Homeಮುಖಪುಟನಿಮ್ಮ ಹಳೆಯ ಫೇಸ್‌ಬುಕ್‌ ಪೋಸ್ಟ್‌ಗಳನ್ನು ಒಟ್ಟಿಗೆ ಅಳಿಸಬೇಕೆ? ಹೀಗೆ ಮಾಡಿ...

ನಿಮ್ಮ ಹಳೆಯ ಫೇಸ್‌ಬುಕ್‌ ಪೋಸ್ಟ್‌ಗಳನ್ನು ಒಟ್ಟಿಗೆ ಅಳಿಸಬೇಕೆ? ಹೀಗೆ ಮಾಡಿ…

ನಿಮ್ಮ ಮೊಬೈಲ್‌ ಫೇಸ್‌ಬುಕ್‌ ಆಪ್‌ನಲ್ಲಿ ಹಳೆಯ‌ ಪೋಸ್ಟ್‌ಗಳನ್ನು ಒಟ್ಟಿಗೆ ಅಳಿಸುವ, ದಿನಾಂಕವಾರು ಅಳಿಸುವ ಅಥವಾ ವ್ಯಕ್ತಿವಾರು ಅಳಿಸುವ ಹೊಸ ಫ್ಯೂಚರ್‌ ಅನ್ನು ಫೇಸ್‌ಬುಕ್‌ ಬಿಡುಗಡೆ ಮಾಡಿದೆ.

- Advertisement -
- Advertisement -

ಸಾಮಾಜಿಕ ಜಾಲತಾಣಗಳು ಹೊಸದನ್ನು ಕಲಿಯಲು, ಹೆಚ್ಚು ತಿಳಿದುಕೊಳ್ಳಲು, ಬೇಸರ ನಿವಾರಿಸಲು ಬಹಳಷ್ಟು ಸಹಾಯ ಮಾಡಿವೆ. ಆದರೆ ಕೆಲವರಿಗೆ ಇವು ಸಂಕಷ್ಟಗಳನ್ನು ಸಹ ತಂದಿವೆ. ಫೇಸ್‌ಬುಕ್‌ ನಲ್ಲಿ ಎಂದೋ, ಯಾವುದೋ ಮನಸ್ಥಿತಿಯಲ್ಲಿ ಹಾಕಿದ ಪೋಸ್ಟ್‌ಗಳು ಈಗ ಮತ್ತೆ ಕಾಣಿಸಿಕೊಂಡು ಕೆಲವರಿಗೆ ಮುಜುಗರ ಉಂಟು ಮಾಡುತ್ತಿರುವುದು ಹೌದು. ಹತ್ತು ವರ್ಷದ ಹಿಂದೆ ಹಾಕಿದ ಯಾವುದೋ ಫೋಟೊಗೆ ಯಾರಾದರೂ ಲೈಕ್‌ ಕಮೆಂಟ್‌ ಮಾಡಿದರೆ ಸಾಕು, ಅಥವಾ ಮೆಮೋರಿಸ್‌ ರೂಪದಲ್ಲಿ ಅದು ಮತ್ತೆ ಮೇಲೆ ಬಂದು ಕಾಣಿಸಿಕೊಳ್ಳುತ್ತದೆ. ಇದು ಕೆಲವರಿಗೆ ಇಷ್ಟವಾದರೆ ಮತ್ತೆ ಕೆಲವರಿಗೆ ಕಷ್ಟವಾಗುತ್ತಿರಬಹುದು.

ಅಂತಹ ಸಮಸ್ಯೆಗೆ ಫೇಸ್‌ಬುಕ್‌ ಈಗ ಪರಿಹಾರ ನೀಡಿದೆ. ನಿಮ್ಮ ಮೊಬೈಲ್‌ ಫೇಸ್‌ಬುಕ್‌ ಆಪ್‌ನಲ್ಲಿ ಹಳೆಯ‌ ಪೋಸ್ಟ್‌ಗಳನ್ನು ಒಟ್ಟಿಗೆ ಅಳಿಸುವ, ದಿನಾಂಕವಾರು ಅಳಿಸುವ ಅಥವಾ ವ್ಯಕ್ತಿವಾರು ಅಳಿಸುವ ಹೊಸ ಫ್ಯೂಚರ್‌ ಅನ್ನು ಫೇಸ್‌ಬುಕ್‌ ಬಿಡುಗಡೆ ಮಾಡಿದೆ.

“ಜನರು ತಮ್ಮ ಡೇಟಾವನ್ನು ನಿರ್ವಹಿಸುವ ಮತ್ತು ನಿಯಂತ್ರಿಸುವ ಸಾಮರ್ಥ್ಯವನ್ನು ಹೊಂದಿರಬೇಕು ಎಂದು ನಾವು ನಂಬುತ್ತೇವೆ, ಮತ್ತು ಹೆಚ್ಚಿನ ಪಾರದರ್ಶಕತೆ ಮತ್ತು ನಿಯಂತ್ರಣಗಳನ್ನು ಒದಗಿಸುವ ಮೂಲಕ ಜನರ ಗೌಪ್ಯತೆಯನ್ನು ಗೌರವಿಸುವ ಹೊಸ ಮಾರ್ಗಗಳನ್ನು ನಾವು ಅಭಿವೃದ್ಧಿಪಡಿಸುತ್ತೇವೆ.” ಎಂದು ಫೇಸ್‌ಬುಕ್‌ ಹೇಳಿಕೊಂಡಿದೆ.

ಅಳಿಸುವುದು ಹೇಗೆ?

