Homeಮುಖಪುಟನಿಮ್ಮ ಹಳೆಯ ಫೇಸ್‌ಬುಕ್‌ ಪೋಸ್ಟ್‌ಗಳನ್ನು ಒಟ್ಟಿಗೆ ಅಳಿಸಬೇಕೆ? ಹೀಗೆ ಮಾಡಿ...

ನಿಮ್ಮ ಹಳೆಯ ಫೇಸ್‌ಬುಕ್‌ ಪೋಸ್ಟ್‌ಗಳನ್ನು ಒಟ್ಟಿಗೆ ಅಳಿಸಬೇಕೆ? ಹೀಗೆ ಮಾಡಿ…

ನಿಮ್ಮ ಮೊಬೈಲ್‌ ಫೇಸ್‌ಬುಕ್‌ ಆಪ್‌ನಲ್ಲಿ ಹಳೆಯ‌ ಪೋಸ್ಟ್‌ಗಳನ್ನು ಒಟ್ಟಿಗೆ ಅಳಿಸುವ, ದಿನಾಂಕವಾರು ಅಳಿಸುವ ಅಥವಾ ವ್ಯಕ್ತಿವಾರು ಅಳಿಸುವ ಹೊಸ ಫ್ಯೂಚರ್‌ ಅನ್ನು ಫೇಸ್‌ಬುಕ್‌ ಬಿಡುಗಡೆ ಮಾಡಿದೆ.

- Advertisement -
- Advertisement -

ಸಾಮಾಜಿಕ ಜಾಲತಾಣಗಳು ಹೊಸದನ್ನು ಕಲಿಯಲು, ಹೆಚ್ಚು ತಿಳಿದುಕೊಳ್ಳಲು, ಬೇಸರ ನಿವಾರಿಸಲು ಬಹಳಷ್ಟು ಸಹಾಯ ಮಾಡಿವೆ. ಆದರೆ ಕೆಲವರಿಗೆ ಇವು ಸಂಕಷ್ಟಗಳನ್ನು ಸಹ ತಂದಿವೆ. ಫೇಸ್‌ಬುಕ್‌ ನಲ್ಲಿ ಎಂದೋ, ಯಾವುದೋ ಮನಸ್ಥಿತಿಯಲ್ಲಿ ಹಾಕಿದ ಪೋಸ್ಟ್‌ಗಳು ಈಗ ಮತ್ತೆ ಕಾಣಿಸಿಕೊಂಡು ಕೆಲವರಿಗೆ ಮುಜುಗರ ಉಂಟು ಮಾಡುತ್ತಿರುವುದು ಹೌದು. ಹತ್ತು ವರ್ಷದ ಹಿಂದೆ ಹಾಕಿದ ಯಾವುದೋ ಫೋಟೊಗೆ ಯಾರಾದರೂ ಲೈಕ್‌ ಕಮೆಂಟ್‌ ಮಾಡಿದರೆ ಸಾಕು, ಅಥವಾ ಮೆಮೋರಿಸ್‌ ರೂಪದಲ್ಲಿ ಅದು ಮತ್ತೆ ಮೇಲೆ ಬಂದು ಕಾಣಿಸಿಕೊಳ್ಳುತ್ತದೆ. ಇದು ಕೆಲವರಿಗೆ ಇಷ್ಟವಾದರೆ ಮತ್ತೆ ಕೆಲವರಿಗೆ ಕಷ್ಟವಾಗುತ್ತಿರಬಹುದು.

ಅಂತಹ ಸಮಸ್ಯೆಗೆ ಫೇಸ್‌ಬುಕ್‌ ಈಗ ಪರಿಹಾರ ನೀಡಿದೆ. ನಿಮ್ಮ ಮೊಬೈಲ್‌ ಫೇಸ್‌ಬುಕ್‌ ಆಪ್‌ನಲ್ಲಿ ಹಳೆಯ‌ ಪೋಸ್ಟ್‌ಗಳನ್ನು ಒಟ್ಟಿಗೆ ಅಳಿಸುವ, ದಿನಾಂಕವಾರು ಅಳಿಸುವ ಅಥವಾ ವ್ಯಕ್ತಿವಾರು ಅಳಿಸುವ ಹೊಸ ಫ್ಯೂಚರ್‌ ಅನ್ನು ಫೇಸ್‌ಬುಕ್‌ ಬಿಡುಗಡೆ ಮಾಡಿದೆ.

“ಜನರು ತಮ್ಮ ಡೇಟಾವನ್ನು ನಿರ್ವಹಿಸುವ ಮತ್ತು ನಿಯಂತ್ರಿಸುವ ಸಾಮರ್ಥ್ಯವನ್ನು ಹೊಂದಿರಬೇಕು ಎಂದು ನಾವು ನಂಬುತ್ತೇವೆ, ಮತ್ತು ಹೆಚ್ಚಿನ ಪಾರದರ್ಶಕತೆ ಮತ್ತು ನಿಯಂತ್ರಣಗಳನ್ನು ಒದಗಿಸುವ ಮೂಲಕ ಜನರ ಗೌಪ್ಯತೆಯನ್ನು ಗೌರವಿಸುವ ಹೊಸ ಮಾರ್ಗಗಳನ್ನು ನಾವು ಅಭಿವೃದ್ಧಿಪಡಿಸುತ್ತೇವೆ.” ಎಂದು ಫೇಸ್‌ಬುಕ್‌ ಹೇಳಿಕೊಂಡಿದೆ.

ಅಳಿಸುವುದು ಹೇಗೆ?

