Homeಅಂತರಾಷ್ಟ್ರೀಯವೆನೆಜುವೆಲಾದ ಹಂಗಾಮಿ ಅಧ್ಯಕ್ಷರಾಗಿ ಡೆಲ್ಸಿ ರೊಡ್ರಿಗಸ್‌ರನ್ನು ನೇಮಿಸಿದ ಸುಪ್ರೀಂ ಕೋರ್ಟ್

ವೆನೆಜುವೆಲಾದ ಹಂಗಾಮಿ ಅಧ್ಯಕ್ಷರಾಗಿ ಡೆಲ್ಸಿ ರೊಡ್ರಿಗಸ್‌ರನ್ನು ನೇಮಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಅಧ್ಯಕ್ಷ ನಿಕೊಲಸ್ ಮಡೂರೊ ಮತ್ತು ಅವರ ಪತ್ನಿ ಸಿಲಿಯಾ ಪ್ಲೋರ್ಸ್ ಅವರನ್ನು ಅಮೆರಿಕ ಸೇನೆ ಬಂಧಿಸಿರುವ ಹಿನ್ನೆಲೆ, ಹಂಗಾಮಿ ಅಧ್ಯಕ್ಷೆಯಾಗಿ ಜವಾಬ್ದಾರಿ ವಹಿಸಿಕೊಳ್ಳುವಂತೆ ಉಪಾಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅವರಿಗೆ ವೆನಿಜುವೆಲಾದ ಸುಪ್ರೀಂ ಕೋರ್ಟ್ ಭಾನುವಾರ (ಜ.4) ಆದೇಶಿಸಿದೆ ಎಂದು ವರದಿಯಾಗಿದೆ.

ಆಡಳಿತಾತ್ಮಕ ನಿರಂತರತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ರಾಷ್ಟ್ರದ ಒಟ್ಟಾರೆ ರಕ್ಷಣೆಯನ್ನು ನೋಡಿಕೊಳ್ಳಲು ರೊಡ್ರಿಗಸ್ ಅವರು ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳುತ್ತಾರೆ ಎಂದು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ.

56 ವರ್ಷದ ಡೆಲ್ಸಿ ರೊಡ್ರಿಗಸ್ ಅವರು ವೆನಿಜುವೆಲಾದ ಸಮಾಜವಾದಿ ಸರ್ಕಾರದಲ್ಲಿ ಅತ್ಯಂತ ಶಕ್ತಿಶಾಲಿ ವ್ಯಕ್ತಿಗಳಲ್ಲಿ ಒಬ್ಬರು. ಇವರು ಅಧ್ಯಕ್ಷ ನಿಕೋಲಾಸ್ ಮಡುರೊ ಅವರ ಅತ್ಯಂತ ಹತ್ತಿರದ ಮತ್ತು ನಂಬಿಗಸ್ತ ವ್ಯಕ್ತಿಗಳಲ್ಲಿ ಒಬ್ಬರು. ಮಡುರೊ ಅವರಿಗೆ ಯಾವಾಗಲೂ ಬೆಂಬಲ ನೀಡುವ ವ್ಯಕ್ತಿ ಕೂಡ ಹೌದು.

ಈ ಹಿಂದೆ ಉಪಾಧ್ಯಕ್ಷೆ, ಹಣಕಾಸು ಸಚಿವೆ ಮತ್ತು ತೈಲ ಸಚಿವೆ ಸೇರಿದಂತೆ ಪ್ರಮುಖ ಹುದ್ದೆಗಳನ್ನು ಇವರು ನಿರ್ವಹಿಸಿದ್ದಾರೆ. ವೆನಿಜುವೆಲಾದ ಮೇಲೆ ಅಮೆರಿಕ ತೀವ್ರ ನಿರ್ಬಂಧಗಳನ್ನು ಹೇರಿದ್ದ ಸಮಯದಲ್ಲಿ ಮತ್ತು ಹಣದ ಮೌಲ್ಯ ತೀವ್ರವಾಗಿ ಕುಸಿದು ಹಣದುಬ್ಬರ ತುಂಬಾ ಹೆಚ್ಚಾದ ಸಮಯದಲ್ಲಿ, ದೇಶದ ಆರ್ಥಿಕತೆಯ ಜವಾಬ್ದಾರಿಯನ್ನು ರೊಡ್ರಿಗಸ್ ಹೊತ್ತಿದ್ದರು. ಅಂದರೆ, ಹಣಕಾಸು ಮತ್ತು ತೈಲದಂತಹ ಮುಖ್ಯ ವಿಷಯಗಳ ಮೇಲೆ ಇವರ ನಿಯಂತ್ರಣ ತುಂಬಾ ದೊಡ್ಡದಾಗಿತ್ತು.

