Homeಮುಖಪುಟನಿಮ್ಮ ಹಳೆಯ ಫೇಸ್‌ಬುಕ್‌ ಪೋಸ್ಟ್‌ಗಳನ್ನು ಒಟ್ಟಿಗೆ ಅಳಿಸಬೇಕೆ? ಹೀಗೆ ಮಾಡಿ...

ನಿಮ್ಮ ಹಳೆಯ ಫೇಸ್‌ಬುಕ್‌ ಪೋಸ್ಟ್‌ಗಳನ್ನು ಒಟ್ಟಿಗೆ ಅಳಿಸಬೇಕೆ? ಹೀಗೆ ಮಾಡಿ…

ನಿಮ್ಮ ಮೊಬೈಲ್‌ ಫೇಸ್‌ಬುಕ್‌ ಆಪ್‌ನಲ್ಲಿ ಹಳೆಯ‌ ಪೋಸ್ಟ್‌ಗಳನ್ನು ಒಟ್ಟಿಗೆ ಅಳಿಸುವ, ದಿನಾಂಕವಾರು ಅಳಿಸುವ ಅಥವಾ ವ್ಯಕ್ತಿವಾರು ಅಳಿಸುವ ಹೊಸ ಫ್ಯೂಚರ್‌ ಅನ್ನು ಫೇಸ್‌ಬುಕ್‌ ಬಿಡುಗಡೆ ಮಾಡಿದೆ.

- Advertisement -
- Advertisement -

ಸಾಮಾಜಿಕ ಜಾಲತಾಣಗಳು ಹೊಸದನ್ನು ಕಲಿಯಲು, ಹೆಚ್ಚು ತಿಳಿದುಕೊಳ್ಳಲು, ಬೇಸರ ನಿವಾರಿಸಲು ಬಹಳಷ್ಟು ಸಹಾಯ ಮಾಡಿವೆ. ಆದರೆ ಕೆಲವರಿಗೆ ಇವು ಸಂಕಷ್ಟಗಳನ್ನು ಸಹ ತಂದಿವೆ. ಫೇಸ್‌ಬುಕ್‌ ನಲ್ಲಿ ಎಂದೋ, ಯಾವುದೋ ಮನಸ್ಥಿತಿಯಲ್ಲಿ ಹಾಕಿದ ಪೋಸ್ಟ್‌ಗಳು ಈಗ ಮತ್ತೆ ಕಾಣಿಸಿಕೊಂಡು ಕೆಲವರಿಗೆ ಮುಜುಗರ ಉಂಟು ಮಾಡುತ್ತಿರುವುದು ಹೌದು. ಹತ್ತು ವರ್ಷದ ಹಿಂದೆ ಹಾಕಿದ ಯಾವುದೋ ಫೋಟೊಗೆ ಯಾರಾದರೂ ಲೈಕ್‌ ಕಮೆಂಟ್‌ ಮಾಡಿದರೆ ಸಾಕು, ಅಥವಾ ಮೆಮೋರಿಸ್‌ ರೂಪದಲ್ಲಿ ಅದು ಮತ್ತೆ ಮೇಲೆ ಬಂದು ಕಾಣಿಸಿಕೊಳ್ಳುತ್ತದೆ. ಇದು ಕೆಲವರಿಗೆ ಇಷ್ಟವಾದರೆ ಮತ್ತೆ ಕೆಲವರಿಗೆ ಕಷ್ಟವಾಗುತ್ತಿರಬಹುದು.

ಅಂತಹ ಸಮಸ್ಯೆಗೆ ಫೇಸ್‌ಬುಕ್‌ ಈಗ ಪರಿಹಾರ ನೀಡಿದೆ. ನಿಮ್ಮ ಮೊಬೈಲ್‌ ಫೇಸ್‌ಬುಕ್‌ ಆಪ್‌ನಲ್ಲಿ ಹಳೆಯ‌ ಪೋಸ್ಟ್‌ಗಳನ್ನು ಒಟ್ಟಿಗೆ ಅಳಿಸುವ, ದಿನಾಂಕವಾರು ಅಳಿಸುವ ಅಥವಾ ವ್ಯಕ್ತಿವಾರು ಅಳಿಸುವ ಹೊಸ ಫ್ಯೂಚರ್‌ ಅನ್ನು ಫೇಸ್‌ಬುಕ್‌ ಬಿಡುಗಡೆ ಮಾಡಿದೆ.

“ಜನರು ತಮ್ಮ ಡೇಟಾವನ್ನು ನಿರ್ವಹಿಸುವ ಮತ್ತು ನಿಯಂತ್ರಿಸುವ ಸಾಮರ್ಥ್ಯವನ್ನು ಹೊಂದಿರಬೇಕು ಎಂದು ನಾವು ನಂಬುತ್ತೇವೆ, ಮತ್ತು ಹೆಚ್ಚಿನ ಪಾರದರ್ಶಕತೆ ಮತ್ತು ನಿಯಂತ್ರಣಗಳನ್ನು ಒದಗಿಸುವ ಮೂಲಕ ಜನರ ಗೌಪ್ಯತೆಯನ್ನು ಗೌರವಿಸುವ ಹೊಸ ಮಾರ್ಗಗಳನ್ನು ನಾವು ಅಭಿವೃದ್ಧಿಪಡಿಸುತ್ತೇವೆ.” ಎಂದು ಫೇಸ್‌ಬುಕ್‌ ಹೇಳಿಕೊಂಡಿದೆ.

ಅಳಿಸುವುದು ಹೇಗೆ?

