Homeಮುಖಪುಟದೆಹಲಿ | ಅಂಬೇಡ್ಕರ್, ಭಗತ್ ಸಿಂಗ್ ಫೋಟೋಗಳನ್ನು ಸಿಎಂ ಕಚೇರಿಯಿಂದ ತೆಗೆಯಲಾಗಿದೆ : ಎಎಪಿ ಆರೋಪ

ದೆಹಲಿ | ಅಂಬೇಡ್ಕರ್, ಭಗತ್ ಸಿಂಗ್ ಫೋಟೋಗಳನ್ನು ಸಿಎಂ ಕಚೇರಿಯಿಂದ ತೆಗೆಯಲಾಗಿದೆ : ಎಎಪಿ ಆರೋಪ

- Advertisement -
- Advertisement -

ದೆಹಲಿಯಲ್ಲಿ ಬಿಜೆಪಿ ಅಧಿಕಾರವಹಿಸಿಕೊಂಡ ಬೆನ್ನಲ್ಲೇ ಮುಖ್ಯಮಂತ್ರಿ ಕಚೇರಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಫೋಟೋಗಳನ್ನು ತೆಗೆದು, ಆ ಜಾಗಕ್ಕೆ ಮಹಾತ್ಮ ಗಾಂಧಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಫೋಟೋಗಳನ್ನು ಹಾಕಲಾಗಿದೆ ಎಂದು ಎಎಪಿ ಸೋಮವಾರ (ಫೆ.24) ಆರೋಪಿಸಿದೆ.

ನೂತನ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಎಎಪಿಯ ಆರೋಪವನ್ನು ತಿರಸ್ಕರಿಸಿದ್ದು, ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಫೋಟೋಗಳು ನನ್ನ ಕಚೇರಿಯಲ್ಲಿವೆ ಎಂದು ಹೇಳಿದ್ದಾರೆ.

ತಾನು ಅಧಿಕಾರದಲ್ಲಿದ್ದಾಗ ಮುಖ್ಯಮಂತ್ರಿ ಕಚೇರಿಯಲ್ಲಿ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಫೋಟೋಗಳು ಇದ್ದಿದ್ದು, ರೇಖಾ ಗುಪ್ತಾ ಅವರು ಸಿಎಂ ಆದ ಬಳಿಕ ಕಚೇರಿಯಲ್ಲಿ ಮಹಾತ್ಮ ಗಾಂಧಿ, ರಾಷ್ಟ್ರಪತಿ ಮುರ್ಮು ಮತ್ತು ಪ್ರಧಾನಿ ಮೋದಿ ಅವರ ಫೋಟೋಗಳು ಇರುವುದನ್ನು ಮಾಜಿ ಮುಖ್ಯಮಂತ್ರಿ ಅತಿಶಿ ಮರ್ಲೇನಾ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಬಿಜೆಪಿಯ ದಲಿತ ವಿರೋಧಿ ಮನಸ್ಥಿತಿ ಎಲ್ಲರಿಗೂ ಗೊತ್ತಿದೆ. ಇಂದು, ಅದರ ದಲಿತ ವಿರೋಧಿ ಮನಸ್ಥಿತಿಯ ಪುರಾವೆಗಳನ್ನು ಪ್ರಸ್ತುತಪಡಿಸಲಾಗಿದೆ. ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಸರ್ಕಾರದ ಪ್ರತಿಯೊಂದು ಕಚೇರಿಯಲ್ಲೂ ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಶಹೀದ್ ಭಗತ್ ಸಿಂಗ್ ಅವರ ಫೋಟೋಗಳನ್ನು ಹಾಕಿದ್ದರು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ, ಅದು ಈ ಎರಡೂ ಫೋಟೋಗಳನ್ನು ಮುಖ್ಯಮಂತ್ರಿ ಕಚೇರಿಯಿಂದ ತೆಗೆದು ಹಾಕಿದೆ. ಬಿಜೆಪಿ ದಲಿತ ವಿರೋಧಿ ಮತ್ತು ಸಿಖ್ ವಿರೋಧಿ ಪಕ್ಷ ಎಂಬುವುದನ್ನು ಇದು ತೋರಿಸುತ್ತದೆ” ಎಂದು ಅತಿಶಿ ಅವರು ಮಾಧ್ಯಮಗಳ ಮುಂದೆ ಹೇಳಿದ್ದಾರೆ.

