Homeರಾಷ್ಟ್ರೀಯಜೈಲಿನಲ್ಲೆ ಮಸಾಜ್ ಮಾಡಿಸಿಕೊಂಡ ದೆಹಲಿ ಎಎಪಿ ಸಚಿವ: ವಿಡಿಯೊ ವೈರಲ್

ಜೈಲಿನಲ್ಲೆ ಮಸಾಜ್ ಮಾಡಿಸಿಕೊಂಡ ದೆಹಲಿ ಎಎಪಿ ಸಚಿವ: ವಿಡಿಯೊ ವೈರಲ್

- Advertisement -
- Advertisement -

ಅಕ್ರಮ ಹಣ ವರ್ಗಾವಣೆ ಪ್ರಕರಣದ ಕಾರಣಕ್ಕೆ ಮೇ ತಿಂಗಳಲ್ಲಿ ಬಂಧನಕ್ಕೊಳಗಾಗಿದ್ದ ಆಮ್ ಆದ್ಮಿ ಪಕ್ಷದ ಸಚಿವ ಸತ್ಯೇಂದ್ರ ಜೈನ್ ಅವರು ದೆಹಲಿಯ ತಿಹಾರ್ ಜೈಲಿನಲ್ಲಿ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಿಡಿಯೋವನ್ನು ಹಲವು ಬಿಜೆಪಿ ನಾಯಕರು ಶನಿವಾರ ಹಂಚಿಕೊಂಡಿದ್ದಾರೆ.

ಜೈಲಿನಲ್ಲಿರುವ ಸಚಿವರಿಗೆ ವಿಐಪಿ ಸೌಲಭ್ಯ ನೀಡಿದ ಆರೋಪದಲ್ಲಿ ತಿಹಾರ್ ಜೈಲಿನ ಸೂಪರಿಂಟೆಂಡೆಂಟ್ ಅಜಿತ್ ಕುಮಾರ್ ಅವರನ್ನು ಅಮಾನತುಗೊಳಿಸಿದ ಕೆಲವೇ ದಿನಗಳಲ್ಲಿ ವೀಡಿಯೊ ಹೊರಬಿದ್ದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸತ್ಯೇಂದ್ರ ಜೈನ್ ಅವರನ್ನು ಬಂಧಿಸಿರುವ ಜೈಲ್‌ ನಂಬರ್ 7 ರ ಸೂಪರಿಂಟೆಂಡೆಂಟ್ ಮಾಜಿ ಸಚಿವರಿಗೆ ಅನಪೇಕ್ಷಿತ ಅನುಕೂಲಗಳನ್ನು ವಿಸ್ತರಿಸಿದ್ದಾರೆ ಎಂದು ಜೈಲಿನಲ್ಲಿರುವ ಸುಕೇಶ್ ಚಂದ್ರಶೇಖರ್ ಆರೋಪಿಸಿದ್ದರು. ಹೀಗಾಗಿ ಇದರ ನಂತರ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ರಚಿಸಿದ್ದ ತನಿಖಾ ಸಮಿತಿಯ ಶಿಫಾರಸಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ನೇಪಾಳದಲ್ಲಿ ಭೂಕಂಪ: ಆರು ಮಂದಿ ಮೃತ | ದೆಹಲಿಯಲ್ಲೂ ಕಂಪನದ ಅನುಭವ!

ವಿಡಿಯೋ ಕುರಿತು ಪ್ರತಿಕ್ರಿಯಿಸಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್ ಜೈಲಿನಲ್ಲಿದ್ದಾಗ ಗಾಯಗೊಂಡಿದ್ದರು, ಹೀಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

ಸಂತ್ಯೇಂದ್ರ ಜೈನ್ ವಿಐಪಿ ಸೌಲಭ್ಯ ಪಡೆಯುವ ಆರೋಪಗಳನ್ನು ಎಎಪಿ ಈ ಹಿಂದೆ ತಳ್ಳಿಹಾಕಿತ್ತು, ಅವುಗಳನ್ನು ಅಸಂಬದ್ಧ ಮತ್ತು ಆಧಾರರಹಿತ ಎಂದು ಕರೆದಿತ್ತು.

