Homeಮುಖಪುಟ2,500 ಕೋಟಿ ಮೌಲ್ಯದ ಹೆರಾಯಿನ್ ವಶಪಡಿಸಿಕೊಂಡ ದೆಹಲಿ ಪೊಲೀಸರು

2,500 ಕೋಟಿ ಮೌಲ್ಯದ ಹೆರಾಯಿನ್ ವಶಪಡಿಸಿಕೊಂಡ ದೆಹಲಿ ಪೊಲೀಸರು

- Advertisement -
- Advertisement -

ದೆಹಲಿಯ ಫರಿದಾಬಾದ್‌ನ ಮನೆಯೊಂದರಲ್ಲಿ 2,500 ಕೋಟಿಗಿಂತ ಹೆಚ್ಚು ಮೌಲ್ಯದ 354 ಕೆಜಿ ಹೆರಾಯಿನ್‌ ಅನ್ನು ದೆಹಲಿ ಪೊಲೀಸರು ವಶಪಡಿಸಿಕೊಂಡಿದ್ದು, ಅತಿದೊಡ್ಡ ಹೆರಾಯಿನ್ ಸಾಗಣೆ ಜಾಲವನ್ನು ಬೇಧಿಸಿದ್ದಾರೆ.

ಅಫ್ಘಾನಿಸ್ತಾನ, ಯುರೋಪ್ ಮತ್ತು ಭಾರತದ ಕೆಲವು ಭಾಗಗಳಲ್ಲಿ ಹರಡಿರುವ ಅಂತಾರಾಷ್ಟ್ರೀಯ ಮಟ್ಟದ ಬೃಹತ್ ಡ್ರಗ್ಸ್​ ಜಾಲವನ್ನು ಬೇಧಿಸಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ. ಈವರೆಗೆ ನಾಲ್ಕು ಜನರನ್ನು ಬಂಧಿಸಲಾಗಿದ್ದು, ಪ್ರಕರಣದಲ್ಲಿ ’ಮಾದಕ ದ್ರವ್ಯ ಭಯೋತ್ಪಾದನೆ’ ಕೋನವನ್ನು ತನಿಖೆ ನಡೆಸುತ್ತಿರುವುದಾಗಿ, ಶಂಕಿತರ ವಿಚಾರಣೆಯನ್ನು ಪ್ರಾರಂಭಿಸಿರುವುದ್ದಾಗಿ ಪೊಲೀಸರು ತಿಳಿಸಿದ್ದಾರೆ.

“ಅಫ್ಘಾನಿಸ್ತಾನಿ ಹಜರತ್ ಅಲಿ, ಕಾಶ್ಮೀರದ ಅನಂತ್‌ನಾಗ್ ನಿವಾಸಿ ರಿಜ್ವಾನ್ ಅಹ್ಮದ್, ಪಂಜಾಬ್‌ನ ಜಲಂಧರ್‌ನ ಗುರ್ಜೋತ್ ಸಿಂಗ್ ಮತ್ತು ಗುರ್ದೀಪ್ ಸಿಂಗ್ ಎಂಬುವವರನ್ನು‍ ಪೊಲೀಸರು ಬಂಧಿಸಿದ್ದಾರೆ. ಈ ದಂಧೆ ಅಫ್ಘಾನಿಸ್ತಾನ, ಯುರೋಪ್ ಮತ್ತು ಭಾರತದ ಹಲವಾರು ಭಾಗಗಳಲ್ಲಿ ಹರಡಿದೆ” ಎಂದು ದೆಹಲಿ ಪೊಲೀಸ್ ವಿಶೇಷ ಸೆಲ್​​ನ ನೀರಜ್​ ಠಾಕೂರ್ ತಿಳಿಸಿದ್ದಾರೆ. ​

ಇದನ್ನೂ ಓದಿ: ಬಿಜೆಪಿ ಭ್ರಷ್ಟಾಚಾರಕ್ಕೆ ಬೇಸತ್ತು ಆಮ್‌ ಆದ್ಮಿ ಪಕ್ಷ ಸೇರಿದ ವಿರಾಜಪೇಟೆ ಮಾಜಿ ಶಾಸಕ ಎಚ್.ಡಿ.ಬಸವರಾಜು

