Homeಮುಖಪುಟನಿಮ್ಮ ಹಳೆಯ ಫೇಸ್‌ಬುಕ್‌ ಪೋಸ್ಟ್‌ಗಳನ್ನು ಒಟ್ಟಿಗೆ ಅಳಿಸಬೇಕೆ? ಹೀಗೆ ಮಾಡಿ...

ನಿಮ್ಮ ಹಳೆಯ ಫೇಸ್‌ಬುಕ್‌ ಪೋಸ್ಟ್‌ಗಳನ್ನು ಒಟ್ಟಿಗೆ ಅಳಿಸಬೇಕೆ? ಹೀಗೆ ಮಾಡಿ…

ನಿಮ್ಮ ಮೊಬೈಲ್‌ ಫೇಸ್‌ಬುಕ್‌ ಆಪ್‌ನಲ್ಲಿ ಹಳೆಯ‌ ಪೋಸ್ಟ್‌ಗಳನ್ನು ಒಟ್ಟಿಗೆ ಅಳಿಸುವ, ದಿನಾಂಕವಾರು ಅಳಿಸುವ ಅಥವಾ ವ್ಯಕ್ತಿವಾರು ಅಳಿಸುವ ಹೊಸ ಫ್ಯೂಚರ್‌ ಅನ್ನು ಫೇಸ್‌ಬುಕ್‌ ಬಿಡುಗಡೆ ಮಾಡಿದೆ.

- Advertisement -
- Advertisement -

ಸಾಮಾಜಿಕ ಜಾಲತಾಣಗಳು ಹೊಸದನ್ನು ಕಲಿಯಲು, ಹೆಚ್ಚು ತಿಳಿದುಕೊಳ್ಳಲು, ಬೇಸರ ನಿವಾರಿಸಲು ಬಹಳಷ್ಟು ಸಹಾಯ ಮಾಡಿವೆ. ಆದರೆ ಕೆಲವರಿಗೆ ಇವು ಸಂಕಷ್ಟಗಳನ್ನು ಸಹ ತಂದಿವೆ. ಫೇಸ್‌ಬುಕ್‌ ನಲ್ಲಿ ಎಂದೋ, ಯಾವುದೋ ಮನಸ್ಥಿತಿಯಲ್ಲಿ ಹಾಕಿದ ಪೋಸ್ಟ್‌ಗಳು ಈಗ ಮತ್ತೆ ಕಾಣಿಸಿಕೊಂಡು ಕೆಲವರಿಗೆ ಮುಜುಗರ ಉಂಟು ಮಾಡುತ್ತಿರುವುದು ಹೌದು. ಹತ್ತು ವರ್ಷದ ಹಿಂದೆ ಹಾಕಿದ ಯಾವುದೋ ಫೋಟೊಗೆ ಯಾರಾದರೂ ಲೈಕ್‌ ಕಮೆಂಟ್‌ ಮಾಡಿದರೆ ಸಾಕು, ಅಥವಾ ಮೆಮೋರಿಸ್‌ ರೂಪದಲ್ಲಿ ಅದು ಮತ್ತೆ ಮೇಲೆ ಬಂದು ಕಾಣಿಸಿಕೊಳ್ಳುತ್ತದೆ. ಇದು ಕೆಲವರಿಗೆ ಇಷ್ಟವಾದರೆ ಮತ್ತೆ ಕೆಲವರಿಗೆ ಕಷ್ಟವಾಗುತ್ತಿರಬಹುದು.

ಅಂತಹ ಸಮಸ್ಯೆಗೆ ಫೇಸ್‌ಬುಕ್‌ ಈಗ ಪರಿಹಾರ ನೀಡಿದೆ. ನಿಮ್ಮ ಮೊಬೈಲ್‌ ಫೇಸ್‌ಬುಕ್‌ ಆಪ್‌ನಲ್ಲಿ ಹಳೆಯ‌ ಪೋಸ್ಟ್‌ಗಳನ್ನು ಒಟ್ಟಿಗೆ ಅಳಿಸುವ, ದಿನಾಂಕವಾರು ಅಳಿಸುವ ಅಥವಾ ವ್ಯಕ್ತಿವಾರು ಅಳಿಸುವ ಹೊಸ ಫ್ಯೂಚರ್‌ ಅನ್ನು ಫೇಸ್‌ಬುಕ್‌ ಬಿಡುಗಡೆ ಮಾಡಿದೆ.

“ಜನರು ತಮ್ಮ ಡೇಟಾವನ್ನು ನಿರ್ವಹಿಸುವ ಮತ್ತು ನಿಯಂತ್ರಿಸುವ ಸಾಮರ್ಥ್ಯವನ್ನು ಹೊಂದಿರಬೇಕು ಎಂದು ನಾವು ನಂಬುತ್ತೇವೆ, ಮತ್ತು ಹೆಚ್ಚಿನ ಪಾರದರ್ಶಕತೆ ಮತ್ತು ನಿಯಂತ್ರಣಗಳನ್ನು ಒದಗಿಸುವ ಮೂಲಕ ಜನರ ಗೌಪ್ಯತೆಯನ್ನು ಗೌರವಿಸುವ ಹೊಸ ಮಾರ್ಗಗಳನ್ನು ನಾವು ಅಭಿವೃದ್ಧಿಪಡಿಸುತ್ತೇವೆ.” ಎಂದು ಫೇಸ್‌ಬುಕ್‌ ಹೇಳಿಕೊಂಡಿದೆ.

ಅಳಿಸುವುದು ಹೇಗೆ?

