Homeಮುಖಪುಟದೆಹಲಿ ವಿಮಾನ ನಿಲ್ದಾಣದ ಮೇಲ್ಛಾವಣಿ ಕುಸಿತ; ಓರ್ವ ಸಾವು, 6 ಜನರಿಗೆ ಗಾಯ

ದೆಹಲಿ ವಿಮಾನ ನಿಲ್ದಾಣದ ಮೇಲ್ಛಾವಣಿ ಕುಸಿತ; ಓರ್ವ ಸಾವು, 6 ಜನರಿಗೆ ಗಾಯ

- Advertisement -
- Advertisement -

ಇಂದು ಬೆಳಿಗ್ಗೆ ಭಾರೀ ಮಳೆಯಿಂದಾಗಿ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ -1 (ಟಿ 1) ನ ಛಾವಣಿಯ ಒಂದು ಭಾಗವು ಕಾರುಗಳ ಮೇಲೆ ಕುಸಿದಿದ್ದು, ಕನಿಷ್ಠ ಒಬ್ಬರು ಸಾವನ್ನದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ. ದೇಶೀಯ ವಿಮಾನ ಕಾರ್ಯಾಚರಣೆಗಳನ್ನು ಹೊಂದಿರುವ ಟರ್ಮಿನಲ್ 1 ರಿಂದ ಎಲ್ಲ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ.

“ಇಂದು ಮುಂಜಾನೆ ಭಾರೀ ಮಳೆಯಿಂದಾಗಿ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ರ ಮೇಲಾವರಣ ಕುಸಿದಿದೆ. ಇದರ ಪರಿಣಾಮವಾಗಿ, ಟರ್ಮಿನಲ್ 1 ಗೆ ಮತ್ತು ಅಲ್ಲಿಂದ ಹೊರಡುವ ವಿಮಾನಗಳನ್ನು ಮುಂದಿನ ಸೂಚನೆ ತನಕ ಮುಚ್ಚಲಾಗಿದೆ. ಸುಗಮ ಕಾರ್ಯಾಚರಣೆಗೆ ಪರ್ಯಾಯ ವಿಮಾನಗಳ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ” ಎಂದು ಸಚಿವಾಲಯವು ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿದೆ.

ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಾಪು ಅವರು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಟರ್ಮಿನಲ್ 1 ಅನ್ನು ಪರಿಶೀಲಿಸಿದರು. ವಿಮಾನ ನಿಲ್ದಾಣವು ತಾತ್ಕಾಲಿಕವಾಗಿ ಟರ್ಮಿನಲ್ 2 ಮತ್ತು ಟರ್ಮಿನಲ್ 3 ಗೆ ಕಾರ್ಯಾಚರಣೆಯನ್ನು ಬದಲಾಯಿಸಲಿದೆ ಎಂದು ಹೇಳಿದರು.

ಇದನ್ನು “ಅತ್ಯಂತ ಗಂಭೀರ” ಘಟನೆ ಎಂದು ಹೇಳಿದ ಅವರು, ಹೊಸದಾಗಿ ಆಯ್ಕೆಯಾದ ಸಚಿವರು ವಿಮಾನ ನಿಲ್ದಾಣದ ರಚನೆಯ ಸಂಪೂರ್ಣ ಪರಿಶೀಲನೆ ನಡೆಸಲಾಗುವುದು ಎಂದು ಘೋಷಿಸಿದರು. ಘಟನೆಯ ತಾಂತ್ರಿಕ ಕಾರಣಗಳು ಮತ್ತು ಇತರ ಅಂಶಗಳು ತನಿಖೆಯ ನಂತರ ತಿಳಿಯುತ್ತದೆ ಎಂದು ಅವರು ಹೇಳಿ, ಸಂತ್ರಸ್ತರ ಕುಟುಂಬಕ್ಕೆ ₹ 20 ಲಕ್ಷ ಮತ್ತು ಗಾಯಗೊಂಡವರಿಗೆ ₹ 3 ಲಕ್ಷ ಪರಿಹಾರ ಘೋಷಿಸಿದರು.

