Homeಚಳವಳಿವರವರ ರಾವ್‌ ಕೃತಿ ಪ್ರಕಟಣೆ ವಿಳಂಬ: ಸರ್ಕಾರಕ್ಕೆ ಹೆದರಿತೇ ಪೆಂಗ್ವಿನ್‌ ಪ್ರಕಾಶನ ಸಂಸ್ಥೆ?

ವರವರ ರಾವ್‌ ಕೃತಿ ಪ್ರಕಟಣೆ ವಿಳಂಬ: ಸರ್ಕಾರಕ್ಕೆ ಹೆದರಿತೇ ಪೆಂಗ್ವಿನ್‌ ಪ್ರಕಾಶನ ಸಂಸ್ಥೆ?

ವರವರ ರಾವ್ ಅವರ ಕೆಲವು ಕವಿತೆಗಳನ್ನು ಪೆಂಗ್ವಿನ್ ಸಂಸ್ಥೆ ಸೆನ್ಸಾರ್‌ ಮಾಡಲು ಮುಂದಾಗಿದೆ ಎಂದು ದಿ ಕ್ವಿಂಟ್ ಜಾಲತಾಣ ವರದಿ ಮಾಡಿದೆ.

- Advertisement -
- Advertisement -

ತೆಲುಗು ಕವಿ ವರವರ ರಾವ್ ಅವರು ಕವಿತೆಗಳನ್ನು ಬರೆಯಲು ಪ್ರಾರಂಭಿಸಿದಾಗ ಅವರಿಗೆ 20 ವರ್ಷ. ಆರು ದಶಕಗಳ ನಂತರ, 81 ವರ್ಷ ವಯಸ್ಸಿನ ವರವರ ರಾವ್‌ ಅವರ ಕವನಗಳನ್ನು ಪ್ರಕಟಿಸಲು ಮುಂದಾಗಿದ್ದ ಪೆಂಗ್ವಿನ್ ರಾಂಡಮ್‌ ಹೌಸ್‌ ತನ್ನ ಯೋಜನೆಯನ್ನು ಸ್ಥಗಿತಗೊಳಿಸಿದೆ. ವರವರರಾವ್ ಅವರ ವಿರುದ್ಧ ಹೊರಿಸಲಾದ “ಆರೋಪಗಳ ಸ್ವರೂಪ”ದ ಕುರಿತು ಕಳವಳವನ್ನು ಪೆಂಗ್ವಿನ್‌ ವ್ಯಕ್ತಪಡಿಸಿರುವುದಾಗಿ ‘ದಿ ಕ್ವಿಂಟ್’ ವರದಿ ಮಾಡಿದೆ.

ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ರಾವ್ ಅವರನ್ನು ನವೆಂಬರ್ 2018ರಲ್ಲಿ ಬಂಧಿಸಲಾಯಿತು. ಈಗ ವೈದ್ಯಕೀಯ ಜಾಮೀನಿನ ಮೇಲೆ ಮುಂಬೈನಲ್ಲಿ ವಾಸವಿದ್ದಾರೆ.

65 ಕವಿತೆಗಳನ್ನು ಹೊಂದಿರುವ ‘ವರವರ ರಾವ್: ದಿ ರೆವಲ್ಯೂಷನರಿ ಪೊಯೆಟ್’ ಹೆಸರಲ್ಲಿ ಕೃತಿಯನ್ನು ಜೂನ್ ಮತ್ತು ಜುಲೈ 2021ರ ನಡುವೆ ಪ್ರಕಟಿಸಲು ನಿರ್ಧರಿಸಲಾಗಿತ್ತು. ಆದರೆ ಜುಲೈ 2021ರ ವೇಳೆಗೆ, ಪೆಂಗ್ವಿನ್ ತನ್ನ ಕಾನೂನು ತಂಡದ ಶಿಫಾರಸಿನ ಮೇರೆಗೆ, ‘ನ್ಯಾಯಾಲಯವು ಪ್ರಕರಣವನ್ನು ಪರಿಶೀಲಿಸಿದ ನಂತರವೇ ಪುಸ್ತಕ ಪ್ರಕಟಿಸಲು ನಿರ್ಧರಿಸಿದೆ’ ಎಂದು ತಿಳಿದುಬಂದಿದೆ.

ಪ್ರಕಾಶಕರು ಈ ವಿಷಯದ ಬಗ್ಗೆ ನಂತರದಲ್ಲಿ ಕಾನೂನು ಅಭಿಪ್ರಾಯವನ್ನು ತೆಗೆದುಕೊಳ್ಳಬೇಕಾಗಿದ್ದರೂ ಅದು ಕಾರ್ಯರೂಪಕ್ಕೆ ಬಂದಿಲ್ಲ ಎಂದು ಪೆಂಗ್ವಿನ್‌ನ ವಿಶ್ವಾಸಾರ್ಹ ಮೂಲಗಳು ತಿಳಿಸಿರುವುದಾಗಿ ‘ದಿ ಕ್ವಿಂಟ್‌’ ಜಾಲತಾಣ ವರದಿ ಮಾಡಿದೆ.

