Homeಮುಖಪುಟದೆಹಲಿ ವಿಮಾನ ನಿಲ್ದಾಣದ ಮೇಲ್ಛಾವಣಿ ಕುಸಿತ; ಓರ್ವ ಸಾವು, 6 ಜನರಿಗೆ ಗಾಯ

ದೆಹಲಿ ವಿಮಾನ ನಿಲ್ದಾಣದ ಮೇಲ್ಛಾವಣಿ ಕುಸಿತ; ಓರ್ವ ಸಾವು, 6 ಜನರಿಗೆ ಗಾಯ

- Advertisement -
- Advertisement -

ಇಂದು ಬೆಳಿಗ್ಗೆ ಭಾರೀ ಮಳೆಯಿಂದಾಗಿ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ -1 (ಟಿ 1) ನ ಛಾವಣಿಯ ಒಂದು ಭಾಗವು ಕಾರುಗಳ ಮೇಲೆ ಕುಸಿದಿದ್ದು, ಕನಿಷ್ಠ ಒಬ್ಬರು ಸಾವನ್ನದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ. ದೇಶೀಯ ವಿಮಾನ ಕಾರ್ಯಾಚರಣೆಗಳನ್ನು ಹೊಂದಿರುವ ಟರ್ಮಿನಲ್ 1 ರಿಂದ ಎಲ್ಲ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ.

“ಇಂದು ಮುಂಜಾನೆ ಭಾರೀ ಮಳೆಯಿಂದಾಗಿ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ರ ಮೇಲಾವರಣ ಕುಸಿದಿದೆ. ಇದರ ಪರಿಣಾಮವಾಗಿ, ಟರ್ಮಿನಲ್ 1 ಗೆ ಮತ್ತು ಅಲ್ಲಿಂದ ಹೊರಡುವ ವಿಮಾನಗಳನ್ನು ಮುಂದಿನ ಸೂಚನೆ ತನಕ ಮುಚ್ಚಲಾಗಿದೆ. ಸುಗಮ ಕಾರ್ಯಾಚರಣೆಗೆ ಪರ್ಯಾಯ ವಿಮಾನಗಳ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ” ಎಂದು ಸಚಿವಾಲಯವು ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿದೆ.

ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಾಪು ಅವರು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಟರ್ಮಿನಲ್ 1 ಅನ್ನು ಪರಿಶೀಲಿಸಿದರು. ವಿಮಾನ ನಿಲ್ದಾಣವು ತಾತ್ಕಾಲಿಕವಾಗಿ ಟರ್ಮಿನಲ್ 2 ಮತ್ತು ಟರ್ಮಿನಲ್ 3 ಗೆ ಕಾರ್ಯಾಚರಣೆಯನ್ನು ಬದಲಾಯಿಸಲಿದೆ ಎಂದು ಹೇಳಿದರು.

ಇದನ್ನು “ಅತ್ಯಂತ ಗಂಭೀರ” ಘಟನೆ ಎಂದು ಹೇಳಿದ ಅವರು, ಹೊಸದಾಗಿ ಆಯ್ಕೆಯಾದ ಸಚಿವರು ವಿಮಾನ ನಿಲ್ದಾಣದ ರಚನೆಯ ಸಂಪೂರ್ಣ ಪರಿಶೀಲನೆ ನಡೆಸಲಾಗುವುದು ಎಂದು ಘೋಷಿಸಿದರು. ಘಟನೆಯ ತಾಂತ್ರಿಕ ಕಾರಣಗಳು ಮತ್ತು ಇತರ ಅಂಶಗಳು ತನಿಖೆಯ ನಂತರ ತಿಳಿಯುತ್ತದೆ ಎಂದು ಅವರು ಹೇಳಿ, ಸಂತ್ರಸ್ತರ ಕುಟುಂಬಕ್ಕೆ ₹ 20 ಲಕ್ಷ ಮತ್ತು ಗಾಯಗೊಂಡವರಿಗೆ ₹ 3 ಲಕ್ಷ ಪರಿಹಾರ ಘೋಷಿಸಿದರು.

