Homeಅಂತರಾಷ್ಟ್ರೀಯವೆನೆಜುವೆಲಾದ ಹಂಗಾಮಿ ಅಧ್ಯಕ್ಷರಾಗಿ ಡೆಲ್ಸಿ ರೊಡ್ರಿಗಸ್‌ರನ್ನು ನೇಮಿಸಿದ ಸುಪ್ರೀಂ ಕೋರ್ಟ್

ವೆನೆಜುವೆಲಾದ ಹಂಗಾಮಿ ಅಧ್ಯಕ್ಷರಾಗಿ ಡೆಲ್ಸಿ ರೊಡ್ರಿಗಸ್‌ರನ್ನು ನೇಮಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಅಧ್ಯಕ್ಷ ನಿಕೊಲಸ್ ಮಡೂರೊ ಮತ್ತು ಅವರ ಪತ್ನಿ ಸಿಲಿಯಾ ಪ್ಲೋರ್ಸ್ ಅವರನ್ನು ಅಮೆರಿಕ ಸೇನೆ ಬಂಧಿಸಿರುವ ಹಿನ್ನೆಲೆ, ಹಂಗಾಮಿ ಅಧ್ಯಕ್ಷೆಯಾಗಿ ಜವಾಬ್ದಾರಿ ವಹಿಸಿಕೊಳ್ಳುವಂತೆ ಉಪಾಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅವರಿಗೆ ವೆನಿಜುವೆಲಾದ ಸುಪ್ರೀಂ ಕೋರ್ಟ್ ಭಾನುವಾರ (ಜ.4) ಆದೇಶಿಸಿದೆ ಎಂದು ವರದಿಯಾಗಿದೆ.

ಆಡಳಿತಾತ್ಮಕ ನಿರಂತರತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ರಾಷ್ಟ್ರದ ಒಟ್ಟಾರೆ ರಕ್ಷಣೆಯನ್ನು ನೋಡಿಕೊಳ್ಳಲು ರೊಡ್ರಿಗಸ್ ಅವರು ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳುತ್ತಾರೆ ಎಂದು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ.

56 ವರ್ಷದ ಡೆಲ್ಸಿ ರೊಡ್ರಿಗಸ್ ಅವರು ವೆನಿಜುವೆಲಾದ ಸಮಾಜವಾದಿ ಸರ್ಕಾರದಲ್ಲಿ ಅತ್ಯಂತ ಶಕ್ತಿಶಾಲಿ ವ್ಯಕ್ತಿಗಳಲ್ಲಿ ಒಬ್ಬರು. ಇವರು ಅಧ್ಯಕ್ಷ ನಿಕೋಲಾಸ್ ಮಡುರೊ ಅವರ ಅತ್ಯಂತ ಹತ್ತಿರದ ಮತ್ತು ನಂಬಿಗಸ್ತ ವ್ಯಕ್ತಿಗಳಲ್ಲಿ ಒಬ್ಬರು. ಮಡುರೊ ಅವರಿಗೆ ಯಾವಾಗಲೂ ಬೆಂಬಲ ನೀಡುವ ವ್ಯಕ್ತಿ ಕೂಡ ಹೌದು.

ಈ ಹಿಂದೆ ಉಪಾಧ್ಯಕ್ಷೆ, ಹಣಕಾಸು ಸಚಿವೆ ಮತ್ತು ತೈಲ ಸಚಿವೆ ಸೇರಿದಂತೆ ಪ್ರಮುಖ ಹುದ್ದೆಗಳನ್ನು ಇವರು ನಿರ್ವಹಿಸಿದ್ದಾರೆ. ವೆನಿಜುವೆಲಾದ ಮೇಲೆ ಅಮೆರಿಕ ತೀವ್ರ ನಿರ್ಬಂಧಗಳನ್ನು ಹೇರಿದ್ದ ಸಮಯದಲ್ಲಿ ಮತ್ತು ಹಣದ ಮೌಲ್ಯ ತೀವ್ರವಾಗಿ ಕುಸಿದು ಹಣದುಬ್ಬರ ತುಂಬಾ ಹೆಚ್ಚಾದ ಸಮಯದಲ್ಲಿ, ದೇಶದ ಆರ್ಥಿಕತೆಯ ಜವಾಬ್ದಾರಿಯನ್ನು ರೊಡ್ರಿಗಸ್ ಹೊತ್ತಿದ್ದರು. ಅಂದರೆ, ಹಣಕಾಸು ಮತ್ತು ತೈಲದಂತಹ ಮುಖ್ಯ ವಿಷಯಗಳ ಮೇಲೆ ಇವರ ನಿಯಂತ್ರಣ ತುಂಬಾ ದೊಡ್ಡದಾಗಿತ್ತು.