ಟಿ1 ಇಂಡಿಗೋ ಮತ್ತು ಸ್ಪೈಸ್‌ಜೆಟ್‌ನಿಂದ ದೇಶೀಯ ವಿಮಾನ ಕಾರ್ಯಾಚರಣೆಗಳನ್ನು ಮಾತ್ರ ಹೊಂದಿದೆ. ವಿಮಾನ ನಿಲ್ದಾಣವು ಮೂರು ಟರ್ಮಿನಲ್‌ಗಳನ್ನು ಹೊಂದಿದೆ, ಟಿ1, ಟಿ2 ಮತ್ತು ಟಿ3, ಮತ್ತು ಪ್ರತಿದಿನ ಸುಮಾರು 1,400 ವಿಮಾನ ಚಲನೆಗಳನ್ನು ನಿರ್ವಹಿಸುತ್ತದೆ.

ವಿಶ್ವದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣಗಳಲ್ಲಿ ಒಂದಾದ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ನ ಪಿಕ್-ಅಪ್ ಮತ್ತು ಡ್ರಾಪ್ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ನಾಲ್ಕು ಕಾರುಗಳಿಗೆ ರೂಫ್ ಶೀಟ್ ಕುಸಿದು ಬಿದ್ದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯು ದೆಹಲಿ ಅಗ್ನಿಶಾಮಕ ಸೇವೆಗಳಿಗೆ (ಡಿಎಫ್‌ಎಸ್‌) ಮುಂಜಾನೆ 5.30 ರ ಸುಮಾರಿಗೆ ವರದಿಯಾಗಿದೆ.

ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ, ಕಬ್ಬಿಣದ ಬೀಮ್ ಬಿದ್ದ ಕಾರಿನಿಂದ ವ್ಯಕ್ತಿಯನ್ನು ಹೊರತೆಗೆಯುತ್ತಿರುವುದು ಕಂಡುಬಂದಿದೆ.

ದೆಹಲಿ ವಿಮಾನ ನಿಲ್ದಾಣದಲ್ಲಿ ಛಾವಣಿ ಕುಸಿದಿದ್ದರಿಂದ ಇಂಡಿಗೋ, ಸ್ಪೈಸ್‌ಜೆಟ್ ವಿಮಾನಗಳ ಹಾರಾಟವನ್ನು ರದ್ದುಗೊಳಿಸಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ 1 ರ ರಚನಾತ್ಮಕ ಹಾನಿಯಿಂದಾಗಿ ತನ್ನ ವಿಮಾನ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಿದೆ ಎಂದು ಇಂಡಿಗೋ ಹೇಳಿದೆ. ಈ ಘಟನೆಯು ದೆಹಲಿಯಲ್ಲಿ “ಪ್ರಯಾಣಿಕರು ಟರ್ಮಿನಲ್‌ಗೆ ಪ್ರವೇಶಿಸಲು ಸಾಧ್ಯವಾಗದ ಕಾರಣ” ವಿಮಾನ ರದ್ದತಿಗೆ ಕಾರಣವಾಯಿತು ಎಂದು ಕಡಿಮೆ-ವೆಚ್ಚದ ವಾಹಕವು ಹೇಳಿಕೆಯಲ್ಲಿ ತಿಳಿಸಿದೆ.

“ಈಗಾಗಲೇ ಟರ್ಮಿನಲ್‌ನಲ್ಲಿರುವ ಪ್ರಯಾಣಿಕರು ತಮ್ಮ ಯೋಜಿತ ವಿಮಾನಗಳನ್ನು ಹತ್ತಲು ಸಾಧ್ಯವಾಗುತ್ತದೆ. ಆದರೆ, ದಿನದ ನಂತರ ವಿಮಾನಗಳನ್ನು ಹೊಂದಿರುವವರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗುವುದು” ಎಂದು ಇಂಡಿಗೋ ವಕ್ತಾರರು ತಿಳಿಸಿದ್ದಾರೆ.

