್ತಿವೆ ಕ್ವಿಂಟ್‌ ತಿಳಿಸಿದೆ.

ರಾವ್ ಅವರ ಬರವಣಿಗೆಯು ತೀವ್ರ ಎಡಪಂಥವನ್ನು ಪ್ರತಿಪಾದಿಸಿದ್ದು, ಮಾನವ ಹಕ್ಕುಗಳ ಉಲ್ಲಂಘನೆಯ ವಿರುದ್ಧ ಧ್ವನಿ ಎತ್ತಿದೆ. ಪೆಂಗ್ವಿನ್‌ನ ಕಮಿಷನಿಂಗ್ ಎಡಿಟರ್ ಎಲಿಜಬೆತ್ ಕುರುವಿಲ್ಲಾ ಅವರು ಪ್ರಕಟಣೆಯ ವಿಳಂಬದ ಬಗ್ಗೆ ದಿ ಕ್ವಿಂಟ್‌ಗೆ ಪ್ರತಿಕ್ರಿಯಿಸಿದ್ದು, “ಕೋವಿಡ್ ಸಾಂಕ್ರಾಮಿಕದಿಂದಾಗಿ ರಾವ್ ಸೇರಿದಂತೆ ಹಲವರ ಕೃತಿಗಳನ್ನು ಪ್ರಕಟಿಸುವುದು ವಿಳಂಬವಾಗುತ್ತಿದೆ” ಎಂದಿದ್ದಾರೆ.

ರಾವ್ ಅವರ 100ಕ್ಕಿಂತ ಹೆಚ್ಚು ಕವಿತೆಗಳು ಜನಪ್ರಿಯವಾಗಿವೆ, ಪೆಂಗ್ವಿನ್ ಪ್ರಕಾಶಕರು 65 ಕವನಗಳನ್ನು ಪ್ರಕಟಣೆಗಾಗಿ ಪರಿಗಣಿಸಿದ್ದಾರೆ. ಈ ಪೈಕಿ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನವಾದ ನಂತರ ಮೂರು ಕವಿತೆಗಳನ್ನು ಬರೆಯಲಾಗಿದೆ. ಯೆರವಾಡ ಜೈಲಿನಲ್ಲಿದ್ದಾಗ ಬರೆದ ಕವಿತೆಗಳನ್ನು ಪ್ರಕಾಶಕರು ಕೈಬಿಟ್ಟಿದ್ದಾರೆ.

ಉಳಿದ 62 ಕವಿತೆಗಳಲ್ಲಿ, ಪ್ರಕಾಶಕರು ಕಾನೂನು ತೊಡಕುಗಳನ್ನು ತಡೆಗಟ್ಟಲು ಸುಮಾರು ಹನ್ನೆರಡು ಕವನಗಳನ್ನು ಬಿಡಲು ಬಯಸಿದ್ದರು. ರಾವ್ ಅವರ ಕವಿತೆಗಳು ಎನ್ಐಎ ಪರಿಶೀಲನೆಗೆ ಒಳಗಾಗಬಹುದು. ಪುಸ್ತಕವು ಹೊರಬಂದರೆ ಪೆಂಗ್ವಿನ್ ಸಂಸ್ಥೆಯನ್ನು ಪರಿಶೀಲನೆಗೆ ಒಳಪಡಿಸಬಹುದು ಎಂಬುದು ಪ್ರಕಾಶಕರ ಭಯ ಎಂದು ಮೂಲಗಳು ಹೇಳಿವೆ.


ಇದನ್ನೂ ಓದಿರಿ: ಒರಿಸ್ಸಾ: ದಲಿತರ ಗುಡಿಸಲುಗಳಿಗೆ ಬೆಂಕಿ; ಹತ್ತು ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...