Homeಚಳವಳಿವರವರ ರಾವ್‌ ಕೃತಿ ಪ್ರಕಟಣೆ ವಿಳಂಬ: ಸರ್ಕಾರಕ್ಕೆ ಹೆದರಿತೇ ಪೆಂಗ್ವಿನ್‌ ಪ್ರಕಾಶನ ಸಂಸ್ಥೆ?

ವರವರ ರಾವ್‌ ಕೃತಿ ಪ್ರಕಟಣೆ ವಿಳಂಬ: ಸರ್ಕಾರಕ್ಕೆ ಹೆದರಿತೇ ಪೆಂಗ್ವಿನ್‌ ಪ್ರಕಾಶನ ಸಂಸ್ಥೆ?

ವರವರ ರಾವ್ ಅವರ ಕೆಲವು ಕವಿತೆಗಳನ್ನು ಪೆಂಗ್ವಿನ್ ಸಂಸ್ಥೆ ಸೆನ್ಸಾರ್‌ ಮಾಡಲು ಮುಂದಾಗಿದೆ ಎಂದು ದಿ ಕ್ವಿಂಟ್ ಜಾಲತಾಣ ವರದಿ ಮಾಡಿದೆ.

- Advertisement -
- Advertisement -

ತೆಲುಗು ಕವಿ ವರವರ ರಾವ್ ಅವರು ಕವಿತೆಗಳನ್ನು ಬರೆಯಲು ಪ್ರಾರಂಭಿಸಿದಾಗ ಅವರಿಗೆ 20 ವರ್ಷ. ಆರು ದಶಕಗಳ ನಂತರ, 81 ವರ್ಷ ವಯಸ್ಸಿನ ವರವರ ರಾವ್‌ ಅವರ ಕವನಗಳನ್ನು ಪ್ರಕಟಿಸಲು ಮುಂದಾಗಿದ್ದ ಪೆಂಗ್ವಿನ್ ರಾಂಡಮ್‌ ಹೌಸ್‌ ತನ್ನ ಯೋಜನೆಯನ್ನು ಸ್ಥಗಿತಗೊಳಿಸಿದೆ. ವರವರರಾವ್ ಅವರ ವಿರುದ್ಧ ಹೊರಿಸಲಾದ “ಆರೋಪಗಳ ಸ್ವರೂಪ”ದ ಕುರಿತು ಕಳವಳವನ್ನು ಪೆಂಗ್ವಿನ್‌ ವ್ಯಕ್ತಪಡಿಸಿರುವುದಾಗಿ ‘ದಿ ಕ್ವಿಂಟ್’ ವರದಿ ಮಾಡಿದೆ.

ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ರಾವ್ ಅವರನ್ನು ನವೆಂಬರ್ 2018ರಲ್ಲಿ ಬಂಧಿಸಲಾಯಿತು. ಈಗ ವೈದ್ಯಕೀಯ ಜಾಮೀನಿನ ಮೇಲೆ ಮುಂಬೈನಲ್ಲಿ ವಾಸವಿದ್ದಾರೆ.

65 ಕವಿತೆಗಳನ್ನು ಹೊಂದಿರುವ ‘ವರವರ ರಾವ್: ದಿ ರೆವಲ್ಯೂಷನರಿ ಪೊಯೆಟ್’ ಹೆಸರಲ್ಲಿ ಕೃತಿಯನ್ನು ಜೂನ್ ಮತ್ತು ಜುಲೈ 2021ರ ನಡುವೆ ಪ್ರಕಟಿಸಲು ನಿರ್ಧರಿಸಲಾಗಿತ್ತು. ಆದರೆ ಜುಲೈ 2021ರ ವೇಳೆಗೆ, ಪೆಂಗ್ವಿನ್ ತನ್ನ ಕಾನೂನು ತಂಡದ ಶಿಫಾರಸಿನ ಮೇರೆಗೆ, ‘ನ್ಯಾಯಾಲಯವು ಪ್ರಕರಣವನ್ನು ಪರಿಶೀಲಿಸಿದ ನಂತರವೇ ಪುಸ್ತಕ ಪ್ರಕಟಿಸಲು ನಿರ್ಧರಿಸಿದೆ’ ಎಂದು ತಿಳಿದುಬಂದಿದೆ.

ಪ್ರಕಾಶಕರು ಈ ವಿಷಯದ ಬಗ್ಗೆ ನಂತರದಲ್ಲಿ ಕಾನೂನು ಅಭಿಪ್ರಾಯವನ್ನು ತೆಗೆದುಕೊಳ್ಳಬೇಕಾಗಿದ್ದರೂ ಅದು ಕಾರ್ಯರೂಪಕ್ಕೆ ಬಂದಿಲ್ಲ ಎಂದು ಪೆಂಗ್ವಿನ್‌ನ ವಿಶ್ವಾಸಾರ್ಹ ಮೂಲಗಳು ತಿಳಿಸಿರುವುದಾಗಿ ‘ದಿ ಕ್ವಿಂಟ್‌’ ಜಾಲತಾಣ ವರದಿ ಮಾಡಿದೆ.

