Homeಮುಖಪುಟದೆಹಲಿ ವಾಯುಮಾಲಿನ್ಯ : ಏರ್ ಪ್ಯೂರಿಫೈಯರ್‌ ಜಿಎಸ್‌ಟಿ ಕಡಿತಕ್ಕೆ ಕೇಂದ್ರ ಆಕ್ಷೇಪ

ದೆಹಲಿ ವಾಯುಮಾಲಿನ್ಯ : ಏರ್ ಪ್ಯೂರಿಫೈಯರ್‌ ಜಿಎಸ್‌ಟಿ ಕಡಿತಕ್ಕೆ ಕೇಂದ್ರ ಆಕ್ಷೇಪ

- Advertisement -
- Advertisement -

ಏರ್‌ಪ್ಯೂರಿಫೈಯರ್‌ ಸಾಧನಗಳ ಮೇಲಿನ ಜಿಎಸ್‌ಟಿ ಕಡಿತಗೊಳಿಸುವಂತೆ ಜಿಎಸ್‌ಟಿ ಮಂಡಳಿಗೆ ಆದೇಶಿಸಿದರೆ ಅದು ಅಂತಹ ಇನ್ನಷ್ಟು ಪ್ರಕರಣಗಳು ಹೆಚ್ಚಳವಾಗಲು ಕಾರಣವಾಗುತ್ತದೆ (Pandora Box)ಎಂದು ಕೇಂದ್ರ ಸರ್ಕಾರ ಶುಕ್ರವಾರ (ಡಿ.26) ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

ದೆಹಲಿ ಎನ್‌ಸಿಆರ್‌ ಪ್ರದೇಶದಲ್ಲಿ ವಿಪರೀತ ವಾಯುಮಾಲಿನ್ಯ ಹಿನ್ನೆಲೆ, ಗಾಳಿ ಶುದ್ಧೀಕರಿಸುವ ಏರ್‌ ಏರ್ ಪ್ಯೂರಿಫೈಯರ್‌ ಯಂತ್ರಗಳನ್ನು ‘ವೈದ್ಯಕೀಯ ಸಾಧನ’ ಎಂದು ಘೋಷಿಸಿ, ಅದಕ್ಕೆ ಶೇಕಡ 18ರ ಬದಲು 5ರಷ್ಟು ಜಿಎಸ್‌ಟಿ ವಿಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ವಿಕಾಸ್ ಮಹಾಜನ್ ಮತ್ತು ವಿನೋದ್ ಕುಮಾರ್ ಅವರಿದ್ದ ಪೀಠಕ್ಕೆ ಸರ್ಕಾರ ಪ್ರತಿಕ್ರಿಯೆ ನೀಡಿದೆ.

ಈ ವಿಚಾರವನ್ನು ಉನ್ನತ ಮಟ್ಟದಲ್ಲಿ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ ಕೇಂದ್ರ ಸರ್ಕಾರ, ಸೂಕ್ತ ಉತ್ತರ ನೀಡುವುದಕ್ಕೆ ಇನ್ನಷ್ಟು ಸಮಯಾವಕಾಶ ಬೇಕು ಎಂದು ಕೋರಿದೆ.

ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಎನ್. ವೆಂಕಟರಾಮನ್ ಅವರು, ಪ್ರಕರಣದಲ್ಲಿ ಜಿಎಸ್‌ಟಿ ಮಂಡಳಿ ಹೊಂದಿರುವ ವ್ಯವಸ್ಥೆಗೆ ಹೊರತಾಗಿ ನಡೆದುಕೊಂಡರೆ, ಸೂಕ್ತ ಪ್ರಕ್ರಿಯೆಯನ್ನು ಅನುಸರಿಸದೆ ಹೋದರೆ ಆಗ ಜಿಎಸ್‌ಟಿ ವಿನಾಯಿತಿ ಕೋರುವ ಪ್ರಕರಣಗಳ ಸಂಖ್ಯೆ ಹೆಚ್ಚಬಹುದು ಎಂದು ಆತಂಕ ವ್ಯಕ್ತಪಡಿಸಿದರು.

ಆದರೆ, ಅರ್ಜಿದಾರರಾದ ವಕೀಲ ಕಪಿಲ್ ಮದನ್, ಏರ್ ಪ್ಯೂರಿಫೈಯರ್‌ಗಳನ್ನು ಕಡಿಮೆ ಜಿಎಸ್‌ಟಿ ದರದೊಂದಿಗೆ ವೈದ್ಯಕೀಯ ಸಾಧನವೆಂದು ವರ್ಗೀಕರಿಸಬೇಕೆಂದು ಪಟ್ಟುಹಿಡಿದರು. ಆಗ ನ್ಯಾಯಾಲಯ, ಜಿಎಸ್‌ಟಿ ಮಂಡಳಿ ಸಭೆ ಸೇರುವವರೆಗೆ ಕಾಯಬೇಕಾಗಬಹುದು ಎಂದಿತು.

ಇದಕ್ಕೆ ಒಪ್ಪದ ಕಪಿಲ್‌ ಮದನ್‌ ಅವರು, ಸರ್ಕಾರ ಸಮಯ ತೆಗೆದುಕೊಳ್ಳುತ್ತದೆ. ಇದರಿಂದಾಗಿ ಇಡೀ ನಗರ ತೊಂದರೆ ಅನುಭವಿಸುತ್ತದೆ ಎಂದರು.

ವಿಚಾರಣೆಯ ಒಂದು ಹಂತದಲ್ಲಿ ನ್ಯಾಯಾಲಯ ಒಂದು ಏರ್ ಪ್ಯೂರಿಫೈಯರ್ ಬೆಲೆ 10-15 ಸಾವಿರ. ಜಿಎಸ್‌ಟಿಯನ್ನು ಸಮಂಜಸ ಮಟ್ಟಕ್ಕೆ ಏಕೆ ಇಳಿಸಬಾರದು ಎಂದು ಪ್ರಶ್ನಿಸಿತು. ಸರ್ಕಾರ ಪ್ರತಿ ಅಫಿಡವಿಟ್‌ ಸಲ್ಲಿಸಲು ನ್ಯಾಯಾಲಯ ಹತ್ತು ದಿನಗಳ ಕಾಲಾವಕಾಶ ನೀಡಿತು. ಪ್ರಕರಣದ ಮುಂದಿನ ವಿಚಾರಣೆ ಜನವರಿ 9, 2026ರಂದು ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...