ಟಿ1 ಇಂಡಿಗೋ ಮತ್ತು ಸ್ಪೈಸ್‌ಜೆಟ್‌ನಿಂದ ದೇಶೀಯ ವಿಮಾನ ಕಾರ್ಯಾಚರಣೆಗಳನ್ನು ಮಾತ್ರ ಹೊಂದಿದೆ. ವಿಮಾನ ನಿಲ್ದಾಣವು ಮೂರು ಟರ್ಮಿನಲ್‌ಗಳನ್ನು ಹೊಂದಿದೆ, ಟಿ1, ಟಿ2 ಮತ್ತು ಟಿ3, ಮತ್ತು ಪ್ರತಿದಿನ ಸುಮಾರು 1,400 ವಿಮಾನ ಚಲನೆಗಳನ್ನು ನಿರ್ವಹಿಸುತ್ತದೆ.

ವಿಶ್ವದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣಗಳಲ್ಲಿ ಒಂದಾದ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ನ ಪಿಕ್-ಅಪ್ ಮತ್ತು ಡ್ರಾಪ್ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ನಾಲ್ಕು ಕಾರುಗಳಿಗೆ ರೂಫ್ ಶೀಟ್ ಕುಸಿದು ಬಿದ್ದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯು ದೆಹಲಿ ಅಗ್ನಿಶಾಮಕ ಸೇವೆಗಳಿಗೆ (ಡಿಎಫ್‌ಎಸ್‌) ಮುಂಜಾನೆ 5.30 ರ ಸುಮಾರಿಗೆ ವರದಿಯಾಗಿದೆ.

ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ, ಕಬ್ಬಿಣದ ಬೀಮ್ ಬಿದ್ದ ಕಾರಿನಿಂದ ವ್ಯಕ್ತಿಯನ್ನು ಹೊರತೆಗೆಯುತ್ತಿರುವುದು ಕಂಡುಬಂದಿದೆ.

ದೆಹಲಿ ವಿಮಾನ ನಿಲ್ದಾಣದಲ್ಲಿ ಛಾವಣಿ ಕುಸಿದಿದ್ದರಿಂದ ಇಂಡಿಗೋ, ಸ್ಪೈಸ್‌ಜೆಟ್ ವಿಮಾನಗಳ ಹಾರಾಟವನ್ನು ರದ್ದುಗೊಳಿಸಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ 1 ರ ರಚನಾತ್ಮಕ ಹಾನಿಯಿಂದಾಗಿ ತನ್ನ ವಿಮಾನ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಿದೆ ಎಂದು ಇಂಡಿಗೋ ಹೇಳಿದೆ. ಈ ಘಟನೆಯು ದೆಹಲಿಯಲ್ಲಿ “ಪ್ರಯಾಣಿಕರು ಟರ್ಮಿನಲ್‌ಗೆ ಪ್ರವೇಶಿಸಲು ಸಾಧ್ಯವಾಗದ ಕಾರಣ” ವಿಮಾನ ರದ್ದತಿಗೆ ಕಾರಣವಾಯಿತು ಎಂದು ಕಡಿಮೆ-ವೆಚ್ಚದ ವಾಹಕವು ಹೇಳಿಕೆಯಲ್ಲಿ ತಿಳಿಸಿದೆ.

“ಈಗಾಗಲೇ ಟರ್ಮಿನಲ್‌ನಲ್ಲಿರುವ ಪ್ರಯಾಣಿಕರು ತಮ್ಮ ಯೋಜಿತ ವಿಮಾನಗಳನ್ನು ಹತ್ತಲು ಸಾಧ್ಯವಾಗುತ್ತದೆ. ಆದರೆ, ದಿನದ ನಂತರ ವಿಮಾನಗಳನ್ನು ಹೊಂದಿರುವವರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗುವುದು” ಎಂದು ಇಂಡಿಗೋ ವಕ್ತಾರರು ತಿಳಿಸಿದ್ದಾರೆ.

