Homeಮುಖಪುಟನಿಮ್ಮ ಹಳೆಯ ಫೇಸ್‌ಬುಕ್‌ ಪೋಸ್ಟ್‌ಗಳನ್ನು ಒಟ್ಟಿಗೆ ಅಳಿಸಬೇಕೆ? ಹೀಗೆ ಮಾಡಿ...

ನಿಮ್ಮ ಹಳೆಯ ಫೇಸ್‌ಬುಕ್‌ ಪೋಸ್ಟ್‌ಗಳನ್ನು ಒಟ್ಟಿಗೆ ಅಳಿಸಬೇಕೆ? ಹೀಗೆ ಮಾಡಿ…

ನಿಮ್ಮ ಮೊಬೈಲ್‌ ಫೇಸ್‌ಬುಕ್‌ ಆಪ್‌ನಲ್ಲಿ ಹಳೆಯ‌ ಪೋಸ್ಟ್‌ಗಳನ್ನು ಒಟ್ಟಿಗೆ ಅಳಿಸುವ, ದಿನಾಂಕವಾರು ಅಳಿಸುವ ಅಥವಾ ವ್ಯಕ್ತಿವಾರು ಅಳಿಸುವ ಹೊಸ ಫ್ಯೂಚರ್‌ ಅನ್ನು ಫೇಸ್‌ಬುಕ್‌ ಬಿಡುಗಡೆ ಮಾಡಿದೆ.

- Advertisement -
- Advertisement -

ಸಾಮಾಜಿಕ ಜಾಲತಾಣಗಳು ಹೊಸದನ್ನು ಕಲಿಯಲು, ಹೆಚ್ಚು ತಿಳಿದುಕೊಳ್ಳಲು, ಬೇಸರ ನಿವಾರಿಸಲು ಬಹಳಷ್ಟು ಸಹಾಯ ಮಾಡಿವೆ. ಆದರೆ ಕೆಲವರಿಗೆ ಇವು ಸಂಕಷ್ಟಗಳನ್ನು ಸಹ ತಂದಿವೆ. ಫೇಸ್‌ಬುಕ್‌ ನಲ್ಲಿ ಎಂದೋ, ಯಾವುದೋ ಮನಸ್ಥಿತಿಯಲ್ಲಿ ಹಾಕಿದ ಪೋಸ್ಟ್‌ಗಳು ಈಗ ಮತ್ತೆ ಕಾಣಿಸಿಕೊಂಡು ಕೆಲವರಿಗೆ ಮುಜುಗರ ಉಂಟು ಮಾಡುತ್ತಿರುವುದು ಹೌದು. ಹತ್ತು ವರ್ಷದ ಹಿಂದೆ ಹಾಕಿದ ಯಾವುದೋ ಫೋಟೊಗೆ ಯಾರಾದರೂ ಲೈಕ್‌ ಕಮೆಂಟ್‌ ಮಾಡಿದರೆ ಸಾಕು, ಅಥವಾ ಮೆಮೋರಿಸ್‌ ರೂಪದಲ್ಲಿ ಅದು ಮತ್ತೆ ಮೇಲೆ ಬಂದು ಕಾಣಿಸಿಕೊಳ್ಳುತ್ತದೆ. ಇದು ಕೆಲವರಿಗೆ ಇಷ್ಟವಾದರೆ ಮತ್ತೆ ಕೆಲವರಿಗೆ ಕಷ್ಟವಾಗುತ್ತಿರಬಹುದು.

ಅಂತಹ ಸಮಸ್ಯೆಗೆ ಫೇಸ್‌ಬುಕ್‌ ಈಗ ಪರಿಹಾರ ನೀಡಿದೆ. ನಿಮ್ಮ ಮೊಬೈಲ್‌ ಫೇಸ್‌ಬುಕ್‌ ಆಪ್‌ನಲ್ಲಿ ಹಳೆಯ‌ ಪೋಸ್ಟ್‌ಗಳನ್ನು ಒಟ್ಟಿಗೆ ಅಳಿಸುವ, ದಿನಾಂಕವಾರು ಅಳಿಸುವ ಅಥವಾ ವ್ಯಕ್ತಿವಾರು ಅಳಿಸುವ ಹೊಸ ಫ್ಯೂಚರ್‌ ಅನ್ನು ಫೇಸ್‌ಬುಕ್‌ ಬಿಡುಗಡೆ ಮಾಡಿದೆ.

“ಜನರು ತಮ್ಮ ಡೇಟಾವನ್ನು ನಿರ್ವಹಿಸುವ ಮತ್ತು ನಿಯಂತ್ರಿಸುವ ಸಾಮರ್ಥ್ಯವನ್ನು ಹೊಂದಿರಬೇಕು ಎಂದು ನಾವು ನಂಬುತ್ತೇವೆ, ಮತ್ತು ಹೆಚ್ಚಿನ ಪಾರದರ್ಶಕತೆ ಮತ್ತು ನಿಯಂತ್ರಣಗಳನ್ನು ಒದಗಿಸುವ ಮೂಲಕ ಜನರ ಗೌಪ್ಯತೆಯನ್ನು ಗೌರವಿಸುವ ಹೊಸ ಮಾರ್ಗಗಳನ್ನು ನಾವು ಅಭಿವೃದ್ಧಿಪಡಿಸುತ್ತೇವೆ.” ಎಂದು ಫೇಸ್‌ಬುಕ್‌ ಹೇಳಿಕೊಂಡಿದೆ.

ಅಳಿಸುವುದು ಹೇಗೆ?