ನಿಮ್ಮ ಫೇಸ್‌ಬುಕ್‌ನಲ್ಲಿ ಪ್ರೈವೆಸಿ ಸೆಟ್ಟಿಂಗ್‌ನಲ್ಲಿ Activity Log ಒಪನ್‌ ಮಾಡಿ. ನಂತರ Manage Activity ಮೇಲೆ ಕ್ಲಿಕ್‌ ಮಾಡಿದರೆ ನೀವು ಫೇಸ್‌ಬುಕ್‌ನಲ್ಲಿ ಇದುವರೆಗೂ ಮಾಡಿದ ಚಟುವಟಿಕೆಗಳೆಲ್ಲವೂ ಗೋಚರಿಸುತ್ತವೆ. ಅವುಗಳಲ್ಲಿ ಬೇಡವಾದುದನ್ನು ಸೆಲೆಕ್ಟ್‌ ಮಾಡಿ ಡಿಲೀಟ್‌ ಮಾಡಬಹುದು.

ನಂತರ Filters ಮೇಲೆ ಕ್ಲಿಕ್‌ ಮಾಡಿದರೆ Categories ತೆರೆದುಕೊಳ್ಳುತ್ತದೆ. ಅದರಲ್ಲಿ ನಿಮ್ಮ ಪೋಸ್ಟ್‌ಗಳು, ನೀವು ಟ್ಯಾಗ್‌ ಆಗಿರುವುದು, ನಿಮ್ಮ ಚಟುವಟಿಕೆಗಳು, ನಿಮ್ಮ ಗ್ರೂಪ್‌ಗಳು ಈ ರೀತಿ ತೆರೆದಕೊಳ್ಳುತ್ತದೆ. ನಿಮಗೆ ಬೇಡವಾಗಿದ್ದನ್ನು ಡಿಲೀಟ್‌ ಮಾಡಬಹುದು.

ಅದರ ಕೆಳಗಿನ Date ಮೇಲೆ ನೀವು ಕ್ಲಿಕ್‌ ಮಾಡಿದರೆ Start Date End Date ಇರುತ್ತದೆ. ಎಂದಿನಿಂದ ಎಂದಿನವರೆಗೆ ನಿಮಗೆ ಪೋಸ್ಟ್‌ಗಳು ಬೇಡ ಅದನ್ನು ನಮೂದಿಸಿ ಡಿಲಿಟ್‌ ಮಾಡಿದರೆ ಅಲ್ಲಿಗೆ ನಿಮ್ಮ ಅನಗತ್ಯ ಪೋಸ್ಟ್‌ಗಳು ಕಾಣೆಯಾಗುತ್ತವೆ.

ಇನ್ನು ಹೆಚ್ಚಿನ ಮಾಹಿತಿಗೆ ಈ ವಿಡಿಯೋ ನೋಡಿ

Facebook का नया "MANAGE ACTIVITY" feature

Facebook के इस नए फीचर से Delete करें अपनी पुराने से पुरानी Photo, Video या Status, सिर्फ एक क्लिक से.

Posted by Tech Tak on Wednesday, June 3, 2020

ಟ್ವಿಟ್ಟರ್‌ನಲ್ಲಿ ಈ ಸಮಸ್ಯೆಗೆ ಬೇರೆ ಪರಿಹಾರ ಕಂಡುಕೊಂಡಿದೆ. ಬ್ರೆಜಿಲ್‌ನಲ್ಲಿ ಅಲ್ಪಕಾಲಿಕ ಟ್ವೀಟ್ಗಳನ್ನು ಕಳುಹಿಸುವ ಸಾಮರ್ಥ್ಯವನ್ನು “ಫ್ಲೀಟ್ಸ್” ಎಂದು ಕರೆಯಲಾಗುತ್ತದೆ – ಇದು 24 ಗಂಟೆಗಳ ನಂತರ ಕಣ್ಮರೆಯಾಗುತ್ತದೆ.

ಫೇಸ್‌ಬುಕ್‌ನ ಅಂಗಸಂಸ್ಥೆಯಾದ ಇನ್‌ಸ್ಟಾಗ್ರಾಮ್ ನಲ್ಲಿನ ಪೋಸ್ಟ್‌ಗಳು ಯಾವಾಗಲೂ ಪೂರ್ವನಿಯೋಜಿತವಾಗಿರುತ್ತವೆ, ಅಂದರೆ ಸ್ವಲ್ಪ ಸಮಯದ ನಂತರ ಸ್ವಯಂಚಾಲಿತವಾಗಿ ಅಳಿಸಲ್ಪಡುತ್ತವೆ. 2017 ರಲ್ಲಿ ಕಂಪನಿಯು “ಆರ್ಕೈವ್” ವೈಶಿಷ್ಟ್ಯವನ್ನು ಪರಿಚಯಿಸಿತು, ಬಳಕೆದಾರರು ಸಾಕಷ್ಟು ಲೈಕ್‌ಗಳಿಲ್ಲದ  ಚಿತ್ರಗಳನ್ನು ಅಳಿಸುವ ಪ್ರವೃತ್ತಿ ಹೆಚ್ಚುತ್ತಿದೆ.


ಇದನ್ನೂ ಓದಿ: ಮೂರೇ ವಾರಗಳಲ್ಲಿ ಟ್ವಿಟ್ಟರ್‌ನಲ್ಲಿ ಮೋದಿಯನ್ನು ಅನ್‌ಫಾಲೋ ಮಾಡಿದ ವೈಟ್‌ಹೌಸ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...