Homeರಾಷ್ಟ್ರೀಯದೆಹಲಿ ವಾಯು ಮಾಲಿನ್ಯ: ಶನಿವಾರದಿಂದ ಪ್ರಾಥಮಿಕ ಶಾಲೆಗೆ ರಜೆ

ದೆಹಲಿ ವಾಯು ಮಾಲಿನ್ಯ: ಶನಿವಾರದಿಂದ ಪ್ರಾಥಮಿಕ ಶಾಲೆಗೆ ರಜೆ

- Advertisement -
- Advertisement -

ದೆಹಲಿಯಲ್ಲಿ ವಾಯುಮಾಲಿನ್ಯವು ಹದಗೆಡುತ್ತಿರುವ ಹಿನ್ನೆಲೆಯಲ್ಲಿ ನಗರದ ಪ್ರಾಥಮಿಕ ಶಾಲೆಗಳನ್ನು  ನಾಳೆಯಿಂದ ಮುಚ್ಚಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಘೋಷಿಸಿದ್ದಾರೆ. ವಾಯು ಗುಣಮಟ್ಟ ಮತ್ತು ಹವಾಮಾನ ಮುನ್ಸೂಚನೆ ಮತ್ತು ಸಂಶೋಧನೆಯ ವ್ಯವಸ್ಥೆ (SAFAR-ಸಫರ್‌) ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ ದೆಹಲಿಯ ವಾಯು ಗುಣಮಟ್ಟದ ಸೂಚ್ಯಂಕವು ಶುಕ್ರವಾರ ಸತತ ಎರಡನೇ ದಿನ ‘ಗಂಭೀರವಾಗಿದೆ’.

ಪಂಜಾಬ್ ಮುಖ್ಯಮಂತ್ರಿ ಭಗ್ವಂತ್ ಮಾನ್ ಅವರೊಂದಿಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್ ಅವರು ನಾಳೆಯಿಂದ ಪ್ರಾಥಮಿಕ ಶಾಲೆಗಳನ್ನು ಮುಚ್ಚಲಾಗುವುದು ಮತ್ತು ನಗರದಲ್ಲಿ ಗಾಳಿಯ ಗುಣಮಟ್ಟ ಸುಧಾರಿಸುವವರೆಗೆ 5 ರಿಂದ 7ನೇ ತರಗತಿಗಳಿಗೆ ಹೊರಾಂಗಣ ಚಟುವಟಿಕೆಗಳನ್ನು ನಿರ್ಬಂಧಿಸಲಾಗುವುದು ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದೆಹಲಿಯಲ್ಲಿ ಶನಿವಾರದಿಂದ ಪ್ರಾಥಮಿಕ ತರಗತಿಗಳನ್ನು ಮುಚ್ಚಲಾಗುವುದು; ಮತ್ತು ಬೆಸ-ಸಮ ಯೋಜನೆ ಮಾದರಿಯ ಬಗ್ಗೆ ಆಲೋಚಿಸಲಾತ್ತಿದೆ. ಶಾಲೆಗಳಲ್ಲಿ 5 ರಿಂದ ಏಳನೇ ತರಗತಿಯ ಹೊರಾಂಗಣ ಕ್ರೀಡಾ ಚಟುವಟಿಕೆಗಳನ್ನು ನಿಲ್ಲಿಸುತ್ತಿದ್ದೇವೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ನೋಟಿನ ಮೇಲೆ ಲಕ್ಷ್ಮಿ-ಗಣೇಶನ ಚಿತ್ರ ಮುದ್ರಿಸಿದರೆ ರೂಪಾಯಿ ಕುಸಿತ ಸುಧಾರಿಸುತ್ತದೆ: ಅರವಿಂದ್ ಕೇಜ್ರಿವಾಲ್

“ಇದು ದೂಷಣೆ ಮತ್ತು ರಾಜಕೀಯದಾಟ ಮಾಡುವ ಸಮಯವಲ್ಲ, ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳುವ ಸಮಯ. ಕೇಜ್ರಿವಾಲ್ ಅಥವಾ ಪಂಜಾಬ್ ಸರ್ಕಾರವನ್ನು ದೂಷಿಸುವುದರಿಂದ ಯಾವುದೆ ಪ್ರಯೋಜನವಿಲ್ಲ” ಎಂದು ಕೇಜ್ರಿವಾಲ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ಉಲ್ಲೇಖಿಸಿದೆ.

