Homeಮುಖಪುಟನಿಮ್ಮ ಹಳೆಯ ಫೇಸ್‌ಬುಕ್‌ ಪೋಸ್ಟ್‌ಗಳನ್ನು ಒಟ್ಟಿಗೆ ಅಳಿಸಬೇಕೆ? ಹೀಗೆ ಮಾಡಿ...

ನಿಮ್ಮ ಹಳೆಯ ಫೇಸ್‌ಬುಕ್‌ ಪೋಸ್ಟ್‌ಗಳನ್ನು ಒಟ್ಟಿಗೆ ಅಳಿಸಬೇಕೆ? ಹೀಗೆ ಮಾಡಿ…

ನಿಮ್ಮ ಮೊಬೈಲ್‌ ಫೇಸ್‌ಬುಕ್‌ ಆಪ್‌ನಲ್ಲಿ ಹಳೆಯ‌ ಪೋಸ್ಟ್‌ಗಳನ್ನು ಒಟ್ಟಿಗೆ ಅಳಿಸುವ, ದಿನಾಂಕವಾರು ಅಳಿಸುವ ಅಥವಾ ವ್ಯಕ್ತಿವಾರು ಅಳಿಸುವ ಹೊಸ ಫ್ಯೂಚರ್‌ ಅನ್ನು ಫೇಸ್‌ಬುಕ್‌ ಬಿಡುಗಡೆ ಮಾಡಿದೆ.

- Advertisement -
- Advertisement -

ಸಾಮಾಜಿಕ ಜಾಲತಾಣಗಳು ಹೊಸದನ್ನು ಕಲಿಯಲು, ಹೆಚ್ಚು ತಿಳಿದುಕೊಳ್ಳಲು, ಬೇಸರ ನಿವಾರಿಸಲು ಬಹಳಷ್ಟು ಸಹಾಯ ಮಾಡಿವೆ. ಆದರೆ ಕೆಲವರಿಗೆ ಇವು ಸಂಕಷ್ಟಗಳನ್ನು ಸಹ ತಂದಿವೆ. ಫೇಸ್‌ಬುಕ್‌ ನಲ್ಲಿ ಎಂದೋ, ಯಾವುದೋ ಮನಸ್ಥಿತಿಯಲ್ಲಿ ಹಾಕಿದ ಪೋಸ್ಟ್‌ಗಳು ಈಗ ಮತ್ತೆ ಕಾಣಿಸಿಕೊಂಡು ಕೆಲವರಿಗೆ ಮುಜುಗರ ಉಂಟು ಮಾಡುತ್ತಿರುವುದು ಹೌದು. ಹತ್ತು ವರ್ಷದ ಹಿಂದೆ ಹಾಕಿದ ಯಾವುದೋ ಫೋಟೊಗೆ ಯಾರಾದರೂ ಲೈಕ್‌ ಕಮೆಂಟ್‌ ಮಾಡಿದರೆ ಸಾಕು, ಅಥವಾ ಮೆಮೋರಿಸ್‌ ರೂಪದಲ್ಲಿ ಅದು ಮತ್ತೆ ಮೇಲೆ ಬಂದು ಕಾಣಿಸಿಕೊಳ್ಳುತ್ತದೆ. ಇದು ಕೆಲವರಿಗೆ ಇಷ್ಟವಾದರೆ ಮತ್ತೆ ಕೆಲವರಿಗೆ ಕಷ್ಟವಾಗುತ್ತಿರಬಹುದು.

ಅಂತಹ ಸಮಸ್ಯೆಗೆ ಫೇಸ್‌ಬುಕ್‌ ಈಗ ಪರಿಹಾರ ನೀಡಿದೆ. ನಿಮ್ಮ ಮೊಬೈಲ್‌ ಫೇಸ್‌ಬುಕ್‌ ಆಪ್‌ನಲ್ಲಿ ಹಳೆಯ‌ ಪೋಸ್ಟ್‌ಗಳನ್ನು ಒಟ್ಟಿಗೆ ಅಳಿಸುವ, ದಿನಾಂಕವಾರು ಅಳಿಸುವ ಅಥವಾ ವ್ಯಕ್ತಿವಾರು ಅಳಿಸುವ ಹೊಸ ಫ್ಯೂಚರ್‌ ಅನ್ನು ಫೇಸ್‌ಬುಕ್‌ ಬಿಡುಗಡೆ ಮಾಡಿದೆ.

“ಜನರು ತಮ್ಮ ಡೇಟಾವನ್ನು ನಿರ್ವಹಿಸುವ ಮತ್ತು ನಿಯಂತ್ರಿಸುವ ಸಾಮರ್ಥ್ಯವನ್ನು ಹೊಂದಿರಬೇಕು ಎಂದು ನಾವು ನಂಬುತ್ತೇವೆ, ಮತ್ತು ಹೆಚ್ಚಿನ ಪಾರದರ್ಶಕತೆ ಮತ್ತು ನಿಯಂತ್ರಣಗಳನ್ನು ಒದಗಿಸುವ ಮೂಲಕ ಜನರ ಗೌಪ್ಯತೆಯನ್ನು ಗೌರವಿಸುವ ಹೊಸ ಮಾರ್ಗಗಳನ್ನು ನಾವು ಅಭಿವೃದ್ಧಿಪಡಿಸುತ್ತೇವೆ.” ಎಂದು ಫೇಸ್‌ಬುಕ್‌ ಹೇಳಿಕೊಂಡಿದೆ.

ಅಳಿಸುವುದು ಹೇಗೆ?