ಇಂದು ಬಿಡುಗಡೆಯಾದ ವೀಡಿಯೋದಲ್ಲಿ, ಸತ್ಯೇಂದರ್ ಜೈನ್ ಅವರು ತಿಹಾರ್ ಜೈಲಿನ ತನ್ನ ಸೆಲ್ ನಲ್ಲಿ ಕಾಲು, ಬೆನ್ನು ಮತ್ತು ತಲೆಗೆ ಮಸಾಜ್ ಮಾಡಿಕೊಳ್ಳುತ್ತಿರುವುದು ಕಾಣುತ್ತದೆ.

ಇದನ್ನೂ ಓದಿ: ‘ಜನ ಗಣ ಮನ’ ಮತ್ತು ‘ವಂದೇ ಮಾತರಂ’ ಸಮಾನವಾಗಿದೆ: ದೆಹಲಿ ಹೈಕೋರ್ಟ್‌ಗೆ ಕೇಂದ್ರ

“ಜೈಲಿನಲ್ಲಿ ವಿವಿಐಪಿ ಸೌಲಭ್ಯ! ಕೇಜ್ರಿವಾಲ್ ಇಂತಹ ಮಂತ್ರಿಯನ್ನು ಸಮರ್ಥಿಸಬಹುದೇ? ಅವರನ್ನು ವಜಾ ಮಾಡಬೇಕಲ್ಲವೇ? ಇದು ಎಎಪಿಯ ನಿಜವಾದ ಮುಖವನ್ನು ತೋರಿಸುತ್ತದೆ!” ಎಂದು ಬಿಜೆಪಿಯ ಶೆಹಜಾದ್ ಜೈ ಹಿಂದ್ ಅವರು ಟ್ವೀಟ್‌ನಲ್ಲಿ ಈ ವೀಡಿಯೊಗಳಲ್ಲಿ ಒಂದನ್ನು ಹಂಚಿಕೊಂಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ವಕ್ತಾರ ಗೌರವ್ ಭಾಟಿಯಾ, “ಆಮ್ ಆದ್ಮಿ ಪಕ್ಷದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಭ್ರಷ್ಟಾಚಾರವನ್ನು ಎದುರಿಸಲು ಮತ್ತು ವಿವಿಐಪಿ ಸಂಸ್ಕೃತಿಯನ್ನು ಕೊನೆಗೊಳಿಸಲು ನೀವು ಪಕ್ಷವನ್ನು ರಚಿಸಿದ್ದೀರಿ. ಆದರೆ ಇಲ್ಲಿ ಒಬ್ಬ ಭ್ರಷ್ಟ ವ್ಯಕ್ತಿ ಎಲ್ಲಾ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಮಿತ್ ಶಾರನ್ನು ಬಂಧಿಸಿ: ದೆಹಲಿ ಉಪಮುಖ್ಯಮಂತ್ರಿ ಸಿಸೋಡಿಯಾ ಆಗ್ರಹ

ಸಂತ್ಯೇಂದ್ರ ಜೈನ್‌ ಜೈಲಿನಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದಾರೆ ಎಂದು ಕಳೆದ ತಿಂಗಳು ಜಾರಿ ನಿರ್ದೇಶನಾಲಯ ಆರೋಪಿಸಿತ್ತು. ತನಿಖಾ ಸಂಸ್ಥೆಯು ದೆಹಲಿ ನ್ಯಾಯಾಲಯಕ್ಕೆ ಸಿಸಿಟಿವಿ ದೃಶ್ಯಾವಳಿಯನ್ನೂ ಸಲ್ಲಿಸಿತ್ತು. ಜೈಲು ಸಚಿವರೂ ಆಗಿರುವ ಸಂತ್ಯೇಂದ್ರ ಜೈನ್ ಅವರು ತಮ್ಮ ಸ್ಥಾನವನ್ನು ದುರುಪಯೋಗ ಮಾಡಿದ್ದಾರೆ ಎಂದು ಅದು ಆರೋಪಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...