ತಮ್ಮ ಆಡಳಿತವನ್ನು ರಕ್ಷಿಸಿಕೊಳ್ಳಲು ತುಂಬಾ ಆಕ್ರಮಣಕಾರಿಯಾಗಿ ಮತ್ತು ಧೈರ್ಯವಾಗಿ ಹೋರಾಡುತ್ತಾರೆ ಎಂಬ ಕಾರಣಕ್ಕಾಗಿ ರೊಡ್ರಿಗಸ್ ಅವರನ್ನು ನಿಕೋಲಾಸ್ ಮಡುರೊ ಹಿಂದೆಯೊಮ್ಮೆ ‘ಹುಲಿ’ ಕೊಂಡಾಡಿದ್ದರು.

ರೊಡ್ರಿಗಸ್ ಅವರು ರಾಜಧಾನಿ ಕಾರಕಸ್ ನಗರದಲ್ಲಿ ಹುಟ್ಟಿದವರು. ಅವರ ತಂದೆ ಜಾರ್ಜ್ ಆಂಟೋನಿಯೋ ರೊಡ್ರಿಗಸ್ ಎಡಪಂಥೀಯ ಗೆರಿಲ್ಲಾ ನಾಯಕರಾಗಿದ್ದರು. ಅವರೇ ‘ಸೋಶಿಯಲಿಸ್ಟ್ ಲೀಗ್’ (Socialist League) ಎಂಬ ಸಂಘಟನೆಯನ್ನು ಸ್ಥಾಪಿಸಿದವರು.

ಡೆಲ್ಸಿ ರೊಡ್ರಿಗಸ್ ಅವರು ಎಡಪಂಥೀಯ ರಾಜಕೀಯದ ಹಿನ್ನೆಲೆಯಿಂದ ಬಂದವರು. ಅದೇ ಎಡಪಂಥೀಯ ಆದರ್ಶಗಳನ್ನು ಅನುಸರಿಸುತ್ತಾ ವೆನಿಜುವೆಲಾದ ಸಮಾಜವಾದಿ ಸರ್ಕಾರದಲ್ಲಿ ದೊಡ್ಡ ಪಾತ್ರ ವಹಿಸಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದಂತೆ ರೋಡ್ರಿಗಸ್ ಅವರು ಅಧಿಕಾರವನ್ನು ವಹಿಸಿಕೊಂಡಿದ್ದಾರೆ. ಆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಂಧಿತ ಅಧ್ಯಕ್ಷ ನಿಕೋಲಸ್ ಮಡರೊ ಮತ್ತು ಅವರ ಪತ್ನಿಯನ್ನು ಬಿಡುಗಡೆ ಮಾಡುವಂತೆ ಅಮೆರಿಕಗೆ ಆಗ್ರಹಿಸಿದ್ದಾರೆ.

ಮುಂಜಾನೆ ಅನಧಿಕೃತವಾಗಿ ದೇಶದೊಳಗೆ ನುಗ್ಗಿ ಅಧ್ಯಕ್ಷರನ್ನು ಬಂಧಿಸಿರುವ ಅಮೆರಿಕದ ಕೃತ್ಯ ಅಂತಾರಾಷ್ಟ್ರೀಯ ಕಾನೂನಿಗೆ ವಿರುದ್ದವಾದದು ಎಂದು ಅವರು ಹೇಳಿದ್ದಾರೆ. ಅಮೆರಿಕದ ಈ ನಡೆಯನ್ನು ಲ್ಯಾಟಿನ್ ಅಮೆರಿಕದ ಎಲ್ಲಾ ದೇಶಗಳು ಖಂಡಿಸುವಂತೆ ಮನವಿ ಮಾಡಿದ್ದಾರೆ.

ಅಮೆರಿಕ ಬಂಧಿಸಿದರೂ ಮಡುರೊ ಅವರು ವೆನಿಜುವೆಲಾದ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ರೊಡ್ರಿಗಸ್ ಹೇಳಿದ್ದಾರೆ.

ಮಡುರೊ ಅವರನ್ನು ಬಂಧಿಸಿರುವ ಅಮೆರಿಕ ಸೇನೆ ನ್ಯೂಯಾರ್ಕ್‌ಗೆ ಕರೆದೊಯ್ದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನಿಜುವೆಲಾವನ್ನು ಸದ್ಯಕ್ಕೆ ಅಮೆರಿಕ ಆಳಲಿದೆ ಎಂದು ತಿಳಿಸಿದ್ದಾರೆ. ಈ ನಡುವೆ ರೊಡ್ರಿಗಸ್ ಅವರು ಅಧಿಕಾರ ವಹಿಸಿಕೊಂಡಿದ್ದು, ಟ್ರಂಪ್‌ಗೆ ಎಚ್ಚರಿಕೆ ನೀಡಿದ್ದಾರೆ.

ಫ್ರೀಡಂ ಫ್ಲೋಟಿಲ್ಲಾ ಸದಸ್ಯರ ಮೇಲೆ ಇಸ್ರೇಲಿ ಪಡೆಗಳಿಂದ ಲೈಂಗಿಕ ದೌರ್ಜನ್ಯ ಆರೋಪ : ಸ್ವತಂತ್ರ ತನಿಖೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...