Homeಮುಖಪುಟದೆಹಲಿ ವಿಮಾನ ನಿಲ್ದಾಣದಲ್ಲಿ ₹40 ಕೋಟಿ ಮೌಲ್ಯದ ಕೊಕೇನ್ ಹೊಟ್ಟೆಯೊಳಗಿಟ್ಟು ಕಳ್ಳಸಾಗಣೆ!

ದೆಹಲಿ ವಿಮಾನ ನಿಲ್ದಾಣದಲ್ಲಿ ₹40 ಕೋಟಿ ಮೌಲ್ಯದ ಕೊಕೇನ್ ಹೊಟ್ಟೆಯೊಳಗಿಟ್ಟು ಕಳ್ಳಸಾಗಣೆ!

- Advertisement -
- Advertisement -

ಇಂದಿರಾ ಗಾಂಧಿ ಅಂತರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ ಸುಮಾರು 40 ಕೋಟಿ ರೂ. ಮೌಲ್ಯದ ಕೊಕೇನ್ ಕಳ್ಳಸಾಗಣೆ ಮಾಡಿದ್ದ ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ಭಾನುವಾರ ತಿಳಿಸಿದೆ. ಕೊಕೇನ್ ತುಂಬಿದ ಕ್ಯಾಪ್ಸುಲ್‌ಗಳನ್ನು ಸೇವಿಸಿದ್ದ ಇಬ್ಬರು ಬ್ರೆಜಿಲ್ ಮಹಿಳೆಯರು ಮತ್ತು ಕೀನ್ಯಾದ ವ್ಯಕ್ತಿಯೊಬ್ಬರನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಲಾಗಿದೆ ಎಂದು ಅದು ಹೇಳಿದೆ. ದೆಹಲಿ ವಿಮಾನ

ಮೊದಲ ಪ್ರಕರಣದಲ್ಲಿ, ಜನವರಿ 28 ರಂದು ಸಾವೊ ಪಾಲೊದಿಂದ ಪ್ಯಾರಿಸ್ ಮೂಲಕ ಬಂದಿದ್ದ 26 ವರ್ಷದ ಬ್ರೆಜಿಲ್‌ನ ಮಹಿಳಾ ಪ್ರಯಾಣಿಕರೊಬ್ಬನ್ನು ತಡೆಹಿಡಿಯಲಾಯಿತು. ವಿಚಾರಣೆಯ ಸಮಯದಲ್ಲಿ, ಅವರು ಮಾದಕ ದ್ರವ್ಯಗಳು ಅಥವಾ ಸೈಕೋಟ್ರೋಪಿಕ್ ವಸ್ತುಗಳನ್ನು ಹೊಂದಿರುವ ಕ್ಯಾಪ್ಸುಲ್‌ಗಳು ಸೇವಿಸಿರುವುದಾಗಿ ಅಧಿಕಾರಿಗಳಿಗೆ ತಿಳಿಸಿದ್ದರು ಎಂದು ಕಸ್ಟಮ್ಸ್ ಇಲಾಖೆ ಎಕ್ಸ್‌ನಲ್ಲಿ ತಿಳಿಸಿದೆ. ದೆಹಲಿ ವಿಮಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನಂತರ ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಸಫ್ದರ್ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಯಲ್ಲಿ ಮಹಿಳೆಯ ದೇಹದಲ್ಲಿ ಇದ್ದ 98 ಕ್ಯಾಪ್ಸುಲ್‌ಗಳನ್ನು ಹೊರತೆಗೆದಿದ್ದು, ಅದರಲ್ಲಿ 866 ಗ್ರಾಂ ಕೊಕೇನ್ ಪತ್ತೆಯಾಗಿದೆ. ಇದರ ಮೌಲ್ಯ ರೂ. 12.99 ಕೋಟಿ ಎಂದು ಅಂದಾಜಿಸಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ಹೇಳಿದೆ. ಇದರ ನಂತರ ಅವರನ್ನು ಬಂಧಿಸಲಾಗಿದೆ ಎಂದು ಅದು ಹೇಳಿದೆ.

ಕಸ್ಟಮ್ಸ್ ಅಧಿಕಾರಿಗಳು ಜನವರಿ 24 ರಂದು ಬ್ರೆಜಿಲ್‌ನಿಂದ ಬಂದ ಮತ್ತೊಬ್ಬ ಮಹಿಳಾ ಪ್ರಯಾಣಿಕರೊಬ್ಬರನ್ನು ತಡೆಹಿಡಿದಿದ್ದರು. ಅವರು ಕೂಡಾ ಸಾವೊ ಪಾಲೊದಿಂದ ಪ್ಯಾರಿಸ್ ಮೂಲಕ ಬಂದಿದ್ದರು. “ವಿಚಾರಣೆಯ ವೇಳೆ ಮಹಿಳೆಯು ಮಾದಕವಸ್ತು ಕ್ಯಾಪ್ಸುಲ್‌ಗಳನ್ನು ಸೇವಿಸಿದ್ದಾಗಿ ಒಪ್ಪಿಕೊಂಡಿದ್ದರು. ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರ ಹೊಟ್ಟೆಯಿಂದ 100 ಅಂಡಾಕಾರದ ಕ್ಯಾಪ್ಸುಲ್‌ಗಳನ್ನು ಹೊರತೆಗೆಯಲಾಗಿದೆ. ಇವುಗಳನ್ನು ಪರಿಶೀಲಿಸಿದಾದ ಅವುಗಳಲ್ಲಿ ಕೊಕೇನ್ ಎಂದು ಶಂಕಿಸಲಾದ ಬಿಳಿ ಪುಡಿ ಇತ್ತು” ಎಂದು ಕಸ್ಟಮ್ಸ್ ಮತ್ತೊಂದು ಪೋಸ್ಟ್‌ನಲ್ಲಿ ತಿಳಿಸಿದೆ.

