Homeರಾಷ್ಟ್ರೀಯದೆಹಲಿ ವಾಯು ಮಾಲಿನ್ಯ: ಶನಿವಾರದಿಂದ ಪ್ರಾಥಮಿಕ ಶಾಲೆಗೆ ರಜೆ

ದೆಹಲಿ ವಾಯು ಮಾಲಿನ್ಯ: ಶನಿವಾರದಿಂದ ಪ್ರಾಥಮಿಕ ಶಾಲೆಗೆ ರಜೆ

- Advertisement -
- Advertisement -

ದೆಹಲಿಯಲ್ಲಿ ವಾಯುಮಾಲಿನ್ಯವು ಹದಗೆಡುತ್ತಿರುವ ಹಿನ್ನೆಲೆಯಲ್ಲಿ ನಗರದ ಪ್ರಾಥಮಿಕ ಶಾಲೆಗಳನ್ನು  ನಾಳೆಯಿಂದ ಮುಚ್ಚಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಘೋಷಿಸಿದ್ದಾರೆ. ವಾಯು ಗುಣಮಟ್ಟ ಮತ್ತು ಹವಾಮಾನ ಮುನ್ಸೂಚನೆ ಮತ್ತು ಸಂಶೋಧನೆಯ ವ್ಯವಸ್ಥೆ (SAFAR-ಸಫರ್‌) ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ ದೆಹಲಿಯ ವಾಯು ಗುಣಮಟ್ಟದ ಸೂಚ್ಯಂಕವು ಶುಕ್ರವಾರ ಸತತ ಎರಡನೇ ದಿನ ‘ಗಂಭೀರವಾಗಿದೆ’.

ಪಂಜಾಬ್ ಮುಖ್ಯಮಂತ್ರಿ ಭಗ್ವಂತ್ ಮಾನ್ ಅವರೊಂದಿಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್ ಅವರು ನಾಳೆಯಿಂದ ಪ್ರಾಥಮಿಕ ಶಾಲೆಗಳನ್ನು ಮುಚ್ಚಲಾಗುವುದು ಮತ್ತು ನಗರದಲ್ಲಿ ಗಾಳಿಯ ಗುಣಮಟ್ಟ ಸುಧಾರಿಸುವವರೆಗೆ 5 ರಿಂದ 7ನೇ ತರಗತಿಗಳಿಗೆ ಹೊರಾಂಗಣ ಚಟುವಟಿಕೆಗಳನ್ನು ನಿರ್ಬಂಧಿಸಲಾಗುವುದು ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದೆಹಲಿಯಲ್ಲಿ ಶನಿವಾರದಿಂದ ಪ್ರಾಥಮಿಕ ತರಗತಿಗಳನ್ನು ಮುಚ್ಚಲಾಗುವುದು; ಮತ್ತು ಬೆಸ-ಸಮ ಯೋಜನೆ ಮಾದರಿಯ ಬಗ್ಗೆ ಆಲೋಚಿಸಲಾತ್ತಿದೆ. ಶಾಲೆಗಳಲ್ಲಿ 5 ರಿಂದ ಏಳನೇ ತರಗತಿಯ ಹೊರಾಂಗಣ ಕ್ರೀಡಾ ಚಟುವಟಿಕೆಗಳನ್ನು ನಿಲ್ಲಿಸುತ್ತಿದ್ದೇವೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ನೋಟಿನ ಮೇಲೆ ಲಕ್ಷ್ಮಿ-ಗಣೇಶನ ಚಿತ್ರ ಮುದ್ರಿಸಿದರೆ ರೂಪಾಯಿ ಕುಸಿತ ಸುಧಾರಿಸುತ್ತದೆ: ಅರವಿಂದ್ ಕೇಜ್ರಿವಾಲ್

“ಇದು ದೂಷಣೆ ಮತ್ತು ರಾಜಕೀಯದಾಟ ಮಾಡುವ ಸಮಯವಲ್ಲ, ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳುವ ಸಮಯ. ಕೇಜ್ರಿವಾಲ್ ಅಥವಾ ಪಂಜಾಬ್ ಸರ್ಕಾರವನ್ನು ದೂಷಿಸುವುದರಿಂದ ಯಾವುದೆ ಪ್ರಯೋಜನವಿಲ್ಲ” ಎಂದು ಕೇಜ್ರಿವಾಲ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ಉಲ್ಲೇಖಿಸಿದೆ.