ನಿಮ್ಮ ಫೇಸ್‌ಬುಕ್‌ನಲ್ಲಿ ಪ್ರೈವೆಸಿ ಸೆಟ್ಟಿಂಗ್‌ನಲ್ಲಿ Activity Log ಒಪನ್‌ ಮಾಡಿ. ನಂತರ Manage Activity ಮೇಲೆ ಕ್ಲಿಕ್‌ ಮಾಡಿದರೆ ನೀವು ಫೇಸ್‌ಬುಕ್‌ನಲ್ಲಿ ಇದುವರೆಗೂ ಮಾಡಿದ ಚಟುವಟಿಕೆಗಳೆಲ್ಲವೂ ಗೋಚರಿಸುತ್ತವೆ. ಅವುಗಳಲ್ಲಿ ಬೇಡವಾದುದನ್ನು ಸೆಲೆಕ್ಟ್‌ ಮಾಡಿ ಡಿಲೀಟ್‌ ಮಾಡಬಹುದು.

ನಂತರ Filters ಮೇಲೆ ಕ್ಲಿಕ್‌ ಮಾಡಿದರೆ Categories ತೆರೆದುಕೊಳ್ಳುತ್ತದೆ. ಅದರಲ್ಲಿ ನಿಮ್ಮ ಪೋಸ್ಟ್‌ಗಳು, ನೀವು ಟ್ಯಾಗ್‌ ಆಗಿರುವುದು, ನಿಮ್ಮ ಚಟುವಟಿಕೆಗಳು, ನಿಮ್ಮ ಗ್ರೂಪ್‌ಗಳು ಈ ರೀತಿ ತೆರೆದಕೊಳ್ಳುತ್ತದೆ. ನಿಮಗೆ ಬೇಡವಾಗಿದ್ದನ್ನು ಡಿಲೀಟ್‌ ಮಾಡಬಹುದು.

ಅದರ ಕೆಳಗಿನ Date ಮೇಲೆ ನೀವು ಕ್ಲಿಕ್‌ ಮಾಡಿದರೆ Start Date End Date ಇರುತ್ತದೆ. ಎಂದಿನಿಂದ ಎಂದಿನವರೆಗೆ ನಿಮಗೆ ಪೋಸ್ಟ್‌ಗಳು ಬೇಡ ಅದನ್ನು ನಮೂದಿಸಿ ಡಿಲಿಟ್‌ ಮಾಡಿದರೆ ಅಲ್ಲಿಗೆ ನಿಮ್ಮ ಅನಗತ್ಯ ಪೋಸ್ಟ್‌ಗಳು ಕಾಣೆಯಾಗುತ್ತವೆ.

ಇನ್ನು ಹೆಚ್ಚಿನ ಮಾಹಿತಿಗೆ ಈ ವಿಡಿಯೋ ನೋಡಿ

Facebook का नया "MANAGE ACTIVITY" feature

Facebook के इस नए फीचर से Delete करें अपनी पुराने से पुरानी Photo, Video या Status, सिर्फ एक क्लिक से.

Posted by Tech Tak on Wednesday, June 3, 2020

ಟ್ವಿಟ್ಟರ್‌ನಲ್ಲಿ ಈ ಸಮಸ್ಯೆಗೆ ಬೇರೆ ಪರಿಹಾರ ಕಂಡುಕೊಂಡಿದೆ. ಬ್ರೆಜಿಲ್‌ನಲ್ಲಿ ಅಲ್ಪಕಾಲಿಕ ಟ್ವೀಟ್ಗಳನ್ನು ಕಳುಹಿಸುವ ಸಾಮರ್ಥ್ಯವನ್ನು “ಫ್ಲೀಟ್ಸ್” ಎಂದು ಕರೆಯಲಾಗುತ್ತದೆ – ಇದು 24 ಗಂಟೆಗಳ ನಂತರ ಕಣ್ಮರೆಯಾಗುತ್ತದೆ.

ಫೇಸ್‌ಬುಕ್‌ನ ಅಂಗಸಂಸ್ಥೆಯಾದ ಇನ್‌ಸ್ಟಾಗ್ರಾಮ್ ನಲ್ಲಿನ ಪೋಸ್ಟ್‌ಗಳು ಯಾವಾಗಲೂ ಪೂರ್ವನಿಯೋಜಿತವಾಗಿರುತ್ತವೆ, ಅಂದರೆ ಸ್ವಲ್ಪ ಸಮಯದ ನಂತರ ಸ್ವಯಂಚಾಲಿತವಾಗಿ ಅಳಿಸಲ್ಪಡುತ್ತವೆ. 2017 ರಲ್ಲಿ ಕಂಪನಿಯು “ಆರ್ಕೈವ್” ವೈಶಿಷ್ಟ್ಯವನ್ನು ಪರಿಚಯಿಸಿತು, ಬಳಕೆದಾರರು ಸಾಕಷ್ಟು ಲೈಕ್‌ಗಳಿಲ್ಲದ  ಚಿತ್ರಗಳನ್ನು ಅಳಿಸುವ ಪ್ರವೃತ್ತಿ ಹೆಚ್ಚುತ್ತಿದೆ.


ಇದನ್ನೂ ಓದಿ: ಮೂರೇ ವಾರಗಳಲ್ಲಿ ಟ್ವಿಟ್ಟರ್‌ನಲ್ಲಿ ಮೋದಿಯನ್ನು ಅನ್‌ಫಾಲೋ ಮಾಡಿದ ವೈಟ್‌ಹೌಸ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...