ನಿಮ್ಮ ಫೇಸ್‌ಬುಕ್‌ನಲ್ಲಿ ಪ್ರೈವೆಸಿ ಸೆಟ್ಟಿಂಗ್‌ನಲ್ಲಿ Activity Log ಒಪನ್‌ ಮಾಡಿ. ನಂತರ Manage Activity ಮೇಲೆ ಕ್ಲಿಕ್‌ ಮಾಡಿದರೆ ನೀವು ಫೇಸ್‌ಬುಕ್‌ನಲ್ಲಿ ಇದುವರೆಗೂ ಮಾಡಿದ ಚಟುವಟಿಕೆಗಳೆಲ್ಲವೂ ಗೋಚರಿಸುತ್ತವೆ. ಅವುಗಳಲ್ಲಿ ಬೇಡವಾದುದನ್ನು ಸೆಲೆಕ್ಟ್‌ ಮಾಡಿ ಡಿಲೀಟ್‌ ಮಾಡಬಹುದು.

ನಂತರ Filters ಮೇಲೆ ಕ್ಲಿಕ್‌ ಮಾಡಿದರೆ Categories ತೆರೆದುಕೊಳ್ಳುತ್ತದೆ. ಅದರಲ್ಲಿ ನಿಮ್ಮ ಪೋಸ್ಟ್‌ಗಳು, ನೀವು ಟ್ಯಾಗ್‌ ಆಗಿರುವುದು, ನಿಮ್ಮ ಚಟುವಟಿಕೆಗಳು, ನಿಮ್ಮ ಗ್ರೂಪ್‌ಗಳು ಈ ರೀತಿ ತೆರೆದಕೊಳ್ಳುತ್ತದೆ. ನಿಮಗೆ ಬೇಡವಾಗಿದ್ದನ್ನು ಡಿಲೀಟ್‌ ಮಾಡಬಹುದು.

ಅದರ ಕೆಳಗಿನ Date ಮೇಲೆ ನೀವು ಕ್ಲಿಕ್‌ ಮಾಡಿದರೆ Start Date End Date ಇರುತ್ತದೆ. ಎಂದಿನಿಂದ ಎಂದಿನವರೆಗೆ ನಿಮಗೆ ಪೋಸ್ಟ್‌ಗಳು ಬೇಡ ಅದನ್ನು ನಮೂದಿಸಿ ಡಿಲಿಟ್‌ ಮಾಡಿದರೆ ಅಲ್ಲಿಗೆ ನಿಮ್ಮ ಅನಗತ್ಯ ಪೋಸ್ಟ್‌ಗಳು ಕಾಣೆಯಾಗುತ್ತವೆ.

ಇನ್ನು ಹೆಚ್ಚಿನ ಮಾಹಿತಿಗೆ ಈ ವಿಡಿಯೋ ನೋಡಿ

Facebook का नया "MANAGE ACTIVITY" feature

Facebook के इस नए फीचर से Delete करें अपनी पुराने से पुरानी Photo, Video या Status, सिर्फ एक क्लिक से.

Posted by Tech Tak on Wednesday, June 3, 2020

ಟ್ವಿಟ್ಟರ್‌ನಲ್ಲಿ ಈ ಸಮಸ್ಯೆಗೆ ಬೇರೆ ಪರಿಹಾರ ಕಂಡುಕೊಂಡಿದೆ. ಬ್ರೆಜಿಲ್‌ನಲ್ಲಿ ಅಲ್ಪಕಾಲಿಕ ಟ್ವೀಟ್ಗಳನ್ನು ಕಳುಹಿಸುವ ಸಾಮರ್ಥ್ಯವನ್ನು “ಫ್ಲೀಟ್ಸ್” ಎಂದು ಕರೆಯಲಾಗುತ್ತದೆ – ಇದು 24 ಗಂಟೆಗಳ ನಂತರ ಕಣ್ಮರೆಯಾಗುತ್ತದೆ.

ಫೇಸ್‌ಬುಕ್‌ನ ಅಂಗಸಂಸ್ಥೆಯಾದ ಇನ್‌ಸ್ಟಾಗ್ರಾಮ್ ನಲ್ಲಿನ ಪೋಸ್ಟ್‌ಗಳು ಯಾವಾಗಲೂ ಪೂರ್ವನಿಯೋಜಿತವಾಗಿರುತ್ತವೆ, ಅಂದರೆ ಸ್ವಲ್ಪ ಸಮಯದ ನಂತರ ಸ್ವಯಂಚಾಲಿತವಾಗಿ ಅಳಿಸಲ್ಪಡುತ್ತವೆ. 2017 ರಲ್ಲಿ ಕಂಪನಿಯು “ಆರ್ಕೈವ್” ವೈಶಿಷ್ಟ್ಯವನ್ನು ಪರಿಚಯಿಸಿತು, ಬಳಕೆದಾರರು ಸಾಕಷ್ಟು ಲೈಕ್‌ಗಳಿಲ್ಲದ  ಚಿತ್ರಗಳನ್ನು ಅಳಿಸುವ ಪ್ರವೃತ್ತಿ ಹೆಚ್ಚುತ್ತಿದೆ.


ಇದನ್ನೂ ಓದಿ: ಮೂರೇ ವಾರಗಳಲ್ಲಿ ಟ್ವಿಟ್ಟರ್‌ನಲ್ಲಿ ಮೋದಿಯನ್ನು ಅನ್‌ಫಾಲೋ ಮಾಡಿದ ವೈಟ್‌ಹೌಸ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...