ಪಂಜಾಬ್‌ನಲ್ಲಿ ಕೊಯ್ದಿರುವ ಪೈರಿನ ಹುಲ್ಲನ್ನು ಉರಿಸುತ್ತಿರುವುದು ದೆಹಲಿಯ ವಾಯು ಮಾಲಿನ್ಯಕ್ಕೆ ಶೇಕಡಾ 34 ರಷ್ಟು ಕೊಡುಗೆ ನೀಡಿದೆ ಎಂದು ಶುಕ್ರವಾರ ಅಧಿಕೃತ ಮಾಹಿತಿಯು ಬಹಿರಂಗಪಡಿಸಿದೆ.

“ಪಂಜಾಬ್‌ನಲ್ಲಿ ನಮ್ಮ ಸರ್ಕಾರ ಇರುವುದರಿಂದ ಹುಲ್ಲಿನ ಸುಡುವಿಕೆಗೆ ನಾವು ಜವಾಬ್ದಾರರಾಗಿರುತ್ತೇವೆ. ನಾವು ಅಲ್ಲಿ ಸರ್ಕಾರವನ್ನು ರಚಿಸಿ ಕೇವಲ ಆರು ತಿಂಗಳಾಗಿದ್ದು, ಈ ಸಮಸ್ಯೆಗಳನ್ನು ಪರಿಹರಿಸಲಾಗುತ್ತಿದೆ. ಇದಕ್ಕೆ ನಾವು ಪರಿಹಾರಗಳನ್ನು ಕಂಡುಕೊಳ್ಳುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಲೆಫ್ಟಿನೆಂಟ್ ಗವರ್ನರ್‌‌‌ ಸಾಹೇಬ್‌‌ ನಿಮ್ಮ ‘ಸೂಪರ್‌ ಬಾಸ್‌’‌ಗೆ ಸ್ವಲ್ಪ ಚಿಲ್ ಮಾಡಲು ಹೇಳಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

“ಸಮಸ್ಯೆಯನ್ನು ಪರಿಹರಿಸಲು ನಮಗೆ ಒಂದು ವರ್ಷದ ಸಮಯವನ್ನು ನೀಡಿ” ಎಂದು ಕೇಜ್ರಿವಾಲ್ ಅವರು ವಿನಂತಿಸಿದ್ದಾರೆ.

ಕೇಜ್ರಿವಾಲ್ ಅವರ ಹೇಳಿಕೆಗಳಿಗೆ ಸಮ್ಮತಿ ಸೂಚಿಸಿದ ಪಂಜಾಬ್ ಮುಖ್ಯಮಂತ್ರಿ ಭಗ್ವಂತ್ ಮನ್, ಈ ವರ್ಷದ ಹೆಚ್ಚಿನ ಬೆಳೆ ಬಂದಿದ್ದು, ಹೀಗಾಗಿ ಹುಲ್ಲನ್ನು ಸುಡುವಿಕೆ ಹೆಚ್ಚಾಗಿದೆ ಎಂದು ಹೇಳಿದ್ದಾರೆ. ಆದರೂ ಅದರ ಸುಡುವಿಕೆಯನ್ನು ಕಡಿಮೆ ಮಾಡಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

“ಪೈರಿನ ಹುಲ್ಲನ್ನು ಹೂಳಲು 1.20 ಲಕ್ಷ ಯಂತ್ರಗಳನ್ನು ಖರೀದಿ ಮಾಡುವಂತಹ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಹುಲ್ಲುಗಳ ಸುಡುವಿಕೆಯನ್ನು ತಡೆಯಲು ಪಂಚಾಯಿತಿಗಳಲ್ಲಿ ಕೂಡಾ ನಿರ್ಣಯಗಳನ್ನು ಅಂಗೀಕರಿಸಿದ್ದಾರೆ. ಮುಂದಿನ ವರ್ಷದ ನವೆಂಬರ್ ವೇಳೆಗೆ ಹುಲ್ಲಿನ ಸುಡುವಿಕೆ ಕಡಿಮೆಯಾಗುತ್ತದೆ ಎಂದು ನಾವು ಭರವಸೆ ನೀಡುತ್ತೇವೆ” ಎಂದು ಪಂಜಾಬ್ ಸಿಎಂ ಹೇಳಿದ್ದಾರೆ.

ಇದನ್ನೂ ಓದಿ: ‘ಆಫರೇಷನ್‌ ಕಮಲ ವಿಫಲ’: ದೆಹಲಿ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲಿರುವ ಸಿಎಂ ಕೇಜ್ರಿವಾಲ್‌

ದೆಹಲಿ ಪರಿಸರ ಸಚಿವ ಗೋಪಾಲ್ ರೈ ಅವರು ಇಂದು ಮಧ್ಯಾಹ್ನ 1 ಗಂಟೆಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...