Homeಮುಖಪುಟನಿಮ್ಮ ಹಳೆಯ ಫೇಸ್‌ಬುಕ್‌ ಪೋಸ್ಟ್‌ಗಳನ್ನು ಒಟ್ಟಿಗೆ ಅಳಿಸಬೇಕೆ? ಹೀಗೆ ಮಾಡಿ...

ನಿಮ್ಮ ಹಳೆಯ ಫೇಸ್‌ಬುಕ್‌ ಪೋಸ್ಟ್‌ಗಳನ್ನು ಒಟ್ಟಿಗೆ ಅಳಿಸಬೇಕೆ? ಹೀಗೆ ಮಾಡಿ…

ನಿಮ್ಮ ಮೊಬೈಲ್‌ ಫೇಸ್‌ಬುಕ್‌ ಆಪ್‌ನಲ್ಲಿ ಹಳೆಯ‌ ಪೋಸ್ಟ್‌ಗಳನ್ನು ಒಟ್ಟಿಗೆ ಅಳಿಸುವ, ದಿನಾಂಕವಾರು ಅಳಿಸುವ ಅಥವಾ ವ್ಯಕ್ತಿವಾರು ಅಳಿಸುವ ಹೊಸ ಫ್ಯೂಚರ್‌ ಅನ್ನು ಫೇಸ್‌ಬುಕ್‌ ಬಿಡುಗಡೆ ಮಾಡಿದೆ.

- Advertisement -
- Advertisement -

ಸಾಮಾಜಿಕ ಜಾಲತಾಣಗಳು ಹೊಸದನ್ನು ಕಲಿಯಲು, ಹೆಚ್ಚು ತಿಳಿದುಕೊಳ್ಳಲು, ಬೇಸರ ನಿವಾರಿಸಲು ಬಹಳಷ್ಟು ಸಹಾಯ ಮಾಡಿವೆ. ಆದರೆ ಕೆಲವರಿಗೆ ಇವು ಸಂಕಷ್ಟಗಳನ್ನು ಸಹ ತಂದಿವೆ. ಫೇಸ್‌ಬುಕ್‌ ನಲ್ಲಿ ಎಂದೋ, ಯಾವುದೋ ಮನಸ್ಥಿತಿಯಲ್ಲಿ ಹಾಕಿದ ಪೋಸ್ಟ್‌ಗಳು ಈಗ ಮತ್ತೆ ಕಾಣಿಸಿಕೊಂಡು ಕೆಲವರಿಗೆ ಮುಜುಗರ ಉಂಟು ಮಾಡುತ್ತಿರುವುದು ಹೌದು. ಹತ್ತು ವರ್ಷದ ಹಿಂದೆ ಹಾಕಿದ ಯಾವುದೋ ಫೋಟೊಗೆ ಯಾರಾದರೂ ಲೈಕ್‌ ಕಮೆಂಟ್‌ ಮಾಡಿದರೆ ಸಾಕು, ಅಥವಾ ಮೆಮೋರಿಸ್‌ ರೂಪದಲ್ಲಿ ಅದು ಮತ್ತೆ ಮೇಲೆ ಬಂದು ಕಾಣಿಸಿಕೊಳ್ಳುತ್ತದೆ. ಇದು ಕೆಲವರಿಗೆ ಇಷ್ಟವಾದರೆ ಮತ್ತೆ ಕೆಲವರಿಗೆ ಕಷ್ಟವಾಗುತ್ತಿರಬಹುದು.

ಅಂತಹ ಸಮಸ್ಯೆಗೆ ಫೇಸ್‌ಬುಕ್‌ ಈಗ ಪರಿಹಾರ ನೀಡಿದೆ. ನಿಮ್ಮ ಮೊಬೈಲ್‌ ಫೇಸ್‌ಬುಕ್‌ ಆಪ್‌ನಲ್ಲಿ ಹಳೆಯ‌ ಪೋಸ್ಟ್‌ಗಳನ್ನು ಒಟ್ಟಿಗೆ ಅಳಿಸುವ, ದಿನಾಂಕವಾರು ಅಳಿಸುವ ಅಥವಾ ವ್ಯಕ್ತಿವಾರು ಅಳಿಸುವ ಹೊಸ ಫ್ಯೂಚರ್‌ ಅನ್ನು ಫೇಸ್‌ಬುಕ್‌ ಬಿಡುಗಡೆ ಮಾಡಿದೆ.

“ಜನರು ತಮ್ಮ ಡೇಟಾವನ್ನು ನಿರ್ವಹಿಸುವ ಮತ್ತು ನಿಯಂತ್ರಿಸುವ ಸಾಮರ್ಥ್ಯವನ್ನು ಹೊಂದಿರಬೇಕು ಎಂದು ನಾವು ನಂಬುತ್ತೇವೆ, ಮತ್ತು ಹೆಚ್ಚಿನ ಪಾರದರ್ಶಕತೆ ಮತ್ತು ನಿಯಂತ್ರಣಗಳನ್ನು ಒದಗಿಸುವ ಮೂಲಕ ಜನರ ಗೌಪ್ಯತೆಯನ್ನು ಗೌರವಿಸುವ ಹೊಸ ಮಾರ್ಗಗಳನ್ನು ನಾವು ಅಭಿವೃದ್ಧಿಪಡಿಸುತ್ತೇವೆ.” ಎಂದು ಫೇಸ್‌ಬುಕ್‌ ಹೇಳಿಕೊಂಡಿದೆ.

ಅಳಿಸುವುದು ಹೇಗೆ?

