Homeಮುಖಪುಟನಿಮ್ಮ ಹಳೆಯ ಫೇಸ್‌ಬುಕ್‌ ಪೋಸ್ಟ್‌ಗಳನ್ನು ಒಟ್ಟಿಗೆ ಅಳಿಸಬೇಕೆ? ಹೀಗೆ ಮಾಡಿ...

ನಿಮ್ಮ ಹಳೆಯ ಫೇಸ್‌ಬುಕ್‌ ಪೋಸ್ಟ್‌ಗಳನ್ನು ಒಟ್ಟಿಗೆ ಅಳಿಸಬೇಕೆ? ಹೀಗೆ ಮಾಡಿ…

ನಿಮ್ಮ ಮೊಬೈಲ್‌ ಫೇಸ್‌ಬುಕ್‌ ಆಪ್‌ನಲ್ಲಿ ಹಳೆಯ‌ ಪೋಸ್ಟ್‌ಗಳನ್ನು ಒಟ್ಟಿಗೆ ಅಳಿಸುವ, ದಿನಾಂಕವಾರು ಅಳಿಸುವ ಅಥವಾ ವ್ಯಕ್ತಿವಾರು ಅಳಿಸುವ ಹೊಸ ಫ್ಯೂಚರ್‌ ಅನ್ನು ಫೇಸ್‌ಬುಕ್‌ ಬಿಡುಗಡೆ ಮಾಡಿದೆ.

- Advertisement -
- Advertisement -

ಸಾಮಾಜಿಕ ಜಾಲತಾಣಗಳು ಹೊಸದನ್ನು ಕಲಿಯಲು, ಹೆಚ್ಚು ತಿಳಿದುಕೊಳ್ಳಲು, ಬೇಸರ ನಿವಾರಿಸಲು ಬಹಳಷ್ಟು ಸಹಾಯ ಮಾಡಿವೆ. ಆದರೆ ಕೆಲವರಿಗೆ ಇವು ಸಂಕಷ್ಟಗಳನ್ನು ಸಹ ತಂದಿವೆ. ಫೇಸ್‌ಬುಕ್‌ ನಲ್ಲಿ ಎಂದೋ, ಯಾವುದೋ ಮನಸ್ಥಿತಿಯಲ್ಲಿ ಹಾಕಿದ ಪೋಸ್ಟ್‌ಗಳು ಈಗ ಮತ್ತೆ ಕಾಣಿಸಿಕೊಂಡು ಕೆಲವರಿಗೆ ಮುಜುಗರ ಉಂಟು ಮಾಡುತ್ತಿರುವುದು ಹೌದು. ಹತ್ತು ವರ್ಷದ ಹಿಂದೆ ಹಾಕಿದ ಯಾವುದೋ ಫೋಟೊಗೆ ಯಾರಾದರೂ ಲೈಕ್‌ ಕಮೆಂಟ್‌ ಮಾಡಿದರೆ ಸಾಕು, ಅಥವಾ ಮೆಮೋರಿಸ್‌ ರೂಪದಲ್ಲಿ ಅದು ಮತ್ತೆ ಮೇಲೆ ಬಂದು ಕಾಣಿಸಿಕೊಳ್ಳುತ್ತದೆ. ಇದು ಕೆಲವರಿಗೆ ಇಷ್ಟವಾದರೆ ಮತ್ತೆ ಕೆಲವರಿಗೆ ಕಷ್ಟವಾಗುತ್ತಿರಬಹುದು.

ಅಂತಹ ಸಮಸ್ಯೆಗೆ ಫೇಸ್‌ಬುಕ್‌ ಈಗ ಪರಿಹಾರ ನೀಡಿದೆ. ನಿಮ್ಮ ಮೊಬೈಲ್‌ ಫೇಸ್‌ಬುಕ್‌ ಆಪ್‌ನಲ್ಲಿ ಹಳೆಯ‌ ಪೋಸ್ಟ್‌ಗಳನ್ನು ಒಟ್ಟಿಗೆ ಅಳಿಸುವ, ದಿನಾಂಕವಾರು ಅಳಿಸುವ ಅಥವಾ ವ್ಯಕ್ತಿವಾರು ಅಳಿಸುವ ಹೊಸ ಫ್ಯೂಚರ್‌ ಅನ್ನು ಫೇಸ್‌ಬುಕ್‌ ಬಿಡುಗಡೆ ಮಾಡಿದೆ.

“ಜನರು ತಮ್ಮ ಡೇಟಾವನ್ನು ನಿರ್ವಹಿಸುವ ಮತ್ತು ನಿಯಂತ್ರಿಸುವ ಸಾಮರ್ಥ್ಯವನ್ನು ಹೊಂದಿರಬೇಕು ಎಂದು ನಾವು ನಂಬುತ್ತೇವೆ, ಮತ್ತು ಹೆಚ್ಚಿನ ಪಾರದರ್ಶಕತೆ ಮತ್ತು ನಿಯಂತ್ರಣಗಳನ್ನು ಒದಗಿಸುವ ಮೂಲಕ ಜನರ ಗೌಪ್ಯತೆಯನ್ನು ಗೌರವಿಸುವ ಹೊಸ ಮಾರ್ಗಗಳನ್ನು ನಾವು ಅಭಿವೃದ್ಧಿಪಡಿಸುತ್ತೇವೆ.” ಎಂದು ಫೇಸ್‌ಬುಕ್‌ ಹೇಳಿಕೊಂಡಿದೆ.

ಅಳಿಸುವುದು ಹೇಗೆ?