ತಮ್ಮ ಆಡಳಿತವನ್ನು ರಕ್ಷಿಸಿಕೊಳ್ಳಲು ತುಂಬಾ ಆಕ್ರಮಣಕಾರಿಯಾಗಿ ಮತ್ತು ಧೈರ್ಯವಾಗಿ ಹೋರಾಡುತ್ತಾರೆ ಎಂಬ ಕಾರಣಕ್ಕಾಗಿ ರೊಡ್ರಿಗಸ್ ಅವರನ್ನು ನಿಕೋಲಾಸ್ ಮಡುರೊ ಹಿಂದೆಯೊಮ್ಮೆ ‘ಹುಲಿ’ ಕೊಂಡಾಡಿದ್ದರು.

ರೊಡ್ರಿಗಸ್ ಅವರು ರಾಜಧಾನಿ ಕಾರಕಸ್ ನಗರದಲ್ಲಿ ಹುಟ್ಟಿದವರು. ಅವರ ತಂದೆ ಜಾರ್ಜ್ ಆಂಟೋನಿಯೋ ರೊಡ್ರಿಗಸ್ ಎಡಪಂಥೀಯ ಗೆರಿಲ್ಲಾ ನಾಯಕರಾಗಿದ್ದರು. ಅವರೇ ‘ಸೋಶಿಯಲಿಸ್ಟ್ ಲೀಗ್’ (Socialist League) ಎಂಬ ಸಂಘಟನೆಯನ್ನು ಸ್ಥಾಪಿಸಿದವರು.

ಡೆಲ್ಸಿ ರೊಡ್ರಿಗಸ್ ಅವರು ಎಡಪಂಥೀಯ ರಾಜಕೀಯದ ಹಿನ್ನೆಲೆಯಿಂದ ಬಂದವರು. ಅದೇ ಎಡಪಂಥೀಯ ಆದರ್ಶಗಳನ್ನು ಅನುಸರಿಸುತ್ತಾ ವೆನಿಜುವೆಲಾದ ಸಮಾಜವಾದಿ ಸರ್ಕಾರದಲ್ಲಿ ದೊಡ್ಡ ಪಾತ್ರ ವಹಿಸಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದಂತೆ ರೋಡ್ರಿಗಸ್ ಅವರು ಅಧಿಕಾರವನ್ನು ವಹಿಸಿಕೊಂಡಿದ್ದಾರೆ. ಆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಂಧಿತ ಅಧ್ಯಕ್ಷ ನಿಕೋಲಸ್ ಮಡರೊ ಮತ್ತು ಅವರ ಪತ್ನಿಯನ್ನು ಬಿಡುಗಡೆ ಮಾಡುವಂತೆ ಅಮೆರಿಕಗೆ ಆಗ್ರಹಿಸಿದ್ದಾರೆ.

ಮುಂಜಾನೆ ಅನಧಿಕೃತವಾಗಿ ದೇಶದೊಳಗೆ ನುಗ್ಗಿ ಅಧ್ಯಕ್ಷರನ್ನು ಬಂಧಿಸಿರುವ ಅಮೆರಿಕದ ಕೃತ್ಯ ಅಂತಾರಾಷ್ಟ್ರೀಯ ಕಾನೂನಿಗೆ ವಿರುದ್ದವಾದದು ಎಂದು ಅವರು ಹೇಳಿದ್ದಾರೆ. ಅಮೆರಿಕದ ಈ ನಡೆಯನ್ನು ಲ್ಯಾಟಿನ್ ಅಮೆರಿಕದ ಎಲ್ಲಾ ದೇಶಗಳು ಖಂಡಿಸುವಂತೆ ಮನವಿ ಮಾಡಿದ್ದಾರೆ.

ಅಮೆರಿಕ ಬಂಧಿಸಿದರೂ ಮಡುರೊ ಅವರು ವೆನಿಜುವೆಲಾದ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ರೊಡ್ರಿಗಸ್ ಹೇಳಿದ್ದಾರೆ.

