Homeರಾಷ್ಟ್ರೀಯಜೈಲಿನಲ್ಲೆ ಮಸಾಜ್ ಮಾಡಿಸಿಕೊಂಡ ದೆಹಲಿ ಎಎಪಿ ಸಚಿವ: ವಿಡಿಯೊ ವೈರಲ್

ಜೈಲಿನಲ್ಲೆ ಮಸಾಜ್ ಮಾಡಿಸಿಕೊಂಡ ದೆಹಲಿ ಎಎಪಿ ಸಚಿವ: ವಿಡಿಯೊ ವೈರಲ್

- Advertisement -
- Advertisement -

ಅಕ್ರಮ ಹಣ ವರ್ಗಾವಣೆ ಪ್ರಕರಣದ ಕಾರಣಕ್ಕೆ ಮೇ ತಿಂಗಳಲ್ಲಿ ಬಂಧನಕ್ಕೊಳಗಾಗಿದ್ದ ಆಮ್ ಆದ್ಮಿ ಪಕ್ಷದ ಸಚಿವ ಸತ್ಯೇಂದ್ರ ಜೈನ್ ಅವರು ದೆಹಲಿಯ ತಿಹಾರ್ ಜೈಲಿನಲ್ಲಿ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಿಡಿಯೋವನ್ನು ಹಲವು ಬಿಜೆಪಿ ನಾಯಕರು ಶನಿವಾರ ಹಂಚಿಕೊಂಡಿದ್ದಾರೆ.

ಜೈಲಿನಲ್ಲಿರುವ ಸಚಿವರಿಗೆ ವಿಐಪಿ ಸೌಲಭ್ಯ ನೀಡಿದ ಆರೋಪದಲ್ಲಿ ತಿಹಾರ್ ಜೈಲಿನ ಸೂಪರಿಂಟೆಂಡೆಂಟ್ ಅಜಿತ್ ಕುಮಾರ್ ಅವರನ್ನು ಅಮಾನತುಗೊಳಿಸಿದ ಕೆಲವೇ ದಿನಗಳಲ್ಲಿ ವೀಡಿಯೊ ಹೊರಬಿದ್ದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸತ್ಯೇಂದ್ರ ಜೈನ್ ಅವರನ್ನು ಬಂಧಿಸಿರುವ ಜೈಲ್‌ ನಂಬರ್ 7 ರ ಸೂಪರಿಂಟೆಂಡೆಂಟ್ ಮಾಜಿ ಸಚಿವರಿಗೆ ಅನಪೇಕ್ಷಿತ ಅನುಕೂಲಗಳನ್ನು ವಿಸ್ತರಿಸಿದ್ದಾರೆ ಎಂದು ಜೈಲಿನಲ್ಲಿರುವ ಸುಕೇಶ್ ಚಂದ್ರಶೇಖರ್ ಆರೋಪಿಸಿದ್ದರು. ಹೀಗಾಗಿ ಇದರ ನಂತರ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ರಚಿಸಿದ್ದ ತನಿಖಾ ಸಮಿತಿಯ ಶಿಫಾರಸಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ನೇಪಾಳದಲ್ಲಿ ಭೂಕಂಪ: ಆರು ಮಂದಿ ಮೃತ | ದೆಹಲಿಯಲ್ಲೂ ಕಂಪನದ ಅನುಭವ!

ವಿಡಿಯೋ ಕುರಿತು ಪ್ರತಿಕ್ರಿಯಿಸಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್ ಜೈಲಿನಲ್ಲಿದ್ದಾಗ ಗಾಯಗೊಂಡಿದ್ದರು, ಹೀಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

ಸಂತ್ಯೇಂದ್ರ ಜೈನ್ ವಿಐಪಿ ಸೌಲಭ್ಯ ಪಡೆಯುವ ಆರೋಪಗಳನ್ನು ಎಎಪಿ ಈ ಹಿಂದೆ ತಳ್ಳಿಹಾಕಿತ್ತು, ಅವುಗಳನ್ನು ಅಸಂಬದ್ಧ ಮತ್ತು ಆಧಾರರಹಿತ ಎಂದು ಕರೆದಿತ್ತು.

