Homeಮುಖಪುಟದೆಹಲಿ ವಿಮಾನ ನಿಲ್ದಾಣದಲ್ಲಿ ₹40 ಕೋಟಿ ಮೌಲ್ಯದ ಕೊಕೇನ್ ಹೊಟ್ಟೆಯೊಳಗಿಟ್ಟು ಕಳ್ಳಸಾಗಣೆ!

ದೆಹಲಿ ವಿಮಾನ ನಿಲ್ದಾಣದಲ್ಲಿ ₹40 ಕೋಟಿ ಮೌಲ್ಯದ ಕೊಕೇನ್ ಹೊಟ್ಟೆಯೊಳಗಿಟ್ಟು ಕಳ್ಳಸಾಗಣೆ!

- Advertisement -
- Advertisement -

ಇಂದಿರಾ ಗಾಂಧಿ ಅಂತರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ ಸುಮಾರು 40 ಕೋಟಿ ರೂ. ಮೌಲ್ಯದ ಕೊಕೇನ್ ಕಳ್ಳಸಾಗಣೆ ಮಾಡಿದ್ದ ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ಭಾನುವಾರ ತಿಳಿಸಿದೆ. ಕೊಕೇನ್ ತುಂಬಿದ ಕ್ಯಾಪ್ಸುಲ್‌ಗಳನ್ನು ಸೇವಿಸಿದ್ದ ಇಬ್ಬರು ಬ್ರೆಜಿಲ್ ಮಹಿಳೆಯರು ಮತ್ತು ಕೀನ್ಯಾದ ವ್ಯಕ್ತಿಯೊಬ್ಬರನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಲಾಗಿದೆ ಎಂದು ಅದು ಹೇಳಿದೆ. ದೆಹಲಿ ವಿಮಾನ

ಮೊದಲ ಪ್ರಕರಣದಲ್ಲಿ, ಜನವರಿ 28 ರಂದು ಸಾವೊ ಪಾಲೊದಿಂದ ಪ್ಯಾರಿಸ್ ಮೂಲಕ ಬಂದಿದ್ದ 26 ವರ್ಷದ ಬ್ರೆಜಿಲ್‌ನ ಮಹಿಳಾ ಪ್ರಯಾಣಿಕರೊಬ್ಬನ್ನು ತಡೆಹಿಡಿಯಲಾಯಿತು. ವಿಚಾರಣೆಯ ಸಮಯದಲ್ಲಿ, ಅವರು ಮಾದಕ ದ್ರವ್ಯಗಳು ಅಥವಾ ಸೈಕೋಟ್ರೋಪಿಕ್ ವಸ್ತುಗಳನ್ನು ಹೊಂದಿರುವ ಕ್ಯಾಪ್ಸುಲ್‌ಗಳು ಸೇವಿಸಿರುವುದಾಗಿ ಅಧಿಕಾರಿಗಳಿಗೆ ತಿಳಿಸಿದ್ದರು ಎಂದು ಕಸ್ಟಮ್ಸ್ ಇಲಾಖೆ ಎಕ್ಸ್‌ನಲ್ಲಿ ತಿಳಿಸಿದೆ. ದೆಹಲಿ ವಿಮಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನಂತರ ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಸಫ್ದರ್ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಯಲ್ಲಿ ಮಹಿಳೆಯ ದೇಹದಲ್ಲಿ ಇದ್ದ 98 ಕ್ಯಾಪ್ಸುಲ್‌ಗಳನ್ನು ಹೊರತೆಗೆದಿದ್ದು, ಅದರಲ್ಲಿ 866 ಗ್ರಾಂ ಕೊಕೇನ್ ಪತ್ತೆಯಾಗಿದೆ. ಇದರ ಮೌಲ್ಯ ರೂ. 12.99 ಕೋಟಿ ಎಂದು ಅಂದಾಜಿಸಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ಹೇಳಿದೆ. ಇದರ ನಂತರ ಅವರನ್ನು ಬಂಧಿಸಲಾಗಿದೆ ಎಂದು ಅದು ಹೇಳಿದೆ.

ಕಸ್ಟಮ್ಸ್ ಅಧಿಕಾರಿಗಳು ಜನವರಿ 24 ರಂದು ಬ್ರೆಜಿಲ್‌ನಿಂದ ಬಂದ ಮತ್ತೊಬ್ಬ ಮಹಿಳಾ ಪ್ರಯಾಣಿಕರೊಬ್ಬರನ್ನು ತಡೆಹಿಡಿದಿದ್ದರು. ಅವರು ಕೂಡಾ ಸಾವೊ ಪಾಲೊದಿಂದ ಪ್ಯಾರಿಸ್ ಮೂಲಕ ಬಂದಿದ್ದರು. “ವಿಚಾರಣೆಯ ವೇಳೆ ಮಹಿಳೆಯು ಮಾದಕವಸ್ತು ಕ್ಯಾಪ್ಸುಲ್‌ಗಳನ್ನು ಸೇವಿಸಿದ್ದಾಗಿ ಒಪ್ಪಿಕೊಂಡಿದ್ದರು. ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರ ಹೊಟ್ಟೆಯಿಂದ 100 ಅಂಡಾಕಾರದ ಕ್ಯಾಪ್ಸುಲ್‌ಗಳನ್ನು ಹೊರತೆಗೆಯಲಾಗಿದೆ. ಇವುಗಳನ್ನು ಪರಿಶೀಲಿಸಿದಾದ ಅವುಗಳಲ್ಲಿ ಕೊಕೇನ್ ಎಂದು ಶಂಕಿಸಲಾದ ಬಿಳಿ ಪುಡಿ ಇತ್ತು” ಎಂದು ಕಸ್ಟಮ್ಸ್ ಮತ್ತೊಂದು ಪೋಸ್ಟ್‌ನಲ್ಲಿ ತಿಳಿಸಿದೆ.

