Homeಕರೋನಾ ತಲ್ಲಣಕೋವಿಡ್ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ ಕುರಿತ ಟ್ವೀಟ್‌ಗಳನ್ನು ಅಳುಸುವಂತೆ ಮೋದಿ ಸರ್ಕಾರದ ಒತ್ತಡ!

ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ ಕುರಿತ ಟ್ವೀಟ್‌ಗಳನ್ನು ಅಳುಸುವಂತೆ ಮೋದಿ ಸರ್ಕಾರದ ಒತ್ತಡ!

- Advertisement -
- Advertisement -

ಕೋವಿಡ್ ಬಿಕ್ಕಟ್ಟನ್ನು ಸರ್ಕಾರ ನಿರ್ವಹಿಸುವ ಬಗ್ಗೆ ಟೀಕಿಸುವ, ಸರ್ಕಾರದ ವೈಫಲ್ಯಗಳನ್ನು ಪಟ್ಟಿ ಮಾಡುವ ಟ್ವೀಟ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋರಿ ಕೇಂದ್ರ ಸರ್ಕಾರ ಟ್ವಿಟರ್‌ಗೆ ನೋಟಿಸ್ ಕಳುಹಿಸಿದ ನಂತರ, ಟ್ವಿಟರ್ ಅವುಗಳಲ್ಲಿ ಹಲವಾರು (ಎಲ್ಲವನ್ನೂ ಅಲ್ಲ) ಟ್ವೀಟ್‌ಗಳನ್ನು ತೆಗೆದು ಹಾಕಿ ಅಂತಹ ಹ್ಯಾಂಡಲ್‌ಗಳಿಗೆ ನಿರ್ಬಂಧ ವಿಧಿಸಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಕೇಂದ್ರ ಸರ್ಕಾರವು ಟ್ವಿಟರ್ ಕಂಪನಿಗೆ ನೋಟಿಸ್ ಕಳುಹಿಸಿದ ನಂತರ ಸಂಸತ್ ಸದಸ್ಯ ರೇವಂತ್ ರೆಡ್ಡಿ, ಪಶ್ಚಿಮ ಬಂಗಾಳ ಸಚಿವ ಮೊಲೊಯ್ ಘಟಕ್, ನಟ ವಿನೀತ್ ಕುಮಾರ್ ಸಿಂಗ್, ಚಲನಚಿತ್ರ ನಿರ್ಮಾಪಕರಾದ ವಿನೋದ್ ಕಪ್ರಿ ಮತ್ತು ಅವಿನಾಶ್ ದಾಸ್ ಅವರ ಟ್ವೀಟರ್ ಹ್ಯಾಂಡಲ್‌ಗಳು ಸೇರಿದಂತೆ ಕೆಲವು ಜನಪ್ರಿಯ ಹ್ಯಾಂಡಲ್‌ಗಳು ಮಾಡಿದ ಹಲವಾರು ಟ್ವೀಟ್‌ಗಳನ್ನು ಟ್ವಿಟರ್ ನಿರ್ಬಂಧಿಸಿದೆ. ಈ ಟ್ವೀಟ್‌ಗಳು ಭಾರತದ ಐಟಿ ಕಾನೂನಿಗೆ ಅನುಸಾರವಾಗಿಲ್ಲ ಎಂದು ಕೇಂದ್ರ ಸರ್ಕಾರ ನೋಟಿಸ್‌ನಲ್ಲಿ ತಿಳಿಸಿತ್ತು.