ಇಂದು ಬಿಡುಗಡೆಯಾದ ವೀಡಿಯೋದಲ್ಲಿ, ಸತ್ಯೇಂದರ್ ಜೈನ್ ಅವರು ತಿಹಾರ್ ಜೈಲಿನ ತನ್ನ ಸೆಲ್ ನಲ್ಲಿ ಕಾಲು, ಬೆನ್ನು ಮತ್ತು ತಲೆಗೆ ಮಸಾಜ್ ಮಾಡಿಕೊಳ್ಳುತ್ತಿರುವುದು ಕಾಣುತ್ತದೆ.

ಇದನ್ನೂ ಓದಿ: ‘ಜನ ಗಣ ಮನ’ ಮತ್ತು ‘ವಂದೇ ಮಾತರಂ’ ಸಮಾನವಾಗಿದೆ: ದೆಹಲಿ ಹೈಕೋರ್ಟ್‌ಗೆ ಕೇಂದ್ರ

“ಜೈಲಿನಲ್ಲಿ ವಿವಿಐಪಿ ಸೌಲಭ್ಯ! ಕೇಜ್ರಿವಾಲ್ ಇಂತಹ ಮಂತ್ರಿಯನ್ನು ಸಮರ್ಥಿಸಬಹುದೇ? ಅವರನ್ನು ವಜಾ ಮಾಡಬೇಕಲ್ಲವೇ? ಇದು ಎಎಪಿಯ ನಿಜವಾದ ಮುಖವನ್ನು ತೋರಿಸುತ್ತದೆ!” ಎಂದು ಬಿಜೆಪಿಯ ಶೆಹಜಾದ್ ಜೈ ಹಿಂದ್ ಅವರು ಟ್ವೀಟ್‌ನಲ್ಲಿ ಈ ವೀಡಿಯೊಗಳಲ್ಲಿ ಒಂದನ್ನು ಹಂಚಿಕೊಂಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ವಕ್ತಾರ ಗೌರವ್ ಭಾಟಿಯಾ, “ಆಮ್ ಆದ್ಮಿ ಪಕ್ಷದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಭ್ರಷ್ಟಾಚಾರವನ್ನು ಎದುರಿಸಲು ಮತ್ತು ವಿವಿಐಪಿ ಸಂಸ್ಕೃತಿಯನ್ನು ಕೊನೆಗೊಳಿಸಲು ನೀವು ಪಕ್ಷವನ್ನು ರಚಿಸಿದ್ದೀರಿ. ಆದರೆ ಇಲ್ಲಿ ಒಬ್ಬ ಭ್ರಷ್ಟ ವ್ಯಕ್ತಿ ಎಲ್ಲಾ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಮಿತ್ ಶಾರನ್ನು ಬಂಧಿಸಿ: ದೆಹಲಿ ಉಪಮುಖ್ಯಮಂತ್ರಿ ಸಿಸೋಡಿಯಾ ಆಗ್ರಹ

ಸಂತ್ಯೇಂದ್ರ ಜೈನ್‌ ಜೈಲಿನಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದಾರೆ ಎಂದು ಕಳೆದ ತಿಂಗಳು ಜಾರಿ ನಿರ್ದೇಶನಾಲಯ ಆರೋಪಿಸಿತ್ತು. ತನಿಖಾ ಸಂಸ್ಥೆಯು ದೆಹಲಿ ನ್ಯಾಯಾಲಯಕ್ಕೆ ಸಿಸಿಟಿವಿ ದೃಶ್ಯಾವಳಿಯನ್ನೂ ಸಲ್ಲಿಸಿತ್ತು. ಜೈಲು ಸಚಿವರೂ ಆಗಿರುವ ಸಂತ್ಯೇಂದ್ರ ಜೈನ್ ಅವರು ತಮ್ಮ ಸ್ಥಾನವನ್ನು ದುರುಪಯೋಗ ಮಾಡಿದ್ದಾರೆ ಎಂದು ಅದು ಆರೋಪಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...