Homeಮುಖಪುಟದೆಹಲಿ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ: ಈ ಮಸೂದೆ ಏನು ಹೇಳುತ್ತದೆ?

ದೆಹಲಿ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ: ಈ ಮಸೂದೆ ಏನು ಹೇಳುತ್ತದೆ?

ಇದು ಪ್ರಜಾಪ್ರಭುತ್ವದ ಕಗ್ಗೋಲೆ ಎಂದ ದೆಹಲಿ ಸಿಎಂ ಕೇಜ್ರಿವಾಲ್

- Advertisement -
- Advertisement -

ದೆಹಲಿಯ ಚುನಾಯಿತ ಸರ್ಕಾರಕ್ಕಿಂತಲೂ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಲೆಫ್ಟಿನೆಂಟ್‌ ಗವರ್ನರ್‌ಗೆ ಹೆಚ್ಚಿನ ಅಧಿಕಾರ ನೀಡುವ ‘ರಾಷ್ಟ್ರ ರಾಜಧಾನಿ ವಲಯ ದೆಹಲಿ ತಿದ್ದುಪಡಿ ಮಸೂದೆಗೆ(ಎನ್‌ಸಿಟಿ)’ ರಾಷ್ಟ್ರಪತಿ  ಅಂಕಿತ ಹಾಕಿದ್ದಾರೆ. ಭಾನುವಾರ ಗೆಜೆಟ್‌ ನೋಟಿಫಿಕೇಷನ್‌ ಹೊರಡಿಸಿರುವ ಕೇಂದ್ರ ಸರ್ಕಾರ, ಎನ್‌ಸಿಟಿ ಮಸೂದೆ 2021ಕ್ಕೆ ರಾಷ್ಟ್ರಪತಿ ಒಪ್ಪಿಗೆ ದೊರೆತಿದೆ ಎಂದು ಹೇಳಿದೆ.

ದೆಹಲಿಯಲ್ಲಿ ಇನ್ನುಮುಂದೆ “ಸರ್ಕಾರ” ಎಂಬ ಪದವು ಲೆಫ್ಟಿನೆಂಟ್ ಗವರ್ನರ್ ಎಂದರ್ಥವಾಗುತ್ತದೆ. ದೆಹಲಿ ಸರ್ಕಾರವು ಯಾವುದೇ ಕಾರ್ಯಾಂಗೀಯ ಕ್ರಮ ತೆಗೆದುಕೊಳ್ಳುವ ಮೊದಲು ಲೆಫ್ಟಿನೆಂಟ್ ಗವರ್ನರ್‌‌ ಅಭಿಪ್ರಾಯವನ್ನು ತೆಗೆದುಕೊಳ್ಳಬೇಕಾಗಿದೆ ಎಂದು ರಾಷ್ಟ್ರೀಯ ರಾಜಧಾನಿ (ತಿದ್ದುಪಡಿ) ಮಸೂದೆ ಸ್ಪಷ್ಟಪಡಿಸುತ್ತದೆ.

ರಾಜ್ಯಸಭೆಯಲ್ಲಿ ಈ ಶಾಸನವನ್ನು ಧ್ವನಿ ಮತದಿಂದ ಅಂಗೀಕರಿಸಲಾಗಿತ್ತು. ಸರ್ಕಾರವು ಮಸೂದೆ ಪರಿಗಣನೆಗೆ ಮುಂದಾದಾಗ ಪ್ರತಿಪಕ್ಷಗಳು ವಿಭಜನೆ (ಡಿವಿಜನ್ ಆಫ್ ವೋಟ್ಸ್) ಕೋರಿದವು. ಮತದಾನದ ವೇಳೆ 83 ಸದಸ್ಯರು ಪರವಾಗಿದ್ದರೆ, 45 ಮಂದಿ ಮಸೂದೆಯನ್ನು ವಿರೋಧಿಸಿದರು. ಕಾಂಗ್ರೆಸ್ ಮತ್ತು ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಸೇರಿದಂತೆ ಹಲವಾರು ವಿರೋಧ ಪಕ್ಷಗಳು ಸದಸನದಿಂದ ಹೊರ ನಡೆದಿದ್ದವು.

ಮೇಲ್ಮನೆಯಲ್ಲಿ ಎರಡು ದಿನಗಳ ಗದ್ದಲಗಳ ನಂತರ ಮಸೂದೆಯನ್ನು ಅಂಗೀಕರಿಸಲಾಯಿತು. ಪ್ರತಿಪಕ್ಷದ ಸಂಸದರು ಈ ಮಸೂದೆ ಪ್ರಜಾಪ್ರಭುತ್ವವನ್ನು ನಾಶಪಡಿಸುತ್ತದೆ ಎಂದು ಪದೇ ಪದೇ ಹೇಳಿದರು. ಮಸೂದೆಯನ್ನು ಆಯ್ಕೆ ಸಮಿತಿಗೆ (ಸೆಲೆಕ್ಟ್ ಕಮೀಟಿಗೆ) ಕಳುಹಿಸಬೇಕೆಂದು ಪ್ರತಿಪಕ್ಷಗಳು ಒತ್ತಾಯಿಸಿದವು.

