Homeಮುಖಪುಟದೆಹಲಿ ವಾಯುಮಾಲಿನ್ಯ : ಏರ್ ಪ್ಯೂರಿಫೈಯರ್‌ ಜಿಎಸ್‌ಟಿ ಕಡಿತಕ್ಕೆ ಕೇಂದ್ರ ಆಕ್ಷೇಪ

ದೆಹಲಿ ವಾಯುಮಾಲಿನ್ಯ : ಏರ್ ಪ್ಯೂರಿಫೈಯರ್‌ ಜಿಎಸ್‌ಟಿ ಕಡಿತಕ್ಕೆ ಕೇಂದ್ರ ಆಕ್ಷೇಪ

- Advertisement -
- Advertisement -

ಏರ್‌ಪ್ಯೂರಿಫೈಯರ್‌ ಸಾಧನಗಳ ಮೇಲಿನ ಜಿಎಸ್‌ಟಿ ಕಡಿತಗೊಳಿಸುವಂತೆ ಜಿಎಸ್‌ಟಿ ಮಂಡಳಿಗೆ ಆದೇಶಿಸಿದರೆ ಅದು ಅಂತಹ ಇನ್ನಷ್ಟು ಪ್ರಕರಣಗಳು ಹೆಚ್ಚಳವಾಗಲು ಕಾರಣವಾಗುತ್ತದೆ (Pandora Box)ಎಂದು ಕೇಂದ್ರ ಸರ್ಕಾರ ಶುಕ್ರವಾರ (ಡಿ.26) ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

ದೆಹಲಿ ಎನ್‌ಸಿಆರ್‌ ಪ್ರದೇಶದಲ್ಲಿ ವಿಪರೀತ ವಾಯುಮಾಲಿನ್ಯ ಹಿನ್ನೆಲೆ, ಗಾಳಿ ಶುದ್ಧೀಕರಿಸುವ ಏರ್‌ ಏರ್ ಪ್ಯೂರಿಫೈಯರ್‌ ಯಂತ್ರಗಳನ್ನು ‘ವೈದ್ಯಕೀಯ ಸಾಧನ’ ಎಂದು ಘೋಷಿಸಿ, ಅದಕ್ಕೆ ಶೇಕಡ 18ರ ಬದಲು 5ರಷ್ಟು ಜಿಎಸ್‌ಟಿ ವಿಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ವಿಕಾಸ್ ಮಹಾಜನ್ ಮತ್ತು ವಿನೋದ್ ಕುಮಾರ್ ಅವರಿದ್ದ ಪೀಠಕ್ಕೆ ಸರ್ಕಾರ ಪ್ರತಿಕ್ರಿಯೆ ನೀಡಿದೆ.

ಈ ವಿಚಾರವನ್ನು ಉನ್ನತ ಮಟ್ಟದಲ್ಲಿ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ ಕೇಂದ್ರ ಸರ್ಕಾರ, ಸೂಕ್ತ ಉತ್ತರ ನೀಡುವುದಕ್ಕೆ ಇನ್ನಷ್ಟು ಸಮಯಾವಕಾಶ ಬೇಕು ಎಂದು ಕೋರಿದೆ.

ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಎನ್. ವೆಂಕಟರಾಮನ್ ಅವರು, ಪ್ರಕರಣದಲ್ಲಿ ಜಿಎಸ್‌ಟಿ ಮಂಡಳಿ ಹೊಂದಿರುವ ವ್ಯವಸ್ಥೆಗೆ ಹೊರತಾಗಿ ನಡೆದುಕೊಂಡರೆ, ಸೂಕ್ತ ಪ್ರಕ್ರಿಯೆಯನ್ನು ಅನುಸರಿಸದೆ ಹೋದರೆ ಆಗ ಜಿಎಸ್‌ಟಿ ವಿನಾಯಿತಿ ಕೋರುವ ಪ್ರಕರಣಗಳ ಸಂಖ್ಯೆ ಹೆಚ್ಚಬಹುದು ಎಂದು ಆತಂಕ ವ್ಯಕ್ತಪಡಿಸಿದರು.

ಆದರೆ, ಅರ್ಜಿದಾರರಾದ ವಕೀಲ ಕಪಿಲ್ ಮದನ್, ಏರ್ ಪ್ಯೂರಿಫೈಯರ್‌ಗಳನ್ನು ಕಡಿಮೆ ಜಿಎಸ್‌ಟಿ ದರದೊಂದಿಗೆ ವೈದ್ಯಕೀಯ ಸಾಧನವೆಂದು ವರ್ಗೀಕರಿಸಬೇಕೆಂದು ಪಟ್ಟುಹಿಡಿದರು. ಆಗ ನ್ಯಾಯಾಲಯ, ಜಿಎಸ್‌ಟಿ ಮಂಡಳಿ ಸಭೆ ಸೇರುವವರೆಗೆ ಕಾಯಬೇಕಾಗಬಹುದು ಎಂದಿತು.

ಇದಕ್ಕೆ ಒಪ್ಪದ ಕಪಿಲ್‌ ಮದನ್‌ ಅವರು, ಸರ್ಕಾರ ಸಮಯ ತೆಗೆದುಕೊಳ್ಳುತ್ತದೆ. ಇದರಿಂದಾಗಿ ಇಡೀ ನಗರ ತೊಂದರೆ ಅನುಭವಿಸುತ್ತದೆ ಎಂದರು.

ವಿಚಾರಣೆಯ ಒಂದು ಹಂತದಲ್ಲಿ ನ್ಯಾಯಾಲಯ ಒಂದು ಏರ್ ಪ್ಯೂರಿಫೈಯರ್ ಬೆಲೆ 10-15 ಸಾವಿರ. ಜಿಎಸ್‌ಟಿಯನ್ನು ಸಮಂಜಸ ಮಟ್ಟಕ್ಕೆ ಏಕೆ ಇಳಿಸಬಾರದು ಎಂದು ಪ್ರಶ್ನಿಸಿತು. ಸರ್ಕಾರ ಪ್ರತಿ ಅಫಿಡವಿಟ್‌ ಸಲ್ಲಿಸಲು ನ್ಯಾಯಾಲಯ ಹತ್ತು ದಿನಗಳ ಕಾಲಾವಕಾಶ ನೀಡಿತು. ಪ್ರಕರಣದ ಮುಂದಿನ ವಿಚಾರಣೆ ಜನವರಿ 9, 2026ರಂದು ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...