ಇದನ್ನೂ ಓದಿರಿ: ಮತ್ತೆ ರೈತ ಮಹಾಪಂಚಾಯತ್‌ಗಳ ಆರಂಭ: ಮುಂಬೈ, ಲಕ್ನೋಗಳಲ್ಲಿ ಅಬ್ಬರಿಸಲಿರುವ ರೈತರು

ಕೋರೆಗಾಂವ್ ಕದನದ ದ್ವಿಶತಮಾನೋತ್ಸವ ಸ್ಮರಣಾರ್ಥ ಕಾರ್ಯಕ್ರಮದಂದು ನಡೆದ ಹಿಂಸಾಚಾರಕ್ಕೆ ಎಡಪಂಥೀಯ ಸಂಘಟನೆಗಳು ಮತ್ತು ಕಾರ್ಯಕರ್ತರು ಕಾರಣರು ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಕರಣದ ತನಿಖೆ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವು 2018 ಮತ್ತು 2019ರ ಅವಧಿಯಲ್ಲಿ ನಡೆದಿದ್ದರೂ, ವಿಚಾರಣೆ ಯಾವಾಗ ಪ್ರಾರಂಭವಾಗುತ್ತದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಪೆಂಗ್ವಿನ್ ತನ್ನ ಕಾನೂನು ತಂಡದ ಶಿಫಾರಸಿಗೆ ಅಂಟಿಕೊಂಡರೆ ರಾವ್ ಅವರ ಪುಸ್ತಕದ ಪ್ರಕಟಣೆಯು ಅನಿರ್ದಿಷ್ಟವಾಗಿ ಸ್ಥಗಿತಗೊಳ್ಳಬಹುದು ಎಂಬುದು ಸ್ಪಷ್ಟ. ಇದರ ನಡುವೆ ಪ್ರಕಟಣೆಯನ್ನು ವಿಳಂಬಗೊಳಿಸುವ ಮೊದಲು, “ಕಡಿಮೆ ವಿವಾದಾತ್ಮಕ” ಕವಿತೆಗಳನ್ನು ಆಯ್ಕೆ ಮಾಡುವ ಪ್ರಯತ್ನಗಳು ನಡೆಯುತ್ತಿವೆ ಕ್ವಿಂಟ್‌ ತಿಳಿಸಿದೆ.

ರಾವ್ ಅವರ ಬರವಣಿಗೆಯು ತೀವ್ರ ಎಡಪಂಥವನ್ನು ಪ್ರತಿಪಾದಿಸಿದ್ದು, ಮಾನವ ಹಕ್ಕುಗಳ ಉಲ್ಲಂಘನೆಯ ವಿರುದ್ಧ ಧ್ವನಿ ಎತ್ತಿದೆ. ಪೆಂಗ್ವಿನ್‌ನ ಕಮಿಷನಿಂಗ್ ಎಡಿಟರ್ ಎಲಿಜಬೆತ್ ಕುರುವಿಲ್ಲಾ ಅವರು ಪ್ರಕಟಣೆಯ ವಿಳಂಬದ ಬಗ್ಗೆ ದಿ ಕ್ವಿಂಟ್‌ಗೆ ಪ್ರತಿಕ್ರಿಯಿಸಿದ್ದು, “ಕೋವಿಡ್ ಸಾಂಕ್ರಾಮಿಕದಿಂದಾಗಿ ರಾವ್ ಸೇರಿದಂತೆ ಹಲವರ ಕೃತಿಗಳನ್ನು ಪ್ರಕಟಿಸುವುದು ವಿಳಂಬವಾಗುತ್ತಿದೆ” ಎಂದಿದ್ದಾರೆ.

ರಾವ್ ಅವರ 100ಕ್ಕಿಂತ ಹೆಚ್ಚು ಕವಿತೆಗಳು ಜನಪ್ರಿಯವಾಗಿವೆ, ಪೆಂಗ್ವಿನ್ ಪ್ರಕಾಶಕರು 65 ಕವನಗಳನ್ನು ಪ್ರಕಟಣೆಗಾಗಿ ಪರಿಗಣಿಸಿದ್ದಾರೆ. ಈ ಪೈಕಿ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನವಾದ ನಂತರ ಮೂರು ಕವಿತೆಗಳನ್ನು ಬರೆಯಲಾಗಿದೆ. ಯೆರವಾಡ ಜೈಲಿನಲ್ಲಿದ್ದಾಗ ಬರೆದ ಕವಿತೆಗಳನ್ನು ಪ್ರಕಾಶಕರು ಕೈಬಿಟ್ಟಿದ್ದಾರೆ.

ಉಳಿದ 62 ಕವಿತೆಗಳಲ್ಲಿ, ಪ್ರಕಾಶಕರು ಕಾನೂನು ತೊಡಕುಗಳನ್ನು ತಡೆಗಟ್ಟಲು ಸುಮಾರು ಹನ್ನೆರಡು ಕವನಗಳನ್ನು ಬಿಡಲು ಬಯಸಿದ್ದರು. ರಾವ್ ಅವರ ಕವಿತೆಗಳು ಎನ್ಐಎ ಪರಿಶೀಲನೆಗೆ ಒಳಗಾಗಬಹುದು. ಪುಸ್ತಕವು ಹೊರಬಂದರೆ ಪೆಂಗ್ವಿನ್ ಸಂಸ್ಥೆಯನ್ನು ಪರಿಶೀಲನೆಗೆ ಒಳಪಡಿಸಬಹುದು ಎಂಬುದು ಪ್ರಕಾಶಕರ ಭಯ ಎಂದು ಮೂಲಗಳು ಹೇಳಿವೆ.


ಇದನ್ನೂ ಓದಿರಿ: ಒರಿಸ್ಸಾ: ದಲಿತರ ಗುಡಿಸಲುಗಳಿಗೆ ಬೆಂಕಿ; ಹತ್ತು ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...