ಇದನ್ನೂ ಓದಿರಿ: ಮತ್ತೆ ರೈತ ಮಹಾಪಂಚಾಯತ್‌ಗಳ ಆರಂಭ: ಮುಂಬೈ, ಲಕ್ನೋಗಳಲ್ಲಿ ಅಬ್ಬರಿಸಲಿರುವ ರೈತರು

ಕೋರೆಗಾಂವ್ ಕದನದ ದ್ವಿಶತಮಾನೋತ್ಸವ ಸ್ಮರಣಾರ್ಥ ಕಾರ್ಯಕ್ರಮದಂದು ನಡೆದ ಹಿಂಸಾಚಾರಕ್ಕೆ ಎಡಪಂಥೀಯ ಸಂಘಟನೆಗಳು ಮತ್ತು ಕಾರ್ಯಕರ್ತರು ಕಾರಣರು ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಕರಣದ ತನಿಖೆ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವು 2018 ಮತ್ತು 2019ರ ಅವಧಿಯಲ್ಲಿ ನಡೆದಿದ್ದರೂ, ವಿಚಾರಣೆ ಯಾವಾಗ ಪ್ರಾರಂಭವಾಗುತ್ತದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಪೆಂಗ್ವಿನ್ ತನ್ನ ಕಾನೂನು ತಂಡದ ಶಿಫಾರಸಿಗೆ ಅಂಟಿಕೊಂಡರೆ ರಾವ್ ಅವರ ಪುಸ್ತಕದ ಪ್ರಕಟಣೆಯು ಅನಿರ್ದಿಷ್ಟವಾಗಿ ಸ್ಥಗಿತಗೊಳ್ಳಬಹುದು ಎಂಬುದು ಸ್ಪಷ್ಟ. ಇದರ ನಡುವೆ ಪ್ರಕಟಣೆಯನ್ನು ವಿಳಂಬಗೊಳಿಸುವ ಮೊದಲು, “ಕಡಿಮೆ ವಿವಾದಾತ್ಮಕ” ಕವಿತೆಗಳನ್ನು ಆಯ್ಕೆ ಮಾಡುವ ಪ್ರಯತ್ನಗಳು ನಡೆಯುತ್ತಿವೆ ಕ್ವಿಂಟ್‌ ತಿಳಿಸಿದೆ.

ರಾವ್ ಅವರ ಬರವಣಿಗೆಯು ತೀವ್ರ ಎಡಪಂಥವನ್ನು ಪ್ರತಿಪಾದಿಸಿದ್ದು, ಮಾನವ ಹಕ್ಕುಗಳ ಉಲ್ಲಂಘನೆಯ ವಿರುದ್ಧ ಧ್ವನಿ ಎತ್ತಿದೆ. ಪೆಂಗ್ವಿನ್‌ನ ಕಮಿಷನಿಂಗ್ ಎಡಿಟರ್ ಎಲಿಜಬೆತ್ ಕುರುವಿಲ್ಲಾ ಅವರು ಪ್ರಕಟಣೆಯ ವಿಳಂಬದ ಬಗ್ಗೆ ದಿ ಕ್ವಿಂಟ್‌ಗೆ ಪ್ರತಿಕ್ರಿಯಿಸಿದ್ದು, “ಕೋವಿಡ್ ಸಾಂಕ್ರಾಮಿಕದಿಂದಾಗಿ ರಾವ್ ಸೇರಿದಂತೆ ಹಲವರ ಕೃತಿಗಳನ್ನು ಪ್ರಕಟಿಸುವುದು ವಿಳಂಬವಾಗುತ್ತಿದೆ” ಎಂದಿದ್ದಾರೆ.

ರಾವ್ ಅವರ 100ಕ್ಕಿಂತ ಹೆಚ್ಚು ಕವಿತೆಗಳು ಜನಪ್ರಿಯವಾಗಿವೆ, ಪೆಂಗ್ವಿನ್ ಪ್ರಕಾಶಕರು 65 ಕವನಗಳನ್ನು ಪ್ರಕಟಣೆಗಾಗಿ ಪರಿಗಣಿಸಿದ್ದಾರೆ. ಈ ಪೈಕಿ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನವಾದ ನಂತರ ಮೂರು ಕವಿತೆಗಳನ್ನು ಬರೆಯಲಾಗಿದೆ. ಯೆರವಾಡ ಜೈಲಿನಲ್ಲಿದ್ದಾಗ ಬರೆದ ಕವಿತೆಗಳನ್ನು ಪ್ರಕಾಶಕರು ಕೈಬಿಟ್ಟಿದ್ದಾರೆ.

ಉಳಿದ 62 ಕವಿತೆಗಳಲ್ಲಿ, ಪ್ರಕಾಶಕರು ಕಾನೂನು ತೊಡಕುಗಳನ್ನು ತಡೆಗಟ್ಟಲು ಸುಮಾರು ಹನ್ನೆರಡು ಕವನಗಳನ್ನು ಬಿಡಲು ಬಯಸಿದ್ದರು. ರಾವ್ ಅವರ ಕವಿತೆಗಳು ಎನ್ಐಎ ಪರಿಶೀಲನೆಗೆ ಒಳಗಾಗಬಹುದು. ಪುಸ್ತಕವು ಹೊರಬಂದರೆ ಪೆಂಗ್ವಿನ್ ಸಂಸ್ಥೆಯನ್ನು ಪರಿಶೀಲನೆಗೆ ಒಳಪಡಿಸಬಹುದು ಎಂಬುದು ಪ್ರಕಾಶಕರ ಭಯ ಎಂದು ಮೂಲಗಳು ಹೇಳಿವೆ.


ಇದನ್ನೂ ಓದಿರಿ: ಒರಿಸ್ಸಾ: ದಲಿತರ ಗುಡಿಸಲುಗಳಿಗೆ ಬೆಂಕಿ; ಹತ್ತು ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...