Homeಮುಖಪುಟದೆಹಲಿ ವಿಮಾನ ನಿಲ್ದಾಣದಲ್ಲಿ ₹40 ಕೋಟಿ ಮೌಲ್ಯದ ಕೊಕೇನ್ ಹೊಟ್ಟೆಯೊಳಗಿಟ್ಟು ಕಳ್ಳಸಾಗಣೆ!

ದೆಹಲಿ ವಿಮಾನ ನಿಲ್ದಾಣದಲ್ಲಿ ₹40 ಕೋಟಿ ಮೌಲ್ಯದ ಕೊಕೇನ್ ಹೊಟ್ಟೆಯೊಳಗಿಟ್ಟು ಕಳ್ಳಸಾಗಣೆ!

- Advertisement -
- Advertisement -

ಇಂದಿರಾ ಗಾಂಧಿ ಅಂತರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ ಸುಮಾರು 40 ಕೋಟಿ ರೂ. ಮೌಲ್ಯದ ಕೊಕೇನ್ ಕಳ್ಳಸಾಗಣೆ ಮಾಡಿದ್ದ ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ಭಾನುವಾರ ತಿಳಿಸಿದೆ. ಕೊಕೇನ್ ತುಂಬಿದ ಕ್ಯಾಪ್ಸುಲ್‌ಗಳನ್ನು ಸೇವಿಸಿದ್ದ ಇಬ್ಬರು ಬ್ರೆಜಿಲ್ ಮಹಿಳೆಯರು ಮತ್ತು ಕೀನ್ಯಾದ ವ್ಯಕ್ತಿಯೊಬ್ಬರನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಲಾಗಿದೆ ಎಂದು ಅದು ಹೇಳಿದೆ. ದೆಹಲಿ ವಿಮಾನ

ಮೊದಲ ಪ್ರಕರಣದಲ್ಲಿ, ಜನವರಿ 28 ರಂದು ಸಾವೊ ಪಾಲೊದಿಂದ ಪ್ಯಾರಿಸ್ ಮೂಲಕ ಬಂದಿದ್ದ 26 ವರ್ಷದ ಬ್ರೆಜಿಲ್‌ನ ಮಹಿಳಾ ಪ್ರಯಾಣಿಕರೊಬ್ಬನ್ನು ತಡೆಹಿಡಿಯಲಾಯಿತು. ವಿಚಾರಣೆಯ ಸಮಯದಲ್ಲಿ, ಅವರು ಮಾದಕ ದ್ರವ್ಯಗಳು ಅಥವಾ ಸೈಕೋಟ್ರೋಪಿಕ್ ವಸ್ತುಗಳನ್ನು ಹೊಂದಿರುವ ಕ್ಯಾಪ್ಸುಲ್‌ಗಳು ಸೇವಿಸಿರುವುದಾಗಿ ಅಧಿಕಾರಿಗಳಿಗೆ ತಿಳಿಸಿದ್ದರು ಎಂದು ಕಸ್ಟಮ್ಸ್ ಇಲಾಖೆ ಎಕ್ಸ್‌ನಲ್ಲಿ ತಿಳಿಸಿದೆ. ದೆಹಲಿ ವಿಮಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನಂತರ ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಸಫ್ದರ್ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಯಲ್ಲಿ ಮಹಿಳೆಯ ದೇಹದಲ್ಲಿ ಇದ್ದ 98 ಕ್ಯಾಪ್ಸುಲ್‌ಗಳನ್ನು ಹೊರತೆಗೆದಿದ್ದು, ಅದರಲ್ಲಿ 866 ಗ್ರಾಂ ಕೊಕೇನ್ ಪತ್ತೆಯಾಗಿದೆ. ಇದರ ಮೌಲ್ಯ ರೂ. 12.99 ಕೋಟಿ ಎಂದು ಅಂದಾಜಿಸಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ಹೇಳಿದೆ. ಇದರ ನಂತರ ಅವರನ್ನು ಬಂಧಿಸಲಾಗಿದೆ ಎಂದು ಅದು ಹೇಳಿದೆ.

ಕಸ್ಟಮ್ಸ್ ಅಧಿಕಾರಿಗಳು ಜನವರಿ 24 ರಂದು ಬ್ರೆಜಿಲ್‌ನಿಂದ ಬಂದ ಮತ್ತೊಬ್ಬ ಮಹಿಳಾ ಪ್ರಯಾಣಿಕರೊಬ್ಬರನ್ನು ತಡೆಹಿಡಿದಿದ್ದರು. ಅವರು ಕೂಡಾ ಸಾವೊ ಪಾಲೊದಿಂದ ಪ್ಯಾರಿಸ್ ಮೂಲಕ ಬಂದಿದ್ದರು. “ವಿಚಾರಣೆಯ ವೇಳೆ ಮಹಿಳೆಯು ಮಾದಕವಸ್ತು ಕ್ಯಾಪ್ಸುಲ್‌ಗಳನ್ನು ಸೇವಿಸಿದ್ದಾಗಿ ಒಪ್ಪಿಕೊಂಡಿದ್ದರು. ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರ ಹೊಟ್ಟೆಯಿಂದ 100 ಅಂಡಾಕಾರದ ಕ್ಯಾಪ್ಸುಲ್‌ಗಳನ್ನು ಹೊರತೆಗೆಯಲಾಗಿದೆ. ಇವುಗಳನ್ನು ಪರಿಶೀಲಿಸಿದಾದ ಅವುಗಳಲ್ಲಿ ಕೊಕೇನ್ ಎಂದು ಶಂಕಿಸಲಾದ ಬಿಳಿ ಪುಡಿ ಇತ್ತು” ಎಂದು ಕಸ್ಟಮ್ಸ್ ಮತ್ತೊಂದು ಪೋಸ್ಟ್‌ನಲ್ಲಿ ತಿಳಿಸಿದೆ.