“ಈ ಯೋಜಿತವಲ್ಲದ ಪರಿಸ್ಥಿತಿಯು ನೆಟ್‌ವರ್ಕ್‌ನಾದ್ಯಂತ ಕಾರ್ಯಾಚರಣೆಯ ಮೇಲೆ ಪರಿಣಾಮ ಬೀರಲು ಕಾರಣವಾಗಿದೆ. ಗ್ರಾಹಕರು ವಿಮಾನ ನಿಲ್ದಾಣಕ್ಕೆ ಹೊರಡುವ ಮೊದಲು ತಮ್ಮ ಫ್ಲೈಟ್ ಸ್ಥಿತಿಯನ್ನು ಟ್ರ್ಯಾಕ್ ಮಾಡಲು ಮತ್ತು ಖಚಿತಪಡಿಸಿಕೊಳ್ಳಲು ಸಲಹೆ ನೀಡಲಾಗುತ್ತದೆ” ಎಂದು ಹೇಳಿಕೆ ಸೇರಿಸಲಾಗಿದೆ.

ಮುಂದಿನ ಸೂಚನೆ ಬರುವವರೆಗೂ ಸ್ಪೈಸ್‌ಜೆಟ್ ತನ್ನ ವಿಮಾನಗಳನ್ನು ರದ್ದುಗೊಳಿಸಿದೆ. “ಹೆಚ್ಚಿನ ನವೀಕರಣಗಳಿಗಾಗಿ ದಯವಿಟ್ಟು ನಮ್ಮ ಸಾಮಾಜಿಕ ಮಾಧ್ಯಮ ಚಾನೆಲ್‌ಗಳನ್ನು ವೀಕ್ಷಿಸಿ” ಎಂದು ಏರ್‌ಲೈನ್ ತನ್ನ ಪ್ರಯಾಣಿಕರಿಗೆ ತಿಳಿಸಿದೆ.

ದೆಹಲಿಯಲ್ಲಿ ಭಾರೀ ಮಳೆ

ದೆಹಲಿಯಲ್ಲಿ ಇಂದು ಸತತ ಎರಡನೇ ದಿನ ಭಾರಿ ಮಳೆಯಾಗಿದೆ. ಬಿಸಿಲಿನ ತಾಪದಿಂದ ಬಿಡುವು ನೀಡಿದ ಮಳೆಯು ರಾಷ್ಟ್ರ ರಾಜಧಾನಿಯ ಹಲವಾರು ಭಾಗಗಳಲ್ಲಿ ಜಲಾವೃತವಾಯಿತು. ಮಿಂಟೋ ರಸ್ತೆಯಲ್ಲಿ ಕಾರೊಂದು ಮುಳುಗಿರುವುದು ಕಂಡುಬಂದಿದೆ.

ರಾಜಧಾನಿಯ ಪ್ರಾಥಮಿಕ ಹವಾಮಾನ ಕೇಂದ್ರವಾದ ಸಫ್ದರ್‌ಜಂಗ್ ವೀಕ್ಷಣಾಲಯವು ನಿನ್ನೆ ಮತ್ತು ಇಂದು ಬೆಳಿಗ್ಗೆ ನಡುವೆ 154 ಮಿಮೀ ಮಳೆಯನ್ನು ದಾಖಲಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಗುರುವಾರ, ದೆಹಲಿಯಲ್ಲಿ ಮಳೆಯಿಂದಾಗಿ ತಾಪಮಾನವು 35.4 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ.

ಇದನ್ನೂ ಓದಿ; ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾರ್ಖಂಡ್‌ ಮಾಜಿ ಸಿಎಂ ಹೇಮಂತ್ ಸೊರೇನ್‌ಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ಕಾರ್ಯಾಚರಣೆ ತಡೆದು ಕೋಳಿ ಅಂಕ : ಪುತ್ತೂರು ಶಾಸಕ ಅಶೋಕ್ ರೈ ಸೇರಿ 17 ಮಂದಿ ವಿರುದ್ಧ ಪ್ರಕರಣ ದಾಖಲು

ಶಾಸಕರೇ ಮುಂದೆ ನಿಂತು ಕಾನೂನುಬಾಹಿರ ಚಟುವಟಿಕೆ ನಡೆಸಲು ಜನರನ್ನು ಪ್ರೋತ್ಸಾಹಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಬಳಿ ಶನಿವಾರ (ಡಿ.20) ನಡೆದಿದೆ. ಕೇಪು ಶ್ರೀ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ನಡೆಯುತ್ತಿದ್ದ...

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...