Homeಮುಖಪುಟದೆಹಲಿ | ಅಂಬೇಡ್ಕರ್, ಭಗತ್ ಸಿಂಗ್ ಫೋಟೋಗಳನ್ನು ಸಿಎಂ ಕಚೇರಿಯಿಂದ ತೆಗೆಯಲಾಗಿದೆ : ಎಎಪಿ ಆರೋಪ

ದೆಹಲಿ | ಅಂಬೇಡ್ಕರ್, ಭಗತ್ ಸಿಂಗ್ ಫೋಟೋಗಳನ್ನು ಸಿಎಂ ಕಚೇರಿಯಿಂದ ತೆಗೆಯಲಾಗಿದೆ : ಎಎಪಿ ಆರೋಪ

- Advertisement -
- Advertisement -

ದೆಹಲಿಯಲ್ಲಿ ಬಿಜೆಪಿ ಅಧಿಕಾರವಹಿಸಿಕೊಂಡ ಬೆನ್ನಲ್ಲೇ ಮುಖ್ಯಮಂತ್ರಿ ಕಚೇರಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಫೋಟೋಗಳನ್ನು ತೆಗೆದು, ಆ ಜಾಗಕ್ಕೆ ಮಹಾತ್ಮ ಗಾಂಧಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಫೋಟೋಗಳನ್ನು ಹಾಕಲಾಗಿದೆ ಎಂದು ಎಎಪಿ ಸೋಮವಾರ (ಫೆ.24) ಆರೋಪಿಸಿದೆ.

ನೂತನ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಎಎಪಿಯ ಆರೋಪವನ್ನು ತಿರಸ್ಕರಿಸಿದ್ದು, ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಫೋಟೋಗಳು ನನ್ನ ಕಚೇರಿಯಲ್ಲಿವೆ ಎಂದು ಹೇಳಿದ್ದಾರೆ.

ತಾನು ಅಧಿಕಾರದಲ್ಲಿದ್ದಾಗ ಮುಖ್ಯಮಂತ್ರಿ ಕಚೇರಿಯಲ್ಲಿ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಫೋಟೋಗಳು ಇದ್ದಿದ್ದು, ರೇಖಾ ಗುಪ್ತಾ ಅವರು ಸಿಎಂ ಆದ ಬಳಿಕ ಕಚೇರಿಯಲ್ಲಿ ಮಹಾತ್ಮ ಗಾಂಧಿ, ರಾಷ್ಟ್ರಪತಿ ಮುರ್ಮು ಮತ್ತು ಪ್ರಧಾನಿ ಮೋದಿ ಅವರ ಫೋಟೋಗಳು ಇರುವುದನ್ನು ಮಾಜಿ ಮುಖ್ಯಮಂತ್ರಿ ಅತಿಶಿ ಮರ್ಲೇನಾ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಬಿಜೆಪಿಯ ದಲಿತ ವಿರೋಧಿ ಮನಸ್ಥಿತಿ ಎಲ್ಲರಿಗೂ ಗೊತ್ತಿದೆ. ಇಂದು, ಅದರ ದಲಿತ ವಿರೋಧಿ ಮನಸ್ಥಿತಿಯ ಪುರಾವೆಗಳನ್ನು ಪ್ರಸ್ತುತಪಡಿಸಲಾಗಿದೆ. ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಸರ್ಕಾರದ ಪ್ರತಿಯೊಂದು ಕಚೇರಿಯಲ್ಲೂ ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಶಹೀದ್ ಭಗತ್ ಸಿಂಗ್ ಅವರ ಫೋಟೋಗಳನ್ನು ಹಾಕಿದ್ದರು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ, ಅದು ಈ ಎರಡೂ ಫೋಟೋಗಳನ್ನು ಮುಖ್ಯಮಂತ್ರಿ ಕಚೇರಿಯಿಂದ ತೆಗೆದು ಹಾಕಿದೆ. ಬಿಜೆಪಿ ದಲಿತ ವಿರೋಧಿ ಮತ್ತು ಸಿಖ್ ವಿರೋಧಿ ಪಕ್ಷ ಎಂಬುವುದನ್ನು ಇದು ತೋರಿಸುತ್ತದೆ” ಎಂದು ಅತಿಶಿ ಅವರು ಮಾಧ್ಯಮಗಳ ಮುಂದೆ ಹೇಳಿದ್ದಾರೆ.