ನಿಮ್ಮ ಫೇಸ್‌ಬುಕ್‌ನಲ್ಲಿ ಪ್ರೈವೆಸಿ ಸೆಟ್ಟಿಂಗ್‌ನಲ್ಲಿ Activity Log ಒಪನ್‌ ಮಾಡಿ. ನಂತರ Manage Activity ಮೇಲೆ ಕ್ಲಿಕ್‌ ಮಾಡಿದರೆ ನೀವು ಫೇಸ್‌ಬುಕ್‌ನಲ್ಲಿ ಇದುವರೆಗೂ ಮಾಡಿದ ಚಟುವಟಿಕೆಗಳೆಲ್ಲವೂ ಗೋಚರಿಸುತ್ತವೆ. ಅವುಗಳಲ್ಲಿ ಬೇಡವಾದುದನ್ನು ಸೆಲೆಕ್ಟ್‌ ಮಾಡಿ ಡಿಲೀಟ್‌ ಮಾಡಬಹುದು.

ನಂತರ Filters ಮೇಲೆ ಕ್ಲಿಕ್‌ ಮಾಡಿದರೆ Categories ತೆರೆದುಕೊಳ್ಳುತ್ತದೆ. ಅದರಲ್ಲಿ ನಿಮ್ಮ ಪೋಸ್ಟ್‌ಗಳು, ನೀವು ಟ್ಯಾಗ್‌ ಆಗಿರುವುದು, ನಿಮ್ಮ ಚಟುವಟಿಕೆಗಳು, ನಿಮ್ಮ ಗ್ರೂಪ್‌ಗಳು ಈ ರೀತಿ ತೆರೆದಕೊಳ್ಳುತ್ತದೆ. ನಿಮಗೆ ಬೇಡವಾಗಿದ್ದನ್ನು ಡಿಲೀಟ್‌ ಮಾಡಬಹುದು.

ಅದರ ಕೆಳಗಿನ Date ಮೇಲೆ ನೀವು ಕ್ಲಿಕ್‌ ಮಾಡಿದರೆ Start Date End Date ಇರುತ್ತದೆ. ಎಂದಿನಿಂದ ಎಂದಿನವರೆಗೆ ನಿಮಗೆ ಪೋಸ್ಟ್‌ಗಳು ಬೇಡ ಅದನ್ನು ನಮೂದಿಸಿ ಡಿಲಿಟ್‌ ಮಾಡಿದರೆ ಅಲ್ಲಿಗೆ ನಿಮ್ಮ ಅನಗತ್ಯ ಪೋಸ್ಟ್‌ಗಳು ಕಾಣೆಯಾಗುತ್ತವೆ.

ಇನ್ನು ಹೆಚ್ಚಿನ ಮಾಹಿತಿಗೆ ಈ ವಿಡಿಯೋ ನೋಡಿ

Facebook का नया "MANAGE ACTIVITY" feature

Facebook के इस नए फीचर से Delete करें अपनी पुराने से पुरानी Photo, Video या Status, सिर्फ एक क्लिक से.

Posted by Tech Tak on Wednesday, June 3, 2020

ಟ್ವಿಟ್ಟರ್‌ನಲ್ಲಿ ಈ ಸಮಸ್ಯೆಗೆ ಬೇರೆ ಪರಿಹಾರ ಕಂಡುಕೊಂಡಿದೆ. ಬ್ರೆಜಿಲ್‌ನಲ್ಲಿ ಅಲ್ಪಕಾಲಿಕ ಟ್ವೀಟ್ಗಳನ್ನು ಕಳುಹಿಸುವ ಸಾಮರ್ಥ್ಯವನ್ನು “ಫ್ಲೀಟ್ಸ್” ಎಂದು ಕರೆಯಲಾಗುತ್ತದೆ – ಇದು 24 ಗಂಟೆಗಳ ನಂತರ ಕಣ್ಮರೆಯಾಗುತ್ತದೆ.

ಫೇಸ್‌ಬುಕ್‌ನ ಅಂಗಸಂಸ್ಥೆಯಾದ ಇನ್‌ಸ್ಟಾಗ್ರಾಮ್ ನಲ್ಲಿನ ಪೋಸ್ಟ್‌ಗಳು ಯಾವಾಗಲೂ ಪೂರ್ವನಿಯೋಜಿತವಾಗಿರುತ್ತವೆ, ಅಂದರೆ ಸ್ವಲ್ಪ ಸಮಯದ ನಂತರ ಸ್ವಯಂಚಾಲಿತವಾಗಿ ಅಳಿಸಲ್ಪಡುತ್ತವೆ. 2017 ರಲ್ಲಿ ಕಂಪನಿಯು “ಆರ್ಕೈವ್” ವೈಶಿಷ್ಟ್ಯವನ್ನು ಪರಿಚಯಿಸಿತು, ಬಳಕೆದಾರರು ಸಾಕಷ್ಟು ಲೈಕ್‌ಗಳಿಲ್ಲದ  ಚಿತ್ರಗಳನ್ನು ಅಳಿಸುವ ಪ್ರವೃತ್ತಿ ಹೆಚ್ಚುತ್ತಿದೆ.


ಇದನ್ನೂ ಓದಿ: ಮೂರೇ ವಾರಗಳಲ್ಲಿ ಟ್ವಿಟ್ಟರ್‌ನಲ್ಲಿ ಮೋದಿಯನ್ನು ಅನ್‌ಫಾಲೋ ಮಾಡಿದ ವೈಟ್‌ಹೌಸ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...