“ಈ ಯೋಜಿತವಲ್ಲದ ಪರಿಸ್ಥಿತಿಯು ನೆಟ್‌ವರ್ಕ್‌ನಾದ್ಯಂತ ಕಾರ್ಯಾಚರಣೆಯ ಮೇಲೆ ಪರಿಣಾಮ ಬೀರಲು ಕಾರಣವಾಗಿದೆ. ಗ್ರಾಹಕರು ವಿಮಾನ ನಿಲ್ದಾಣಕ್ಕೆ ಹೊರಡುವ ಮೊದಲು ತಮ್ಮ ಫ್ಲೈಟ್ ಸ್ಥಿತಿಯನ್ನು ಟ್ರ್ಯಾಕ್ ಮಾಡಲು ಮತ್ತು ಖಚಿತಪಡಿಸಿಕೊಳ್ಳಲು ಸಲಹೆ ನೀಡಲಾಗುತ್ತದೆ” ಎಂದು ಹೇಳಿಕೆ ಸೇರಿಸಲಾಗಿದೆ.

ಮುಂದಿನ ಸೂಚನೆ ಬರುವವರೆಗೂ ಸ್ಪೈಸ್‌ಜೆಟ್ ತನ್ನ ವಿಮಾನಗಳನ್ನು ರದ್ದುಗೊಳಿಸಿದೆ. “ಹೆಚ್ಚಿನ ನವೀಕರಣಗಳಿಗಾಗಿ ದಯವಿಟ್ಟು ನಮ್ಮ ಸಾಮಾಜಿಕ ಮಾಧ್ಯಮ ಚಾನೆಲ್‌ಗಳನ್ನು ವೀಕ್ಷಿಸಿ” ಎಂದು ಏರ್‌ಲೈನ್ ತನ್ನ ಪ್ರಯಾಣಿಕರಿಗೆ ತಿಳಿಸಿದೆ.

ದೆಹಲಿಯಲ್ಲಿ ಭಾರೀ ಮಳೆ

ದೆಹಲಿಯಲ್ಲಿ ಇಂದು ಸತತ ಎರಡನೇ ದಿನ ಭಾರಿ ಮಳೆಯಾಗಿದೆ. ಬಿಸಿಲಿನ ತಾಪದಿಂದ ಬಿಡುವು ನೀಡಿದ ಮಳೆಯು ರಾಷ್ಟ್ರ ರಾಜಧಾನಿಯ ಹಲವಾರು ಭಾಗಗಳಲ್ಲಿ ಜಲಾವೃತವಾಯಿತು. ಮಿಂಟೋ ರಸ್ತೆಯಲ್ಲಿ ಕಾರೊಂದು ಮುಳುಗಿರುವುದು ಕಂಡುಬಂದಿದೆ.

ರಾಜಧಾನಿಯ ಪ್ರಾಥಮಿಕ ಹವಾಮಾನ ಕೇಂದ್ರವಾದ ಸಫ್ದರ್‌ಜಂಗ್ ವೀಕ್ಷಣಾಲಯವು ನಿನ್ನೆ ಮತ್ತು ಇಂದು ಬೆಳಿಗ್ಗೆ ನಡುವೆ 154 ಮಿಮೀ ಮಳೆಯನ್ನು ದಾಖಲಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಗುರುವಾರ, ದೆಹಲಿಯಲ್ಲಿ ಮಳೆಯಿಂದಾಗಿ ತಾಪಮಾನವು 35.4 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ.

ಇದನ್ನೂ ಓದಿ; ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾರ್ಖಂಡ್‌ ಮಾಜಿ ಸಿಎಂ ಹೇಮಂತ್ ಸೊರೇನ್‌ಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...