ಟ್ವೀಟ್‌ಗಳು ಸರ್ಕಾರದ ತಪ್ಪು ಹೆಜ್ಜೆಗಳು ಅಥವಾ ಕೋವಿಡ್ -19 ಸಾಂಕ್ರಾಮಿಕ ರೋಗದಲ್ಲಿ ಸಿಲುಕಿರುವ ಜನರ ದುಃಖವನ್ನು ಎತ್ತಿ ತೋರಿಸುತ್ತವೆ. ಕಳೆದ ಕೆಲವು ವಾರಗಳಲ್ಲಿ, ಭಾರತದಲ್ಲಿ ಕೋವಿಡ್ ಪ್ರಕರಣಗಳು ತೀವ್ರವಾಗಿ ಹೆಚ್ಚಿವೆ ಮತ್ತು ಆಸ್ಪತ್ರೆಯ ಹಾಸಿಗೆಗಳು, ವೈದ್ಯಕೀಯ ಆಮ್ಲಜನಕ ಮತ್ತು ಔಷಧಿಗಳ ತೀವ್ರ ಕೊರತೆಯಿರುವುದನ್ನು ಎತ್ತಿ ತೋರಿಸಿವೆ.

ಟ್ವಿಟರ್ ಸಾರ್ವಜನಿಕವಾಗಿ ಪ್ರತಿಕ್ರಿಯಿಸದಿದ್ದರೂ, ಅದು ಯಾವ ಟ್ವೀಟ್‌ಗಳನ್ನು ನಿರ್ಬಂಧಿಸಿದೆ ಅಥವಾ ಏಕೆ ಟ್ವೀಟ್‌ಗಳನ್ನು ನಿರ್ಬಂಧಿಸಲಾಗಿದೆ ಎಂದು ನಿರ್ದಿಷ್ಟಪಡಿಸುತ್ತದೆಯಾದರೂ, ಆ ಟ್ವೀಟ್‌ಗಳನ್ನು ಮಾಡಿದ ಬಳಕೆದಾರರಿಗೆ ಅದು ನೋಟಿಸ್ ಕಳುಹಿಸಿದೆ ಎಂದು ವರದಿಯಾಗಿದೆ.

ಮೋದಿ ಸರ್ಕಾರದ ಪ್ರಕಾರ ಈ ಟ್ವೀಟ್‌ಗಳು ಭಾರತೀಯ ಕಾನೂನುಗಳನ್ನು ಉಲ್ಲಂಘಿಸಿವೆ ಎಂದು ಟ್ವಿಟರ್‌ಗೆ ನೀಡಿದ ನೋಟಿಸ್‌ನಲ್ಲಿ ಹೇಳಲಾಗಿದೆ. ಭಾರತೀಯ ಐಟಿ ಕಾಯ್ದೆ 2000 ಅನ್ನು ಉಲ್ಲೇಖಿಸಿ ನಿರ್ದಿಷ್ಟಪಡಿಸಿದ ಟ್ವೀಟ್‌ಗಳ ಮೇಲೆ ಕ್ರಮ ಕೈಗೊಳ್ಳುವಂತೆ ಟ್ವಿಟರ್‌ಗೆ ಸೂಚಿಸಿದೆ.

ಭಾರತ ಸರ್ಕಾರವೂ ಈ ಬಗ್ಗೆ ಸಾರ್ವಜನಿಕವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಸರ್ಕಾರದ ನಿರ್ದೇಶನವನ್ನು ಅನುಸರಿಸಿದ ನಂತರ, ಟ್ವಿಟರ್ ತಾನು ಕೈಗೊಂಡ ಕ್ರಮಗಳ ವಿವರಗಳನ್ನು Lumendatabase.org, ನಲ್ಲಿ ಅಪ್‌ಲೋಡ್ ಮಾಡಿದೆ, ಇದು ಸರ್ಕಾರಿ ನಿರ್ದೇಶನಗಳನ್ನು ಅಥವಾ ಡಿಎಂಸಿಎ ತೆಗೆದುಹಾಕುವಿಕೆಯನ್ನು ಆರ್ಕೈವ್ ಮಾಡಲು ಟೆಕ್ ಕಂಪನಿಗಳು ಬಳಸುತ್ತಿರುವ ವೆಬ್‌ಸೈಟ್.

ಲುಮೆನ್‌ನಲ್ಲಿ ಅಪ್‌ಲೋಡ್ ಮಾಡಿದ ದಾಖಲೆಗಳ ಪ್ರಕಾರ, ಏಪ್ರಿಲ್ 22 ಮತ್ತು ಏಪ್ರಿಲ್ 23 ರಂದು ಹತ್ತಾರು ಟ್ವೀಟ್‌ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಭಾರತ ಸರ್ಕಾರ ಟ್ವಿಟರ್‌ಗೆ ಸೂಚಿಸಿದೆ.

