Homeಮುಖಪುಟದೆಹಲಿ ವಾಯುಮಾಲಿನ್ಯ: ಒಂದು ವಾರ ಶಾಲೆ ಬಂದ್, ಸರ್ಕಾರಿ ನೌಕರರು ಮನೆಯಿಂದಲೇ ಕೆಲಸ ಮಾಡಲು ಕೇಜ್ರಿವಾಲ್...

ದೆಹಲಿ ವಾಯುಮಾಲಿನ್ಯ: ಒಂದು ವಾರ ಶಾಲೆ ಬಂದ್, ಸರ್ಕಾರಿ ನೌಕರರು ಮನೆಯಿಂದಲೇ ಕೆಲಸ ಮಾಡಲು ಕೇಜ್ರಿವಾಲ್ ಆದೇಶ

- Advertisement -
- Advertisement -

ಕಳೆದೊಂದು ವಾರದಿಂದ ದೆಹಲಿ ಮತ್ತು ಸುತ್ತಮುತ್ತಲಿನ ನಗರಗಳಲ್ಲಿ ಹೊಗೆ ತುಂಬಿಕೊಂಡಿದ್ದು ಪರಿಸ್ಥಿತಿ ತೀವ್ರ ಹದಗೆಟ್ಟಿದೆ. ಗಾಳಿಯ ಗುಣಮಟ್ಟ ಸೂಚ್ಯಂಕವು ತೀರಾ ಕೆಳಕ್ಕಿಳಿದಿರುವುದರ ಕುರಿತು ಇಂದು ಸಭೆ ನಡೆಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಒಂದು ವಾರ ಶಾಲೆಗಳನ್ನು ಮುಚ್ಚಿ ಆನ್‌ಲೈನ್ ಮೂಲಕ ತರಗತಿ ನಡೆಸಲು ಆದೇಶಿಸಿದ್ದಾರೆ.

ನವೆಂಬರ್ 17ರವರೆಗೆ ಯಾವುದೇ ಕಟ್ಟಡ ಕಾಮಗಾರಿಗಳು ನಡೆಯುವಂತಿಲ್ಲ, ಒಂದು ವಾರಗಳ ಕಾಲ ಸರ್ಕಾರಿ ನೌಕರರು ಮನೆಯಿಂದಲೇ ಕೆಲಸ ನಿರ್ವಹಿಸಬೇಕು ಸೇರಿದಂತೆ ಹಲವು ತೀರ್ಮಾನಗಳನ್ನು ತೆಗೆದುಕೊಂಡಿದ್ದಾರೆ.

ಪರಿಸ್ಥಿತಿ ಎಷ್ಟು ಹದಗೆಟ್ಟಿದೆ ಎಂಬುದು ನಿಮಗೆ ತಿಳಿದಿದೆಯೇ? ನಾವು ಮನೆಯಲ್ಲಿಯೂ ಮಾಸ್ಕ್ ಧರಿಸಬೇಕಾಗ ಪರಿಸ್ಥಿತಿ ಬಂದಿದೆ. ಇದು ರಾಜ್ಯಗಳ ಜವಾಬ್ದಾರಿ, ಇಲ್ಲ ಕೇಂದ್ರ ಜವಾಬ್ದಾರಿ ಎಂದು ನುಣಚಿಕೊಳ್ಳುವ ಸಂದರ್ಭದ ಇದಲ್ಲ. ಕೂಡಲೇ ಪಂಜಾಬ್ ಹರಿಯಾಣ ರಾಜ್ಯಗಳೊಂದಿಗೆ ತುರ್ತು ಸಭೆ ನಡೆಸಿ. ಮುಂದಿನ ಎರಡು ಮೂರು ದಿನಗಳಲ್ಲಿ ಪರಿಸ್ಥಿತಿ ಸುಧಾರಿಸಿ ಎಂದು ನಮಗೆ ಅನ್ನಿಸುವ ರೀತಿ ಕ್ರಮ ಕೈಗೊಳ್ಳಿ ಎಂದು ಸಿಜೆಐ ರಮಣ ಕೇಂದ್ರ ಮತ್ತು ರಾಜ್ಯಗಳಿಗೆ ಸೂಚಿಸಿದ್ದರು.

ಮಕ್ಕಳು ಉಸಿರಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಒಂದು ವಾರ ಆನ್‌ಲೈನ್ ತರಗತಿಗಳು ನಡೆಯಲಿ. ಸರ್ಕಾರಿ ಕಚೇರಿಗಳು 100% ಮನೆಯಿಂದಲೇ ಕೆಲಸ ನಿರ್ವಹಿಸಲಿ. ಖಾಸಗಿ ಕಂಪನಿಗಳು ಸಹ ಇದನ್ನೆ ಅನುಸರಿಸಿದರೆ ಒಳ್ಳೇಯದು. ಸುಪ್ರೀಂ ಕೋರ್ಟ್ ಎದುರು ಲಾಕ್‌ಡೌನ್ ಪ್ರಸ್ತಾಪವನ್ನು ಮಂಡಿಸಲಾಗುವುದು ಎಂದು ಕೇಜ್ರಿವಾಲ್ ಹೇಳಿದ್ದಾರೆ.

ದೆಹಲಿ, ಗುರುಗಾವ್, ನೋಯ್ಡಾ ಸೇರಿದಂತೆ ಹಲವು ನಗರಗಳಲ್ಲಿ ಹವಾಮಾನ ತೀವ್ರ ಹದಗೆಟ್ಟಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಕಾರ, ಸಂಜೆ 6.30ಕ್ಕೆ ದೆಹಲಿಯಲ್ಲಿ ಒಟ್ಟಾರೆ ಎಕ್ಯೂಐ 427 ಆಗಿದೆ.

ಶುಕ್ರವಾರದ ದೆಹಲಿಯ ಪರಿಸ್ಥಿತಿ ಈ ಅವಧಿಯಲ್ಲಿಯೇ ಅತಿ ಕೆಟ್ಟ ಪರಿಸ್ಥಿತಿ ತಲುಪಿತ್ತು. ಪರಿಸ್ಥಿತಿ ಗಂಭೀರತೆ ನಮಗೆ ಅರ್ಥವಾಗಿದೆ. ದೆಹಲಿಯ ಗಾಳಿಯನ್ನು ಉಸಿರಾಡುವುದು ದಿನಕ್ಕೆ 20 ಸಿಗರೇಟ್ ಸೇದುವಂತೆ ಎಂದು ರಾಜ್ಯ ಸರ್ಕಾರ ನ್ಯಾಯಾಲಯದಲ್ಲಿ ಒಪ್ಪಿಕೊಂಡಿದೆ. ಕೇಂದ್ರೀಯ ಮಾಲಿನ್ಯ ನಿಯಂತ್ರಕವು ಜನರು ಮನೆಯಲ್ಲಿಯೇ ಇರುವಂತೆ ಸೂಚಿಸಿದೆ.


ಇದನ್ನೂ ಓದಿ: ದೆಹಲಿಯಲ್ಲಿ ಹದಗೆಟ್ಟ ಗಾಳಿ ಪರಿಸ್ಥಿತಿ ಸುಧಾರಿಸಲು 2 ದಿನ ಲಾಕ್‌ಡೌನ್? – ಸುಪ್ರೀಂ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...