ಮಡುರೊ ಅವರನ್ನು ಬಂಧಿಸಿರುವ ಅಮೆರಿಕ ಸೇನೆ ನ್ಯೂಯಾರ್ಕ್‌ಗೆ ಕರೆದೊಯ್ದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನಿಜುವೆಲಾವನ್ನು ಸದ್ಯಕ್ಕೆ ಅಮೆರಿಕ ಆಳಲಿದೆ ಎಂದು ತಿಳಿಸಿದ್ದಾರೆ. ಈ ನಡುವೆ ರೊಡ್ರಿಗಸ್ ಅವರು ಅಧಿಕಾರ ವಹಿಸಿಕೊಂಡಿದ್ದು, ಟ್ರಂಪ್‌ಗೆ ಎಚ್ಚರಿಕೆ ನೀಡಿದ್ದಾರೆ.

ಫ್ರೀಡಂ ಫ್ಲೋಟಿಲ್ಲಾ ಸದಸ್ಯರ ಮೇಲೆ ಇಸ್ರೇಲಿ ಪಡೆಗಳಿಂದ ಲೈಂಗಿಕ ದೌರ್ಜನ್ಯ ಆರೋಪ : ಸ್ವತಂತ್ರ ತನಿಖೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾನೂನುಬಾಹಿರ ಹತ್ಯೆ ಆರೋಪ : ಸಿಆರ್‌ಪಿಎಫ್ ಅಧಿಕಾರಿಗೆ ಶೌರ್ಯ ಚಕ್ರ ನೀಡಿರುವುದನ್ನು ಖಂಡಿಸಿದ ಕುಕಿ-ಝೋ ಗುಂಪುಗಳು

ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಅಧಿಕಾರಿಯೊಬ್ಬರು ತಮ್ಮ ಸಮುದಾಯದ ಹತ್ತು ಪುರುಷರ "ಕಾನೂನುಬಾಹಿರ ಹತ್ಯೆ"ಯಲ್ಲಿ ಭಾಗಿಯಾಗಿದ್ದಾರೆ ಎಂದು ಮಣಿಪುರದ ಕುಕಿ-ಝೋ ಸಂಘಟನೆಗಳು ಸೋಮವಾರ (ಜ.26) ಆರೋಪಿಸಿದ್ದು, ಆ ಅಧಿಕಾರಿಗೆ ಶೌರ್ಯ ಚಕ್ರ...

ಉತ್ತರ ಪ್ರದೇಶ: ಸೋನಭದ್ರಾದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು 

ಸೋನಭದ್ರ: ರಾಯ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸಿಕ್ರವಾರ್ ಗ್ರಾಮದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ಸೋಮವಾರ ರಾತ್ರಿ ಅಪರಿಚಿತ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಕ್ರಾವರ್ ಗ್ರಾಮದ ಪಂಚಾಯತ್ ಕಟ್ಟಡದ ಬಳಿ...

ಬುಡಕಟ್ಟು ರೈತರ ಬೃಹತ್ ಮೆರವಣಿಗೆ: ಬೇಡಿಕೆಗಳ ಕುರಿತು ಸಿಪಿಐ(ಎಂ)-ಎಐಕೆಎಸ್ ನಿಯೋಗದೊಂದಿಗೆ ಮುಖ್ಯಮಂತ್ರಿ ಫಡ್ನವೀಸ್ ಮಾತುಕತೆ

ಬಾಕಿ ಇರುವ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಪಿಐ(ಎಂ)-ಎಐಕೆಎಸ್ ನೇತೃತ್ವದಲ್ಲಿ ನಾಸಿಕ್‌ನಿಂದ ಮುಂಬೈಗೆ ಸಾವಿರಾರು ರೈತರು ಮತ್ತು ಬುಡಕಟ್ಟು ನಿವಾಸಿಗಳು ನಡೆಸಿದ ದೀರ್ಘ ಮೆರವಣಿಗೆ ಇಂದು ಜನವರಿ 27 ರಂದು ಮುಂಬೈನ ಮಂತ್ರಾಲಯ...

‘ಭಾರತದಲ್ಲಿ ಬಿಜೆಪಿ ದಾಳಿಯನ್ನು ಎದುರಿಸಲು ‘ದೀದಿ’ಗೆ ಮಾತ್ರ ಸಾಧ್ಯ’: ಅಖಿಲೇಶ್ ಯಾದವ್ 

ಕೋಲ್ಕತ್ತಾ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮಂಗಳವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ "ಬಿಜೆಪಿಯ ದಾಳಿಯನ್ನು ಎದುರಿಸುವಲ್ಲಿನ ಧೈರ್ಯ"ಕ್ಕಾಗಿ ಟಿಎಂಸಿ ಮುಖ್ಯಸ್ಥೆಯನ್ನು ಶ್ಲಾಘಿಸಿದ್ದಾರೆ. ಉತ್ತರ ಪ್ರದೇಶದ ಮಾಜಿ...

