Homeಮುಖಪುಟನಿಮ್ಮ ಹಳೆಯ ಫೇಸ್‌ಬುಕ್‌ ಪೋಸ್ಟ್‌ಗಳನ್ನು ಒಟ್ಟಿಗೆ ಅಳಿಸಬೇಕೆ? ಹೀಗೆ ಮಾಡಿ...

ನಿಮ್ಮ ಹಳೆಯ ಫೇಸ್‌ಬುಕ್‌ ಪೋಸ್ಟ್‌ಗಳನ್ನು ಒಟ್ಟಿಗೆ ಅಳಿಸಬೇಕೆ? ಹೀಗೆ ಮಾಡಿ…

ನಿಮ್ಮ ಮೊಬೈಲ್‌ ಫೇಸ್‌ಬುಕ್‌ ಆಪ್‌ನಲ್ಲಿ ಹಳೆಯ‌ ಪೋಸ್ಟ್‌ಗಳನ್ನು ಒಟ್ಟಿಗೆ ಅಳಿಸುವ, ದಿನಾಂಕವಾರು ಅಳಿಸುವ ಅಥವಾ ವ್ಯಕ್ತಿವಾರು ಅಳಿಸುವ ಹೊಸ ಫ್ಯೂಚರ್‌ ಅನ್ನು ಫೇಸ್‌ಬುಕ್‌ ಬಿಡುಗಡೆ ಮಾಡಿದೆ.

- Advertisement -
- Advertisement -

ಸಾಮಾಜಿಕ ಜಾಲತಾಣಗಳು ಹೊಸದನ್ನು ಕಲಿಯಲು, ಹೆಚ್ಚು ತಿಳಿದುಕೊಳ್ಳಲು, ಬೇಸರ ನಿವಾರಿಸಲು ಬಹಳಷ್ಟು ಸಹಾಯ ಮಾಡಿವೆ. ಆದರೆ ಕೆಲವರಿಗೆ ಇವು ಸಂಕಷ್ಟಗಳನ್ನು ಸಹ ತಂದಿವೆ. ಫೇಸ್‌ಬುಕ್‌ ನಲ್ಲಿ ಎಂದೋ, ಯಾವುದೋ ಮನಸ್ಥಿತಿಯಲ್ಲಿ ಹಾಕಿದ ಪೋಸ್ಟ್‌ಗಳು ಈಗ ಮತ್ತೆ ಕಾಣಿಸಿಕೊಂಡು ಕೆಲವರಿಗೆ ಮುಜುಗರ ಉಂಟು ಮಾಡುತ್ತಿರುವುದು ಹೌದು. ಹತ್ತು ವರ್ಷದ ಹಿಂದೆ ಹಾಕಿದ ಯಾವುದೋ ಫೋಟೊಗೆ ಯಾರಾದರೂ ಲೈಕ್‌ ಕಮೆಂಟ್‌ ಮಾಡಿದರೆ ಸಾಕು, ಅಥವಾ ಮೆಮೋರಿಸ್‌ ರೂಪದಲ್ಲಿ ಅದು ಮತ್ತೆ ಮೇಲೆ ಬಂದು ಕಾಣಿಸಿಕೊಳ್ಳುತ್ತದೆ. ಇದು ಕೆಲವರಿಗೆ ಇಷ್ಟವಾದರೆ ಮತ್ತೆ ಕೆಲವರಿಗೆ ಕಷ್ಟವಾಗುತ್ತಿರಬಹುದು.

ಅಂತಹ ಸಮಸ್ಯೆಗೆ ಫೇಸ್‌ಬುಕ್‌ ಈಗ ಪರಿಹಾರ ನೀಡಿದೆ. ನಿಮ್ಮ ಮೊಬೈಲ್‌ ಫೇಸ್‌ಬುಕ್‌ ಆಪ್‌ನಲ್ಲಿ ಹಳೆಯ‌ ಪೋಸ್ಟ್‌ಗಳನ್ನು ಒಟ್ಟಿಗೆ ಅಳಿಸುವ, ದಿನಾಂಕವಾರು ಅಳಿಸುವ ಅಥವಾ ವ್ಯಕ್ತಿವಾರು ಅಳಿಸುವ ಹೊಸ ಫ್ಯೂಚರ್‌ ಅನ್ನು ಫೇಸ್‌ಬುಕ್‌ ಬಿಡುಗಡೆ ಮಾಡಿದೆ.

“ಜನರು ತಮ್ಮ ಡೇಟಾವನ್ನು ನಿರ್ವಹಿಸುವ ಮತ್ತು ನಿಯಂತ್ರಿಸುವ ಸಾಮರ್ಥ್ಯವನ್ನು ಹೊಂದಿರಬೇಕು ಎಂದು ನಾವು ನಂಬುತ್ತೇವೆ, ಮತ್ತು ಹೆಚ್ಚಿನ ಪಾರದರ್ಶಕತೆ ಮತ್ತು ನಿಯಂತ್ರಣಗಳನ್ನು ಒದಗಿಸುವ ಮೂಲಕ ಜನರ ಗೌಪ್ಯತೆಯನ್ನು ಗೌರವಿಸುವ ಹೊಸ ಮಾರ್ಗಗಳನ್ನು ನಾವು ಅಭಿವೃದ್ಧಿಪಡಿಸುತ್ತೇವೆ.” ಎಂದು ಫೇಸ್‌ಬುಕ್‌ ಹೇಳಿಕೊಂಡಿದೆ.

ಅಳಿಸುವುದು ಹೇಗೆ?