ಈ ಮಸೂದೆಯ ಅಂಗೀಕಾರ ಅರವಿಂದ್ ಕೇಜ್ರಿವಾಲ್ ಅವರ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದೆ. ಇದು 2013 ರಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಾಗಿನಿಂದ ಲೆಫ್ಟಿನೆಂಟ್ ಗವರ್ನರ್ ಅವರೊಂದಿಗೆ ಸಂಘರ್ಷ ನಡೆಸುತ್ತಿದ್ದ ಸರ್ಕಾರಕ್ಕೆ ಈಗ ಹಿನ್ನಡೆ ಆಗಿದೆ.

ಇದನ್ನು ಓದಿ: ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ಈ ಕುರಿತು ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್, ಇಂದು ಭಾರತೀಯ ಪ್ರಜಾಪ್ರಭುತ್ವಕ್ಕೆ ದುಃಖದ ದಿನ ಎಂದು ಹೇಳಿದ್ದಾರೆ.

“ದ್ರೌಪದಿಯ ಬಟ್ಟೆಗಳನ್ನು ಕಿತ್ತುಹಾಕಿದ ರೀತಿ ಸಂವಿಧಾನಕ್ಕೂ ಮಾಡಲಾಗುತ್ತಿದೆ” ಎಂದು ಹೇಳಿದ ಆಮ್ ಆದ್ಮಿ ಪಕ್ಷದ ಸಂಜಯ್ ಸಿಂಗ್, ದೆಹಲಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎರಡು ಬಾರಿ ಸೋತ ಕಾರಣ ಬಿಜೆಪಿ ಈ ಮಸೂದೆಯನ್ನು ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಯಾವುದೇ ಸಾಂವಿಧಾನಿಕ ತಿದ್ದುಪಡಿ ಇಲ್ಲದೆ ದೇಶದ ಸಂವಿಧಾನವನ್ನು ಬದಲಾಯಿಸಲಾಗುತ್ತಿದೆ” ಎಂದು ಸಿಂಗ್ ಹೇಳಿದರು. ದೆಹಲಿಯ ಈಗಿನ ಆಡಳಿತ ವ್ಯವಸ್ಥೆಯು 69 ಸಾಂವಿಧಾನಿಕ ತಿದ್ದುಪಡಿಗಳ ನಂತರ ಬಂದಿದೆ. ಸಾಂವಿಧಾನಿಕ ತಿದ್ದುಪಡಿಗೆ ಸಂಸತ್ತಿನಲ್ಲಿ ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ – ಸರಳ ಬಹುಮತವಲ್ಲ – ಇದಕ್ಕಾಗಿ ಮೇಲ್ಮನೆಯಲ್ಲಿ ಬಿಜೆಪಿಗೆ ಸಂಖ್ಯೆಗಳ ಕೊರತೆಯಿದೆ. ಆದರೆ ಸರಳ ಬಹುಮತದಲ್ಲಿ ಇದನ್ನು ಸಾಧಿಸಲಾಗುತ್ತಿದೆ ಎಂದರು.

ಲೆಫ್ಟಿನೆಂಟ್-ಗವರ್ನರ್ ಎಂಬ ಪ್ರಾಕ್ಸಿ ಮೂಲಕ ದೆಹಲಿಯನ್ನು ಆಳಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಎಎಪಿ ಸರ್ಕಾರ ಆರೋಪಿಸುತ್ತಲೆ ಬಂದಿದೆ. ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಆರ್‌ಜೆಡಿ, ಶಿವಸೇನೆ, ವೈಎಸ್‌ಆರ್ ಕಾಂಗ್ರೆಸ್ ಮತ್ತು ಅಕಾಲಿ ದಳ ಸೇರಿದಂತೆ ಹೆಚ್ಚಿನ ವಿರೋಧ ಪಕ್ಷಗಳು ಈ ಮಸೂದೆಯನ್ನು ವಿರೋಧಿಸಿದ್ದವು. ವೈಎಸ್‌ಆರ್ ಕಾಂಗ್ರೆಸ್ ಚರ್ಚೆಯ ಮಧ್ಯದಲ್ಲಿ ಹೊರನಡೆಯಿತು.

ಎಎಪಿ, ಈ ಮಸೂದೆಯನ್ನು ಜನರು ಒಪ್ಪುವುದಿಲ್ಲ ಮತ್ತು ರೈತರ ಪ್ರತಿಭಟನೆಯಂತೆಯೇ ಪ್ರತಿಭಟನೆಗಳು ನಡೆಯಲಿವೆ ಎಂದು ಹೇಳಿತು. ಮಸೂದೆಯನ್ನು ತರಲು ಒಂದು ಪ್ರಮುಖ ಕಾರಣವೆಂದರೆ ಪ್ರತಿಭಟನಾ ನಿರತ ರೈತರಿಗೆ ಕೇಜ್ರಿವಾಲ್ ಅವರು ಬೆಂಬಲ ನೀಡಿದ್ದು ಎನ್ನಲಾಗಿದೆ.