354 ಕೆಜಿ ಹೆರಾಯಿನ್‌ಗೆ ಬಳಸಿದ 100 ಕೆಜಿಗಿಂತ ಹೆಚ್ಚು ರಾಸಾಯನಿಕಗಳನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಡ್ರಗ್ಸ್‌ನ ಒಟ್ಟಾರೆ ಅಂತರರಾಷ್ಟ್ರೀಯ ಮೌಲ್ಯ 2,500 ಕೋಟಿಗಿಂತ ಹೆಚ್ಚಿದ್ದು, ಇದನ್ನು ಪಂಜಾಬ್‌ಗೆ ಕಳುಹಿಸಲು ಉದ್ದೇಶಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Rs 2,500 Crore Worth Heroin Seized Near Delhi. This Is What It Looks Like
ಪೊಲೀಸರು ವಶಪಡಿಸಿಕೊಂಡಿರುವ ಹೆರಾಯಿನ್

ಇರಾನ್‌ನ ಚಬಹಾರ್ ಬಂದರಿನ ಮೂಲಕ ಮಹಾರಾಷ್ಟ್ರದ ಮುಂಬೈಗೆ ಜವಾಹರ್ ಲಾಲ್ ನೆಹರು ಬಂದರಿನ ಮೂಲಕ ಅಫ್ಘಾನಿಸ್ತಾನದಿಂದ ಡ್ರಗ್ಸ್‌ ತರಲಾಗಿದೆ. ಗೋಣಿ ಚೀಲಗಳಲ್ಲಿ ಮತ್ತು ಪೆಟ್ಟಿಗೆಗಳಲ್ಲಿ ಹೆರಾಯಿನ್ ಅಡಗಿಸಿಡಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.

“ಅಫ್ಘಾನಿಸ್ತಾನದಿಂದ ತರಲಾದ ಡ್ರಗ್ಸ್​​ನ್ನು ಮಧ್ಯಪ್ರದೇಶದ ಶಿವಪುರಿ ಸಮೀಪ ಇರುವ ಕಾರ್ಖಾನೆಯಲ್ಲಿ ಇನ್ನಷ್ಟು ಸಂಸ್ಕರಿಸಲಾಗಿತ್ತು. ಅದನ್ನು ಅಡಗಿಸಿಡಲು ಫರಿದಾಬಾದ್​ನಲ್ಲಿ ಬಾಡಿಗೆ ಮನೆಯನ್ನೂ ಪಡೆಯಲಾಗಿದೆ. ನಂತರ ಇದನ್ನು ದೆಹಲಿ, ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ಜಮ್ಮು ಮತ್ತು ಕಾಶ್ಮೀರಗಳಲ್ಲಿ ಮಾರಾಟ ಮಾಡಲು ಯೋಜಿಸಲಾಗಿತ್ತು” ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಈ ಡ್ರಗ್ಸ್ ದಂಧೆಯ ಹಿಂದಿನ ಮಾಸ್ಟರ್ ಮೈಂಡ್ ನವಪ್ರೀತ್ ಸಿಂಗ್ ಪೋರ್ಚುಗಲ್‌ನಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಪಂಜಾಬಿನಿಂದ ಬಂಧಿಸಿರುವ ಆರೋಪಿ ಮಾಹಿತಿ ನೀಡಿದ್ದಾರೆ. ಇದಕ್ಕೆ ಹಣಕಾಸು ಸಹಕಾರ ಪಾಕಿಸ್ತಾನದಿಂದ ಸಿಗುತ್ತಿದೆ ಎಂಬ ಮಾಹಿತಿಯೂ ಸಿಕ್ಕಿದೆ ಎಂದು ಹೇಳಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.


ಇದನ್ನೂ ಓದಿ: ಆರೋಗ್ಯ ಸರಿಯಿಲ್ಲ ಎಂದಿದ್ದ ಪ್ರಜ್ಞಾ ಠಾಕೂರ್‌‌ – ಡ್ಯಾನ್ಸ್‌ ಮಾಡುವ ವಿಡಿಯೊ ವೈರಲ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...