Homeಮುಖಪುಟದೆಹಲಿ ವಿಮಾನ ನಿಲ್ದಾಣದಲ್ಲಿ ₹40 ಕೋಟಿ ಮೌಲ್ಯದ ಕೊಕೇನ್ ಹೊಟ್ಟೆಯೊಳಗಿಟ್ಟು ಕಳ್ಳಸಾಗಣೆ!

ದೆಹಲಿ ವಿಮಾನ ನಿಲ್ದಾಣದಲ್ಲಿ ₹40 ಕೋಟಿ ಮೌಲ್ಯದ ಕೊಕೇನ್ ಹೊಟ್ಟೆಯೊಳಗಿಟ್ಟು ಕಳ್ಳಸಾಗಣೆ!

- Advertisement -
- Advertisement -

ಇಂದಿರಾ ಗಾಂಧಿ ಅಂತರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ ಸುಮಾರು 40 ಕೋಟಿ ರೂ. ಮೌಲ್ಯದ ಕೊಕೇನ್ ಕಳ್ಳಸಾಗಣೆ ಮಾಡಿದ್ದ ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ಭಾನುವಾರ ತಿಳಿಸಿದೆ. ಕೊಕೇನ್ ತುಂಬಿದ ಕ್ಯಾಪ್ಸುಲ್‌ಗಳನ್ನು ಸೇವಿಸಿದ್ದ ಇಬ್ಬರು ಬ್ರೆಜಿಲ್ ಮಹಿಳೆಯರು ಮತ್ತು ಕೀನ್ಯಾದ ವ್ಯಕ್ತಿಯೊಬ್ಬರನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಲಾಗಿದೆ ಎಂದು ಅದು ಹೇಳಿದೆ. ದೆಹಲಿ ವಿಮಾನ

ಮೊದಲ ಪ್ರಕರಣದಲ್ಲಿ, ಜನವರಿ 28 ರಂದು ಸಾವೊ ಪಾಲೊದಿಂದ ಪ್ಯಾರಿಸ್ ಮೂಲಕ ಬಂದಿದ್ದ 26 ವರ್ಷದ ಬ್ರೆಜಿಲ್‌ನ ಮಹಿಳಾ ಪ್ರಯಾಣಿಕರೊಬ್ಬನ್ನು ತಡೆಹಿಡಿಯಲಾಯಿತು. ವಿಚಾರಣೆಯ ಸಮಯದಲ್ಲಿ, ಅವರು ಮಾದಕ ದ್ರವ್ಯಗಳು ಅಥವಾ ಸೈಕೋಟ್ರೋಪಿಕ್ ವಸ್ತುಗಳನ್ನು ಹೊಂದಿರುವ ಕ್ಯಾಪ್ಸುಲ್‌ಗಳು ಸೇವಿಸಿರುವುದಾಗಿ ಅಧಿಕಾರಿಗಳಿಗೆ ತಿಳಿಸಿದ್ದರು ಎಂದು ಕಸ್ಟಮ್ಸ್ ಇಲಾಖೆ ಎಕ್ಸ್‌ನಲ್ಲಿ ತಿಳಿಸಿದೆ. ದೆಹಲಿ ವಿಮಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನಂತರ ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಸಫ್ದರ್ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಯಲ್ಲಿ ಮಹಿಳೆಯ ದೇಹದಲ್ಲಿ ಇದ್ದ 98 ಕ್ಯಾಪ್ಸುಲ್‌ಗಳನ್ನು ಹೊರತೆಗೆದಿದ್ದು, ಅದರಲ್ಲಿ 866 ಗ್ರಾಂ ಕೊಕೇನ್ ಪತ್ತೆಯಾಗಿದೆ. ಇದರ ಮೌಲ್ಯ ರೂ. 12.99 ಕೋಟಿ ಎಂದು ಅಂದಾಜಿಸಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ಹೇಳಿದೆ. ಇದರ ನಂತರ ಅವರನ್ನು ಬಂಧಿಸಲಾಗಿದೆ ಎಂದು ಅದು ಹೇಳಿದೆ.

ಕಸ್ಟಮ್ಸ್ ಅಧಿಕಾರಿಗಳು ಜನವರಿ 24 ರಂದು ಬ್ರೆಜಿಲ್‌ನಿಂದ ಬಂದ ಮತ್ತೊಬ್ಬ ಮಹಿಳಾ ಪ್ರಯಾಣಿಕರೊಬ್ಬರನ್ನು ತಡೆಹಿಡಿದಿದ್ದರು. ಅವರು ಕೂಡಾ ಸಾವೊ ಪಾಲೊದಿಂದ ಪ್ಯಾರಿಸ್ ಮೂಲಕ ಬಂದಿದ್ದರು. “ವಿಚಾರಣೆಯ ವೇಳೆ ಮಹಿಳೆಯು ಮಾದಕವಸ್ತು ಕ್ಯಾಪ್ಸುಲ್‌ಗಳನ್ನು ಸೇವಿಸಿದ್ದಾಗಿ ಒಪ್ಪಿಕೊಂಡಿದ್ದರು. ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರ ಹೊಟ್ಟೆಯಿಂದ 100 ಅಂಡಾಕಾರದ ಕ್ಯಾಪ್ಸುಲ್‌ಗಳನ್ನು ಹೊರತೆಗೆಯಲಾಗಿದೆ. ಇವುಗಳನ್ನು ಪರಿಶೀಲಿಸಿದಾದ ಅವುಗಳಲ್ಲಿ ಕೊಕೇನ್ ಎಂದು ಶಂಕಿಸಲಾದ ಬಿಳಿ ಪುಡಿ ಇತ್ತು” ಎಂದು ಕಸ್ಟಮ್ಸ್ ಮತ್ತೊಂದು ಪೋಸ್ಟ್‌ನಲ್ಲಿ ತಿಳಿಸಿದೆ.