ನಿಮ್ಮ ಫೇಸ್‌ಬುಕ್‌ನಲ್ಲಿ ಪ್ರೈವೆಸಿ ಸೆಟ್ಟಿಂಗ್‌ನಲ್ಲಿ Activity Log ಒಪನ್‌ ಮಾಡಿ. ನಂತರ Manage Activity ಮೇಲೆ ಕ್ಲಿಕ್‌ ಮಾಡಿದರೆ ನೀವು ಫೇಸ್‌ಬುಕ್‌ನಲ್ಲಿ ಇದುವರೆಗೂ ಮಾಡಿದ ಚಟುವಟಿಕೆಗಳೆಲ್ಲವೂ ಗೋಚರಿಸುತ್ತವೆ. ಅವುಗಳಲ್ಲಿ ಬೇಡವಾದುದನ್ನು ಸೆಲೆಕ್ಟ್‌ ಮಾಡಿ ಡಿಲೀಟ್‌ ಮಾಡಬಹುದು.

ನಂತರ Filters ಮೇಲೆ ಕ್ಲಿಕ್‌ ಮಾಡಿದರೆ Categories ತೆರೆದುಕೊಳ್ಳುತ್ತದೆ. ಅದರಲ್ಲಿ ನಿಮ್ಮ ಪೋಸ್ಟ್‌ಗಳು, ನೀವು ಟ್ಯಾಗ್‌ ಆಗಿರುವುದು, ನಿಮ್ಮ ಚಟುವಟಿಕೆಗಳು, ನಿಮ್ಮ ಗ್ರೂಪ್‌ಗಳು ಈ ರೀತಿ ತೆರೆದಕೊಳ್ಳುತ್ತದೆ. ನಿಮಗೆ ಬೇಡವಾಗಿದ್ದನ್ನು ಡಿಲೀಟ್‌ ಮಾಡಬಹುದು.

ಅದರ ಕೆಳಗಿನ Date ಮೇಲೆ ನೀವು ಕ್ಲಿಕ್‌ ಮಾಡಿದರೆ Start Date End Date ಇರುತ್ತದೆ. ಎಂದಿನಿಂದ ಎಂದಿನವರೆಗೆ ನಿಮಗೆ ಪೋಸ್ಟ್‌ಗಳು ಬೇಡ ಅದನ್ನು ನಮೂದಿಸಿ ಡಿಲಿಟ್‌ ಮಾಡಿದರೆ ಅಲ್ಲಿಗೆ ನಿಮ್ಮ ಅನಗತ್ಯ ಪೋಸ್ಟ್‌ಗಳು ಕಾಣೆಯಾಗುತ್ತವೆ.

ಇನ್ನು ಹೆಚ್ಚಿನ ಮಾಹಿತಿಗೆ ಈ ವಿಡಿಯೋ ನೋಡಿ

Facebook का नया "MANAGE ACTIVITY" feature

Facebook के इस नए फीचर से Delete करें अपनी पुराने से पुरानी Photo, Video या Status, सिर्फ एक क्लिक से.

Posted by Tech Tak on Wednesday, June 3, 2020

ಟ್ವಿಟ್ಟರ್‌ನಲ್ಲಿ ಈ ಸಮಸ್ಯೆಗೆ ಬೇರೆ ಪರಿಹಾರ ಕಂಡುಕೊಂಡಿದೆ. ಬ್ರೆಜಿಲ್‌ನಲ್ಲಿ ಅಲ್ಪಕಾಲಿಕ ಟ್ವೀಟ್ಗಳನ್ನು ಕಳುಹಿಸುವ ಸಾಮರ್ಥ್ಯವನ್ನು “ಫ್ಲೀಟ್ಸ್” ಎಂದು ಕರೆಯಲಾಗುತ್ತದೆ – ಇದು 24 ಗಂಟೆಗಳ ನಂತರ ಕಣ್ಮರೆಯಾಗುತ್ತದೆ.

ಫೇಸ್‌ಬುಕ್‌ನ ಅಂಗಸಂಸ್ಥೆಯಾದ ಇನ್‌ಸ್ಟಾಗ್ರಾಮ್ ನಲ್ಲಿನ ಪೋಸ್ಟ್‌ಗಳು ಯಾವಾಗಲೂ ಪೂರ್ವನಿಯೋಜಿತವಾಗಿರುತ್ತವೆ, ಅಂದರೆ ಸ್ವಲ್ಪ ಸಮಯದ ನಂತರ ಸ್ವಯಂಚಾಲಿತವಾಗಿ ಅಳಿಸಲ್ಪಡುತ್ತವೆ. 2017 ರಲ್ಲಿ ಕಂಪನಿಯು “ಆರ್ಕೈವ್” ವೈಶಿಷ್ಟ್ಯವನ್ನು ಪರಿಚಯಿಸಿತು, ಬಳಕೆದಾರರು ಸಾಕಷ್ಟು ಲೈಕ್‌ಗಳಿಲ್ಲದ  ಚಿತ್ರಗಳನ್ನು ಅಳಿಸುವ ಪ್ರವೃತ್ತಿ ಹೆಚ್ಚುತ್ತಿದೆ.


ಇದನ್ನೂ ಓದಿ: ಮೂರೇ ವಾರಗಳಲ್ಲಿ ಟ್ವಿಟ್ಟರ್‌ನಲ್ಲಿ ಮೋದಿಯನ್ನು ಅನ್‌ಫಾಲೋ ಮಾಡಿದ ವೈಟ್‌ಹೌಸ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...