ಇದನ್ನು ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮಹಾನಾಯಕ ಪದ ಬಳಕೆಗೆ ಪ್ರಜ್ಞಾವಂತರ ವಿರೋಧ

“ಎರಡು ಕೋಟಿ ಜನರು ಸರ್ಕಾರವನ್ನು ಆಯ್ಕೆ ಮಾಡಿದರು. ನಮ್ಮ ಅಪರಾಧವೇನು? ಕೇಜ್ರಿವಾಲ್ ಅವರು ದೆಹಲಿಗೆ ಬಂದಾಗ ರೈತರನ್ನು ಜೈಲಿಗೆ ಹಾಕದ ಕಾರಣ ಇದನ್ನು ಮಾಡಲಾಗಿದೆ. ಮಸೂದೆಯನ್ನು ರದ್ದುಗೊಳಿಸಬೇಕು” ಎಂದು ಸಿಂಗ್ ಹೇಳಿದರು.

’ಇಲ್ಲಿ ಚುನಾಯಿತ ಸರ್ಕಾರದ ಅಧಿಕಾರವನ್ನು ಕಿತ್ತುಕೊಂಡು ಅದನ್ನು ಲೆಫ್ಟಿನೆಂಟ್‌‌ ಗವರ್ನರ್‌ಗೆ ನೀಡಲಾಗುತ್ತಿದೆ. ಇದು ಸಂವಿಧಾನಕ್ಕೆ ವಿರುದ್ಧವಾಗಿದೆ. ಇದು ಕಾನೂನಾಗಬಾರದು” ಎಂದು ಕಾಂಗ್ರೆಸ್‌ನ ಮಲ್ಲಿಕಾರ್ಜುನ್ ಖರ್ಗೆ ಹೇಳಿದರು.

ಚರ್ಚೆಗೆ ಉತ್ತರಿಸಿದ ಕೇಂದ್ರ ಗೃಹಖಾತೆ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ ಅವರು ಪ್ರತಿಪಕ್ಷಗಳ ಕಳವಳಗಳಿಗೆ ಸ್ಪಂದಿಸಲು ಪ್ರಯತ್ನಿಸಿದರು. 1991 ರ ಕಾಯಿದೆಯಲ್ಲಿನ ಅಸ್ಪಷ್ಟತೆಗಳನ್ನು ತೆಗೆದುಹಾಕಲು ತಿದ್ದುಪಡಿಗಳನ್ನು ತರಲಾಗಿದ್ದು, ಸುಪ್ರೀಂಕೋರ್ಟ್ ತೀರ್ಪಿನ ಆಧಾರದಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದರು.

ದಿನನಿತ್ಯದ ಆಡಳಿತದ ಪ್ರತಿಯೊಂದು ವಿಷಯದ ಬಗ್ಗೆ ದೆಹಲಿ ಸರ್ಕಾರವು ಲೆಫ್ಟಿನೆಂಟ್ ಗವರ್ನರ್ ಅವರ “ಸಮ್ಮತಿಯನ್ನು” ಪಡೆಯುವ ಅಗತ್ಯವಿಲ್ಲ ಎಂದು ಈ ಹಿಂದೆ ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಈ ಕಾಯ್ದೆಯಲ್ಲಿನ ತಿದ್ದುಪಡಿಗಳು ದೆಹಲಿಯಲ್ಲಿ ಉತ್ತಮ ಸರ್ಕಾರಿ ಕಾರ್ಯವಿಧಾನವನ್ನು ಸೃಷ್ಟಿಸುತ್ತವೆ ಎಂದು ಅವರು ಹೇಳಿದರು.

ತಿದ್ದುಪಡಿ ಮಸೂದೆಯಿಂದಾಗಿ ರಾಷ್ಟ್ರ ರಾಜಧಾನಿ ವಲಯದ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಸ್ಪಷ್ಟತೆ ಸಿಗಲಿದೆ. ಮಸೂದೆಯಲ್ಲಿನ ದ್ವಂದ್ವಗಳನ್ನು ತೆಗೆಯುವ ನಿಟ್ಟಿನಲ್ಲಿ ತಿದ್ದುಪಡಿ ತರಲಾಗಿದೆ ಎಂದು ಕೇಂದ್ರ ಸಚಿವ ಜಿ.ಕಿಶನ್‌ ರೆಡ್ಡಿ ಹೇಳಿದ್ದಾರೆ.


ಇದನ್ನು ಓದಿ: #LieLikeModi ಟ್ವಿಟರ್ ಟ್ರೆಂಡಿಂಗ್: ನಕ್ಕು ಹೊಟ್ಟೆ ಹುಣ್ಣಾದರೆ ನಾವು ಜವಾಬ್ದಾರರಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...