Homeಮುಖಪುಟದೆಹಲಿ ವಾಯುಮಾಲಿನ್ಯ: ಒಂದು ವಾರ ಶಾಲೆ ಬಂದ್, ಸರ್ಕಾರಿ ನೌಕರರು ಮನೆಯಿಂದಲೇ ಕೆಲಸ ಮಾಡಲು ಕೇಜ್ರಿವಾಲ್...

ದೆಹಲಿ ವಾಯುಮಾಲಿನ್ಯ: ಒಂದು ವಾರ ಶಾಲೆ ಬಂದ್, ಸರ್ಕಾರಿ ನೌಕರರು ಮನೆಯಿಂದಲೇ ಕೆಲಸ ಮಾಡಲು ಕೇಜ್ರಿವಾಲ್ ಆದೇಶ

- Advertisement -
- Advertisement -

ಕಳೆದೊಂದು ವಾರದಿಂದ ದೆಹಲಿ ಮತ್ತು ಸುತ್ತಮುತ್ತಲಿನ ನಗರಗಳಲ್ಲಿ ಹೊಗೆ ತುಂಬಿಕೊಂಡಿದ್ದು ಪರಿಸ್ಥಿತಿ ತೀವ್ರ ಹದಗೆಟ್ಟಿದೆ. ಗಾಳಿಯ ಗುಣಮಟ್ಟ ಸೂಚ್ಯಂಕವು ತೀರಾ ಕೆಳಕ್ಕಿಳಿದಿರುವುದರ ಕುರಿತು ಇಂದು ಸಭೆ ನಡೆಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಒಂದು ವಾರ ಶಾಲೆಗಳನ್ನು ಮುಚ್ಚಿ ಆನ್‌ಲೈನ್ ಮೂಲಕ ತರಗತಿ ನಡೆಸಲು ಆದೇಶಿಸಿದ್ದಾರೆ.

ನವೆಂಬರ್ 17ರವರೆಗೆ ಯಾವುದೇ ಕಟ್ಟಡ ಕಾಮಗಾರಿಗಳು ನಡೆಯುವಂತಿಲ್ಲ, ಒಂದು ವಾರಗಳ ಕಾಲ ಸರ್ಕಾರಿ ನೌಕರರು ಮನೆಯಿಂದಲೇ ಕೆಲಸ ನಿರ್ವಹಿಸಬೇಕು ಸೇರಿದಂತೆ ಹಲವು ತೀರ್ಮಾನಗಳನ್ನು ತೆಗೆದುಕೊಂಡಿದ್ದಾರೆ.

ಪರಿಸ್ಥಿತಿ ಎಷ್ಟು ಹದಗೆಟ್ಟಿದೆ ಎಂಬುದು ನಿಮಗೆ ತಿಳಿದಿದೆಯೇ? ನಾವು ಮನೆಯಲ್ಲಿಯೂ ಮಾಸ್ಕ್ ಧರಿಸಬೇಕಾಗ ಪರಿಸ್ಥಿತಿ ಬಂದಿದೆ. ಇದು ರಾಜ್ಯಗಳ ಜವಾಬ್ದಾರಿ, ಇಲ್ಲ ಕೇಂದ್ರ ಜವಾಬ್ದಾರಿ ಎಂದು ನುಣಚಿಕೊಳ್ಳುವ ಸಂದರ್ಭದ ಇದಲ್ಲ. ಕೂಡಲೇ ಪಂಜಾಬ್ ಹರಿಯಾಣ ರಾಜ್ಯಗಳೊಂದಿಗೆ ತುರ್ತು ಸಭೆ ನಡೆಸಿ. ಮುಂದಿನ ಎರಡು ಮೂರು ದಿನಗಳಲ್ಲಿ ಪರಿಸ್ಥಿತಿ ಸುಧಾರಿಸಿ ಎಂದು ನಮಗೆ ಅನ್ನಿಸುವ ರೀತಿ ಕ್ರಮ ಕೈಗೊಳ್ಳಿ ಎಂದು ಸಿಜೆಐ ರಮಣ ಕೇಂದ್ರ ಮತ್ತು ರಾಜ್ಯಗಳಿಗೆ ಸೂಚಿಸಿದ್ದರು.

ಮಕ್ಕಳು ಉಸಿರಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಒಂದು ವಾರ ಆನ್‌ಲೈನ್ ತರಗತಿಗಳು ನಡೆಯಲಿ. ಸರ್ಕಾರಿ ಕಚೇರಿಗಳು 100% ಮನೆಯಿಂದಲೇ ಕೆಲಸ ನಿರ್ವಹಿಸಲಿ. ಖಾಸಗಿ ಕಂಪನಿಗಳು ಸಹ ಇದನ್ನೆ ಅನುಸರಿಸಿದರೆ ಒಳ್ಳೇಯದು. ಸುಪ್ರೀಂ ಕೋರ್ಟ್ ಎದುರು ಲಾಕ್‌ಡೌನ್ ಪ್ರಸ್ತಾಪವನ್ನು ಮಂಡಿಸಲಾಗುವುದು ಎಂದು ಕೇಜ್ರಿವಾಲ್ ಹೇಳಿದ್ದಾರೆ.

ದೆಹಲಿ, ಗುರುಗಾವ್, ನೋಯ್ಡಾ ಸೇರಿದಂತೆ ಹಲವು ನಗರಗಳಲ್ಲಿ ಹವಾಮಾನ ತೀವ್ರ ಹದಗೆಟ್ಟಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಕಾರ, ಸಂಜೆ 6.30ಕ್ಕೆ ದೆಹಲಿಯಲ್ಲಿ ಒಟ್ಟಾರೆ ಎಕ್ಯೂಐ 427 ಆಗಿದೆ.

ಶುಕ್ರವಾರದ ದೆಹಲಿಯ ಪರಿಸ್ಥಿತಿ ಈ ಅವಧಿಯಲ್ಲಿಯೇ ಅತಿ ಕೆಟ್ಟ ಪರಿಸ್ಥಿತಿ ತಲುಪಿತ್ತು. ಪರಿಸ್ಥಿತಿ ಗಂಭೀರತೆ ನಮಗೆ ಅರ್ಥವಾಗಿದೆ. ದೆಹಲಿಯ ಗಾಳಿಯನ್ನು ಉಸಿರಾಡುವುದು ದಿನಕ್ಕೆ 20 ಸಿಗರೇಟ್ ಸೇದುವಂತೆ ಎಂದು ರಾಜ್ಯ ಸರ್ಕಾರ ನ್ಯಾಯಾಲಯದಲ್ಲಿ ಒಪ್ಪಿಕೊಂಡಿದೆ. ಕೇಂದ್ರೀಯ ಮಾಲಿನ್ಯ ನಿಯಂತ್ರಕವು ಜನರು ಮನೆಯಲ್ಲಿಯೇ ಇರುವಂತೆ ಸೂಚಿಸಿದೆ.


ಇದನ್ನೂ ಓದಿ: ದೆಹಲಿಯಲ್ಲಿ ಹದಗೆಟ್ಟ ಗಾಳಿ ಪರಿಸ್ಥಿತಿ ಸುಧಾರಿಸಲು 2 ದಿನ ಲಾಕ್‌ಡೌನ್? – ಸುಪ್ರೀಂ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...