802 ಗ್ರಾಂ ತೂಕದ ವಶಪಡಿಸಿಕೊಂಡ ಮಾದಕವಸ್ತುಗಳ ಅಂದಾಜು ಮೌಲ್ಯ 12.03 ಕೋಟಿ ರೂ. ಎಂದು ಅದು ಹೇಳಿದೆ. “ಆರಂಭಿಕ ಪರೀಕ್ಷೆಗಳು ಹೆಚ್ಚಿನ ಶುದ್ಧತೆಯ ಕೊಕೇನ್ ಇರುವಿಕೆಯನ್ನು ದೃಢಪಡಿಸಿವೆ. ಇದು ಮಾದಕವಸ್ತುಗಳನ್ನು ಭಾರತಕ್ಕೆ ಸಾಗಿಸಲು ಪ್ರಯತ್ನಿಸುತ್ತಿರುವ ಅತ್ಯಾಧುನಿಕ ಕಳ್ಳಸಾಗಣೆ ಜಾಲವನ್ನು ಸೂಚಿಸುತ್ತದೆ” ಎಂದು ಕಸ್ಟಮ್ಸ್ ತಿಳಿಸಿದೆ.

ಜನವರಿ 24 ರಂದು ಅಡಿಸ್ ಅಬಾಬಾದಿಂದ ಬಂದಿದ್ದ ಕೀನ್ಯಾದ ವ್ಯಕ್ತಿಯೊಬ್ಬನನ್ನು ತಡೆಹಿಡಿಯಲಾಯಿತು. ವಿಚಾರಣೆ ಸಮಯದಲ್ಲಿ ತಾನು ಕೊಕೇನ್ ತುಂಬಿದ ಕ್ಯಾಪ್ಸುಲ್‌ಗಳನ್ನು ಸೇವಿಸಿದ್ದಾಗಿ ಒಪ್ಪಿಕೊಂಡಿದ್ದನು. ಈ ವೇಳೆ ಅವರನ್ನು ಕೂಡಾ ಸಫ್ದರ್ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರ ಹೊಟ್ಟೆಯಲ್ಲಿದ್ದ 14.94 ಕೋಟಿ ರೂ. ಮೌಲ್ಯದ 996 ಗ್ರಾಂ ಕೊಕೇನ್ ತುಂಬಿದ 67 ಕ್ಯಾಪ್ಸುಲ್‌ಗಳನ್ನು ಹೊರತೆಗೆಯಲಾಗಿದೆ.

“ಇಷ್ಟು ದೊಡ್ಡ ಪ್ರಮಾಣದಲ್ಲಿ ಮಾದಕವಸ್ತುಗಳನ್ನು ಭಾರತಕ್ಕೆ ಸಾಗಿಸಲು ಪ್ರಯತ್ನಿಸುತ್ತಿದ್ದು, ಇದು ದೊಡ್ಡ ಅಂತರರಾಷ್ಟ್ರೀಯ ಕಳ್ಳಸಾಗಣೆ ಜಾಲದ ಭಾಗವಾಗಿ ನಡೆಯುತ್ತಿದೆ ಎಂಬುದು ಸ್ಪಷ್ಟವಾಗಿದೆ” ಎಂದು ಕಸ್ಟಮ್ಸ್ ಪ್ರತ್ಯೇಕ ಪೋಸ್ಟ್‌ನಲ್ಲಿ ತಿಳಿಸಿದೆ. ಮೂರೂ ಪ್ರಕರಣಗಳು ದೇಹದೊಳಗೆ ಮಾದಕ ವಸ್ತುಗಳನ್ನು ಇಟ್ಟು ಕಳ್ಳಸಾಗಣೆ ಮಾಡಲಾಗಿದೆ. ಇದು ಅತ್ಯಂತ ಹೆಚ್ಚು ಅಪಾಯಕಾರಿ ಕಳ್ಳಸಾಗಣೆ ವಿಧಾನವಾಗಿದೆ ಎಂದು ಅದು ಹೇಳಿದೆ.

“ಐಜಿಐ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳ ತ್ವರಿತ ಕ್ರಮವು 39.96 ಕೋಟಿ ರೂ. ಮೌಲ್ಯದ ಸುಮಾರು 2.66 ಕೆಜಿ ಕೊಕೇನ್ ಅನ್ನು ಭಾರತೀಯ ಮಾರುಕಟ್ಟೆಗಳಿಗೆ ಬರದಂತೆ ತಡೆಯಲಾಗಿದೆ! ಈ ಕಾರ್ಯಾಚರಣೆಗಳ ಹಿಂದಿನ ದೊಡ್ಡ ಜಾಲವನ್ನು ಪತ್ತೆಹಚ್ಚಲು ತನಿಖೆಗಳು ನಡೆಯುತ್ತಿವೆ” ಎಂದು ಪೋಸ್ಟ್ ಹೇಳಿದೆ.

ಇದನ್ನೂಓದಿ:  ಛತ್ತೀಸ್‌ಗಢ | ಎನ್‌ಕೌಂಟರ್‌ನಲ್ಲಿ 12 ನಕ್ಸಲ್‌, ಇಬ್ಬರು ಪೊಲೀಸರ ಸಾವು

ಛತ್ತೀಸ್‌ಗಢ | ಎನ್‌ಕೌಂಟರ್‌ನಲ್ಲಿ 12 ನಕ್ಸಲ್‌, ಇಬ್ಬರು ಪೊಲೀಸರ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...