ಅತಿಶಿ ಹೇಳಿಕೆ ಬೆಂಬಲ ವ್ಯಕ್ತಪಡಿಸಿದೆ ಅರವಿಂದ್ ಕೇಜ್ರಿವಾಲ್ ಅವರು, “ಅಂಬೇಡ್ಕರ್ ಅವರ ಫೋಟೋವನ್ನು ತೆಗೆದುಹಾಕಿರುವುದು ಲಕ್ಷಾಂತರ ದಲಿತ ಅನುಯಾಯಿಗಳಿಗೆ ನೋವುಂಟು ಮಾಡಿದೆ” ಎಂದಿದ್ದಾರೆ.

“ದೆಹಲಿಯ ಹೊಸ ಬಿಜೆಪಿ ಸರ್ಕಾರ ಬಾಬಾಸಾಹೇಬ್ ಅವರ ಫೋಟೋ ತೆಗೆದು ಪ್ರಧಾನಿ ಮೋದಿಯವರ ಫೋಟೋ ಹಾಕಿದೆ. ಇದು ಸರಿಯಲ್ಲ. ಇದು ಬಾಬಾಸಾಹೇಬ್ ಅವರ ಲಕ್ಷಾಂತರ ಅನುಯಾಯಿಗಳಿಗೆ ನೋವುಂಟು ಮಾಡಿದೆ. ನಾನು ಬಿಜೆಪಿಗೆ ಒಂದು ವಿನಂತಿ ಮಾಡುತ್ತೇನೆ. ನೀವು ಪ್ರಧಾನಿಯವರ ಫೋಟೋ ಹಾಕಬಹುದು. ಆದರೆ, ಬಾಬಾಸಾಹೇಬ್ ಅವರ ಫೋಟೋ ತೆಗೆಯಬೇಡಿ. ಅವರ ಫೋಟೋ ಅಲ್ಲೇ ಇರಲಿ” ಎಂದು ಕೇಜ್ರಿವಾಲ್ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.

ನೂತನ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಎಎಪಿಯ ಆರೋಪವನ್ನು ತಳ್ಳಿ ಹಾಕಿದ್ದು, ದೆಹಲಿ ಸರ್ಕಾರವು ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಯಾವುದೇ ಫೋಟೋಗಳನ್ನು ತೆಗೆದು ಹಾಕಿಲ್ಲ ಎಂದಿದ್ದಾರೆ.

ಎಎಪಿ ವಿರುದ್ಧ ವಾಗ್ದಾಳಿ ನಡೆಸಿರುವ ಗುಪ್ತಾ ಅವರು “ಕೇಜ್ರಿವಾಲ್ ನೇತೃತ್ವದ ಪಕ್ಷವು ಬಿಆರ್ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರನ್ನು ಮುಂದಿಟ್ಟುಕೊಂಡು ತಮ್ಮ ಭ್ರಷ್ಟಾಚಾರ ಮತ್ತು ದುಷ್ಕೃತ್ಯಗಳನ್ನು ಮಾಚುತ್ತಿದೆ” ಎಂದು ಹೇಳಿದ್ದಾರೆ.