ಬದರಿನಾಥ್-ಕೇದಾರನಾಥ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ ಸಾಧ್ಯತೆ

ಉತ್ತರಾಖಂಡದ ಹಿಮಾಲಯದ ಮಡಿಲಲ್ಲಿ ನೆಲೆಗೊಂಡಿರುವ ಶತಮಾನಗಳಷ್ಟು ಹಳೆಯದಾದ ಬದರಿನಾಥ್ ಮತ್ತು ಕೇದಾರನಾಥ ದೇವಾಲಯಗಳಿಗೆ ಶೀಘ್ರದಲ್ಲೇ ಹಿಂದೂಗಳಿಗೆ ಮಾತ್ರ ಪ್ರವೇಶ ಅನುಮತಿಸಬಹುದು. ಚಾರ್ ಧಾಮ್ ತೀರ್ಥಯಾತ್ರೆಯ ಭಾಗವಾಗಿರುವ ಎರಡು ದೇವಾಲಯಗಳಿಗೆ ಹಿಂದೂಯೇತರರನ್ನು ಪ್ರವೇಶಿಸುವುದನ್ನು ನಿಷೇಧಿಸಲಾಗುವುದು...

ವಿಬಿ-ಜಿ ರಾಮ್ ಜಿ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತಿದ್ದು, ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಗಳವಾರ (ಜ.27) ಬೆಂಗಳೂರಿನ ಫ್ರೀಡಂ...

ಯುಸಿಸಿಯಲ್ಲಿ 18 ಬದಲಾವಣೆ ಮಾಡಿದ ಉತ್ತರಾಖಂಡ್ ಸರ್ಕಾರ; ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಜಾರಿಗೆ

ವಿವಾಹ, ವಿಚ್ಛೇದನ, ಲಿವ್-ಇನ್ ಸಂಬಂಧಗಳು ಮತ್ತು ಉತ್ತರಾಧಿಕಾರಕ್ಕೆ ಸಂಬಂಧಿಸಿದ ನಿಯಮಗಳನ್ನು ಬಿಗಿಗೊಳಿಸುವ ಗುರಿಯನ್ನು ಹೊಂದಿರುವ ಸುಮಾರು ಹದಿನೆಂಟು ಬದಲಾವಣೆಗಳನ್ನು ಪರಿಚಯಿಸುವ ಮೂಲಕ ಏಕರೂಪ ನಾಗರಿಕ ಸಂಹಿತೆಯ ಹಲವಾರು ನಿಬಂಧನೆಗಳನ್ನು ಮಾರ್ಪಡಿಸಲು ಉತ್ತರಾಖಂಡ ಸರ್ಕಾರ...

ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಮಹಾತ್ಮಗಾಂಧಿ ಹೆಸರು: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಮಹಾತ್ಮ ಗಾಂಧಿಯವರ ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕೇಂದ್ರ ಸರ್ಕಾರ ನರೇಗಾ ಬದಲಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್‌ ಜಿ ಕಾಯ್ದೆ ವಿರುದ್ದ ಬೆಂಗಳೂರಿನ ಸ್ವಾತಂತ್ರ್ಯ...

ಜಾರ್ಖಂಡ್‌ನ ಗಿರಿದಿಹ್‌ನಲ್ಲಿ ಇಬ್ಬರು ಬುಡಕಟ್ಟು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ

ಗಿರಿದಿಹ್: ಜಾರ್ಖಂಡ್‌ನ ಗಿರಿದಿಹ್ ಜಿಲ್ಲೆಯಲ್ಲಿ ಇಬ್ಬರು ಬುಡಕಟ್ಟು ಹುಡುಗಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಭಾನುವಾರ ರಾತ್ರಿ ಪಿರ್ತಾಂಡ್ ಪೊಲೀಸ್ ಠಾಣೆ ವ್ಯಾಪ್ತಿಯ ಹರ್ಲಾದಿಹ್ ಪ್ರದೇಶದಲ್ಲಿ ಈ ಘಟನೆ...

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ : ಪ್ರಬಲ ಜಾತಿಯವರಿಂದ ತೀವ್ರ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯನ್ನು ಉತ್ತೇಜಿಸುವ ಉದ್ದೇಶದಿಂದ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಪ್ರಬಲ ಜಾತಿಯವರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಹೊಸ ನಿಯಮಗಳ 'ಜಾತಿ ಆಧಾರಿತ ತಾರತಮ್ಯ' ಎಂಬುವುದರ...