ಪಂಜಾಬ್‌ನಲ್ಲಿ ಕೊಯ್ದಿರುವ ಪೈರಿನ ಹುಲ್ಲನ್ನು ಉರಿಸುತ್ತಿರುವುದು ದೆಹಲಿಯ ವಾಯು ಮಾಲಿನ್ಯಕ್ಕೆ ಶೇಕಡಾ 34 ರಷ್ಟು ಕೊಡುಗೆ ನೀಡಿದೆ ಎಂದು ಶುಕ್ರವಾರ ಅಧಿಕೃತ ಮಾಹಿತಿಯು ಬಹಿರಂಗಪಡಿಸಿದೆ.

“ಪಂಜಾಬ್‌ನಲ್ಲಿ ನಮ್ಮ ಸರ್ಕಾರ ಇರುವುದರಿಂದ ಹುಲ್ಲಿನ ಸುಡುವಿಕೆಗೆ ನಾವು ಜವಾಬ್ದಾರರಾಗಿರುತ್ತೇವೆ. ನಾವು ಅಲ್ಲಿ ಸರ್ಕಾರವನ್ನು ರಚಿಸಿ ಕೇವಲ ಆರು ತಿಂಗಳಾಗಿದ್ದು, ಈ ಸಮಸ್ಯೆಗಳನ್ನು ಪರಿಹರಿಸಲಾಗುತ್ತಿದೆ. ಇದಕ್ಕೆ ನಾವು ಪರಿಹಾರಗಳನ್ನು ಕಂಡುಕೊಳ್ಳುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಲೆಫ್ಟಿನೆಂಟ್ ಗವರ್ನರ್‌‌‌ ಸಾಹೇಬ್‌‌ ನಿಮ್ಮ ‘ಸೂಪರ್‌ ಬಾಸ್‌’‌ಗೆ ಸ್ವಲ್ಪ ಚಿಲ್ ಮಾಡಲು ಹೇಳಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

“ಸಮಸ್ಯೆಯನ್ನು ಪರಿಹರಿಸಲು ನಮಗೆ ಒಂದು ವರ್ಷದ ಸಮಯವನ್ನು ನೀಡಿ” ಎಂದು ಕೇಜ್ರಿವಾಲ್ ಅವರು ವಿನಂತಿಸಿದ್ದಾರೆ.

ಕೇಜ್ರಿವಾಲ್ ಅವರ ಹೇಳಿಕೆಗಳಿಗೆ ಸಮ್ಮತಿ ಸೂಚಿಸಿದ ಪಂಜಾಬ್ ಮುಖ್ಯಮಂತ್ರಿ ಭಗ್ವಂತ್ ಮನ್, ಈ ವರ್ಷದ ಹೆಚ್ಚಿನ ಬೆಳೆ ಬಂದಿದ್ದು, ಹೀಗಾಗಿ ಹುಲ್ಲನ್ನು ಸುಡುವಿಕೆ ಹೆಚ್ಚಾಗಿದೆ ಎಂದು ಹೇಳಿದ್ದಾರೆ. ಆದರೂ ಅದರ ಸುಡುವಿಕೆಯನ್ನು ಕಡಿಮೆ ಮಾಡಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

“ಪೈರಿನ ಹುಲ್ಲನ್ನು ಹೂಳಲು 1.20 ಲಕ್ಷ ಯಂತ್ರಗಳನ್ನು ಖರೀದಿ ಮಾಡುವಂತಹ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಹುಲ್ಲುಗಳ ಸುಡುವಿಕೆಯನ್ನು ತಡೆಯಲು ಪಂಚಾಯಿತಿಗಳಲ್ಲಿ ಕೂಡಾ ನಿರ್ಣಯಗಳನ್ನು ಅಂಗೀಕರಿಸಿದ್ದಾರೆ. ಮುಂದಿನ ವರ್ಷದ ನವೆಂಬರ್ ವೇಳೆಗೆ ಹುಲ್ಲಿನ ಸುಡುವಿಕೆ ಕಡಿಮೆಯಾಗುತ್ತದೆ ಎಂದು ನಾವು ಭರವಸೆ ನೀಡುತ್ತೇವೆ” ಎಂದು ಪಂಜಾಬ್ ಸಿಎಂ ಹೇಳಿದ್ದಾರೆ.

ಇದನ್ನೂ ಓದಿ: ‘ಆಫರೇಷನ್‌ ಕಮಲ ವಿಫಲ’: ದೆಹಲಿ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲಿರುವ ಸಿಎಂ ಕೇಜ್ರಿವಾಲ್‌

ದೆಹಲಿ ಪರಿಸರ ಸಚಿವ ಗೋಪಾಲ್ ರೈ ಅವರು ಇಂದು ಮಧ್ಯಾಹ್ನ 1 ಗಂಟೆಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...