Homeಮುಖಪುಟದೆಹಲಿ | ಅಂಬೇಡ್ಕರ್, ಭಗತ್ ಸಿಂಗ್ ಫೋಟೋಗಳನ್ನು ಸಿಎಂ ಕಚೇರಿಯಿಂದ ತೆಗೆಯಲಾಗಿದೆ : ಎಎಪಿ ಆರೋಪ

ದೆಹಲಿ | ಅಂಬೇಡ್ಕರ್, ಭಗತ್ ಸಿಂಗ್ ಫೋಟೋಗಳನ್ನು ಸಿಎಂ ಕಚೇರಿಯಿಂದ ತೆಗೆಯಲಾಗಿದೆ : ಎಎಪಿ ಆರೋಪ

- Advertisement -
- Advertisement -

ದೆಹಲಿಯಲ್ಲಿ ಬಿಜೆಪಿ ಅಧಿಕಾರವಹಿಸಿಕೊಂಡ ಬೆನ್ನಲ್ಲೇ ಮುಖ್ಯಮಂತ್ರಿ ಕಚೇರಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಫೋಟೋಗಳನ್ನು ತೆಗೆದು, ಆ ಜಾಗಕ್ಕೆ ಮಹಾತ್ಮ ಗಾಂಧಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಫೋಟೋಗಳನ್ನು ಹಾಕಲಾಗಿದೆ ಎಂದು ಎಎಪಿ ಸೋಮವಾರ (ಫೆ.24) ಆರೋಪಿಸಿದೆ.

ನೂತನ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಎಎಪಿಯ ಆರೋಪವನ್ನು ತಿರಸ್ಕರಿಸಿದ್ದು, ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಫೋಟೋಗಳು ನನ್ನ ಕಚೇರಿಯಲ್ಲಿವೆ ಎಂದು ಹೇಳಿದ್ದಾರೆ.

ತಾನು ಅಧಿಕಾರದಲ್ಲಿದ್ದಾಗ ಮುಖ್ಯಮಂತ್ರಿ ಕಚೇರಿಯಲ್ಲಿ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಫೋಟೋಗಳು ಇದ್ದಿದ್ದು, ರೇಖಾ ಗುಪ್ತಾ ಅವರು ಸಿಎಂ ಆದ ಬಳಿಕ ಕಚೇರಿಯಲ್ಲಿ ಮಹಾತ್ಮ ಗಾಂಧಿ, ರಾಷ್ಟ್ರಪತಿ ಮುರ್ಮು ಮತ್ತು ಪ್ರಧಾನಿ ಮೋದಿ ಅವರ ಫೋಟೋಗಳು ಇರುವುದನ್ನು ಮಾಜಿ ಮುಖ್ಯಮಂತ್ರಿ ಅತಿಶಿ ಮರ್ಲೇನಾ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಬಿಜೆಪಿಯ ದಲಿತ ವಿರೋಧಿ ಮನಸ್ಥಿತಿ ಎಲ್ಲರಿಗೂ ಗೊತ್ತಿದೆ. ಇಂದು, ಅದರ ದಲಿತ ವಿರೋಧಿ ಮನಸ್ಥಿತಿಯ ಪುರಾವೆಗಳನ್ನು ಪ್ರಸ್ತುತಪಡಿಸಲಾಗಿದೆ. ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಸರ್ಕಾರದ ಪ್ರತಿಯೊಂದು ಕಚೇರಿಯಲ್ಲೂ ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಶಹೀದ್ ಭಗತ್ ಸಿಂಗ್ ಅವರ ಫೋಟೋಗಳನ್ನು ಹಾಕಿದ್ದರು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ, ಅದು ಈ ಎರಡೂ ಫೋಟೋಗಳನ್ನು ಮುಖ್ಯಮಂತ್ರಿ ಕಚೇರಿಯಿಂದ ತೆಗೆದು ಹಾಕಿದೆ. ಬಿಜೆಪಿ ದಲಿತ ವಿರೋಧಿ ಮತ್ತು ಸಿಖ್ ವಿರೋಧಿ ಪಕ್ಷ ಎಂಬುವುದನ್ನು ಇದು ತೋರಿಸುತ್ತದೆ” ಎಂದು ಅತಿಶಿ ಅವರು ಮಾಧ್ಯಮಗಳ ಮುಂದೆ ಹೇಳಿದ್ದಾರೆ.

