Homeಮುಖಪುಟ2,500 ಕೋಟಿ ಮೌಲ್ಯದ ಹೆರಾಯಿನ್ ವಶಪಡಿಸಿಕೊಂಡ ದೆಹಲಿ ಪೊಲೀಸರು

2,500 ಕೋಟಿ ಮೌಲ್ಯದ ಹೆರಾಯಿನ್ ವಶಪಡಿಸಿಕೊಂಡ ದೆಹಲಿ ಪೊಲೀಸರು

- Advertisement -
- Advertisement -

ದೆಹಲಿಯ ಫರಿದಾಬಾದ್‌ನ ಮನೆಯೊಂದರಲ್ಲಿ 2,500 ಕೋಟಿಗಿಂತ ಹೆಚ್ಚು ಮೌಲ್ಯದ 354 ಕೆಜಿ ಹೆರಾಯಿನ್‌ ಅನ್ನು ದೆಹಲಿ ಪೊಲೀಸರು ವಶಪಡಿಸಿಕೊಂಡಿದ್ದು, ಅತಿದೊಡ್ಡ ಹೆರಾಯಿನ್ ಸಾಗಣೆ ಜಾಲವನ್ನು ಬೇಧಿಸಿದ್ದಾರೆ.

ಅಫ್ಘಾನಿಸ್ತಾನ, ಯುರೋಪ್ ಮತ್ತು ಭಾರತದ ಕೆಲವು ಭಾಗಗಳಲ್ಲಿ ಹರಡಿರುವ ಅಂತಾರಾಷ್ಟ್ರೀಯ ಮಟ್ಟದ ಬೃಹತ್ ಡ್ರಗ್ಸ್​ ಜಾಲವನ್ನು ಬೇಧಿಸಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ. ಈವರೆಗೆ ನಾಲ್ಕು ಜನರನ್ನು ಬಂಧಿಸಲಾಗಿದ್ದು, ಪ್ರಕರಣದಲ್ಲಿ ’ಮಾದಕ ದ್ರವ್ಯ ಭಯೋತ್ಪಾದನೆ’ ಕೋನವನ್ನು ತನಿಖೆ ನಡೆಸುತ್ತಿರುವುದಾಗಿ, ಶಂಕಿತರ ವಿಚಾರಣೆಯನ್ನು ಪ್ರಾರಂಭಿಸಿರುವುದ್ದಾಗಿ ಪೊಲೀಸರು ತಿಳಿಸಿದ್ದಾರೆ.

“ಅಫ್ಘಾನಿಸ್ತಾನಿ ಹಜರತ್ ಅಲಿ, ಕಾಶ್ಮೀರದ ಅನಂತ್‌ನಾಗ್ ನಿವಾಸಿ ರಿಜ್ವಾನ್ ಅಹ್ಮದ್, ಪಂಜಾಬ್‌ನ ಜಲಂಧರ್‌ನ ಗುರ್ಜೋತ್ ಸಿಂಗ್ ಮತ್ತು ಗುರ್ದೀಪ್ ಸಿಂಗ್ ಎಂಬುವವರನ್ನು‍ ಪೊಲೀಸರು ಬಂಧಿಸಿದ್ದಾರೆ. ಈ ದಂಧೆ ಅಫ್ಘಾನಿಸ್ತಾನ, ಯುರೋಪ್ ಮತ್ತು ಭಾರತದ ಹಲವಾರು ಭಾಗಗಳಲ್ಲಿ ಹರಡಿದೆ” ಎಂದು ದೆಹಲಿ ಪೊಲೀಸ್ ವಿಶೇಷ ಸೆಲ್​​ನ ನೀರಜ್​ ಠಾಕೂರ್ ತಿಳಿಸಿದ್ದಾರೆ. ​

ಇದನ್ನೂ ಓದಿ: ಬಿಜೆಪಿ ಭ್ರಷ್ಟಾಚಾರಕ್ಕೆ ಬೇಸತ್ತು ಆಮ್‌ ಆದ್ಮಿ ಪಕ್ಷ ಸೇರಿದ ವಿರಾಜಪೇಟೆ ಮಾಜಿ ಶಾಸಕ ಎಚ್.ಡಿ.ಬಸವರಾಜು