802 ಗ್ರಾಂ ತೂಕದ ವಶಪಡಿಸಿಕೊಂಡ ಮಾದಕವಸ್ತುಗಳ ಅಂದಾಜು ಮೌಲ್ಯ 12.03 ಕೋಟಿ ರೂ. ಎಂದು ಅದು ಹೇಳಿದೆ. “ಆರಂಭಿಕ ಪರೀಕ್ಷೆಗಳು ಹೆಚ್ಚಿನ ಶುದ್ಧತೆಯ ಕೊಕೇನ್ ಇರುವಿಕೆಯನ್ನು ದೃಢಪಡಿಸಿವೆ. ಇದು ಮಾದಕವಸ್ತುಗಳನ್ನು ಭಾರತಕ್ಕೆ ಸಾಗಿಸಲು ಪ್ರಯತ್ನಿಸುತ್ತಿರುವ ಅತ್ಯಾಧುನಿಕ ಕಳ್ಳಸಾಗಣೆ ಜಾಲವನ್ನು ಸೂಚಿಸುತ್ತದೆ” ಎಂದು ಕಸ್ಟಮ್ಸ್ ತಿಳಿಸಿದೆ.

ಜನವರಿ 24 ರಂದು ಅಡಿಸ್ ಅಬಾಬಾದಿಂದ ಬಂದಿದ್ದ ಕೀನ್ಯಾದ ವ್ಯಕ್ತಿಯೊಬ್ಬನನ್ನು ತಡೆಹಿಡಿಯಲಾಯಿತು. ವಿಚಾರಣೆ ಸಮಯದಲ್ಲಿ ತಾನು ಕೊಕೇನ್ ತುಂಬಿದ ಕ್ಯಾಪ್ಸುಲ್‌ಗಳನ್ನು ಸೇವಿಸಿದ್ದಾಗಿ ಒಪ್ಪಿಕೊಂಡಿದ್ದನು. ಈ ವೇಳೆ ಅವರನ್ನು ಕೂಡಾ ಸಫ್ದರ್ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರ ಹೊಟ್ಟೆಯಲ್ಲಿದ್ದ 14.94 ಕೋಟಿ ರೂ. ಮೌಲ್ಯದ 996 ಗ್ರಾಂ ಕೊಕೇನ್ ತುಂಬಿದ 67 ಕ್ಯಾಪ್ಸುಲ್‌ಗಳನ್ನು ಹೊರತೆಗೆಯಲಾಗಿದೆ.

“ಇಷ್ಟು ದೊಡ್ಡ ಪ್ರಮಾಣದಲ್ಲಿ ಮಾದಕವಸ್ತುಗಳನ್ನು ಭಾರತಕ್ಕೆ ಸಾಗಿಸಲು ಪ್ರಯತ್ನಿಸುತ್ತಿದ್ದು, ಇದು ದೊಡ್ಡ ಅಂತರರಾಷ್ಟ್ರೀಯ ಕಳ್ಳಸಾಗಣೆ ಜಾಲದ ಭಾಗವಾಗಿ ನಡೆಯುತ್ತಿದೆ ಎಂಬುದು ಸ್ಪಷ್ಟವಾಗಿದೆ” ಎಂದು ಕಸ್ಟಮ್ಸ್ ಪ್ರತ್ಯೇಕ ಪೋಸ್ಟ್‌ನಲ್ಲಿ ತಿಳಿಸಿದೆ. ಮೂರೂ ಪ್ರಕರಣಗಳು ದೇಹದೊಳಗೆ ಮಾದಕ ವಸ್ತುಗಳನ್ನು ಇಟ್ಟು ಕಳ್ಳಸಾಗಣೆ ಮಾಡಲಾಗಿದೆ. ಇದು ಅತ್ಯಂತ ಹೆಚ್ಚು ಅಪಾಯಕಾರಿ ಕಳ್ಳಸಾಗಣೆ ವಿಧಾನವಾಗಿದೆ ಎಂದು ಅದು ಹೇಳಿದೆ.

“ಐಜಿಐ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳ ತ್ವರಿತ ಕ್ರಮವು 39.96 ಕೋಟಿ ರೂ. ಮೌಲ್ಯದ ಸುಮಾರು 2.66 ಕೆಜಿ ಕೊಕೇನ್ ಅನ್ನು ಭಾರತೀಯ ಮಾರುಕಟ್ಟೆಗಳಿಗೆ ಬರದಂತೆ ತಡೆಯಲಾಗಿದೆ! ಈ ಕಾರ್ಯಾಚರಣೆಗಳ ಹಿಂದಿನ ದೊಡ್ಡ ಜಾಲವನ್ನು ಪತ್ತೆಹಚ್ಚಲು ತನಿಖೆಗಳು ನಡೆಯುತ್ತಿವೆ” ಎಂದು ಪೋಸ್ಟ್ ಹೇಳಿದೆ.

ಇದನ್ನೂಓದಿ:  ಛತ್ತೀಸ್‌ಗಢ | ಎನ್‌ಕೌಂಟರ್‌ನಲ್ಲಿ 12 ನಕ್ಸಲ್‌, ಇಬ್ಬರು ಪೊಲೀಸರ ಸಾವು

ಛತ್ತೀಸ್‌ಗಢ | ಎನ್‌ಕೌಂಟರ್‌ನಲ್ಲಿ 12 ನಕ್ಸಲ್‌, ಇಬ್ಬರು ಪೊಲೀಸರ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...