802 ಗ್ರಾಂ ತೂಕದ ವಶಪಡಿಸಿಕೊಂಡ ಮಾದಕವಸ್ತುಗಳ ಅಂದಾಜು ಮೌಲ್ಯ 12.03 ಕೋಟಿ ರೂ. ಎಂದು ಅದು ಹೇಳಿದೆ. “ಆರಂಭಿಕ ಪರೀಕ್ಷೆಗಳು ಹೆಚ್ಚಿನ ಶುದ್ಧತೆಯ ಕೊಕೇನ್ ಇರುವಿಕೆಯನ್ನು ದೃಢಪಡಿಸಿವೆ. ಇದು ಮಾದಕವಸ್ತುಗಳನ್ನು ಭಾರತಕ್ಕೆ ಸಾಗಿಸಲು ಪ್ರಯತ್ನಿಸುತ್ತಿರುವ ಅತ್ಯಾಧುನಿಕ ಕಳ್ಳಸಾಗಣೆ ಜಾಲವನ್ನು ಸೂಚಿಸುತ್ತದೆ” ಎಂದು ಕಸ್ಟಮ್ಸ್ ತಿಳಿಸಿದೆ.

ಜನವರಿ 24 ರಂದು ಅಡಿಸ್ ಅಬಾಬಾದಿಂದ ಬಂದಿದ್ದ ಕೀನ್ಯಾದ ವ್ಯಕ್ತಿಯೊಬ್ಬನನ್ನು ತಡೆಹಿಡಿಯಲಾಯಿತು. ವಿಚಾರಣೆ ಸಮಯದಲ್ಲಿ ತಾನು ಕೊಕೇನ್ ತುಂಬಿದ ಕ್ಯಾಪ್ಸುಲ್‌ಗಳನ್ನು ಸೇವಿಸಿದ್ದಾಗಿ ಒಪ್ಪಿಕೊಂಡಿದ್ದನು. ಈ ವೇಳೆ ಅವರನ್ನು ಕೂಡಾ ಸಫ್ದರ್ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರ ಹೊಟ್ಟೆಯಲ್ಲಿದ್ದ 14.94 ಕೋಟಿ ರೂ. ಮೌಲ್ಯದ 996 ಗ್ರಾಂ ಕೊಕೇನ್ ತುಂಬಿದ 67 ಕ್ಯಾಪ್ಸುಲ್‌ಗಳನ್ನು ಹೊರತೆಗೆಯಲಾಗಿದೆ.

“ಇಷ್ಟು ದೊಡ್ಡ ಪ್ರಮಾಣದಲ್ಲಿ ಮಾದಕವಸ್ತುಗಳನ್ನು ಭಾರತಕ್ಕೆ ಸಾಗಿಸಲು ಪ್ರಯತ್ನಿಸುತ್ತಿದ್ದು, ಇದು ದೊಡ್ಡ ಅಂತರರಾಷ್ಟ್ರೀಯ ಕಳ್ಳಸಾಗಣೆ ಜಾಲದ ಭಾಗವಾಗಿ ನಡೆಯುತ್ತಿದೆ ಎಂಬುದು ಸ್ಪಷ್ಟವಾಗಿದೆ” ಎಂದು ಕಸ್ಟಮ್ಸ್ ಪ್ರತ್ಯೇಕ ಪೋಸ್ಟ್‌ನಲ್ಲಿ ತಿಳಿಸಿದೆ. ಮೂರೂ ಪ್ರಕರಣಗಳು ದೇಹದೊಳಗೆ ಮಾದಕ ವಸ್ತುಗಳನ್ನು ಇಟ್ಟು ಕಳ್ಳಸಾಗಣೆ ಮಾಡಲಾಗಿದೆ. ಇದು ಅತ್ಯಂತ ಹೆಚ್ಚು ಅಪಾಯಕಾರಿ ಕಳ್ಳಸಾಗಣೆ ವಿಧಾನವಾಗಿದೆ ಎಂದು ಅದು ಹೇಳಿದೆ.

“ಐಜಿಐ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳ ತ್ವರಿತ ಕ್ರಮವು 39.96 ಕೋಟಿ ರೂ. ಮೌಲ್ಯದ ಸುಮಾರು 2.66 ಕೆಜಿ ಕೊಕೇನ್ ಅನ್ನು ಭಾರತೀಯ ಮಾರುಕಟ್ಟೆಗಳಿಗೆ ಬರದಂತೆ ತಡೆಯಲಾಗಿದೆ! ಈ ಕಾರ್ಯಾಚರಣೆಗಳ ಹಿಂದಿನ ದೊಡ್ಡ ಜಾಲವನ್ನು ಪತ್ತೆಹಚ್ಚಲು ತನಿಖೆಗಳು ನಡೆಯುತ್ತಿವೆ” ಎಂದು ಪೋಸ್ಟ್ ಹೇಳಿದೆ.

ಇದನ್ನೂಓದಿ:  ಛತ್ತೀಸ್‌ಗಢ | ಎನ್‌ಕೌಂಟರ್‌ನಲ್ಲಿ 12 ನಕ್ಸಲ್‌, ಇಬ್ಬರು ಪೊಲೀಸರ ಸಾವು

ಛತ್ತೀಸ್‌ಗಢ | ಎನ್‌ಕೌಂಟರ್‌ನಲ್ಲಿ 12 ನಕ್ಸಲ್‌, ಇಬ್ಬರು ಪೊಲೀಸರ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...