ಅಳಿಸಲಾದ ಹೆಚ್ಚಿನ ಟ್ವೀಟ್‌ಗಳು ಕೋವಿಡ್ ರೋಗಿಗಳಿಗೆ ದೊರಕದ ಔಷಧಿ ಮತ್ತು ಇತರ ಆರೋಗ್ಯ ಸೌಲಭ್ಯಗಳ ಕೊರತೆಯ ಬಗ್ಗೆ ಗಮನ ಸೆಳೆದಿವೆ. ಸಾಂಕ್ರಾಮಿಕ ರೋಗದ ಎರಡನೇ ಅಲೆ ಕಂಡಂತೆ ಹರಿದ್ವಾರದಲ್ಲಿ ನಡೆದ ಕುಂಭಮೇಳವನ್ನು ಕೆಲವು ಟ್ವೀಟ್‌ಗಳು ಟೀಕೆ ಮಾಡಿವೆ. ಭಾರತದ ಹೊರಗಿನಿಂದ ಅಕ್ಸೆಸ್ ಮಾಡಿದರೆ ಈ ಟ್ವೀಟ್‌ಗಳನ್ನು ಈಗಲೂ ನೋಡಬಹುದಾಗಿದೆ.

ಇತ್ತೀಚಿನ ತಿಂಗಳುಗಳಲ್ಲಿ ಟ್ವೀಟ್‌ಗಳನ್ನು ನಿರ್ಬಂಧಿಸಲು ಭಾರತ ಸರ್ಕಾರ ಟ್ವಿಟರ್‌ಗೆ ನೋಟಿಸ್ ನೀಡಿದ್ದು ಇದು ಎರಡನೇ ಸಲ. ಈ ಹಿಂದೆ, ರೈತರ ಪ್ರತಿಭಟನೆ ವೇಗವಾಗುತ್ತಿದ್ದಾಗ, ಹಲವಾರು ಟ್ವೀಟ್‌ಗಳನ್ನು ಅಳಿಸಲು ಮತ್ತು ಕೆಲವು ಹ್ಯಾಂಡಲ್‌ಗಳನ್ನು ನಿರ್ಬಂಧಿಸಲು ಭಾರತ ಟ್ವಿಟರ್‌ಗೆ ಸೂಚಿಸಿತ್ತು. ಈಗಿನಂತೆ ಆಗಲೂ ಟ್ವಿಟರ್ ಭಾರತ ಸರ್ಕಾರದ ಮನವಿಯನ್ನು ಭಾಗಶಃ ಪಾಲಿಸಿತ್ತು. ಆದರೂ ಅದರ ನಡೆಯ ಬಗ್ಗೆ ಕೋಲಾಹಲದ ನಂತರ ಹೆಚ್ಚಿನ ಸಂದರ್ಭಗಳಲ್ಲಿ ಅದು ತನ್ನ ನಿರ್ಬಂಧವನ್ನು ವಾಪಸ್ ತೆಗೆದುಕೊಂಡಿತ್ತು.