ನಿಮ್ಮ ಫೇಸ್‌ಬುಕ್‌ನಲ್ಲಿ ಪ್ರೈವೆಸಿ ಸೆಟ್ಟಿಂಗ್‌ನಲ್ಲಿ Activity Log ಒಪನ್‌ ಮಾಡಿ. ನಂತರ Manage Activity ಮೇಲೆ ಕ್ಲಿಕ್‌ ಮಾಡಿದರೆ ನೀವು ಫೇಸ್‌ಬುಕ್‌ನಲ್ಲಿ ಇದುವರೆಗೂ ಮಾಡಿದ ಚಟುವಟಿಕೆಗಳೆಲ್ಲವೂ ಗೋಚರಿಸುತ್ತವೆ. ಅವುಗಳಲ್ಲಿ ಬೇಡವಾದುದನ್ನು ಸೆಲೆಕ್ಟ್‌ ಮಾಡಿ ಡಿಲೀಟ್‌ ಮಾಡಬಹುದು.

ನಂತರ Filters ಮೇಲೆ ಕ್ಲಿಕ್‌ ಮಾಡಿದರೆ Categories ತೆರೆದುಕೊಳ್ಳುತ್ತದೆ. ಅದರಲ್ಲಿ ನಿಮ್ಮ ಪೋಸ್ಟ್‌ಗಳು, ನೀವು ಟ್ಯಾಗ್‌ ಆಗಿರುವುದು, ನಿಮ್ಮ ಚಟುವಟಿಕೆಗಳು, ನಿಮ್ಮ ಗ್ರೂಪ್‌ಗಳು ಈ ರೀತಿ ತೆರೆದಕೊಳ್ಳುತ್ತದೆ. ನಿಮಗೆ ಬೇಡವಾಗಿದ್ದನ್ನು ಡಿಲೀಟ್‌ ಮಾಡಬಹುದು.

ಅದರ ಕೆಳಗಿನ Date ಮೇಲೆ ನೀವು ಕ್ಲಿಕ್‌ ಮಾಡಿದರೆ Start Date End Date ಇರುತ್ತದೆ. ಎಂದಿನಿಂದ ಎಂದಿನವರೆಗೆ ನಿಮಗೆ ಪೋಸ್ಟ್‌ಗಳು ಬೇಡ ಅದನ್ನು ನಮೂದಿಸಿ ಡಿಲಿಟ್‌ ಮಾಡಿದರೆ ಅಲ್ಲಿಗೆ ನಿಮ್ಮ ಅನಗತ್ಯ ಪೋಸ್ಟ್‌ಗಳು ಕಾಣೆಯಾಗುತ್ತವೆ.

ಇನ್ನು ಹೆಚ್ಚಿನ ಮಾಹಿತಿಗೆ ಈ ವಿಡಿಯೋ ನೋಡಿ

Facebook का नया "MANAGE ACTIVITY" feature

Facebook के इस नए फीचर से Delete करें अपनी पुराने से पुरानी Photo, Video या Status, सिर्फ एक क्लिक से.

Posted by Tech Tak on Wednesday, June 3, 2020

ಟ್ವಿಟ್ಟರ್‌ನಲ್ಲಿ ಈ ಸಮಸ್ಯೆಗೆ ಬೇರೆ ಪರಿಹಾರ ಕಂಡುಕೊಂಡಿದೆ. ಬ್ರೆಜಿಲ್‌ನಲ್ಲಿ ಅಲ್ಪಕಾಲಿಕ ಟ್ವೀಟ್ಗಳನ್ನು ಕಳುಹಿಸುವ ಸಾಮರ್ಥ್ಯವನ್ನು “ಫ್ಲೀಟ್ಸ್” ಎಂದು ಕರೆಯಲಾಗುತ್ತದೆ – ಇದು 24 ಗಂಟೆಗಳ ನಂತರ ಕಣ್ಮರೆಯಾಗುತ್ತದೆ.

ಫೇಸ್‌ಬುಕ್‌ನ ಅಂಗಸಂಸ್ಥೆಯಾದ ಇನ್‌ಸ್ಟಾಗ್ರಾಮ್ ನಲ್ಲಿನ ಪೋಸ್ಟ್‌ಗಳು ಯಾವಾಗಲೂ ಪೂರ್ವನಿಯೋಜಿತವಾಗಿರುತ್ತವೆ, ಅಂದರೆ ಸ್ವಲ್ಪ ಸಮಯದ ನಂತರ ಸ್ವಯಂಚಾಲಿತವಾಗಿ ಅಳಿಸಲ್ಪಡುತ್ತವೆ. 2017 ರಲ್ಲಿ ಕಂಪನಿಯು “ಆರ್ಕೈವ್” ವೈಶಿಷ್ಟ್ಯವನ್ನು ಪರಿಚಯಿಸಿತು, ಬಳಕೆದಾರರು ಸಾಕಷ್ಟು ಲೈಕ್‌ಗಳಿಲ್ಲದ  ಚಿತ್ರಗಳನ್ನು ಅಳಿಸುವ ಪ್ರವೃತ್ತಿ ಹೆಚ್ಚುತ್ತಿದೆ.


ಇದನ್ನೂ ಓದಿ: ಮೂರೇ ವಾರಗಳಲ್ಲಿ ಟ್ವಿಟ್ಟರ್‌ನಲ್ಲಿ ಮೋದಿಯನ್ನು ಅನ್‌ಫಾಲೋ ಮಾಡಿದ ವೈಟ್‌ಹೌಸ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....