ಅತಿಶಿ ಹೇಳಿಕೆ ಬೆಂಬಲ ವ್ಯಕ್ತಪಡಿಸಿದೆ ಅರವಿಂದ್ ಕೇಜ್ರಿವಾಲ್ ಅವರು, “ಅಂಬೇಡ್ಕರ್ ಅವರ ಫೋಟೋವನ್ನು ತೆಗೆದುಹಾಕಿರುವುದು ಲಕ್ಷಾಂತರ ದಲಿತ ಅನುಯಾಯಿಗಳಿಗೆ ನೋವುಂಟು ಮಾಡಿದೆ” ಎಂದಿದ್ದಾರೆ.

“ದೆಹಲಿಯ ಹೊಸ ಬಿಜೆಪಿ ಸರ್ಕಾರ ಬಾಬಾಸಾಹೇಬ್ ಅವರ ಫೋಟೋ ತೆಗೆದು ಪ್ರಧಾನಿ ಮೋದಿಯವರ ಫೋಟೋ ಹಾಕಿದೆ. ಇದು ಸರಿಯಲ್ಲ. ಇದು ಬಾಬಾಸಾಹೇಬ್ ಅವರ ಲಕ್ಷಾಂತರ ಅನುಯಾಯಿಗಳಿಗೆ ನೋವುಂಟು ಮಾಡಿದೆ. ನಾನು ಬಿಜೆಪಿಗೆ ಒಂದು ವಿನಂತಿ ಮಾಡುತ್ತೇನೆ. ನೀವು ಪ್ರಧಾನಿಯವರ ಫೋಟೋ ಹಾಕಬಹುದು. ಆದರೆ, ಬಾಬಾಸಾಹೇಬ್ ಅವರ ಫೋಟೋ ತೆಗೆಯಬೇಡಿ. ಅವರ ಫೋಟೋ ಅಲ್ಲೇ ಇರಲಿ” ಎಂದು ಕೇಜ್ರಿವಾಲ್ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.

ನೂತನ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಎಎಪಿಯ ಆರೋಪವನ್ನು ತಳ್ಳಿ ಹಾಕಿದ್ದು, ದೆಹಲಿ ಸರ್ಕಾರವು ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಯಾವುದೇ ಫೋಟೋಗಳನ್ನು ತೆಗೆದು ಹಾಕಿಲ್ಲ ಎಂದಿದ್ದಾರೆ.

ಎಎಪಿ ವಿರುದ್ಧ ವಾಗ್ದಾಳಿ ನಡೆಸಿರುವ ಗುಪ್ತಾ ಅವರು “ಕೇಜ್ರಿವಾಲ್ ನೇತೃತ್ವದ ಪಕ್ಷವು ಬಿಆರ್ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರನ್ನು ಮುಂದಿಟ್ಟುಕೊಂಡು ತಮ್ಮ ಭ್ರಷ್ಟಾಚಾರ ಮತ್ತು ದುಷ್ಕೃತ್ಯಗಳನ್ನು ಮಾಚುತ್ತಿದೆ” ಎಂದು ಹೇಳಿದ್ದಾರೆ.

ಒಂದು ವಿಡಿಯೋದಲ್ಲಿ, ಮಹಾತ್ಮ ಗಾಂಧಿ, ರಾಷ್ಟ್ರಪತಿ ಮುರ್ಮು ಮತ್ತು ಪ್ರಧಾನಿ ಮೋದಿ ಅವರ ಫೋಟೋಗಳು ಸಿಎಂ ರೇಖಾ ಗುಪ್ತಾ ಅವರು ಕುಳಿತಿದ್ದ ಸ್ಥಳದ ಹಿಂದೆ ಕಂಡು ಬಂದಿದೆ. ಈ ಹಿಂದೆ ಅಲ್ಲಿ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಫೋಟೋಗಳು ಇತ್ತು ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ದ್ವೇಷ ಭಾಷಣ ಪ್ರಕರಣ | ಕೇರಳ ನ್ಯಾಯಾಲಯಕ್ಕೆ ಶರಣಾದ ಬಿಜೆಪಿ ನಾಯಕ ಪಿ.ಸಿ.ಜಾರ್ಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...