ಟ್ವಿಟರ್‌ನ ಕಾನೂನು ವಿಭಾಗದ ಅಧಿಕೃತ ಹೇಳಿಕೆ ಪ್ರಕಾರ, “ಕಾನೂನು ವಿನಂತಿಯನ್ನು ಸ್ವೀಕರಿಸಿದಾಗ, ನಾವು ಅದನ್ನು ಟ್ವಿಟರ್ ನಿಯಮಗಳು ಮತ್ತು ಸ್ಥಳೀಯ ಕಾನೂನು ಎರಡರ ಅಡಿಯಲ್ಲಿ ಪರಿಶೀಲಿಸುತ್ತೇವೆ. ವಿಷಯವು ಟ್ವಿಟರ್ ನಿಯಮಗಳನ್ನು ಉಲ್ಲಂಘಿಸಿದರೆ, ವಿಷಯವನ್ನು ಸೇವೆಯಿಂದ ತೆಗೆದುಹಾಕಲಾಗುತ್ತದೆ. ಒಂದು ನಿರ್ದಿಷ್ಟ ನ್ಯಾಯವ್ಯಾಪ್ತಿಯಲ್ಲಿ ಅದು ಕಾನೂನುಬಾಹಿರವೆಂದು ನಿರ್ಧರಿಸಿದರೆ, ಟ್ವಿಟರ್ ನಿಯಮಗಳನ್ನು ಉಲ್ಲಂಘಿಸದಿದ್ದರೆ, ನಾವು ಭಾರತದಲ್ಲಿ ಮಾತ್ರ ಅಂತಹ ಟ್ವೀಟ್‌ಗಳನ್ನು ತಡೆ ಹಿಡಿಯಬಹುದು. ಎಲ್ಲಾ ಸಂದರ್ಭಗಳಲ್ಲಿ, ನಾವು ಖಾತೆದಾರರಿಗೆ ನೇರವಾಗಿ ತಿಳಿಸುತ್ತೇವೆ. ಇದರಿಂದ ಅವರ ಖಾತೆಗೆ (ಹ್ಯಾಂಡಲ್) ಸಂಬಂಧಿಸಿದ ಕಾನೂನು ಆದೇಶವನ್ನು ನಾವು ಸ್ವೀಕರಿಸಿದ್ದೇವೆ ಎಂದು ಅವರಿಗೆ ತಿಳಿದಿರುತ್ತದೆ. ಲಭ್ಯವಿದ್ದರೆ ಖಾತೆಗೆ ಸಂಬಂಧಿಸಿದ ಇಮೇಲ್ ವಿಳಾಸಕ್ಕೆ ಸಂದೇಶವನ್ನು ಕಳುಹಿಸುವ ಮೂಲಕ ನಾವು ಬಳಕೆದಾರರಿಗೆ ಮಾಹಿತಿ ನೀಡುತ್ತೇವೆ. ನಾವು ಸ್ವೀಕರಿಸುವ ಕಾನೂನು ವಿನಂತಿಗಳ ಕುರಿತು ದ್ವೈವಾರ್ಷಿಕ ಟ್ವಿಟರ್ ಪಾರದರ್ಶಕತೆ ವರದಿಯಲ್ಲಿ ವಿವರಿಸಲಾಗಿದೆ ಮತ್ತು ವಿಷಯವನ್ನು ತಡೆಹಿಡಿಯುವ ವಿನಂತಿಗಳನ್ನು ಲುಮೆನ್‌ನಲ್ಲಿ ಪ್ರಕಟಿಸಲಾಗಿದೆ…..’

ಸಾಂಕ್ರಾಮಿಕವನ್ನು ನಿರ್ವಹಣೆ ಮಾಡಲು ಸೋತ ಕೇಂದ್ರ ಸರ್ಕಾರ ಸತ್ಯವನ್ನು ಎದುರಿಸಲು ಹಿಂದೇಟು ಹಾಕುತ್ತಿದೆ, ಟ್ವಿಟರ್ ಮೇಲೆ ಒತ್ತಡ ಹೇರುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಪೂರ್ತಿ ಅಲ್ಲದಿದ್ದರೂ ಭಾಗಶಃ ಮಣಿದ ಟ್ವಿಟರ್ ಬಗ್ಗೆಯೂ ಕೆಲವು ಆಕ್ಷೇಪಗಳು ಕೇಳಿ ಬಂದಿವೆ.


ಇದನ್ನೂ ಓದಿ: ತಿಂಗಳಾಂತ್ಯದಲ್ಲಿ ಉತ್ತರಪ್ರದೇಶ ಹೆಚ್ಚು ಕೋವಿಡ್ ಪೀಡಿತ ರಾಜ್ಯ ಆಗಬಹುದು: ನೀತಿ ಆಯೋಗ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...