354 ಕೆಜಿ ಹೆರಾಯಿನ್‌ಗೆ ಬಳಸಿದ 100 ಕೆಜಿಗಿಂತ ಹೆಚ್ಚು ರಾಸಾಯನಿಕಗಳನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಡ್ರಗ್ಸ್‌ನ ಒಟ್ಟಾರೆ ಅಂತರರಾಷ್ಟ್ರೀಯ ಮೌಲ್ಯ 2,500 ಕೋಟಿಗಿಂತ ಹೆಚ್ಚಿದ್ದು, ಇದನ್ನು ಪಂಜಾಬ್‌ಗೆ ಕಳುಹಿಸಲು ಉದ್ದೇಶಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Rs 2,500 Crore Worth Heroin Seized Near Delhi. This Is What It Looks Like
ಪೊಲೀಸರು ವಶಪಡಿಸಿಕೊಂಡಿರುವ ಹೆರಾಯಿನ್

ಇರಾನ್‌ನ ಚಬಹಾರ್ ಬಂದರಿನ ಮೂಲಕ ಮಹಾರಾಷ್ಟ್ರದ ಮುಂಬೈಗೆ ಜವಾಹರ್ ಲಾಲ್ ನೆಹರು ಬಂದರಿನ ಮೂಲಕ ಅಫ್ಘಾನಿಸ್ತಾನದಿಂದ ಡ್ರಗ್ಸ್‌ ತರಲಾಗಿದೆ. ಗೋಣಿ ಚೀಲಗಳಲ್ಲಿ ಮತ್ತು ಪೆಟ್ಟಿಗೆಗಳಲ್ಲಿ ಹೆರಾಯಿನ್ ಅಡಗಿಸಿಡಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.

“ಅಫ್ಘಾನಿಸ್ತಾನದಿಂದ ತರಲಾದ ಡ್ರಗ್ಸ್​​ನ್ನು ಮಧ್ಯಪ್ರದೇಶದ ಶಿವಪುರಿ ಸಮೀಪ ಇರುವ ಕಾರ್ಖಾನೆಯಲ್ಲಿ ಇನ್ನಷ್ಟು ಸಂಸ್ಕರಿಸಲಾಗಿತ್ತು. ಅದನ್ನು ಅಡಗಿಸಿಡಲು ಫರಿದಾಬಾದ್​ನಲ್ಲಿ ಬಾಡಿಗೆ ಮನೆಯನ್ನೂ ಪಡೆಯಲಾಗಿದೆ. ನಂತರ ಇದನ್ನು ದೆಹಲಿ, ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ಜಮ್ಮು ಮತ್ತು ಕಾಶ್ಮೀರಗಳಲ್ಲಿ ಮಾರಾಟ ಮಾಡಲು ಯೋಜಿಸಲಾಗಿತ್ತು” ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಈ ಡ್ರಗ್ಸ್ ದಂಧೆಯ ಹಿಂದಿನ ಮಾಸ್ಟರ್ ಮೈಂಡ್ ನವಪ್ರೀತ್ ಸಿಂಗ್ ಪೋರ್ಚುಗಲ್‌ನಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಪಂಜಾಬಿನಿಂದ ಬಂಧಿಸಿರುವ ಆರೋಪಿ ಮಾಹಿತಿ ನೀಡಿದ್ದಾರೆ. ಇದಕ್ಕೆ ಹಣಕಾಸು ಸಹಕಾರ ಪಾಕಿಸ್ತಾನದಿಂದ ಸಿಗುತ್ತಿದೆ ಎಂಬ ಮಾಹಿತಿಯೂ ಸಿಕ್ಕಿದೆ ಎಂದು ಹೇಳಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.


ಇದನ್ನೂ ಓದಿ: ಆರೋಗ್ಯ ಸರಿಯಿಲ್ಲ ಎಂದಿದ್ದ ಪ್ರಜ್ಞಾ ಠಾಕೂರ್‌‌ – ಡ್ಯಾನ್ಸ್‌ ಮಾಡುವ ವಿಡಿಯೊ ವೈರಲ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...