ನಿಮ್ಮ ಫೇಸ್‌ಬುಕ್‌ನಲ್ಲಿ ಪ್ರೈವೆಸಿ ಸೆಟ್ಟಿಂಗ್‌ನಲ್ಲಿ Activity Log ಒಪನ್‌ ಮಾಡಿ. ನಂತರ Manage Activity ಮೇಲೆ ಕ್ಲಿಕ್‌ ಮಾಡಿದರೆ ನೀವು ಫೇಸ್‌ಬುಕ್‌ನಲ್ಲಿ ಇದುವರೆಗೂ ಮಾಡಿದ ಚಟುವಟಿಕೆಗಳೆಲ್ಲವೂ ಗೋಚರಿಸುತ್ತವೆ. ಅವುಗಳಲ್ಲಿ ಬೇಡವಾದುದನ್ನು ಸೆಲೆಕ್ಟ್‌ ಮಾಡಿ ಡಿಲೀಟ್‌ ಮಾಡಬಹುದು.

ನಂತರ Filters ಮೇಲೆ ಕ್ಲಿಕ್‌ ಮಾಡಿದರೆ Categories ತೆರೆದುಕೊಳ್ಳುತ್ತದೆ. ಅದರಲ್ಲಿ ನಿಮ್ಮ ಪೋಸ್ಟ್‌ಗಳು, ನೀವು ಟ್ಯಾಗ್‌ ಆಗಿರುವುದು, ನಿಮ್ಮ ಚಟುವಟಿಕೆಗಳು, ನಿಮ್ಮ ಗ್ರೂಪ್‌ಗಳು ಈ ರೀತಿ ತೆರೆದಕೊಳ್ಳುತ್ತದೆ. ನಿಮಗೆ ಬೇಡವಾಗಿದ್ದನ್ನು ಡಿಲೀಟ್‌ ಮಾಡಬಹುದು.

ಅದರ ಕೆಳಗಿನ Date ಮೇಲೆ ನೀವು ಕ್ಲಿಕ್‌ ಮಾಡಿದರೆ Start Date End Date ಇರುತ್ತದೆ. ಎಂದಿನಿಂದ ಎಂದಿನವರೆಗೆ ನಿಮಗೆ ಪೋಸ್ಟ್‌ಗಳು ಬೇಡ ಅದನ್ನು ನಮೂದಿಸಿ ಡಿಲಿಟ್‌ ಮಾಡಿದರೆ ಅಲ್ಲಿಗೆ ನಿಮ್ಮ ಅನಗತ್ಯ ಪೋಸ್ಟ್‌ಗಳು ಕಾಣೆಯಾಗುತ್ತವೆ.

ಇನ್ನು ಹೆಚ್ಚಿನ ಮಾಹಿತಿಗೆ ಈ ವಿಡಿಯೋ ನೋಡಿ

Facebook का नया "MANAGE ACTIVITY" feature

Facebook के इस नए फीचर से Delete करें अपनी पुराने से पुरानी Photo, Video या Status, सिर्फ एक क्लिक से.

Posted by Tech Tak on Wednesday, June 3, 2020

ಟ್ವಿಟ್ಟರ್‌ನಲ್ಲಿ ಈ ಸಮಸ್ಯೆಗೆ ಬೇರೆ ಪರಿಹಾರ ಕಂಡುಕೊಂಡಿದೆ. ಬ್ರೆಜಿಲ್‌ನಲ್ಲಿ ಅಲ್ಪಕಾಲಿಕ ಟ್ವೀಟ್ಗಳನ್ನು ಕಳುಹಿಸುವ ಸಾಮರ್ಥ್ಯವನ್ನು “ಫ್ಲೀಟ್ಸ್” ಎಂದು ಕರೆಯಲಾಗುತ್ತದೆ – ಇದು 24 ಗಂಟೆಗಳ ನಂತರ ಕಣ್ಮರೆಯಾಗುತ್ತದೆ.

ಫೇಸ್‌ಬುಕ್‌ನ ಅಂಗಸಂಸ್ಥೆಯಾದ ಇನ್‌ಸ್ಟಾಗ್ರಾಮ್ ನಲ್ಲಿನ ಪೋಸ್ಟ್‌ಗಳು ಯಾವಾಗಲೂ ಪೂರ್ವನಿಯೋಜಿತವಾಗಿರುತ್ತವೆ, ಅಂದರೆ ಸ್ವಲ್ಪ ಸಮಯದ ನಂತರ ಸ್ವಯಂಚಾಲಿತವಾಗಿ ಅಳಿಸಲ್ಪಡುತ್ತವೆ. 2017 ರಲ್ಲಿ ಕಂಪನಿಯು “ಆರ್ಕೈವ್” ವೈಶಿಷ್ಟ್ಯವನ್ನು ಪರಿಚಯಿಸಿತು, ಬಳಕೆದಾರರು ಸಾಕಷ್ಟು ಲೈಕ್‌ಗಳಿಲ್ಲದ  ಚಿತ್ರಗಳನ್ನು ಅಳಿಸುವ ಪ್ರವೃತ್ತಿ ಹೆಚ್ಚುತ್ತಿದೆ.


ಇದನ್ನೂ ಓದಿ: ಮೂರೇ ವಾರಗಳಲ್ಲಿ ಟ್ವಿಟ್ಟರ್‌ನಲ್ಲಿ ಮೋದಿಯನ್ನು ಅನ್‌ಫಾಲೋ ಮಾಡಿದ ವೈಟ್‌ಹೌಸ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...