ನಿಮ್ಮ ಫೇಸ್‌ಬುಕ್‌ನಲ್ಲಿ ಪ್ರೈವೆಸಿ ಸೆಟ್ಟಿಂಗ್‌ನಲ್ಲಿ Activity Log ಒಪನ್‌ ಮಾಡಿ. ನಂತರ Manage Activity ಮೇಲೆ ಕ್ಲಿಕ್‌ ಮಾಡಿದರೆ ನೀವು ಫೇಸ್‌ಬುಕ್‌ನಲ್ಲಿ ಇದುವರೆಗೂ ಮಾಡಿದ ಚಟುವಟಿಕೆಗಳೆಲ್ಲವೂ ಗೋಚರಿಸುತ್ತವೆ. ಅವುಗಳಲ್ಲಿ ಬೇಡವಾದುದನ್ನು ಸೆಲೆಕ್ಟ್‌ ಮಾಡಿ ಡಿಲೀಟ್‌ ಮಾಡಬಹುದು.

ನಂತರ Filters ಮೇಲೆ ಕ್ಲಿಕ್‌ ಮಾಡಿದರೆ Categories ತೆರೆದುಕೊಳ್ಳುತ್ತದೆ. ಅದರಲ್ಲಿ ನಿಮ್ಮ ಪೋಸ್ಟ್‌ಗಳು, ನೀವು ಟ್ಯಾಗ್‌ ಆಗಿರುವುದು, ನಿಮ್ಮ ಚಟುವಟಿಕೆಗಳು, ನಿಮ್ಮ ಗ್ರೂಪ್‌ಗಳು ಈ ರೀತಿ ತೆರೆದಕೊಳ್ಳುತ್ತದೆ. ನಿಮಗೆ ಬೇಡವಾಗಿದ್ದನ್ನು ಡಿಲೀಟ್‌ ಮಾಡಬಹುದು.

ಅದರ ಕೆಳಗಿನ Date ಮೇಲೆ ನೀವು ಕ್ಲಿಕ್‌ ಮಾಡಿದರೆ Start Date End Date ಇರುತ್ತದೆ. ಎಂದಿನಿಂದ ಎಂದಿನವರೆಗೆ ನಿಮಗೆ ಪೋಸ್ಟ್‌ಗಳು ಬೇಡ ಅದನ್ನು ನಮೂದಿಸಿ ಡಿಲಿಟ್‌ ಮಾಡಿದರೆ ಅಲ್ಲಿಗೆ ನಿಮ್ಮ ಅನಗತ್ಯ ಪೋಸ್ಟ್‌ಗಳು ಕಾಣೆಯಾಗುತ್ತವೆ.

ಇನ್ನು ಹೆಚ್ಚಿನ ಮಾಹಿತಿಗೆ ಈ ವಿಡಿಯೋ ನೋಡಿ

Facebook का नया "MANAGE ACTIVITY" feature

Facebook के इस नए फीचर से Delete करें अपनी पुराने से पुरानी Photo, Video या Status, सिर्फ एक क्लिक से.

Posted by Tech Tak on Wednesday, June 3, 2020

ಟ್ವಿಟ್ಟರ್‌ನಲ್ಲಿ ಈ ಸಮಸ್ಯೆಗೆ ಬೇರೆ ಪರಿಹಾರ ಕಂಡುಕೊಂಡಿದೆ. ಬ್ರೆಜಿಲ್‌ನಲ್ಲಿ ಅಲ್ಪಕಾಲಿಕ ಟ್ವೀಟ್ಗಳನ್ನು ಕಳುಹಿಸುವ ಸಾಮರ್ಥ್ಯವನ್ನು “ಫ್ಲೀಟ್ಸ್” ಎಂದು ಕರೆಯಲಾಗುತ್ತದೆ – ಇದು 24 ಗಂಟೆಗಳ ನಂತರ ಕಣ್ಮರೆಯಾಗುತ್ತದೆ.

ಫೇಸ್‌ಬುಕ್‌ನ ಅಂಗಸಂಸ್ಥೆಯಾದ ಇನ್‌ಸ್ಟಾಗ್ರಾಮ್ ನಲ್ಲಿನ ಪೋಸ್ಟ್‌ಗಳು ಯಾವಾಗಲೂ ಪೂರ್ವನಿಯೋಜಿತವಾಗಿರುತ್ತವೆ, ಅಂದರೆ ಸ್ವಲ್ಪ ಸಮಯದ ನಂತರ ಸ್ವಯಂಚಾಲಿತವಾಗಿ ಅಳಿಸಲ್ಪಡುತ್ತವೆ. 2017 ರಲ್ಲಿ ಕಂಪನಿಯು “ಆರ್ಕೈವ್” ವೈಶಿಷ್ಟ್ಯವನ್ನು ಪರಿಚಯಿಸಿತು, ಬಳಕೆದಾರರು ಸಾಕಷ್ಟು ಲೈಕ್‌ಗಳಿಲ್ಲದ  ಚಿತ್ರಗಳನ್ನು ಅಳಿಸುವ ಪ್ರವೃತ್ತಿ ಹೆಚ್ಚುತ್ತಿದೆ.


ಇದನ್ನೂ ಓದಿ: ಮೂರೇ ವಾರಗಳಲ್ಲಿ ಟ್ವಿಟ್ಟರ್‌ನಲ್ಲಿ ಮೋದಿಯನ್ನು ಅನ್‌ಫಾಲೋ ಮಾಡಿದ ವೈಟ್‌ಹೌಸ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...