ಒಂದು ವಿಡಿಯೋದಲ್ಲಿ, ಮಹಾತ್ಮ ಗಾಂಧಿ, ರಾಷ್ಟ್ರಪತಿ ಮುರ್ಮು ಮತ್ತು ಪ್ರಧಾನಿ ಮೋದಿ ಅವರ ಫೋಟೋಗಳು ಸಿಎಂ ರೇಖಾ ಗುಪ್ತಾ ಅವರು ಕುಳಿತಿದ್ದ ಸ್ಥಳದ ಹಿಂದೆ ಕಂಡು ಬಂದಿದೆ. ಈ ಹಿಂದೆ ಅಲ್ಲಿ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಫೋಟೋಗಳು ಇತ್ತು ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ದ್ವೇಷ ಭಾಷಣ ಪ್ರಕರಣ | ಕೇರಳ ನ್ಯಾಯಾಲಯಕ್ಕೆ ಶರಣಾದ ಬಿಜೆಪಿ ನಾಯಕ ಪಿ.ಸಿ.ಜಾರ್ಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

ಕಳೆದ 35 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿದ್ದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಭರವಸೆಯನ್ನು ಒಳಮೀಸಲಾತಿ ಹೋರಾಟಗಾರರು ಹೊಂದಿದ್ದರು.  ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಎರಡು ವರ್ಷಗಳಿಂದ ನಿರಂತರವಾಗಿ...

ನೇಪಾಳದ ನೂತನ ಪ್ರಧಾನಿಯಾಗಿ 35ವರ್ಷದ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ

ಕಠ್ಮಂಡು: 'ಬಾಲೆನ್' ಎಂದು ಪ್ರೀತಿಯಿಂದ ಕರೆಯಲ್ಪಡುವ ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಹಿಮಾಲಯನ್ ರಾಷ್ಟ್ರದಲ್ಲಿ ಉನ್ನತ ಕಾರ್ಯಕಾರಿ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕರಾಗಿ ಬಾಲೆನ್...

ಶಿವನ ಅವತಾರ ಎಂದು ಹೇಳಿಕೊಳ್ಳುತ್ತಿದ್ದ ಋುಷಿಕೇಶ್ ವೈದ್ಯ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ: ಎಫ್‌ಐಆರ್ ನಂತರ ದೇವಮಾನವ ಪರಾರಿ

ವಸಾಯಿ: ಶಿವನ ಅವತಾರ ಎಂದು ಹೇಳಿಕೊಂಡು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಋಷಿಕೇಶ್ ವೈದ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ವಸಾಯಿ-ವಿರಾರ್ ಪ್ರದೇಶ...

ಜ್ಯೋತಿಷಿ ಅಶೋಕ್ ಖರತ್ ಲೈಂಗಿಕ ದೌರ್ಜನ್ಯ; ಸಂತ್ರಸ್ತರ ವಿಡಿಯೋ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್: ದೇವೇಂದ್ರ ಫಡ್ನವೀಸ್

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರಿಂದ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯರ ಅಶ್ಲೀಲ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ...

ಕ್ಷಿಪಣಿಗಳ ಮೇಲೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ಧನ್ಯವಾದ ಸಂದೇಶ ಬರೆದ ಇರಾನ್

ಯುನೈಟೆಡ್ ಸ್ಟೇಟ್ಸ್-ಇಸ್ರೇಲ್ ವಿರುದ್ಧದ ಯುದ್ಧದ ಮಧ್ಯೆ ಇರಾನ್‌ನೊಂದಿಗೆ ಒಗ್ಗಟ್ಟನ್ನು ತೋರಿಸಿದ ರಾಷ್ಟ್ರಗಳಿಗೆ ಇರಾನ್‌ ತನ್ನ ಕ್ಷಿಪಣಿಗಳು ಕೃತಜ್ಞತಾ ಸಂದೇಶ ಬರೆದಿದೆ. ಕ್ಷಿಪಣಿಗಳ ಮೇಲೆ ಬರೆಯಲಾದ ಸಂದೇಶಗಲ್ಲಿ "ಭಾರತದ ಜನರಿಗೆ ಧನ್ಯವಾದಗಳು" ಎಂದು ಕಂಡುಬಂದಿದೆ. ಜೊತೆಗೆ,...