802 ಗ್ರಾಂ ತೂಕದ ವಶಪಡಿಸಿಕೊಂಡ ಮಾದಕವಸ್ತುಗಳ ಅಂದಾಜು ಮೌಲ್ಯ 12.03 ಕೋಟಿ ರೂ. ಎಂದು ಅದು ಹೇಳಿದೆ. “ಆರಂಭಿಕ ಪರೀಕ್ಷೆಗಳು ಹೆಚ್ಚಿನ ಶುದ್ಧತೆಯ ಕೊಕೇನ್ ಇರುವಿಕೆಯನ್ನು ದೃಢಪಡಿಸಿವೆ. ಇದು ಮಾದಕವಸ್ತುಗಳನ್ನು ಭಾರತಕ್ಕೆ ಸಾಗಿಸಲು ಪ್ರಯತ್ನಿಸುತ್ತಿರುವ ಅತ್ಯಾಧುನಿಕ ಕಳ್ಳಸಾಗಣೆ ಜಾಲವನ್ನು ಸೂಚಿಸುತ್ತದೆ” ಎಂದು ಕಸ್ಟಮ್ಸ್ ತಿಳಿಸಿದೆ.

ಜನವರಿ 24 ರಂದು ಅಡಿಸ್ ಅಬಾಬಾದಿಂದ ಬಂದಿದ್ದ ಕೀನ್ಯಾದ ವ್ಯಕ್ತಿಯೊಬ್ಬನನ್ನು ತಡೆಹಿಡಿಯಲಾಯಿತು. ವಿಚಾರಣೆ ಸಮಯದಲ್ಲಿ ತಾನು ಕೊಕೇನ್ ತುಂಬಿದ ಕ್ಯಾಪ್ಸುಲ್‌ಗಳನ್ನು ಸೇವಿಸಿದ್ದಾಗಿ ಒಪ್ಪಿಕೊಂಡಿದ್ದನು. ಈ ವೇಳೆ ಅವರನ್ನು ಕೂಡಾ ಸಫ್ದರ್ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರ ಹೊಟ್ಟೆಯಲ್ಲಿದ್ದ 14.94 ಕೋಟಿ ರೂ. ಮೌಲ್ಯದ 996 ಗ್ರಾಂ ಕೊಕೇನ್ ತುಂಬಿದ 67 ಕ್ಯಾಪ್ಸುಲ್‌ಗಳನ್ನು ಹೊರತೆಗೆಯಲಾಗಿದೆ.

“ಇಷ್ಟು ದೊಡ್ಡ ಪ್ರಮಾಣದಲ್ಲಿ ಮಾದಕವಸ್ತುಗಳನ್ನು ಭಾರತಕ್ಕೆ ಸಾಗಿಸಲು ಪ್ರಯತ್ನಿಸುತ್ತಿದ್ದು, ಇದು ದೊಡ್ಡ ಅಂತರರಾಷ್ಟ್ರೀಯ ಕಳ್ಳಸಾಗಣೆ ಜಾಲದ ಭಾಗವಾಗಿ ನಡೆಯುತ್ತಿದೆ ಎಂಬುದು ಸ್ಪಷ್ಟವಾಗಿದೆ” ಎಂದು ಕಸ್ಟಮ್ಸ್ ಪ್ರತ್ಯೇಕ ಪೋಸ್ಟ್‌ನಲ್ಲಿ ತಿಳಿಸಿದೆ. ಮೂರೂ ಪ್ರಕರಣಗಳು ದೇಹದೊಳಗೆ ಮಾದಕ ವಸ್ತುಗಳನ್ನು ಇಟ್ಟು ಕಳ್ಳಸಾಗಣೆ ಮಾಡಲಾಗಿದೆ. ಇದು ಅತ್ಯಂತ ಹೆಚ್ಚು ಅಪಾಯಕಾರಿ ಕಳ್ಳಸಾಗಣೆ ವಿಧಾನವಾಗಿದೆ ಎಂದು ಅದು ಹೇಳಿದೆ.

“ಐಜಿಐ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳ ತ್ವರಿತ ಕ್ರಮವು 39.96 ಕೋಟಿ ರೂ. ಮೌಲ್ಯದ ಸುಮಾರು 2.66 ಕೆಜಿ ಕೊಕೇನ್ ಅನ್ನು ಭಾರತೀಯ ಮಾರುಕಟ್ಟೆಗಳಿಗೆ ಬರದಂತೆ ತಡೆಯಲಾಗಿದೆ! ಈ ಕಾರ್ಯಾಚರಣೆಗಳ ಹಿಂದಿನ ದೊಡ್ಡ ಜಾಲವನ್ನು ಪತ್ತೆಹಚ್ಚಲು ತನಿಖೆಗಳು ನಡೆಯುತ್ತಿವೆ” ಎಂದು ಪೋಸ್ಟ್ ಹೇಳಿದೆ.

ಇದನ್ನೂಓದಿ:  ಛತ್ತೀಸ್‌ಗಢ | ಎನ್‌ಕೌಂಟರ್‌ನಲ್ಲಿ 12 ನಕ್ಸಲ್‌, ಇಬ್ಬರು ಪೊಲೀಸರ ಸಾವು

ಛತ್ತೀಸ್‌ಗಢ | ಎನ್‌ಕೌಂಟರ್‌ನಲ್ಲಿ 12 ನಕ್ಸಲ್‌, ಇಬ್ಬರು ಪೊಲೀಸರ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...