ಅತಿಶಿ ಹೇಳಿಕೆ ಬೆಂಬಲ ವ್ಯಕ್ತಪಡಿಸಿದೆ ಅರವಿಂದ್ ಕೇಜ್ರಿವಾಲ್ ಅವರು, “ಅಂಬೇಡ್ಕರ್ ಅವರ ಫೋಟೋವನ್ನು ತೆಗೆದುಹಾಕಿರುವುದು ಲಕ್ಷಾಂತರ ದಲಿತ ಅನುಯಾಯಿಗಳಿಗೆ ನೋವುಂಟು ಮಾಡಿದೆ” ಎಂದಿದ್ದಾರೆ.

“ದೆಹಲಿಯ ಹೊಸ ಬಿಜೆಪಿ ಸರ್ಕಾರ ಬಾಬಾಸಾಹೇಬ್ ಅವರ ಫೋಟೋ ತೆಗೆದು ಪ್ರಧಾನಿ ಮೋದಿಯವರ ಫೋಟೋ ಹಾಕಿದೆ. ಇದು ಸರಿಯಲ್ಲ. ಇದು ಬಾಬಾಸಾಹೇಬ್ ಅವರ ಲಕ್ಷಾಂತರ ಅನುಯಾಯಿಗಳಿಗೆ ನೋವುಂಟು ಮಾಡಿದೆ. ನಾನು ಬಿಜೆಪಿಗೆ ಒಂದು ವಿನಂತಿ ಮಾಡುತ್ತೇನೆ. ನೀವು ಪ್ರಧಾನಿಯವರ ಫೋಟೋ ಹಾಕಬಹುದು. ಆದರೆ, ಬಾಬಾಸಾಹೇಬ್ ಅವರ ಫೋಟೋ ತೆಗೆಯಬೇಡಿ. ಅವರ ಫೋಟೋ ಅಲ್ಲೇ ಇರಲಿ” ಎಂದು ಕೇಜ್ರಿವಾಲ್ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.

ನೂತನ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಎಎಪಿಯ ಆರೋಪವನ್ನು ತಳ್ಳಿ ಹಾಕಿದ್ದು, ದೆಹಲಿ ಸರ್ಕಾರವು ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಯಾವುದೇ ಫೋಟೋಗಳನ್ನು ತೆಗೆದು ಹಾಕಿಲ್ಲ ಎಂದಿದ್ದಾರೆ.

ಎಎಪಿ ವಿರುದ್ಧ ವಾಗ್ದಾಳಿ ನಡೆಸಿರುವ ಗುಪ್ತಾ ಅವರು “ಕೇಜ್ರಿವಾಲ್ ನೇತೃತ್ವದ ಪಕ್ಷವು ಬಿಆರ್ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರನ್ನು ಮುಂದಿಟ್ಟುಕೊಂಡು ತಮ್ಮ ಭ್ರಷ್ಟಾಚಾರ ಮತ್ತು ದುಷ್ಕೃತ್ಯಗಳನ್ನು ಮಾಚುತ್ತಿದೆ” ಎಂದು ಹೇಳಿದ್ದಾರೆ.

ಒಂದು ವಿಡಿಯೋದಲ್ಲಿ, ಮಹಾತ್ಮ ಗಾಂಧಿ, ರಾಷ್ಟ್ರಪತಿ ಮುರ್ಮು ಮತ್ತು ಪ್ರಧಾನಿ ಮೋದಿ ಅವರ ಫೋಟೋಗಳು ಸಿಎಂ ರೇಖಾ ಗುಪ್ತಾ ಅವರು ಕುಳಿತಿದ್ದ ಸ್ಥಳದ ಹಿಂದೆ ಕಂಡು ಬಂದಿದೆ. ಈ ಹಿಂದೆ ಅಲ್ಲಿ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಫೋಟೋಗಳು ಇತ್ತು ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ದ್ವೇಷ ಭಾಷಣ ಪ್ರಕರಣ | ಕೇರಳ ನ್ಯಾಯಾಲಯಕ್ಕೆ ಶರಣಾದ ಬಿಜೆಪಿ ನಾಯಕ ಪಿ.ಸಿ.ಜಾರ್ಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...