ನಿಮ್ಮ ಫೇಸ್‌ಬುಕ್‌ನಲ್ಲಿ ಪ್ರೈವೆಸಿ ಸೆಟ್ಟಿಂಗ್‌ನಲ್ಲಿ Activity Log ಒಪನ್‌ ಮಾಡಿ. ನಂತರ Manage Activity ಮೇಲೆ ಕ್ಲಿಕ್‌ ಮಾಡಿದರೆ ನೀವು ಫೇಸ್‌ಬುಕ್‌ನಲ್ಲಿ ಇದುವರೆಗೂ ಮಾಡಿದ ಚಟುವಟಿಕೆಗಳೆಲ್ಲವೂ ಗೋಚರಿಸುತ್ತವೆ. ಅವುಗಳಲ್ಲಿ ಬೇಡವಾದುದನ್ನು ಸೆಲೆಕ್ಟ್‌ ಮಾಡಿ ಡಿಲೀಟ್‌ ಮಾಡಬಹುದು.

ನಂತರ Filters ಮೇಲೆ ಕ್ಲಿಕ್‌ ಮಾಡಿದರೆ Categories ತೆರೆದುಕೊಳ್ಳುತ್ತದೆ. ಅದರಲ್ಲಿ ನಿಮ್ಮ ಪೋಸ್ಟ್‌ಗಳು, ನೀವು ಟ್ಯಾಗ್‌ ಆಗಿರುವುದು, ನಿಮ್ಮ ಚಟುವಟಿಕೆಗಳು, ನಿಮ್ಮ ಗ್ರೂಪ್‌ಗಳು ಈ ರೀತಿ ತೆರೆದಕೊಳ್ಳುತ್ತದೆ. ನಿಮಗೆ ಬೇಡವಾಗಿದ್ದನ್ನು ಡಿಲೀಟ್‌ ಮಾಡಬಹುದು.

ಅದರ ಕೆಳಗಿನ Date ಮೇಲೆ ನೀವು ಕ್ಲಿಕ್‌ ಮಾಡಿದರೆ Start Date End Date ಇರುತ್ತದೆ. ಎಂದಿನಿಂದ ಎಂದಿನವರೆಗೆ ನಿಮಗೆ ಪೋಸ್ಟ್‌ಗಳು ಬೇಡ ಅದನ್ನು ನಮೂದಿಸಿ ಡಿಲಿಟ್‌ ಮಾಡಿದರೆ ಅಲ್ಲಿಗೆ ನಿಮ್ಮ ಅನಗತ್ಯ ಪೋಸ್ಟ್‌ಗಳು ಕಾಣೆಯಾಗುತ್ತವೆ.

ಇನ್ನು ಹೆಚ್ಚಿನ ಮಾಹಿತಿಗೆ ಈ ವಿಡಿಯೋ ನೋಡಿ

Facebook का नया "MANAGE ACTIVITY" feature

Facebook के इस नए फीचर से Delete करें अपनी पुराने से पुरानी Photo, Video या Status, सिर्फ एक क्लिक से.

Posted by Tech Tak on Wednesday, June 3, 2020

ಟ್ವಿಟ್ಟರ್‌ನಲ್ಲಿ ಈ ಸಮಸ್ಯೆಗೆ ಬೇರೆ ಪರಿಹಾರ ಕಂಡುಕೊಂಡಿದೆ. ಬ್ರೆಜಿಲ್‌ನಲ್ಲಿ ಅಲ್ಪಕಾಲಿಕ ಟ್ವೀಟ್ಗಳನ್ನು ಕಳುಹಿಸುವ ಸಾಮರ್ಥ್ಯವನ್ನು “ಫ್ಲೀಟ್ಸ್” ಎಂದು ಕರೆಯಲಾಗುತ್ತದೆ – ಇದು 24 ಗಂಟೆಗಳ ನಂತರ ಕಣ್ಮರೆಯಾಗುತ್ತದೆ.

ಫೇಸ್‌ಬುಕ್‌ನ ಅಂಗಸಂಸ್ಥೆಯಾದ ಇನ್‌ಸ್ಟಾಗ್ರಾಮ್ ನಲ್ಲಿನ ಪೋಸ್ಟ್‌ಗಳು ಯಾವಾಗಲೂ ಪೂರ್ವನಿಯೋಜಿತವಾಗಿರುತ್ತವೆ, ಅಂದರೆ ಸ್ವಲ್ಪ ಸಮಯದ ನಂತರ ಸ್ವಯಂಚಾಲಿತವಾಗಿ ಅಳಿಸಲ್ಪಡುತ್ತವೆ. 2017 ರಲ್ಲಿ ಕಂಪನಿಯು “ಆರ್ಕೈವ್” ವೈಶಿಷ್ಟ್ಯವನ್ನು ಪರಿಚಯಿಸಿತು, ಬಳಕೆದಾರರು ಸಾಕಷ್ಟು ಲೈಕ್‌ಗಳಿಲ್ಲದ  ಚಿತ್ರಗಳನ್ನು ಅಳಿಸುವ ಪ್ರವೃತ್ತಿ ಹೆಚ್ಚುತ್ತಿದೆ.


ಇದನ್ನೂ ಓದಿ: ಮೂರೇ ವಾರಗಳಲ್ಲಿ ಟ್ವಿಟ್ಟರ್‌ನಲ್ಲಿ ಮೋದಿಯನ್ನು ಅನ್‌ಫಾಲೋ ಮಾಡಿದ ವೈಟ್‌ಹೌಸ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...