ಬಿಜೆಪಿಗೆ ಉಳಿದೆಲ್ಲಾ ಪಕ್ಷಗಳಿಗಿಂತ 10 ಪಟ್ಟು ಹೆಚ್ಚು ದೇಣಿಗೆ: ವರದಿ

2024–25ರ ಆರ್ಥಿಕ ವರ್ಷದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ( ಬಿಜೆಪಿ ) ಇತರ ಎಲ್ಲಾ ರಾಷ್ಟ್ರೀಯ ಪಕ್ಷಗಳು ಒಟ್ಟು ಸೇರಿಸಿ ಪಡೆದ ದೇಣಿಗೆಗಿಂತ ಸುಮಾರು ಹತ್ತು ಪಟ್ಟು ಹೆಚ್ಚು ದೇಣಿಗೆ ಪಡೆದಿದೆ...

ವಿಶಾಖಪಟ್ಟಣ| ಕುಡಿದ ಮತ್ತಿನಲ್ಲಿ ಎಪಿಎಸ್‌ಆರ್‌ಟಿಸಿ ಬಸ್‌ ಅಪಹರಿಸಿದ ವ್ಯಕ್ತಿ

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಎಪಿಎಸ್‌ಆರ್‌ಟಿಸಿ ಬಸ್ಸನ್ನು ಅಪಹರಿಸಿ ಸುಮಾರು ಒಂದು ಕಿಲೋಮೀಟರ್ ಅಜಾಗರೂಕತೆಯಿಂದ ಚಲಾಯಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆಘಾತಕಾರಿ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ಪ್ರತ್ಯಕ್ಷ್ಯದರ್ಶಿಗಳ ಪ್ರಕಾರ, ಮಾರ್ಚ್ 26 ರ ಗುರುವಾರ ಬಸ್...

ಕರ್ನಾಟಕ ವಿಧಾನಸಭೆಯಲ್ಲಿ ಐಪಿಎಲ್ ಟಿಕೆಟ್ ವಿವಾದ; ಶಾಸಕರನ್ನು ಟೀಕಿಸಿದ ತೇಜಸ್ವಿ ಸೂರ್ಯ ವಿರುದ್ಧ ಡಿಕೆಶಿ ವಾಗ್ದಾಳಿ

ಶಾಸಕರಿಗೆ ಐಪಿಎಲ್ 2026 ಟಿಕೆಟ್ ಹಂಚಿಕೆ ವಿವಾದದ ನಡುವೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕ ತೇಜಸ್ವಿ ಸೂರ್ಯ ವಿರುದ್ಧ ಕಿಡಿಕಾರಿದ್ದಾರೆ  ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳಿಗೆ ವಿಐಪಿ ಟಿಕೆಟ್‌ಗಳಿಗೆ...

ವಿಚಾರಣೆಯ ನಂತರವೂ 8 ಲಕ್ಷ ಮತದಾರರ ಹೆಸರು ಅಳಿಸಲಾಗಿದೆ; ಬಂಗಾಳದಲ್ಲಿ ಎನ್.ಆರ್.ಸಿ ಇಲ್ಲ: ಮಮತಾ ಬ್ಯಾನರ್ಜಿ

ಮೊದಲ ಪೂರಕ ಮತದಾರರ ಪಟ್ಟಿ ಪ್ರಕಟವಾದ ನಂತರ ಎಂಟು ಲಕ್ಷ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಇದು ರಾಜ್ಯದಲ್ಲಿ ಚುನಾವಣಾ ಪಾರದರ್ಶಕತೆಯ ಬಗ್ಗೆ ಗಂಭೀರ...

ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ

ಜಾಗತಿಕ ತೈಲ ಬೆಲೆಗಳ ಏರಿಕೆಯ ಪರಿಣಾಮವನ್ನು ತಗ್ಗಿಸುವ ಪ್ರಯತ್ನದಲ್ಲಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 10 ರೂ.ಗಳಷ್ಟು ಕಡಿಮೆ ಮಾಡಿದೆ, ಇದರಿಂದಾಗಿ ಪೆಟ್ರೋಲ್‌ಗೆ 3 ರೂ.ಗಳಷ್ಟು...